AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ಖಾಲಿ ಟ್ರಂಕ್ ಹಿಡಿದು ಬಂದ ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಸಂಕಷ್ಟ

ಇತ್ತೀಚೆಗೆ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿರುದ್ಧ ಖಾಲಿ ಟ್ರಂಕ್ ಹಿಡಿದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಭಿನ್ನವಾಗಿ ಪ್ರತಿಭಟಿಸಿದ್ದರು. ಸದ್ಯ ಇದೇ ವಿಚಾರವಾಗಿ ತೇಜಸ್ವಿ ಸೂರ್ಯ ಸೇರಿದಂತೆ 9 ಜನರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಜಯನಗರ ಠಾಣೆ ಇನ್ಸ್​ಪೆಕ್ಟರ್​​ರಿಂದ ಖಾಸಗಿ ದೂರು ದಾಖಲಾಗಿದ್ದು, ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ.

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ?

ನಮ್ಮ ಮೆಟ್ರೋದಲ್ಲಿ ಸೀಲ್ಡ್ ಮದ್ಯದ ಬಾಟಲಿಗಳನ್ನು ಸಾಗಿಸಲು ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆ ಇದೆ. BMRCL ಈ ಕುರಿತು ಸಮಾಲೋಚನೆ ನಡೆಸುತ್ತಿದ್ದು, ದೆಹಲಿ ಮೆಟ್ರೋದ ಮಾದರಿಯನ್ನು ಅನುಸರಿಸಲು ಚಿಂತಿಸುತ್ತಿದೆ. ಹಾಗಿದ್ದರೆ ಯಾವಾಗಿನಿಂದ ಈ ಅವಕಾಶ ಪ್ರಯಾಣಿಕರಿಗೆ ಸಿಗುವ ಸಾಧ್ಯತೆ ಇದೆ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ

ಸರ್ಜಾಪುರ-ಹೆಬ್ಬಾಳ ಸಂಪರ್ಕಿಸುವ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯ ಡಿಪಿಆರ್​​ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ಕೇಂದ್ರ ನೋ ಎಂದಿದ್ದು, ಯೋಜನೆ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೇಗೆ ನಿಗದಿಯಾಗುತ್ತೆ ನಮ್ಮ ಮೆಟ್ರೋ ಟಿಕೆಟ್ ದರ? ಯಾರು ಹೆಚ್ಚಳ ಮಾಡ್ತಾರೆ? ಇಲ್ಲಿದೆ ವಿವರ

ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ರೂ ಮಾತಿನ ಯುದ್ಧ ನಿಂತಿಲ್ಲ. ಮೆಟ್ರೋ ಟಿಕೆಟ್ ಬೆಲೆ ಯಥಾಸ್ಥಿತಿಯಲ್ಲಿದ್ರೂ ರಾಜಕೀಯ ಸಮರಕ್ಕೆ ಬ್ರೇಕ್ ಬಿದ್ದಿಲ್ಲ. ದರ ಸಮರಕ್ಕೆ ತಾತ್ಕಾಲಿಕ ತಡೆಯಾಗಿದ್ದರೂ ಬಿಜೆಪಿ-ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತೊಂದು ಮಗ್ಗಲಿಗೆ ಹೊರಳಿದೆ. ಇದರ ಮಧ್ಯೆ ಸದ್ಯ ಮೆಟ್ರೋ ಟಿಕೆಟ್ ಪ್ರಯಾಣ ದರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹಾಗಾದ್ರೆ ಮೆಟ್ರೋ ದರ ಹೆಚ್ಚಳ ಹೇಗೆ ಯಾರು ಮಾಡುತ್ತಾರೆ? ಓ & ಎಂ ಕಾಯ್ದೆ ಏನ್ ಹೇಳುತ್ತೆ? ಫೇರ್ ಫಿಕ್ಸೇಷನ್ ಕಮಿಟಿ ಹೇಗೆ ಕೆಲಸ ಮಾಡುತ್ತೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ಮೆಟ್ರೋ ದರ ಏರಿಕೆ ಖಂಡಿಸಿ ಬೆಂಗಳೂರಿನ ಆರ್​ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಯ, ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಈ ಸರ್ಕಾರ ಬಂಧಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ?

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ಹಿನ್ನೆಲೆಯಲ್ಲಿ BMRCL ಇಂದು ಮಹತ್ವದ ಸಭೆ ನಡೆಸಲಿದೆ. ಸಾರ್ವಜನಿಕ ಆಕ್ಷೇಪ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದರ ಏರಿಕೆಯನ್ನು ಮುಂದುವರಿಸಬೇಕೇ, ತಿದ್ದುಪಡಿ ಮಾಡಬೇಕೇ ಅಥವಾ ಸಂಪೂರ್ಣ ಹಿಂಪಡೆಯಬೇಕೇ ಎಂಬ ಚರ್ಚೆ ಈ ಸಭೆಯಲ್ಲಿ ನಡೆಯಲಿದ್ದು, ಲಕ್ಷಾಂತರ ಪ್ರಯಾಣಿಕರು ಅಂತಿಮ ನಿರ್ಧಾರಕ್ಕಾಗಿ ಕಾದು ನೋಡುತ್ತಿದ್ದಾರೆ.

ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ, ನಮ್ಮ ಏರಿಯಾದಲ್ಲೇ ಹೆದರಿಸ್ತೀರಾ? ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಅವರು ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟಿಸಿದರು. ಪೊಲೀಸರ ನೋಟಿಸ್‌ಗೆ ಹೆದರುವುದಿಲ್ಲ ಎಂದು ಸೂರ್ಯ ಸ್ಪಷ್ಟಪಡಿಸಿದರು. ಮೆಟ್ರೋ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಸೇವೆ ನೀಡಲು ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆಗೆ ಬೆಂಬಲ ನೀಡಬೇಕೆಂದು, ಬಿಎಂಆರ್​ಸಿಎಲ್​ಗೆ ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ!

ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ಶಾಸಕ ರಾಮಮೂರ್ತಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ನಂತರ ಪೊಲೀಸರು ತೇಜಸ್ವಿ ಸೂರ್ಯ ಮತ್ತು ರಾಮಮೂರ್ತಿ ಅವರನ್ನು ವಶಕ್ಕೆ ಪಡೆದ್ದಾರೆ.

ಗುಡ್​​ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL

ನಾಳೆಯಿಂದ (ಫೆ.09) ಬರೆ ಬೀಳುತ್ತಾ ಅಂತಾ ಗೊಂದಲದಲ್ಲಿದ್ದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯ ರಿಲೀಫ್ ಸಿಕ್ಕಿದೆ. ಏಕೆಂದರೆ ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ. ಕೇಂದ್ರ ಸರ್ಕಾರದ ಒಂದೇ ಒಂದು ಸೂಚನೆ ಬೆನ್ನಲ್ಲೇ ದರ ಏರಿಕೆ ನಿರ್ಧಾರವನ್ನು ಬಿಎಂಆರ್​ಸಿಎಲ್ ಕೈಬಿಟ್ಟಿದೆ.

ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ

ಫೆಬ್ರವರಿ 9ರಿಂದ ಅಂದರೆ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆ ಆಗಲಿದೆ. ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ಧರಾಮಯ್ಯ ಹಳೆಯ ಟ್ವೀಟ್ ಅನ್ನು ಟ್ಯಾಗ್ ಮಾಡಿದ್ದು, ಹಿಂದಿನ ದರ ಏರಿಕೆ ವೇಳೆ ಜನರಿಗೆ ಹೊರೆ ಎಂದಿದ್ದ ಸಿಎಂ, ಈಗೇಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ

ಬೆಂಗಳೂರು ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ಬೆನ್ನಲ್ಲೇ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಇದು ತಾತ್ಕಾಲಿಕ ಅಷ್ಟೇ, ನಾವು ಪೂರ್ತಿಯಾಗಿ ಯದ್ಧ ಗೆದ್ದಿಲ್ಲ ಎಂದು ಹೇಳಿದ್ದಾರೆ. ದರ ನಿಗದಿ ಸಮಿತಿ ರಚನೆಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯಿಸಿದ್ದಾರೆ. ಆ ಮೂಲಕ ಚೆಂಡು ಸಿಎಂ ಮತ್ತು ಡಿಸಿಎಂ ಅಂಗಳದಲ್ಲಿ ಇದೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ

ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರದಿಂದ ತಾತ್ಕಾಲಿಕ ತಡೆ ನೀಡಲಾಗಿದೆ. ಸಂಸದ ತೇಜಸ್ವಿ ಸೂರ್ಯ ನಿರಂತರ ಪ್ರಯತ್ನಗಳ ಬೆನ್ನಲ್ಲೇ ಕೇಂದ್ರ ಗೃಹ ಸಚಿವರು ಈ ನಿರ್ಧಾರ ಕೈಗೊಂಡಿದ್ದಾರೆ. ಆ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಸದ್ಯಕ್ಕೆ ದರ ಹೆಚ್ಚಳದ ಭೀತಿ ತಪ್ಪಿದೆ.