AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL

ನೇರಳೆ ಮಾರ್ಗದ ಮೆಟ್ರೋ ಕಾಮಗಾರಿ ನಿಗದಿತ ಸಮಯಕ್ಕಿಂತ ಮೊದಲೇ ಪೂರ್ಣಗೊಂಡಿದ್ದು, ಭಾನುವಾರ ಬೆಳಿಗ್ಗೆ 7 ಗಂಟೆಯಿಂದಲೇ ರೈಲು ಸಂಚಾರ ಎಂದಿನಂತೆ ಆರಂಭವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯಿಂದ 9ರ ವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಮೇ 29ರಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿತ್ತು.

IPL ಫೈನಲ್​​​ ದಿನದಂದು ಆರ್‌ಸಿಬಿ ಫ್ಯಾನ್ಸ್​​​ಗೆ ಉಚಿತ ಮೆಟ್ರೋ ಪ್ರಯಾಣ: ಅಂತೆಕಂತೆಗಳಿಗೆ BMRCL ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಐಪಿಎಲ್ ಫೈನಲ್ ದಿನ RCB ಅಭಿಮಾನಿಗಳಿಗೆ ಉಚಿತ ಮೆಟ್ರೋ ಪ್ರಯಾಣ ಮಾಹಿತಿ ಸುಳ್ಳು ಎಂದು BMRCL ಸ್ಪಷ್ಟಪಡಿಸಿದೆ. ಮೇ 31ರ ಅಹಮದಾಬಾದ್ ಐಪಿಎಲ್ ಫೈನಲ್‌ಗೆ ಯಾವುದೇ ಉಚಿತ ಮೆಟ್ರೋ ಸೌಲಭ್ಯವಿಲ್ಲ. ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಎಲ್ಲರೂ ಟಿಕೆಟ್ ಪಡೆದು ಪ್ರಯಾಣಿಸಬೇಕು ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ರೈಲುಗಳ ಸಂಚಾರ ತಡವಾಗುತ್ತಿರುವುದಕ್ಕೆ ಪ್ರಯಾಣಿಕರು ಬಿಎಂಆರ್‌ಸಿಎಲ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪೀಕ್ ಅವರ್‌ನಲ್ಲೂ 9 ರಿಂದ 14 ನಿಮಿಷ ಕಾಯಬೇಕಾದ ದುಸ್ಥಿತಿ ಇದೆಯೆಂಬ ಮಾತುಗಳು ಕೇಳಿಬಂದಿದ್ದು, 9 ಮತ್ತು 10ನೇ ರೈಲುಗಳು ಶೀಘ್ರವಾಗಿ ವಾಣಿಜ್ಯ ಸಂಚಾರಕ್ಕೆ ಲಭ್ಯವಾಗಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ಬೆಂಗಳೂರು ಮೆಟ್ರೋಗೆ ‘ಬಂಗಾಳ ಎಲೆಕ್ಷನ್ ಶಾಕ್’: 10 ಸಾವಿರ ಕಾರ್ಮಿಕರು ನಾಪತ್ತೆ, ಪಿಂಕ್-ಬ್ಲೂ ಲೈನ್ ಕಾಮಗಾರಿ ಬಂದ್!

ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಗಳ ಉದ್ಘಾಟನೆಗೆ ಪಶ್ಚಿಮ ಬಂಗಾಳದ ಚುನಾವಣೆ ಭಾರಿ ಹಿನ್ನಡೆ ತಂದಿದೆ. ಮತದಾನ ಮಾಡಲು ಸ್ವಗ್ರಾಮಗಳಿಗೆ ತೆರಳಿದ 10 ಸಾವಿರಕ್ಕೂ ಹೆಚ್ಚು ಬಂಗಾಳಿ ಕಾರ್ಮಿಕರು ಮರಳಿ ಬಾರದ ಕಾರಣ ಕಾಮಗಾರಿಗಳು ಸ್ಥಗಿತಗೊಂಡಿವೆ. ಜೂನ್‌ನಲ್ಲಿ ಆರಂಭವಾಗಬೇಕಿದ್ದ ಕಾಳೇನ ಅಗ್ರಹಾರ-ತಾವರೆಕೆರೆ ಮಾರ್ಗ ಹಾಗೂ ಡಿಸೆಂಬರ್‌ನ ಸಿಲ್ಕ್ ಬೋರ್ಡ್-ಕೆ.ಆರ್. ಪುರಂ ಮೆಟ್ರೋ ಕಾಮಗಾರಿ ವಿಳಂಬವಾಗುವ ಸಂಪೂರ್ಣ ವಿವರ ಇಲ್ಲಿದೆ.

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್!

ಬೆಂಗಳೂರಿನ ಬಹುನಿರೀಕ್ಷಿತ ಏರ್‌ಪೋರ್ಟ್ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗೆ ನೀಡಲು ಬಿಎಂಆರ್‌ಸಿಎಲ್ ಚಿಂತನೆ ನಡೆಸಿದೆ. ಆದರೆ, ಈ ನಿರ್ಧಾರಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಖಾಸಗಿ ಒಪ್ಪಂದದಿಂದ ಕಳಪೆ ಸೇವೆ ಲಭ್ಯವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದಶಕಗಳ ಕನಸು ನನಸಾಗುವ ಕಾಲ: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ; ಎಲ್ಲೆಲ್ಲಿ ಸ್ಟಾಪ್?

