Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ಟಿಕೆಟ್ ದರ ಏರಿಕೆಯಿಂದ ನಮ್ಮ ಮೆಟ್ರೋಗೆ ಮರಳದ ಪ್ರಯಾಣಿಕರು: ಬೆಂಗಳೂರು ಟ್ರಾಫಿಕ್, ವಾಯುಮಾಲಿನ್ಯ ಹೆಚ್ಚಳ

ಮೆಟ್ರೋ ಟಿಕೆಟ್ ದರ ದುಪ್ಪಟ್ಟು ಏರಿಕೆ ಆಗಿದ್ದೇ ಆಗಿದ್ದು, ಮೆಟ್ರೋ ರೈಲಿನಿಂದ ಪ್ರಯಾಣಿಕರು ದೂರವಾಗುತ್ತಿದ್ದಾರೆ. ಇದರ ಎಫೆಕ್ಟ್ ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಮೇಲೆ ತಟ್ಟಿದ್ದು, ನಗರದ ಯಾವ ಜಂಕ್ಷನ್ ನೋಡಿದರೂ ವಾಹನಗಳ ದಟ್ಟಣೆ ಹೆಚ್ಚಾಗಿರುವುದು ಕಾಣಿಸುತ್ತಿದೆ. ಬಿಎಂಆರ್​​​ಸಿಎಲ್ ವಿರುದ್ಧ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಟಿಕೆಟ್ ದರ ಏರಿಕೆ ಪರಿಣಾಮ: 5 ಲಕ್ಷಕ್ಕಿಳಿದ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ದರ ಏರಿಕೆಯಿಂದ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಕೆಯಾಗಿದೆ. ಮಹಿಳಾ ಐಪಿಎಲ್ ಪಂದ್ಯಗಳ ಹೊರತಾಗಿಯೂ, ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ವಾರದ ದಿನಗಳ ಸರಾಸರಿ 8.5 ಲಕ್ಷದಿಂದ 5 ಲಕ್ಷಕ್ಕೆ ಇಳಿಕೆಯಾಗಿದೆ. ಪ್ರಯಾಣಿಕರು ಪರ್ಯಾಯ ಸಾರಿಗೆಯನ್ನು ಬಳಸುತ್ತಿದ್ದು, ಬಿಎಂಆರ್ಸಿಎಲ್ ದರ ಕಡಿಮೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಪ್ರಯಾಣ ದರ ಏರಿಕೆ ಪರಿಣಾಮ: ನಮ್ಮ ಮೆಟ್ರೋದಿಂದ ದೂರವುಳಿದ 6 ಲಕ್ಷ ಪ್ರಯಾಣಿಕರು!

ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದೀಗ ಸುಮಾರು ಆರು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪರ್ಯಾಯ ಸಾರಿಗೆಗಳನ್ನು ಆಶ್ರಯಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದರೊಬ್ಬರು ಆರೋಪಿಸಿದ್ದಾರೆ. ದರ ಏರಿಕೆಯಿಂದಾಗಿ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದ್ದು, ಕೆಲವು ನಿಲ್ದಾಣಗಳ ನಡುವಿನ ದರವನ್ನು ಕಡಿಮೆ ಮಾಡಲಾಗಿದ್ದರೂ, ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿಲ್ಲ.

ಬೆಂಗಳೂರಿನಲ್ಲಿ WPL ಮ್ಯಾಚ್ ನೋಡಲು ಹೋಗುವವರಿಗೆ ಗುಡ್‌ ನ್ಯೂಸ್: ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಗಳಿಗೆ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ. ಫೆಬ್ರುವರಿ 21 ರಿಂದ ಮಾರ್ಚ್ 1 ರವರೆಗೆ ನಡೆಯುವ ಪಂದ್ಯಗಳಿಗೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸೇವೆ ವಿಸ್ತರಿಸಲಾಗಿದೆ. ಆ ಮೂಲಕ WPL ಅಭಿಮಾನಿಗಳಿಗೆ ಮೆಟ್ರೋ ಗುಡ್​ನ್ಯೂಸ್​ ನೀಡಿದೆ.

ಮೆಟ್ರೋ ದರ ಏರಿಕೆಗೆ ರಾಜ್ಯ ಬರೆದ ಪತ್ರಕ್ಕೆ ಕೇಂದ್ರ ಅನುಮತಿ ಕೊಟ್ಟಿತ್ತಾ? ರಹಸ್ಯ ಬಹಿರಂಗಪಡಿಸಿದ ಶೋಭಾ ಕರಂದ್ಲಾಜೆ

ನಮ್ಮ ಮೆಟ್ರೋ ದರ ಏರಿಕೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬರೆದ ಪತ್ರಕ್ಕೆ ಕೇಂದ್ರ ಅನುಮತಿ ಕೊಟ್ಟಿತ್ತಾ? ರಾಜ್ಯ ಸರ್ಕಾರ ಬರೆದ ಪತ್ರ ಏನು? ರಾಜ್ಯದ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಏನು ಹೇಳಿತ್ತು? ಎಷ್ಟು ದರ ಹೆಚ್ಚಳ ಮಾಡಬೇಕೆಂದು ನಿರ್ಧರಿಸಿದ್ದು ಯಾರು? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಹಿರಂಗಪಡಿಸಿದ ರಹಸ್ಯ ಇಲ್ಲಿದೆ.

ದರ ಏರಿಕೆ ವಿರುದ್ಧ ಪ್ರಯಾಣಿಕರ ಸೆಡ್ಡು: ನಮ್ಮ ಮೆಟ್ರೋ ಬಾಯ್ಕಾಟ್ ಮಾಡಲು ಚಿಂತನೆ

ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆಯನ್ನು ಖಂಡಿಸಿ, ಪ್ರಯಾಣಿಕರ ವೇದಿಕೆ ಮೆಟ್ರೋ ಬಹಿಷ್ಕಾರಕ್ಕೆ ಮುಂದಾಗಿದೆ. ಭಾನುವಾರದೊಳಗೆ ದರ ಕಡಿಮೆ ಮಾಡದಿದ್ದರೆ ಮೆಟ್ರೋ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ಸದ್ಯ ಮೆಟ್ರೋ ಟಿಕೆಟ್ ದರ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಸರ್ಕಾರಕ್ಕೆ ದರ ಏರಿಕೆ ತಲೆನೋವಾಗಿದೆ.

‘ಟಿವಿ9’ ರಿಯಾಲಿಟಿ ಚೆಕ್: ಅನೇಕ ಕಡೆಗಳಲ್ಲಿ ಕಡಿಮೆಯೇ ಆಗಿಲ್ಲ ಮೆಟ್ರೋ ಟಿಕೆಟ್ ದರ!

ಬಿಎಂಆರ್​ಸಿಎಲ್ ಶೇ 46 ರಿಂದ 47 ರಷ್ಟು ದರ ಏರಿಕೆ ಮಾಡಲಾಗುವುದು ಎಂದು ಹೇಳಿ ಬರೋಬ್ಬರಿ ಶೇ 100 ರಷ್ಟು ಹೆಚ್ಚಳ ಮಾಡಿದ್ದು, ಜನಾಕ್ರೋಶಕ್ಕೆ ಕಾರಣವಾಗಿತ್ತು. ಸಿಎಂ ಸೂಚನೆಯ ನಂತರ ದರ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿ ಇದೀಗ ಕೆಲವೊಂದು ಸ್ಟೇಷನ್​ಗಳಿಗೆ ಮಾತ್ರ ಕಡಿಮೆ ಮಾಡಿ ಕೈ ತೊಳೆದುಕೊಂಡಿದೆ. ಹೀಗಾಗಿ ಪ್ರಯಾಣಿಕರ ಆಕ್ರೋಶ ಮುಂದುವರಿದಿದೆ. ಮೆಟ್ರೋ ಟಿಕೆಟ್ ದರದ ಬಗ್ಗೆ ‘ಟಿವಿ’ ಮಾಡಿರುವ ರಿಯಾಲಿಟಿ ಚೆಕ್​ನಲ್ಲಿ ಕಂಡುಬಂದ ಮಾಹಿತಿ ಇಲ್ಲಿದೆ.

ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ

ಜನಾಕ್ರೋಶಕ್ಕೆ ಮಣದಿರುವ ಬಿಎಂಆರ್‌ಸಿಎಲ್ ಕೊನೆಗೂ ನಮ್ಮ ಮೆಟ್ರೋ ಪ್ರಯಾಣ ದರ ಎಲ್ಲೆಲ್ಲಿ ದುಪ್ಪಟ್ಟು ಹೆಚ್ಚಾಗಿದೆಯೋ ಅಲ್ಲೆಲ್ಲ ತುಸು ಇಳಿಕೆ ಮಾಡಿದೆ. ದರ ಇಳಿಕೆ ಇಂದಿನಿಂದಲೇ ಜಾರಿಗೆ ಬಂದಿದೆ. ಶುಕ್ರವಾರ ಬೆಳಗ್ಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಯಾಣಿಕರು ಕೂಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆ ಆಯ್ತು ಎಂಬ ಮಾಹಿತಿ ಇಲ್ಲಿದೆ. ಆದಾಗ್ಯೂ, ಮೆಟ್ರೋದ ಅಧಿಕೃತ ದರಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ನಮ್ಮ ಮೆಟ್ರೋ ಟಿಕೆಟ್ ದರ ಶೇ 30 ರ ವರೆಗೆ ಇಳಿಕೆ: ಆದರೆ ಎಲ್ಲೆಡೆಯೂ ಅಲ್ಲ!

ನಮ್ಮ ಮೆಟ್ರೋ ದರೆ ಏರಿಕೆ ಸಂಬಂಧಪಟ್ಟಂತೆ ಬಿಎಮ್ಆರ್‌ಸಿಎಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ ಬೆನ್ನಲ್ಲೇ ಸಂಸ್ಥೆಯ ಎಂಡಿ ಮಹೇಶ್ವರ್ ರಾವ್​ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹಾಗಾದರೆ ಅವರು ಹೇಳಿದ್ದೇನು? ಮೆಟ್ರೋ ಪ್ರಯಾಣ ದರ ಮತ್ತೆ ಇಳಿಕೆಯಾಗುತ್ತಾ? ತಿಳಿಯಲು ಮುಂದೆ ಓದಿ.

ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ: ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ

ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಗೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇತರ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನ ಮೆಟ್ರೋ ದರ ಅತಿ ಹೆಚ್ಚು ಎಂಬುದು ಅವರ ವಾದ. ಟ್ವಿಟರ್​​​ನಲ್ಲಿ #RevokeMetroFareHike ಅಭಿಯಾನದ ಮೂಲಕ ಸಾರ್ವಜನಿಕರಿಂದ ಪ್ರತಿಭಟನೆ ನಡೆಯುತ್ತಿದೆ. ಇದಕ್ಕೆ ಸಂಸದರೂ ದನಿಗೂಡಿಸಿದ್ದಾರೆ.

ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು