AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Namma Metro

BMRCL Namma Metro

ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್​​ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್​​ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್‌ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ

ಇನ್ನೂ ಹೆಚ್ಚು ಓದಿ

ಮತ್ತೆ ಮುನ್ನೆಲೆಗೆ ಬಂದ ಗಡಿ ಮೆಟ್ರೋ ಯೋಜನೆ: ಬೊಮ್ಮಸಂದ್ರ-ಅತ್ತಿಬೆಲೆ ಮಾರ್ಗದ ಡಿಪಿಆರ್‌ಗೆ ಬಿಎಂಆರ್‌ಸಿಎಲ್‌ಗೆ ಸರ್ಕಾರ ಸೂಚನೆ

Attibele Metro Project: ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿದ್ದ ಕರ್ನಾಟಕ-ತಮಿಳುನಾಡು ಗಡಿ ಭಾಗದ ಮೆಟ್ರೋ ವಿಸ್ತರಣಾ ಯೋಜನೆಗೆ ಇದೀಗ ಮತ್ತೆ ಜೀವ ಬಂದಿದೆ. ಆರ್.ವಿ. ರಸ್ತೆ–ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದ ಮುಂದುವರಿದ ಭಾಗವಾಗಿ ಬೊಮ್ಮಸಂದ್ರದಿಂದ ಅತ್ತಿಬೆಲೆವರೆಗೆ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸಲು ಡಿಪಿಆರ್ ಸಿದ್ಧಪಡಿಸುವಂತೆ ರಾಜ್ಯ ಸರ್ಕಾರ ಬಿಎಂಆರ್‌ಸಿಎಲ್‌ಗೆ ಸೂಚನೆ ನೀಡಿದೆ.

ತುಮಕೂರು-ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

ತುಮಕೂರಿನ ದಶಕಗಳ ಕನಸಾದ ಮೆಟ್ರೋ ಯೋಜನೆ ನನಸಾಗುವ ಹೊಸ್ತಿಲಲ್ಲಿದ್ದು, ಡಿಪಿಆರ್ ಪೂರ್ಣಗೊಂಡ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಬಳಕೆಯ ಅನುಮತಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಪಿಪಿಪಿ ಮಾದರಿಯಲ್ಲಿ ನಿರ್ಮಾಣವಾಗಲಿರುವ ಈ ಯೋಜನೆಗೆ ದೇಶ-ವಿದೇಶಿ ಕಂಪನಿಗಳು ಹೂಡಿಕೆಗೆ ಆಸಕ್ತಿ ತೋರಿಸಿದ್ದು, ನೆಲಮಂಗಲ, ದಾಬಸ್‌ಪೇಟೆ ಮಾರ್ಗದಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗುತ್ತದೆ.

Namma Metro: ನಮ್ಮ ಮೆಟ್ರೋ ಬ್ಲೂ ಲೈನ್ ಕಾರ್ಯಾಚರಣೆ ಮತ್ತಷ್ಟು ವಿಳಂಬ: 2027ಕ್ಕೆ ಗಡುವು!

ಬೆಂಗಳೂರಿನ ಐಟಿ ಕಾರಿಡಾರ್ ಹಾಗೂ ಔಟರ್ ರಿಂಗ್ ರೋಡ್ ಜೋಡಿಸುವ 'ನಮ್ಮ ಮೆಟ್ರೋ' ಬ್ಲೂ ಲೈನ್ (ಸಿಲ್ಕ್ ಬೋರ್ಡ್-ಕೆ.ಆರ್. ಪುರ) ವಾಣಿಜ್ಯ ಕಾರ್ಯಾಚರಣೆಯ ಗಡುವು 2027ರ ಮಧ್ಯಭಾಗಕ್ಕೆ ಮುಂದೂಡಲ್ಪಟ್ಟಿದೆ. ಸಿವಿಲ್ ಕಾಮಗಾರಿ ಹಾಗೂ ಬೈಯಪ್ಪನಹಳ್ಳಿ ಡಿಪೋ ಕಾಮಗಾರಿ ಬಾಕಿ ಇರುವ ಹಿನ್ನೆಲೆಯಲ್ಲಿ ಈ ವಿಳಂಬ ಉಂಟಾಗಿದೆ. ಐಟಿ ಉದ್ಯೋಗಿಗಳ ಸಂಚಾರ ಹಾಗೂ ಯೋಜನೆ ವಿಳಂಬದ ಸಂಪೂರ್ಣ ವರದಿ ಇಲ್ಲಿದೆ.

ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಗಿಂತ ಕಡಿಮೆ: CAG ವರದಿಯಲ್ಲಿ ಮಹತ್ವದ ಅಂಶಗಳು ಬಯಲು

ಬೆಂಗಳೂರು ಮೆಟ್ರೋದಲ್ಲಿ ನಿರೀಕ್ಷಿತ ಪ್ರಯಾಣಿಕರ ಸಂಖ್ಯೆ ಮತ್ತು ಆದಾಯದ ಗುರಿ ಸಾಧನೆಯಾಗಿಲ್ಲ ಎಂದು ಮಹಾಲೇಖಪಾಲರ (ಸಿಎಜಿ) ವರದಿ ಬಹಿರಂಗಪಡಿಸಿದೆ. 2016-17ರಿಂದ 2022-23ರವರೆಗೆ ₹7,736.70 ಕೋಟಿ ಫೇರ್ ಆದಾಯ ನಿರೀಕ್ಷಿಸಲಾಗಿದ್ದರೂ ₹1,758.13 ಕೋಟಿ ಮಾತ್ರ ಸಂಗ್ರಹವಾಗಿದೆ. ಇದೇ ವೇಳೆ ಭೂಸ್ವಾಧೀನ ವೆಚ್ಚ ₹6,603.39 ಕೋಟಿ ಹೆಚ್ಚಾಗಿದೆ.

ಫೇಸ್‌-3 ಮೆಟ್ರೋ ಮಾರ್ಗದಲ್ಲಿ 37ರ ಬದಲು 11 ಕಿ.ಮೀ. ಮಾತ್ರ ಡಬಲ್‌ ಡೆಕ್ಕರ್‌ ಫ್ಲೈಓವರ್‌?

ನಮ್ಮ ಮೆಟ್ರೋ ಫೇಸ್‌-3 (ಆರೆಂಜ್ ಲೈನ್) ಯೋಜನೆಯಡಿ ಮೂಲ ಯೋಜನೆಯಂತೆ ನಿರ್ಮಿಸಲು ಉದ್ದೇಶಿಸಲಾಗಿದ್ದ 37 ಕಿ.ಮೀ ಉದ್ದದ ಎಂಡ್-ಟು-ಎಂಡ್ ಡಬಲ್ ಡೆಕ್ಕರ್ ಫ್ಲೈಓವರ್‌ ಯೋಜನೆಯನ್ನು ಕೈಬಿಟ್ಟು, ಸಂಚಾರ ದಟ್ಟಣೆ ಅಧಿಕವಾಗಿರುವ ಪ್ರಮುಖ ಜಂಕ್ಷನ್‌ಗಳಲ್ಲಿ ಮಾತ್ರ 11 ಕಿ.ಮೀ.ಗೆ ಸೀಮಿತಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಚಿಂತನೆ ನಡೆಸಿದೆ ಎನ್ನಲಾಗಿದೆ.

Namma Metro: ನಮ್ಮ ಮೆಟ್ರೋ ಪಿಂಕ್ ಹಾಗೂ ಬ್ಲೂ ಲೈನ್‌ನ ಸಿಬಿಟಿಸಿ ವ್ಯವಸ್ಥೆಗೆ ರೈಲ್ವೆ ಮಂಡಳಿ ಗ್ರೀನ್ ಸಿಗ್ನಲ್!

ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ರೈಲ್ವೆ ಮಂಡಳಿಯಿಂದ ದೂಡ್ಡ ಗುಡ್ ನ್ಯೂಸ್ ಸಿಕ್ಕಿದೆ. ಬಹುನಿರೀಕ್ಷಿತ ಪಿಂಕ್ ಲೈನ್ ಹಾಗೂ ಏರ್‌ಪೋರ್ಟ್ ಸಂಪರ್ಕದ ಬ್ಲೂ ಲೈನ್‌ನ ಅತ್ಯಾಧುನಿಕ 'ಸಿಬಿಟಿಸಿ' ಸಿಗ್ನಲಿಂಗ್ ಹಾಗೂ ರೈಲು ನಿಯಂತ್ರಣ ವ್ಯವಸ್ಥೆಗೆ ರೈಲ್ವೆ ಮಂಡಳಿಯು ತಾತ್ವಿಕ ಅನುಮೋದನೆ ನೀಡಿದೆ. ಇದರಿಂದಾಗಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗದ ಸುರಕ್ಷತಾ ಪರೀಕ್ಷೆ ಹಾಗೂ ವಾಣಿಜ್ಯ ಸಂಚಾರ ಆರಂಭದ ಪ್ರಕ್ರಿಯೆಗಳು ಮತ್ತಷ್ಟು ವೇಗ ಪಡೆದುಕೊಂಡಿವೆ.

ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಕಬ್ಬಿಣದ ಶೀಟ್: ತಪ್ಪಿದ ಭಾರಿ ದುರಂತ

ಬೆಂಗಳೂರಿನ ಮಾರತ್‌ಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್ ಏಕಾಏಕಿ ನೆಲಕ್ಕೆ ಬಿದ್ದಿದೆ. ತಡರಾತ್ರಿ ಘಟನೆ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಶೀಟ್ ಬೀಳುವ ದೃಶ್ಯ ಕಾರೊಂದರ ಡ್ಯಾಶ್‌ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯು ನಿರ್ಮಾಣ ಕಾಮಗಾರಿ ಸಂದರ್ಭದ ಸುರಕ್ಷತಾ ಕ್ರಮಗಳ ಬಗ್ಗೆ ಆತಂಕಕ್ಕೆ ಕಾರಣವಾಗಿದೆ.

Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಇಂಟೆನ್ಸಿವ್ ಟೆಸ್ಟಿಂಗ್: ಆಗಸ್ಟ್ 12 ರಿಂದ 14 ರವರೆಗೆ ರೈಲುಗಳ ಸುರಕ್ಷತಾ ತಪಾಸಣೆ

ನಮ್ಮ ಮೆಟ್ರೋದ ಬಹುನಿರೀಕ್ಷಿತ ಪಿಂಕ್ ಲೈನ್ ಕಾರಿಡಾರ್‌ನ ಹೊಸ ರೈಲುಗಳ ಸುರಕ್ಷತಾ ಮತ್ತು ತಾಂತ್ರಿಕ ತಪಾಸಣೆಯು ಆಗಸ್ಟ್ 12 ರಿಂದ 14 ರವರೆಗೆ ನಡೆಯಲಿದೆ. ಮುಖ್ಯ ರೈಲ್ವೆ ಸುರಕ್ಷತಾ ಆಯುಕ್ತರ (CCRS) ನೇತೃತ್ವದಲ್ಲಿ ಕೊತ್ತನೂರು ಡಿಪೋದಲ್ಲಿ ಈ ತೀವ್ರ ಪರಿಶೀಲನೆ ನಡೆಯಲಿದ್ದು, ಬ್ರೇಕಿಂಗ್ ಮತ್ತು ಸಿಗ್ನಲಿಂಗ್ ವ್ಯವಸ್ಥೆಯನ್ನು ಪರೀಕ್ಷಿಸಲಾಗುತ್ತದೆ. ಈ ಪ್ರಕ್ರಿಯೆಯು ಪಿಂಕ್ ಲೈನ್ ವಾಣಿಜ್ಯ ಸಂಚಾರ ಮುಕ್ತಗೊಳ್ಳುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ಪ್ರಯಾಣಿಕರ ಗಮನಕ್ಕೆ: ಆ 9ರಂದು ಈ ಮಾರ್ಗದಲ್ಲಿ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

Namma Metro Purple Line: ಕಾಮಗಾರಿ ಹಿನ್ನೆಲೆ ಆಗಸ್ಟ್ 9ರಂದು ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತವಾಗಲಿದೆ ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ. ಟ್ರಿನಿಟಿ, ಎಂ.ಜಿ.ರಸ್ತೆ ಸೇರಿದಂತೆ ಒಟ್ಟು 6 ನಿಲ್ದಾಣಗಳಲ್ಲಿ 2 ಗಂಟೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಹಸಿರು ಮಾರ್ಗದ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಆ.7ರಂದು ರೈಲು ಸಂಚಾರದಲ್ಲಿ ಬದಲಾವಣೆ

ಮಾದಾವರ-ರೇಷ್ಮೆ ಸಂಸ್ಥೆವರೆಗಿನ ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ ಸಂಚಾರದಲ್ಲಿ ಆಗಸ್ಟ್ 7ರ ಶುಕ್ರವಾರದಂದು ಮಹತ್ವದ ಬದಲಾವಣೆ ಆಗಲಿದೆ. ದೈನಂದಿನ ಪ್ರಯಾಣಿಕರು ಸಹಕರಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಅಧಿಕಾರಿಗಳು ಮನವಿ ಮಾಡಿದ್ದಾರೆ. ರೈಲು ಸೇವೆಯಲ್ಲಿ ಯಾಕೆ ಬದಲಾವಣೆ? ಈ ಬಗ್ಗೆ ಬಿಎಂಆರ್​​​​ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದೇನು ಎನ್ನುವ ಡಿಟೇಲ್ಸ್ ಇಲ್ಲಿದೆ.

ಆತ್ಮಹತ್ಯೆ ಸ್ಪಾಟ್​ ಆಗುತ್ತಿದೆಯಾ ಮೆಟ್ರೋ? ಈವರೆಗೆ ಪ್ರಾಣ ಕಳೆದುಕೊಂಡವರೆಷ್ಟು?

ಇತ್ತೀಚೆಗೆ ಓರ್ವ ವ್ಯಕ್ತಿ ನಮ್ಮ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ನಮ್ಮ ಮೆಟ್ರೋ ಇತ್ತೀಚೆಗೆ ಆತ್ಮಹತ್ಯೆ ಯತ್ನ ಹಾಗೂ ಅನಧಿಕೃತ ಚಟುವಟಿಕೆಗಳ ಹಾಟ್‌ಸ್ಪಾಟ್ ಆಗಿ ಬದಲಾಗುತ್ತಿದೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ. ಆತ್ಮಹತ್ಯೆ ಮಾಡಿಕೊಳ್ಳುವುದು ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವ ಘಟನೆಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ.

ಮೆಟ್ರೋಗೆ ಮೂರು ವರ್ಷದಲ್ಲಿ ₹1,614 ಕೋಟಿ ನಷ್ಟ: ಮತ್ತೆ ಟಿಕೆಟ್ ದರ ಏರಿಕೆಗೆ ಬಿಎಂಆರ್‌ಸಿಎಲ್ ಕಸರತ್ತು

ಕಳೆದ ಮೂರು ವರ್ಷಗಳಲ್ಲಿ ಬಿಎಂಆರ್‌ಸಿಎಲ್‌ಗೆ 1,614 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿರುವ ನಿಗಮ, ಪ್ರತಿ ಮೂರು ವರ್ಷಕ್ಕೊಮ್ಮೆ ಶೇ 12 ರಷ್ಟು ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಂತಿಮ ನಿರ್ಧಾರಕ್ಕೆ ಸರ್ಕಾರಗಳ ಒಪ್ಪಿಗೆ ಅಗತ್ಯವಾಗಿದೆ. ಒಂದು ವೇಳೆ ಟಿಕೆಟ್ ದರ ಏರಿಕೆಯಾದರೆ, ಪ್ರಯಾಣಿಕರಿಗೆ ಮತ್ತೊಂದು ಹೊರೆಯಾಗಲಿದೆ.

ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು