AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ನಮ್ಮ ಮೆಟ್ರೋ ಗ್ರೀನ್ ಲೈನ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಗಸ್ಟ್‌ನಿಂದ ಸಂಚಾರ ಆರಂಭಿಸಲಿವೆ 3 ಹೊಸ ರೈಲುಗಳು

ಬೆಂಗಳೂರಿನ ‘ನಮ್ಮ ಮೆಟ್ರೋ’ ಗ್ರೀನ್ ಲೈನ್ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಿರಂತರ ರಶ್ ಹಾಗೂ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಆಗಸ್ಟ್ ತಿಂಗಳಿನಿಂದ ಗ್ರೀನ್ ಲೈನ್ ಮಾರ್ಗದಲ್ಲಿ 3 ಹೊಸ ಮೆಟ್ರೋ ರೈಲುಗಳು ಸಂಚಾರ ಆರಂಭಿಸಲಿವೆ. ಇದರೊಂದಿಗೆ, ಸಂಚಾರ ಮತ್ತಷ್ಟು ಸುಗಮವಾಗಲಿದೆ.

ನಮ್ಮ ಮೆಟ್ರೋ ಸರಣಿ ವೈಫಲ್ಯ: ತೇಜಸ್ವಿ ಸೂರ್ಯ ದೂರಿನ ಬೆನ್ನಲ್ಲೇ ಕೇಂದ್ರದಿಂದ ತನಿಖೆಗೆ ಆದೇಶ!

ನಮ್ಮ ಮೆಟ್ರೋ ರೈಲು ಸೇವೆಗಳಲ್ಲಿ ಸತತವಾಗಿ ಉಂಟಾಗುತ್ತಿರುವ ತಾಂತ್ರಿಕ ದೋಷಗಳು ಮತ್ತು ವ್ಯತ್ಯಯಗಳ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬಿಎಂಆರ್‌ಸಿಎಲ್‌ಗೆ ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು ಆದೇಶಿಸಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರ ದೂರಿನ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಈ ವ್ಯವಸ್ಥಿತ ವೈಫಲ್ಯಗಳನ್ನು ತಕ್ಷಣವೇ ಸರಿಪಡಿಸಬೇಕೆಂದು ಸಂಸದರು ಒತ್ತಾಯಿಸಿದ್ದಾರೆ.

ತಾವರೆಕೆರೆ ಮೆಟ್ರೋ ನಿಲ್ದಾಣದ ಕೆಳಗಿನ ರಸ್ತೆ ಅದ್ವಾನ: ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

Bangaluru News: ಬೆಂಗಳೂರಿನ ತಾವರೆಕೆರೆ ಮೆಟ್ರೋ ನಿಲ್ದಾಣದ ಕೆಳಗೆ ಹೊಸದಾಗಿ ನಿರ್ಮಿಸಿರುವ ರಸ್ತೆಯಲ್ಲಿ ಬೃಹತ್ ಗುಂಡಿಗಳು ಬಾಯಿ ತೆರೆದಿದ್ದು, ಪ್ರಯಾಣಿಕರಿಗೆ ಅಪಾಯ ತಂದೊಡ್ಡಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮಾಡಿದ ಕಳಪೆ ಕಾಮಗಾರಿಯಿಂದಾಗಿ ಸಾವಿರಾರು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಸಮಸ್ಯೆ ಮಧ್ಯೆ ಮತ್ತೊಂದು ದುರಂತ: ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ​ ಸಾವು

ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ಸಾಲು ಸಾಲು ಸಮಸ್ಯೆಗೆ ಗುರಿಯಾಗುತ್ತಿದೆ. ತಾಂತ್ರಿಕ ದೋಷದಿಂದ ಮೆಟ್ರೋ ರೈಲು ಎರಡೆರಡು ಸಲ ಕೈಕೊಟ್ಟಿತ್ತು. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಪಿಲ್ಲರ್​ಗೆ ಲೈಟಿಂಗ್ಸ್​​​ ಅಳವಡಿಸುವಾಗ ವಿದ್ಯುತ್​ ಪ್ರವಹಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.​

ಚೂರು ಹೆಚ್ಚು ಕಮ್ಮಿಯಾಗಿದ್ರು ದೊಡ್ಡ ಅನಾಹುತ: ಮೆಟ್ರೋನಲ್ಲಿ ತಾಂತ್ರಿಕ ದೋಷಕ್ಕೆ ಸ್ಫೋಟಕ ಕಾರಣ ಬಯಲು

