AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ಬೆಂಗಳೂರಿಗರಿಗೆ ಗುಡ್​ನ್ಯೂಸ್: ಬಡಾವಣೆಗಳಿಂದ ಮೆಟ್ರೋಗೆ ಸಂಪರ್ಕ ಕಲ್ಪಿಸಲು 200 ಹೊಸ ಎಸಿ ಮಿನಿ ಬಸ್!

ವಾಣಿಜ್ಯ ಪ್ರಯಾಣಿಕರ ವಾಹನಗಳಿಗೂ ಇನ್ಮುಂದೆ ನಮ್ಮ ಬಿಎಂಟಿಸಿ ಮೊಬೈಲ್ ಆಪ್ 2.0 ಲಭ್ಯವಾಗಲಿದೆ. ಆ ಮೂಲಕ ಓಲಾ, ಊಬರ್ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಾವು ಇಳಿಯುವ ಸ್ಥಳಗಳಿಗೆ ಹೋಗುವ ಬಿಎಂಟಿಸಿ ಬಸ್​ಗಳ ಸಂಚಾರ ಮಾಹಿತಿಯನ್ನು ಪಡೆಯಬಹುದಾಗಿದೆ. ಇನ್ನು ಮೆಟ್ರೋ ಪ್ರಯಾಣಿಕರಿಗಾಗಿ 200 ಹೊಸ ಎಸಿ ಮಿನಿ ಬಸ್​​ ಮೀಸಲಿಡಲು ಬಿಎಂಟಿಸಿ ಮುಂದಾಗಿದೆ.

ನಮ್ಮ ಮೆಟ್ರೋ ಬೆಂಗಳೂರಿಗರ ಸಂಚಾರ ಜೀವನಾಡಿಯಾದ್ರೂ 20 ನಿಲ್ದಾಣಗಳಿಗಿಲ್ಲ ದೊಡ್ಡ ಮಟ್ಟದ ಪ್ರಯಾಣಿಕರ ಸಂಖ್ಯೆ!

ಬೆಂಗಳೂರಿನಲ್ಲಿ ಪ್ರತಿದಿನ 11 ರಿಂದ 12 ಲಕ್ಷ ಜನರು 'ನಮ್ಮ ಮೆಟ್ರೋ' ಬಳಸುತ್ತಿದ್ದರೂ, ಮೂರೂ ಮಾರ್ಗಗಳ ಒಟ್ಟು 20 ನಿಲ್ದಾಣಗಳಲ್ಲಿ ಹೆಚ್ಚಿನ ಪ್ರಮಾಣದ ಪ್ರಯಾಣಿಕರ ಸಂಚಾರವಿಲ್ಲ ಎಂಬ ಕುತೂಹಲಕಾರಿ ಮಾಹಿತಿ ಬಹಿರಂಗಗೊಂಡಿದೆ. ಯೆಲ್ಲೋ ಲೈನ್​​ನ 9, ಗ್ರೀನ್​​ ಲೈನ್​​ನ 7 ಮತ್ತು ನೇರಳೆ ಮಾರ್ಗದ ನಾಲ್ಕು ನಿಲ್ದಾಣಗಳು ಈ ಪಟ್ಟಿಗೆ ಸೇರಿವೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಸೋಲಾರ್ ನಿಂದ ನಮ್ಮ ಮೆಟ್ರೋ ರೈಲು ಓಡಿಸಲು ಪ್ಲ್ಯಾನ್: ಕೋಟ್ಯಂತರ ರೂ ಉಳಿತಾಯ

ಅದು ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ ಮಾರ್ಗ,ಈ ವರ್ಷ ಡಿಸೆಂಬರ್ ನಲ್ಲಿ ಓಪನ್ ಮಾಡಲು ಬಿಎಂಆರ್ಸಿಎಲ್ ಸಿದ್ದತೆ ಮಾಡಿಕೊಳ್ತಿದೆ ಆದರೆ ಐಐಎಸ್ಸಿ ತಜ್ಞರು ನಡೆಸಿದ ಅಧ್ಯಯನದಲ್ಲಿ ಈ ಮಾರ್ಗದಲ್ಲಿ ಮೆಟ್ರೋ ರೈಲುಗಳನ್ನು ಸಂಪೂರ್ಣವಾಗಿ ಸೋಲಾರ್ ನಲ್ಲೇ ರನ್ ಮಾಡಬಹುದು ಎಂದು ವರದಿ ನೀಡಿದ್ದಾರೆ. ಹಾಗಾದ್ರೆ, ಈ ಸೋಲಾರ್ ಬಳಕೆಯಿಂದ ಏನೆಲ್ಲಾ ಲಾಭ ಎನ್ನುವ ಡಿಟೇಲ್ಸ್ ಇಲ್ಲಿದೆ.

ಉದ್ಘಾಟನೆಗೆ ಸಿದ್ಧವಾದ ಪಿಂಕ್ ಲೈನ್ ಮೆಟ್ರೋ ಮಾರ್ಗ: ಕೊಂಚ ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ಸಿಲಿಕಾನ್‌ ಸಿಟಿ ಜನರಿಗೆ ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ ಹೊರಬಂದಿದೆ. ದೇಶದ ಅತಿ ಎತ್ತರದ ಮೆಟ್ರೋ ಸ್ಟೇಷನ್‌ ಎಂಬ ಹೆಗ್ಗಳಿಕೆ ಹೊಂದಿರುವ ಜಯದೇವ ಜಂಕ್ಷನ್‌ ಹಾಗೂ ಐದು ಹಂತದ ಸಾರಿಗೆ ಸಂಪರ್ಕ ಇರುವ ಪಿಂಕ್‌ ಲೈನ್‌ ರೆಡಿಯಾಗಿದ್ದು, ರೈಲು ಓಡಾಡಕ್ಕೆ ಹಸಿರು ನಿಶಾನೆ ತೋರಿಸಬೇಕಷ್ಟೇ. ಇನ್ನು ಈ ಲೈನ್​​​ನಲ್ಲಿ ರೈಲು ಸಂಚಾರ ಯಾವಾಗ? ಎನ್ನುವ ಡಿಟೇಲ್ಸ್ ಇಲ್ಲಿದೆ.

ನಮ್ಮ ಮೆಟ್ರೋ ಹಳೆ ರೈಲುಗಳಿಗೆ ಬಿಎಂಆರ್‌ಸಿಎಲ್ ‘ಸರ್ಜರಿ’: ಸುರಕ್ಷತೆಗೆ ‘ಮಿಡ್ ಲೈಫ್ ಓವರ್‌ಆಲ್’ ಪರೀಕ್ಷೆ!

ಬೆಂಗಳೂರು ನಮ್ಮ ಮೆಟ್ರೋದಲ್ಲಿ 15 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸಿ 10 ಲಕ್ಷ ಕಿ.ಮೀ ಓಡಿರುವ ಹಳೆಯ ರೈಲುಗಳಿಗೆ ಬಿಎಂಆರ್‌ಸಿಎಲ್ 'ಮಿಡ್ ಲೈಫ್ ಓವರ್‌ಆಲ್' ತಾಂತ್ರಿಕ ಪರೀಕ್ಷೆ ನಡೆಸಲು ಮುಂದಾಗಿದೆ. ಹೊಸ ಟಿಟಾಗಢ್ ರೈಲುಗಳು ಸೇರ್ಪಡೆಯಾಗುತ್ತಿದ್ದಂತೆ ಹಳೆಯ ರೈಲುಗಳ ರಿಪೇರಿ ನಡೆಸಿ, ಅವುಗಳನ್ನು ನೇರಳೆ ಮಾರ್ಗಕ್ಕೆ ವರ್ಗಾಯಿಸಲು ಯೋಜನೆ ರೂಪಿಸಲಾಗಿದೆ.

ನಿರ್ವಹಣಾ ಕಾಮಗಾರಿ ಹಿನ್ನೆಲೆ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲುಗಳ ವೇಗದ ಮಿತಿ ಕಡಿತ

ನಮ್ಮ ಮೆಟ್ರೋ ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ನಡುವೆ ಓಪನ್ ವೆಬ್ ಗರ್ಡರ್ ನಿರ್ವಹಣಾ ಕಾಮಗಾರಿ ಹಿನ್ನೆಲೆ, ರೈಲುಗಳ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 40 ಕಿ.ಮೀ.ಗೆ ಕಡಿತಗೊಳಿಸಲಾಗಿದೆ. ನಿರ್ವಹಣಾ ಕಾರ್ಯವು 2026ರ ಅಕ್ಟೋಬರ್ ಎರಡನೇ ವಾರದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಾರ್ಯ ಪೂರ್ಣಗೊಂಡ ನಂತರ ತಾಂತ್ರಿಕ ಮೌಲ್ಯಮಾಪನದ ಆಧಾರದ ಮೇಲೆ ತಾತ್ಕಾಲಿಕ ವೇಗ ನಿರ್ಬಂಧವನ್ನು ಮರುಪರಿಶೀಲಿಸಲಾಗುವುದು ಎಂದು ಬಿಎಂಆರ್​​ಸಿಎಲ್​ ತಿಳಿಸಿದೆ.

1 ವರ್ಷದಲ್ಲಿ 15 ಬಾರಿ ತಾಂತ್ರಿಕ ದೋಷ: ನಮ್ಮ ಮೆಟ್ರೋ ವಿರುದ್ಧ ಪ್ರಯಾಣಿಕರ ಆಕ್ರೋಶ, ನಿರ್ವಹಣೆ ಇಲ್ಲ ಎಂದು ಅಸಮಾಧಾನ

ಬೆಂಗಳೂರು ನಮ್ಮ ಮೆಟ್ರೋದಲ್ಲಿ ಪದೇಪದೇ ತಾಂತ್ರಿಕ ದೋಷಗಳು ಕಾಣಿಸಿಕೊಳ್ಳುತ್ತಿದ್ದು, ಕಳೆದ ಒಂದು ವರ್ಷದಲ್ಲಿ 15 ಬಾರಿ ಸಮಸ್ಯೆ ಎದುರಾಗಿದೆ. ಇದರಿಂದಾಗಿ ಗ್ರೀನ್, ಪರ್ಪಲ್ ಹಾಗೂ ಯೆಲ್ಲೋ ಲೈನ್‌ಗಳಲ್ಲಿ ಪ್ರಯಾಣಿಕರು ಪರದಾಡುವಂತಾಗಿತ್ತು. ಸದ್ಯ, ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್ ಪರ್ಯಾಯ ಕ್ರಮಕ್ಕೆ ಮುಂದಾಗಿದೆ ಎಂಬ ವಿಚಾರ ಗೊತ್ತಾಗಿದೆ.

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರವೇ ನಮ್ಮ ಮೆಟ್ರೋ ಪಿಂಕ್ ಲೈನ್ ಕಾರ್ಯಾರಂಭ

Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿಯನ್ನು ಸಚಿವ ಕೃಷ್ಣ ಬೈರೇಗೌಡ ಪರಿಶೀಲಿಸಿದ್ದಾರೆ. ಮಾರ್ಚ್ ವೇಳೆಗೆ ಸುರಂಗ ಮಾರ್ಗದ ಕೆಲಸ ಪೂರ್ಣಗೊಳ್ಳಲಿದ್ದು, ಶೀಘ್ರವೇ ಕಾಳೇನ ಅಗ್ರಹಾರ-ನಾಗವಾರ ಮಾರ್ಗ ಲೋಕಾರ್ಪಣೆಯಾಗುವ ನಿರೀಕ್ಷೆಯಿದೆ. ಏರ್​​ಪೋರ್ಟ್​​ಗೆ ಸಂಪರ್ಕ ಕಲ್ಪಸುವ ಬ್ಲ್ಯೂ ಲೈನ್​​ ಕಾಮಗಾರಿಯ 2A, 2B ಯೋಜನೆಗೂ ವೇಗ ಸಿಕ್ಕಿದೆ.

ಮತ್ತೆ ಮುನ್ನೆಲೆಗೆ ಬಂದ ಗಡಿ ಮೆಟ್ರೋ ಯೋಜನೆ: ಬೊಮ್ಮಸಂದ್ರ-ಅತ್ತಿಬೆಲೆ ಮಾರ್ಗದ ಡಿಪಿಆರ್‌ಗೆ ಬಿಎಂಆರ್‌ಸಿಎಲ್‌ಗೆ ಸರ್ಕಾರ ಸೂಚನೆ

Attibele Metro Project: ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿದ್ದ ಕರ್ನಾಟಕ-ತಮಿಳುನಾಡು ಗಡಿ ಭಾಗದ ಮೆಟ್ರೋ ವಿಸ್ತರಣಾ ಯೋಜನೆಗೆ ಇದೀಗ ಮತ್ತೆ ಜೀವ ಬಂದಿದೆ. ಆರ್.ವಿ. ರಸ್ತೆ–ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದ ಮುಂದುವರಿದ ಭಾಗವಾಗಿ ಬೊಮ್ಮಸಂದ್ರದಿಂದ ಅತ್ತಿಬೆಲೆವರೆಗೆ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸಲು ಡಿಪಿಆರ್ ಸಿದ್ಧಪಡಿಸುವಂತೆ ರಾಜ್ಯ ಸರ್ಕಾರ ಬಿಎಂಆರ್‌ಸಿಎಲ್‌ಗೆ ಸೂಚನೆ ನೀಡಿದೆ.

