AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇರುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ನಿಲ್ದಾಣಕ್ಕೆ ಹೋದ ನಂತರ ವಾಹನವನ್ನು ಎಲ್ಲಿ ಪಾರ್ಕ್ ಮಾಡುವುದು ಎಂಬುದೇ ತಲೆನೋವಾಗಿರುತ್ತದೆ. ಇದೀಗ ಸಮಸ್ಯೆಗೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದು, ಕ್ರಮ ಕೈಗೊಳ್ಳಲು ಅಧಿಕಾರಿಗಳು ಅರ್ಲಟ್ ಆಗಿದ್ದಾರೆ. ಹಾಗಾದರೆ ಏನದು ಕ್ರಮ? ಇಲ್ಲಿದೆ ಮಾಹಿತಿ.

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ ರೂ.ಗೆ ಹೆಚ್ಚಳವಾಗಿದೆ. ಡಿಸೆಂಬರ್ 26ರೊಳಗೆ ಈ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ

ಕೊಲ್ಕತ್ತಾದ ಟಿಟಾಗರ್​​ದಿಂದ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ 6ನೇ ಹೊಸ ಮೆಟ್ರೋ ರೈಲು ಡಿಸೆಂಬರ್​ 23ರಿಂದ ತನ್ನ ಸಂಚಾರ ಆರಂಭಿಸಲಿದೆ. ಆ ಮೂಲಕ ಬಿಎಂಆರ್​ಸಿಎಲ್​ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​​ ನ್ಯೂಸ್​​ ಕೊಟ್ಟಿದೆ. ಇನ್ಮುಂದೆ ರೈಲಿಗಾಗಿ ಹೆಚ್ಚು ಹೊತ್ತು ಕಾಯುವ ಅವಶ್ಯಕತೆ ಇಲ್ಲ.

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್

ಬೆಂಗಳೂರಿನ ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದಲ್ಲಿ ಭಾನುವಾರ ಸಂಚಾರ ವಿಳಂಬವಾಗಲಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಬದಲಾಗಿ 8 ಗಂಟೆಗೆ ಯೆಲ್ಲೋ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಅರ್​​ಸಿಎಲ್ ತಿಳಿಸಿದೆ.

ಶಂಕು ಸ್ಥಾಪನೆ ಆಗಿ ಒಂದು ವರ್ಷವಾದರೂ ಆರಂಭವಾಗಿಲ್ಲ ಅರೆಂಜ್ ಲೈನ್ ಮೆಟ್ರೋ ಕಾಮಗಾರಿ: ಪ್ರತಿದಿನ ಎರಡು ಕೋಟಿ ಹೆಚ್ಚುವರಿ ಹೊರೆ!

ಬೆಂಗಳೂರಿನ ಬಹು ನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋ ಮಾರ್ಗಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷವಾಯಿತು. ಖುದ್ದು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಶಂಕುಸ್ಥಾಪನೆಯನ್ನೂ ಮಾಡಿದ್ದರು. ಆದರೂ ಯಾಕೋ ಗೊತ್ತಿಲ್ಲ ಬಿಎಂಆರ್​ಸಿಲ್ ಅಧಿಕಾರಿಗಳು ಕಾಮಗಾರಿ ಆರಂಭಿಸಲು ಮುಂದಾಗಿಲ್ಲ. ಈ ವಿಳಂಬದಿಂದಾಗಿ ಪ್ರತಿದಿನ ಎರಡು ಕೋಟಿ ಹೆಚ್ಚುವರಿ ಹೊರೆಯಾಗಲಿದೆಯಂತೆ!