ಬೆಂಗಳೂರು ಟು ತುಮಕೂರು ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗದ ಡಿಪಿಆರ್ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಸುಮಾರು 59.60 ಕಿ.ಮೀ ಉದ್ದದ ಈ ಹಸಿರು ಮಾರ್ಗವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಲಿದೆ. ನೆಲಮಂಗಲ, ದಾಬಸ್‌ಪೇಟೆ ಮೂಲಕ ಹಾದುಹೋಗುವ ಈ ಅಂತರಜಿಲ್ಲಾ ಮೆಟ್ರೋ, ಪ್ರಯಾಣಿಕರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನೀಡಿ ಸುಗಮ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲಿದೆ.

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ

Bengaluru Rains: ಬೆಂಗಳೂರಿನಲ್ಲಿ ಇಂದು (ಮೇ 21) ಸಂಜೆ ಭಾರಿ ಗಾಳಿ ಮತ್ತು ಗುಡುಗು ಸಹಿತ ಭಾರೀ ಮಳೆ ಇಡೀ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಗರದ ರಸ್ತೆಗಳ ಮೇಲೆ ನೀರು ತುಂಬಿಕೊಂಡು ಟ್ರಾಫಿಕ್ ಜಾಮ್ ಉಂಟಾಗಿದ್ದರೆ, ಹಲವಡೆ ಮರಳು ಬಿದ್ದಿವೆ. ಇನ್ನು ಭಾರಿ ಗಾಳಿ ಮಳೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ನಮ್ಮ ಮೆಟ್ರೋಗೆ ಸೌರಶಕ್ತಿ: ವಾರ್ಷಿಕ 61 ಕೋಟಿ ರೂ. ಉಳಿತಾಯಕ್ಕೆ ಐಐಎಸ್‌ಸಿ ಶಿಫಾರಸು

ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ನಮ್ಮ ಮೆಟ್ರೋದ ನೀಲಿ ಮಾರ್ಗವನ್ನು ಸಂಪೂರ್ಣವಾಗಿ ಸೌರಶಕ್ತಿ ವಿದ್ಯುತ್‌ನಿಂದ ನಡೆಸಲು ಶಿಫಾರಸು ಮಾಡಿದೆ. ಈ ಯೋಜನೆಯಿಂದ ವಾರ್ಷಿಕ 61 ಕೋಟಿ ರೂಪಾಯಿ ಉಳಿತಾಯವಾಗಲಿದ್ದು, ಮುಂದಿನ 25 ವರ್ಷಗಳಲ್ಲಿ 624 ಕೋಟಿ ರೂಪಾಯಿಯಷ್ಟು ಹಣ ಉಳಿಯಲಿದೆ. ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಇದು ಮಹತ್ವದ ಹೆಜ್ಜೆಯಾಗಿದೆ.

ನಮ್ಮ ಮೆಟ್ರೋ ಪಿಲ್ಲರ್​ಗಳ ಮೇಲೆ ಇನ್ಮುಂದೆ ಡಿಜಿಟಲ್ ಜಾಹೀರಾತುಗಳ ಅಬ್ಬರ: ಸಾರ್ವಜನಿಕರಿಂದ ಆಕ್ರೋಶ

ನಮ್ಮ ಮೆಟ್ರೋದಲ್ಲಿ ಟಿಕೆಟ್ ಹೊರತಾದ ಆದಾಯ ಹೆಚ್ಚಿಸಿಕೊಳ್ಳಲು ಬಿಎಂಆರ್​ಸಿಎಲ್ ಸಂಸ್ಥೆಯು ಬೆಂಗಳೂರಿನ 5,000ಕ್ಕೂ ಹೆಚ್ಚು ಮೆಟ್ರೋ ಪಿಲ್ಲರ್‌ಗಳಲ್ಲಿ ಡಿಜಿಟಲ್ ಜಾಹೀರಾತು ಅಳವಡಿಸಲು ಟೆಂಡರ್ ಕರೆದಿದೆ. ಆದರೆ ಇದು ವಾಹನ ಸವಾರರ ಗಮನ ಸೆಳೆದು ಅಪಘಾತಕ್ಕೆ ಕಾರಣವಾಗಬಹುದು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!

ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಭಾನುವಾರ ಹೊಸಹಳ್ಳಿ-ಕಬ್ಬನ್ ಪಾರ್ಕ್ ಮೆಟ್ರೋ ಸಂಚಾರ ಬೆಳಿಗ್ಗೆ 9 ಗಂಟೆಗೆ ಆರಂಭ

ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಅತ್ಯಗತ್ಯ ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ, ಮೇ 17ರ ಭಾನುವಾರ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಬೆಳಿಗ್ಗೆ 9 ಗಂಟೆಯ ನಂತರ ಈ ಮಾರ್ಗದಲ್ಲಿ ಎಂದಿನಂತೆ ಸೇವೆ ಲಭ್ಯವಿರಲಿದ್ದು, ಉಳಿದ ಪ್ರಮುಖ ಮಾರ್ಗಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಈ ಮಾರ್ಗದ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಈ ದಿನದಂದು ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಈ ಮಾರ್ಗದ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಹಾಗಾದರೆ ಯಾವ ದಿನ ಮತ್ತು ಯಾವ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.