ತುಮಕೂರು-ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

ತುಮಕೂರಿನ ದಶಕಗಳ ಕನಸಾದ ಮೆಟ್ರೋ ಯೋಜನೆ ನನಸಾಗುವ ಹೊಸ್ತಿಲಲ್ಲಿದ್ದು, ಡಿಪಿಆರ್ ಪೂರ್ಣಗೊಂಡ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಬಳಕೆಯ ಅನುಮತಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಪಿಪಿಪಿ ಮಾದರಿಯಲ್ಲಿ ನಿರ್ಮಾಣವಾಗಲಿರುವ ಈ ಯೋಜನೆಗೆ ದೇಶ-ವಿದೇಶಿ ಕಂಪನಿಗಳು ಹೂಡಿಕೆಗೆ ಆಸಕ್ತಿ ತೋರಿಸಿದ್ದು, ನೆಲಮಂಗಲ, ದಾಬಸ್‌ಪೇಟೆ ಮಾರ್ಗದಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗುತ್ತದೆ.

Namma Metro: ನಮ್ಮ ಮೆಟ್ರೋ ಬ್ಲೂ ಲೈನ್ ಕಾರ್ಯಾಚರಣೆ ಮತ್ತಷ್ಟು ವಿಳಂಬ: 2027ಕ್ಕೆ ಗಡುವು!

ಬೆಂಗಳೂರಿನ ಐಟಿ ಕಾರಿಡಾರ್ ಹಾಗೂ ಔಟರ್ ರಿಂಗ್ ರೋಡ್ ಜೋಡಿಸುವ 'ನಮ್ಮ ಮೆಟ್ರೋ' ಬ್ಲೂ ಲೈನ್ (ಸಿಲ್ಕ್ ಬೋರ್ಡ್-ಕೆ.ಆರ್. ಪುರ) ವಾಣಿಜ್ಯ ಕಾರ್ಯಾಚರಣೆಯ ಗಡುವು 2027ರ ಮಧ್ಯಭಾಗಕ್ಕೆ ಮುಂದೂಡಲ್ಪಟ್ಟಿದೆ. ಸಿವಿಲ್ ಕಾಮಗಾರಿ ಹಾಗೂ ಬೈಯಪ್ಪನಹಳ್ಳಿ ಡಿಪೋ ಕಾಮಗಾರಿ ಬಾಕಿ ಇರುವ ಹಿನ್ನೆಲೆಯಲ್ಲಿ ಈ ವಿಳಂಬ ಉಂಟಾಗಿದೆ. ಐಟಿ ಉದ್ಯೋಗಿಗಳ ಸಂಚಾರ ಹಾಗೂ ಯೋಜನೆ ವಿಳಂಬದ ಸಂಪೂರ್ಣ ವರದಿ ಇಲ್ಲಿದೆ.

ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಗಿಂತ ಕಡಿಮೆ: CAG ವರದಿಯಲ್ಲಿ ಮಹತ್ವದ ಅಂಶಗಳು ಬಯಲು

ಬೆಂಗಳೂರು ಮೆಟ್ರೋದಲ್ಲಿ ನಿರೀಕ್ಷಿತ ಪ್ರಯಾಣಿಕರ ಸಂಖ್ಯೆ ಮತ್ತು ಆದಾಯದ ಗುರಿ ಸಾಧನೆಯಾಗಿಲ್ಲ ಎಂದು ಮಹಾಲೇಖಪಾಲರ (ಸಿಎಜಿ) ವರದಿ ಬಹಿರಂಗಪಡಿಸಿದೆ. 2016-17ರಿಂದ 2022-23ರವರೆಗೆ ₹7,736.70 ಕೋಟಿ ಫೇರ್ ಆದಾಯ ನಿರೀಕ್ಷಿಸಲಾಗಿದ್ದರೂ ₹1,758.13 ಕೋಟಿ ಮಾತ್ರ ಸಂಗ್ರಹವಾಗಿದೆ. ಇದೇ ವೇಳೆ ಭೂಸ್ವಾಧೀನ ವೆಚ್ಚ ₹6,603.39 ಕೋಟಿ ಹೆಚ್ಚಾಗಿದೆ.

ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್