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಹಳದಿ ಮಾರ್ಗದಲ್ಲಿನ ಮೆಟ್ರೋ ಸ್ಟೇಷನ್​​ಗಳ ಸಮೀಪ ಬಿಎಂಟಿಸಿ ಬಸ್​​ ನಿಲ್ದಾಣಗಳ ವ್ಯವಸ್ಥೆ

ಹಳದಿ ಮಾರ್ಗದಲ್ಲಿನ ಮೆಟ್ರೋ ನಿಲ್ದಾಣಗಳ ಸಮೀಪ ಬಿಎಂಟಿಸಿ ಬಸ್​​​ ನಿಲ್ದಾಣಗಳ ವ್ಯವಸ್ಥೆ ಮಾಡುವ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್ ನ್ಯೂಸ್​​ ನೀಡಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಹಾಗಾದರೆ ಎಲ್ಲೆಲ್ಲಿ ಬಸ್​ ನಿಲ್ದಾಣಗಳನ್ನು ನಿರ್ಮಿಸಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಎಂಆರ್​ಸಿಎಲ್ ಅಧಿಕಾರಿಗಳ ಯಡವಟ್ಟಿಗೆ ಪ್ರಯಾಣಿಕರು ಕಂಗಾಲು: ಯಾವುದೋ ಮೆಟ್ರೋ ನಿಲ್ದಾಣಕ್ಕೆ ಇನ್ಯಾವುದೋ ಹೆಸರು!

ದೇವರು ವರ ಕೊಟ್ಟರೂ ಪೂಜಾರಿ ಕೊಡ್ಲಿಲ್ಲ ಎಂಬ ಹಾಗಾಗಿದೆ ಬೆಂಗಳೂರಿನ ಈ ಏರಿಯಾಗಳ ಜನರ ಕಥೆ. ನಮ್ಮೂರಲ್ಲೇ ಮೆಟ್ರೋ ನಿಲ್ದಾಣ ಇದೆ ಎಂದು ಖುಷಿಪಟ್ಟ ಜನರಿಗೆ ಬಿಎಂಆರ್​ಸಿಎಲ್​ ಮಾಡಿರುವ ಅದೊಂದು ಯಡವಟ್ಟು ದೊಡ್ಡ ವ್ಯಥೆ ತಂದಿದೆ. ಯೆಲ್ಲೋ ಲೈನ್​ ಸ್ಟೇಷನ್ಸ್​ ಹೆಸರಿನ ಗೊಂದಲ ಪ್ರಯಾಣಿಕರಿಗೂ ಕಿರಿಕಿರಿ ಉಂಟುಮಾಡುತ್ತಿದೆ.

ಮೆಟ್ರೋ ಪ್ರಯಾಣಿಕರಿಗೆ ಕ್ರಿಸ್ಮಸ್, ಹೊಸ ವರ್ಷದ ಗಿಫ್ಟ್: 12 ನಿಮಿಷಕ್ಕೊಂದರಂತೆ ಸಂಚರಿಲಿದೆ ಯೆಲ್ಲೋ ಲೈನ್ ಮೆಟ್ರೋ

Namma Metro Yellow Line: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಆರನೇ ರೈಲು ಸಂಚಾರ ಇದೇ 22 ರಿಂದ ಆರಭವಾಗುವ ಸಾಧ್ಯತೆ ಇದೆ. ಇದರಿಂದಾಗಿ ಪ್ರತಿ 12 ನಿಮಿಷಕ್ಕೊದರಂತೆರೈಲುಗಳು ಸಂಚಾರ ಮಾಡಲಿವೆ. ಆದರೆ, ಯೆಲ್ಲೋ ಲೈನ್​ನಲ್ಲಿ ಬೆಳಗ್ಗೆ 6ಕ್ಕೆ ಶುರುವಾಗುವ ಮೆಟ್ರೋ ಸಂಚಾರ ಅದೇ ರೀತಿ ಮುಂದುವರಿಯಲಿದೆ ಎಂದು ಬಿಎಂಆರ್​​ಸಿಎಲ್ ಮೂಲಗಳು ತಿಳಿಸಿವೆ.

ಸಿಲ್ಕ್ ಬೋರ್ಡ್ ಟ್ರಾಫಿಕ್‌ಗೆ ಸಧ್ಯದಲ್ಲೇ ಮುಕ್ತಿ; ಡಬಲ್ ಡೆಕ್ಕರ್ ಫ್ಲೈಓವರ್ ಇನ್ನೊಂದು ಭಾಗ ಶೀಘ್ರದಲ್ಲೇ ಓಪನ್

ಬೆಂಗಳೂರು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸಂಚಾರ ಒತ್ತಡ ತಗ್ಗಿಸಲು ಬಿಎಂಆರ್ಸಿಲ್ ದೊಡ್ಡ ಹೆಜ್ಜೆ ಇಟ್ಟಿದೆ. ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್‌ನ ಮತ್ತೊಂದು ಭಾಗವನ್ನು ಡಿಸೆಂಬರ್–ಜನವರಿಯಲ್ಲಿ ಓಪನ್ ಮಾಡಲಾಗುತ್ತಿದ್ದು, ಆರ್.ವಿ. ರೋಡ್–ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಡಿ ನಿರ್ಮಿಸಲಾದ ಈ ರಸ್ತೆ ಕೆಳಮಟ್ಟದಲ್ಲಿ ವಾಹನಗಳು ಮತ್ತು ಮೇಲ್ಭಾಗದಲ್ಲಿ ಮೆಟ್ರೋ ಸಂಚಾರಕ್ಕೆ ಅನುಕೂಲವಾಗಲಿದೆ. 3.36 ಕಿಮೀ ಉದ್ದದ, 449 ಕೋಟಿ ರೂ. ವೆಚ್ಚದ ಈ ಯೋಜನೆ, ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಮೀ ವಿಸ್ತೀರ್ಣ ಹೊಂದಿರಲಿದೆ. ಹೊಸ ಭಾಗ ತೆರೆದರೆ ಸಿಲ್ಕ್ ಬೋರ್ಡ್–ರಾಗಿಗುಡ್ಡ ಮಾರ್ಗದ ಟ್ರಾಫಿಕ್ ಮುಕ್ತಗೊಳಿಸುವಲ್ಲಿ ಇದು ಸಹಾಯವಾಗಲಿದೆ.

ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು, ಇಲ್ಲವಾದ್ರೆ ಮುಂದೆ ಕಾಮಗಾರಿ ನೀಡಲ್ಲ: ಗುತ್ತಿಗೆದಾರರಿಗೆ ಡಿಸಿಎಂ ಎಚ್ಚರಿಕೆ 

ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ಪರಿಶೀಲಿಸಿ, ಗುತ್ತಿಗೆದಾರರಿಗೆ ಗಡುವು ನೀಡಿದ್ದು, ವಿಳಂಬವಾದರೆ ಮುಂದಿನ ಕಾಮಗಾರಿ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. 2026-27ರೊಳಗೆ ಮೆಟ್ರೋ ಸಂಚಾರ ಆರಂಭಿಸುವ ಗುರಿ ಹೊಂದಿದ್ದೇವೆಂದ ಅವರು, ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯಡಿ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ನೇರಳೆ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ ವ್ಯತ್ಯಯ

ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಮ್ಮ ಮೆಟ್ರೋ ಕೆಂಗೇರಿ ಸ್ಟೇಷನ್​ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಪರಿಣಾಮವಾಗಿ ನಮ್ಮ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ವ್ಯತ್ಯವಾಗಿದೆ. ಮೈಸೂರು ರಸ್ತೆಯಿಂದ ಚಲ್ಲಘಟ್ಟ ನಡುವೆ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಯೆಲ್ಲೋ ಮಾರ್ಗದ 6ನೇ ಡ್ರೈವರ್ ಲೆಸ್ ಮೆಟ್ರೋ ರೈಲು ಇದೀಗ ಬೆಂಗಳೂರಿಗೆ ತಲುಪಿದೆ. ಈ ಹೊಸ ರೈಲು ಸೇರ್ಪಡೆಯಿಂದ ರೈಲುಗಳ ನಡುವಿನ ಓಡಾಟದ ಸಮಯ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್​ ಹೊಸ ವರ್ಷಕ್ಕೆ ಗುಡ್ ನ್ಯೂಸ್​​ ನೀಡಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