ನಮ್ಮ ಮೆಟ್ರೋ ಬೆಂಗಳೂರಿಗರ ಜೀವನಾಡಿಯಾಗಿದೆ. ಯಾವುದೇ ಟ್ರಾಫಿಕ್ ಕಿರಿಕಿರಿ ಬೇಡವೇ ಬೇಡವೆಂದು ಜನರು ನಮ್ಮ ಮೆಟ್ರೋವನ್ನೇ ಅವಲಂಬಿಸಿದ್ದಾರೆ. ಆದ್ರೆ, ಇತ್ತೀಚೆಗೆ ಅದ್ಯಾಕೋ ನಮ್ಮ ಮೆಟ್ರೋಗಳಲ್ಲಿ ಮೇಲಿಂದ ಮೇಲೆ ತಾಂತ್ರಿಕ ದೋಷಗಳು ಕಂಡುಬರುತ್ತಿದೆ. ಅದರಲ್ಲೂ ಕಬ್ಬನ್ ಪಾರ್ಕ್​ ಮೆಟ್ರೋ ನಿಲ್ದಾಣದಲ್ಲಿ ಪದೇ ಪದೇ ದೋಷ ಕಂಡು ಬರುತ್ತಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿದೆ. ಹೀಗಾಗಿ ಬಿಎಂಆರ್​​ಸಿಎಲ್ ಟೆಕ್ನಿಕಲ್ ಟೀಮ್ ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಿದಾಗ ಮಹತ್ವದ ಕಾರಣ ಪತ್ತೆಯಾಗಿದೆ. ಹಾಗಾದ್ರೆ, ಮೆಟ್ರೋನಲ್ಲಿ ದೋಷಕಂಡುಬರುತ್ತಿರುವುದ್ಯಾಕೆ? ಟೆಕ್ನಿಕಲ್ ತಂಡ ನೀಡಿದ ವರದಿಯಲ್ಲೇನಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಪ್ರಯಾಣಿಕರ ಗಮನಕ್ಕೆ: ಶನಿವಾರ ಬೆಳಿಗ್ಗೆ 4 ಗಂಟೆಯಿಂದಲೇ ಮೆಟ್ರೋ ಸೇವೆ, ವಿಶೇಷ ಏನು ಗೊತ್ತಾ?

Bangaluru Metro Saturday Timings: ಜೂನ್ 27ರಂದು ನಡೆಯುವ ಬಿಡಿಎ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕ್‌ಥಾನ್‌ನಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ವಿಶೇಷ ಮೆಟ್ರೋ ಸೇವೆ ಪ್ರಕಟಿಸಿದೆ. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ನಗರದಲ್ಲಿ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ರೈಲು ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ನಮ್ಮ ಮೆಟ್ರೋದಲ್ಲಿ 3 ವರ್ಷದಲ್ಲಿ 21 ಬಾರಿ ಯಡವಟ್ಟು: ಬಿಎಂಆರ್‌ಸಿಎಲ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಗರಂ, ತನಿಖೆಗೆ ಪತ್ರ

‘ನಮ್ಮ ಮೆಟ್ರೋ’ ಸೇವೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೊಬ್ಬರಿ 21 ಬಾರಿ ತಾಂತ್ರಿಕ ದೋಷಗಳು ಸಂಭವಿಸಿದ್ದು, ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಈ ಕುರಿತು ಸಮಗ್ರ ಸುರಕ್ಷತಾ ಆಡಿಟ್ ನಡೆಸುವಂತೆ ಕೋರಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ರೈಲ್ವೆ ಸುರಕ್ಷತಾ ಕಮಿಷನರ್ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ. ಬಿಎಂಆರ್‌ಸಿಎಲ್‌ಗೆ 5 ನೇರ ಪ್ರಶ್ನೆಗಳನ್ನು ಕೇಳಿದ್ದಾರೆ.

ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ಬಾಗಿಲು ಲಾಕ್ ಆಗದೇ ಇದ್ದುದರ ಅಸಲಿ ಕಾರಣ ಬಯಲು

ಗುರುವಾರ ಸಂಜೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲಿನ ಬಾಗಿಲು ಮುಚ್ಚದ ಕಾರಣ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದ ಘಟನೆಗೆ ಅಸಲಿ ಕಾರಣ ಬಯಲಾಗಿದೆ. ಪ್ರಯಾಣಿಕರೊಬ್ಬರ ಲೋಹದ ಸರ ಬಾಗಿಲಿನ ಗೈಡ್‌ವೇನಲ್ಲಿ ಸಿಲುಕಿಕೊಂಡಿದ್ದರಿಂದ ಈ ತಾಂತ್ರಿಕ ವ್ಯತ್ಯಯ ಉಂಟಾಗಿತ್ತು ಎಂದು ಬಿಎಂಆರ್‌ಸಿಎಲ್ ತನ್ನ ಪ್ರಾಥಮಿಕ ತನಿಖಾ ವರದಿಯಲ್ಲಿ ತಿಳಿಸಿದೆ.

