AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್

ಬೆಂಗಳೂರಿನ ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದಲ್ಲಿ ಭಾನುವಾರ ಸಂಚಾರ ವಿಳಂಬವಾಗಲಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಬದಲಾಗಿ 8 ಗಂಟೆಗೆ ಯೆಲ್ಲೋ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಅರ್​​ಸಿಎಲ್ ತಿಳಿಸಿದೆ.

ಶಂಕು ಸ್ಥಾಪನೆ ಆಗಿ ಒಂದು ವರ್ಷವಾದರೂ ಆರಂಭವಾಗಿಲ್ಲ ಅರೆಂಜ್ ಲೈನ್ ಮೆಟ್ರೋ ಕಾಮಗಾರಿ: ಪ್ರತಿದಿನ ಎರಡು ಕೋಟಿ ಹೆಚ್ಚುವರಿ ಹೊರೆ!

ಬೆಂಗಳೂರಿನ ಬಹು ನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋ ಮಾರ್ಗಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷವಾಯಿತು. ಖುದ್ದು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಶಂಕುಸ್ಥಾಪನೆಯನ್ನೂ ಮಾಡಿದ್ದರು. ಆದರೂ ಯಾಕೋ ಗೊತ್ತಿಲ್ಲ ಬಿಎಂಆರ್​ಸಿಲ್ ಅಧಿಕಾರಿಗಳು ಕಾಮಗಾರಿ ಆರಂಭಿಸಲು ಮುಂದಾಗಿಲ್ಲ. ಈ ವಿಳಂಬದಿಂದಾಗಿ ಪ್ರತಿದಿನ ಎರಡು ಕೋಟಿ ಹೆಚ್ಚುವರಿ ಹೊರೆಯಾಗಲಿದೆಯಂತೆ!

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಹಳದಿ ಮಾರ್ಗದಲ್ಲಿನ ಮೆಟ್ರೋ ಸ್ಟೇಷನ್​​ಗಳ ಸಮೀಪ ಬಿಎಂಟಿಸಿ ಬಸ್​​ ನಿಲ್ದಾಣಗಳ ವ್ಯವಸ್ಥೆ

ಹಳದಿ ಮಾರ್ಗದಲ್ಲಿನ ಮೆಟ್ರೋ ನಿಲ್ದಾಣಗಳ ಸಮೀಪ ಬಿಎಂಟಿಸಿ ಬಸ್​​​ ನಿಲ್ದಾಣಗಳ ವ್ಯವಸ್ಥೆ ಮಾಡುವ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್ ನ್ಯೂಸ್​​ ನೀಡಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಹಾಗಾದರೆ ಎಲ್ಲೆಲ್ಲಿ ಬಸ್​ ನಿಲ್ದಾಣಗಳನ್ನು ನಿರ್ಮಿಸಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಎಂಆರ್​ಸಿಎಲ್ ಅಧಿಕಾರಿಗಳ ಯಡವಟ್ಟಿಗೆ ಪ್ರಯಾಣಿಕರು ಕಂಗಾಲು: ಯಾವುದೋ ಮೆಟ್ರೋ ನಿಲ್ದಾಣಕ್ಕೆ ಇನ್ಯಾವುದೋ ಹೆಸರು!

ದೇವರು ವರ ಕೊಟ್ಟರೂ ಪೂಜಾರಿ ಕೊಡ್ಲಿಲ್ಲ ಎಂಬ ಹಾಗಾಗಿದೆ ಬೆಂಗಳೂರಿನ ಈ ಏರಿಯಾಗಳ ಜನರ ಕಥೆ. ನಮ್ಮೂರಲ್ಲೇ ಮೆಟ್ರೋ ನಿಲ್ದಾಣ ಇದೆ ಎಂದು ಖುಷಿಪಟ್ಟ ಜನರಿಗೆ ಬಿಎಂಆರ್​ಸಿಎಲ್​ ಮಾಡಿರುವ ಅದೊಂದು ಯಡವಟ್ಟು ದೊಡ್ಡ ವ್ಯಥೆ ತಂದಿದೆ. ಯೆಲ್ಲೋ ಲೈನ್​ ಸ್ಟೇಷನ್ಸ್​ ಹೆಸರಿನ ಗೊಂದಲ ಪ್ರಯಾಣಿಕರಿಗೂ ಕಿರಿಕಿರಿ ಉಂಟುಮಾಡುತ್ತಿದೆ.