ಮೆಟ್ರೋ ಸ್ಟೇಷನ್​ಗಳಲ್ಲಿ ಆತ್ಮಹತ್ಯೆ ಕೇಸ್ ಹೆಚ್ಚಳ ಹಿನ್ನೆಲೆ BMRCL ವಿನೂತನ ಕ್ರಮ!

ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆ ಇಟ್ಟಿದೆ. ನಿಮ್ಹಾನ್ಸ್ ಆಸ್ಪತ್ರೆಯ ಜೊತೆಗೂಡಿ ‘ಟೆಲಿಮನಸ್’ ಕಾರ್ಯಕ್ರಮದಡಿ ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಜಾಗೃತಿ ಫಲಕಗಳು ಹಾಗೂ 24/7 ಮಾನಸಿಕ ಆರೋಗ್ಯ ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ವಿನೂತನ ಪ್ರಯತ್ನಕ್ಕೆ ಚಾಲನೆ ನೀಡಲಾಗಿದೆ.

ಮತ್ತೆ ಕೈಕೊಟ್ಟ ನಮ್ಮ ಮೆಟ್ರೋ: ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ರೈಲು

ಮಂಗಳವಾರ ಮೆಟ್ರೋ ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿ ಸಾರ್ವಜನಿಕರು ತೊಂದರೆ ಅನುಭವಿಸಿದ್ದರು, ಇದೀಗ ಇಂದು ಮತ್ತೆ ಅದೇ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿತ್ತು. ಹೀಗಾಗಿ ಪ್ರಯಾಣಿಕರು ಪರದಾಡಿದರು. ಸದ್ಯ ಬಿಎಂಆರ್​ಸಿಎಲ್​ ಸಿಬ್ಬಂದಿ ಸಮಸ್ಯೆ ಸರಿಪಡಿಸಿದ್ದು, ನಮ್ಮ ಮೆಟ್ರೋ ಸಂಚಾರ ಪುನಾರಂಭಗೊಂಡಿದೆ.

ಕನ್ನಡ ಬಾವುಟದಿಂದ ವಾಹನಕ್ಕೆ ಕ್ಯಾಪ್ ಕಟ್ಟಿ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ

ನಮ್ಮ ಮೆಟ್ರೋ ಸಿಬ್ಬಂದಿ ಕನ್ನಡ ಧ್ವಜವನ್ನು ‘ಕರೆಂಟ್ ಕಲೆಕ್ಟರ್ ಶೂ ಕ್ಯಾಪ್’ ಕಟ್ಟಲು ವಾಹನದಲ್ಲಿ ಬಳಸಿದ್ದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಕಬ್ಬನ್ ಪಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿಯ ಈ ನಡೆಯನ್ನು ಧ್ವಜಕ್ಕೆ ಮಾಡಿದ ಅಪಮಾನ ಎಂದು ಸಾರ್ವಜನಿಕರು ಖಂಡಿಸಿದ್ದಾರೆ.

ಮೆಟ್ರೋ ಸಂಚಾರ ಶುರುವಾಯ್ತಾ? ಬಿಗ್ ಅಪ್​ಡೇಟ್ ಕೊಟ್ಟ ಬಿಎಂಆರ್​ಸಿಎಲ್

ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮಂಗಳವಾರ ಸಂಜೆ ಎದುರಾಗಿದ್ದ ತಾಂತ್ರಿಕ ದೋಷವನ್ನು ಬಿಎಂಆರ್‌ಸಿಎಲ್ ಸಿಬ್ಬಂದಿ ಯಶಸ್ವಿಯಾಗಿ ಸರಿಪಡಿಸಿದ್ದು, ಬುಧವಾರ ಮುಂಜಾನೆಯಿಂದಲೇ ಮೆಟ್ರೋ ರೈಲುಗಳ ಸಂಚಾರ ಎಂದಿನಂತೆ ಯಥಾಸ್ಥಿತಿಗೆ ಮರಳಿದೆ. ಕಬ್ಬನ್ ಪಾರ್ಕ್ ನಿಲ್ದಾಣದ ಬಳಿ ಉಂಟಾಗಿದ್ದ ಸಮಸ್ಯೆಯನ್ನು ಮುಂಜಾನೆ 3:30ರ ಸುಮಾರಿಗೆ ಬಗೆಹರಿಸಲಾಗಿದ್ದು, ನಿಗದಿತ ವೇಳಾಪಟ್ಟಿಯಂತೆ ರೈಲು ಸೇವೆ ಲಭ್ಯವಿದೆ.