ಮೆಟ್ರೋ ಪ್ರಯಾಣಿಕರಿಗೆ ಕ್ರಿಸ್ಮಸ್, ಹೊಸ ವರ್ಷದ ಗಿಫ್ಟ್: 12 ನಿಮಿಷಕ್ಕೊಂದರಂತೆ ಸಂಚರಿಲಿದೆ ಯೆಲ್ಲೋ ಲೈನ್ ಮೆಟ್ರೋ

Namma Metro Yellow Line: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಆರನೇ ರೈಲು ಸಂಚಾರ ಇದೇ 22 ರಿಂದ ಆರಭವಾಗುವ ಸಾಧ್ಯತೆ ಇದೆ. ಇದರಿಂದಾಗಿ ಪ್ರತಿ 12 ನಿಮಿಷಕ್ಕೊದರಂತೆರೈಲುಗಳು ಸಂಚಾರ ಮಾಡಲಿವೆ. ಆದರೆ, ಯೆಲ್ಲೋ ಲೈನ್​ನಲ್ಲಿ ಬೆಳಗ್ಗೆ 6ಕ್ಕೆ ಶುರುವಾಗುವ ಮೆಟ್ರೋ ಸಂಚಾರ ಅದೇ ರೀತಿ ಮುಂದುವರಿಯಲಿದೆ ಎಂದು ಬಿಎಂಆರ್​​ಸಿಎಲ್ ಮೂಲಗಳು ತಿಳಿಸಿವೆ.

ಸಿಲ್ಕ್ ಬೋರ್ಡ್ ಟ್ರಾಫಿಕ್‌ಗೆ ಸಧ್ಯದಲ್ಲೇ ಮುಕ್ತಿ; ಡಬಲ್ ಡೆಕ್ಕರ್ ಫ್ಲೈಓವರ್ ಇನ್ನೊಂದು ಭಾಗ ಶೀಘ್ರದಲ್ಲೇ ಓಪನ್

ಬೆಂಗಳೂರು ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸಂಚಾರ ಒತ್ತಡ ತಗ್ಗಿಸಲು ಬಿಎಂಆರ್ಸಿಲ್ ದೊಡ್ಡ ಹೆಜ್ಜೆ ಇಟ್ಟಿದೆ. ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್‌ನ ಮತ್ತೊಂದು ಭಾಗವನ್ನು ಡಿಸೆಂಬರ್–ಜನವರಿಯಲ್ಲಿ ಓಪನ್ ಮಾಡಲಾಗುತ್ತಿದ್ದು, ಆರ್.ವಿ. ರೋಡ್–ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಡಿ ನಿರ್ಮಿಸಲಾದ ಈ ರಸ್ತೆ ಕೆಳಮಟ್ಟದಲ್ಲಿ ವಾಹನಗಳು ಮತ್ತು ಮೇಲ್ಭಾಗದಲ್ಲಿ ಮೆಟ್ರೋ ಸಂಚಾರಕ್ಕೆ ಅನುಕೂಲವಾಗಲಿದೆ. 3.36 ಕಿಮೀ ಉದ್ದದ, 449 ಕೋಟಿ ರೂ. ವೆಚ್ಚದ ಈ ಯೋಜನೆ, ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಮೀ ವಿಸ್ತೀರ್ಣ ಹೊಂದಿರಲಿದೆ. ಹೊಸ ಭಾಗ ತೆರೆದರೆ ಸಿಲ್ಕ್ ಬೋರ್ಡ್–ರಾಗಿಗುಡ್ಡ ಮಾರ್ಗದ ಟ್ರಾಫಿಕ್ ಮುಕ್ತಗೊಳಿಸುವಲ್ಲಿ ಇದು ಸಹಾಯವಾಗಲಿದೆ.

ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು, ಇಲ್ಲವಾದ್ರೆ ಮುಂದೆ ಕಾಮಗಾರಿ ನೀಡಲ್ಲ: ಗುತ್ತಿಗೆದಾರರಿಗೆ ಡಿಸಿಎಂ ಎಚ್ಚರಿಕೆ 

ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ಪರಿಶೀಲಿಸಿ, ಗುತ್ತಿಗೆದಾರರಿಗೆ ಗಡುವು ನೀಡಿದ್ದು, ವಿಳಂಬವಾದರೆ ಮುಂದಿನ ಕಾಮಗಾರಿ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. 2026-27ರೊಳಗೆ ಮೆಟ್ರೋ ಸಂಚಾರ ಆರಂಭಿಸುವ ಗುರಿ ಹೊಂದಿದ್ದೇವೆಂದ ಅವರು, ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯಡಿ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ನೇರಳೆ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ ವ್ಯತ್ಯಯ

ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಮ್ಮ ಮೆಟ್ರೋ ಕೆಂಗೇರಿ ಸ್ಟೇಷನ್​ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಪರಿಣಾಮವಾಗಿ ನಮ್ಮ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ವ್ಯತ್ಯವಾಗಿದೆ. ಮೈಸೂರು ರಸ್ತೆಯಿಂದ ಚಲ್ಲಘಟ್ಟ ನಡುವೆ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಯೆಲ್ಲೋ ಮಾರ್ಗದ 6ನೇ ಡ್ರೈವರ್ ಲೆಸ್ ಮೆಟ್ರೋ ರೈಲು ಇದೀಗ ಬೆಂಗಳೂರಿಗೆ ತಲುಪಿದೆ. ಈ ಹೊಸ ರೈಲು ಸೇರ್ಪಡೆಯಿಂದ ರೈಲುಗಳ ನಡುವಿನ ಓಡಾಟದ ಸಮಯ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್​ ಹೊಸ ವರ್ಷಕ್ಕೆ ಗುಡ್ ನ್ಯೂಸ್​​ ನೀಡಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಬಿಎಂಆರ್​​ಸಿಎಲ್

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. 6ನೇ ರೈಲು ಆಗಮಿಸುತ್ತಿದ್ದು, ಡಿಸೆಂಬರ್ ವೇಳೆಗೆ ಸೇವೆಯನ್ನು ಆರಂಭಿಸಲಿದೆ. ಇದರಿಂದ ಪ್ರಸ್ತುತ 15/19 ನಿಮಿಷಗಳಿದ್ದ ಮೆಟ್ರೋ ಸಂಚಾರ ಅವಧಿ 10/15 ನಿಮಿಷಗಳಿಗೆ ಇಳಿಯಲಿದೆ. ಆರ್‌ವಿ ರೋಡ್ ಟು ಬೊಮ್ಮಸಂದ್ರ ಮಾರ್ಗದಲ್ಲಿ ಪ್ರಯಾಣಿಕರ ಕಾಯುವಿಕೆ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ.

ಬೆಂಗಳೂರು: ಮೆಟ್ರೋ ಮೂಲಕ ಜೀವಂತ ಹೃದಯ ಯಶಸ್ವಿ ರವಾನೆ

ಬೆಂಗಳೂರು ಮೆಟ್ರೋ ಐದನೇ ಬಾರಿಗೆ ಜೀವಂತ ಮಾನವ ಹೃದಯವನ್ನು ಕೇವಲ 7 ನಿಮಿಷಗಳಲ್ಲಿ ಆರು ಜನರ ವೈದ್ಯಕೀಯ ತಂಡವು ಯಶಸ್ವಿಯಾಗಿ ಸಾಗಿಸಿದೆ. ನಗರದ ಟ್ರಾಫಿಕ್ ಸಮಸ್ಯೆ ನಡುವೆ, ಅಸ್ಟರ್ ಆರ್.ವಿ. ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ ಯೆಲ್ಲೋ ಲೈನ್ ಮೆಟ್ರೋ ಬಳಸಿ ಜೀವ ಉಳಿಸುವ ಕಾರ್ಯ ಮಾಡಲಾಗಿದೆ.

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಬೆಂಗಳೂರು ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬಿಎಂಆರ್‌ಸಿಎಲ್‌ಗೆ ಬೆದರಿಕೆ ಇಮೇಲ್ ಬಂದಿದೆ. ನವೆಂಬರ್ 14ರ ರಾತ್ರಿ ಬಂದ ಈ ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾಗಿರುವ ತನ್ನ ಮಾಜಿ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ಬ್ಲಾಸ್ಟ್ ಮಾಡುವುದಾಗಿ ವ್ಯಕ್ತಿ ಬೆದರಿಸಿದ್ದಾನೆ. ಬಿಎಂಆರ್‌ಸಿಎಲ್ ದೂರಿನ ಮೇರೆಗೆ ವಿಲ್ಸನ್ ಗಾರ್ಡನ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