BMRCL Namma Metro
ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರಿನ ಮೆಟ್ರೋ ರೈಲು ಸೇವೆಯನ್ನು ಸರ್ಕಾರಿ ಸ್ವಾಮ್ಯದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನಿರ್ವಹಣೆ ಮಾಡುತ್ತಿದೆ. 2011ರಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಮೊದಲಿಗೆ ಆರಂಭವಾಯಿತು. ಬಿಎಂಆರ್ಸಿಎಲ್ ಬೆಂಗಳೂರಿನಲ್ಲಿ ಮೆಟ್ರೋ ರೈಲು ವ್ಯವಸ್ಥೆಯ ಯೋಜನೆ, ನಿರ್ಮಾಣ ಮತ್ತು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ನಮ್ಮ ಮೆಟ್ರೋ ಬಹು ಮಾರ್ಗಗಳನ್ನು ಒಳಗೊಂಡಿದೆ. ಇವುಗಳಲ್ಲಿ ಪರ್ಪಲ್ ಲೈನ್ ಮತ್ತು ಗ್ರೀನ್ ಲೈನ್ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಮಾರ್ಗಗಳಾಗಿವೆ. ನಗರದ ವಿವಿಧ ಭಾಗಗಳಿಗೆ ಸುಧಾರಿತ ಸಂಪರ್ಕವನ್ನು ಒದಗಿಸುವ ಮೂಲಕ ಹೆಚ್ಚಿನ ಪ್ರದೇಶಗಳನ್ನು ಒಳಗೊಳ್ಳಲು ಮೆಟ್ರೋ ಜಾಲವು ನಿರಂತರವಾಗಿ ವಿಸ್ತರಿಸುತ್ತಿದೆ. ಬಿಎಂಆರ್ಸಿಎಲ್ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ಮೂಲಕ ಮೆಟ್ರೋ ಸೇವೆಗಳನ್ನು ಬಸ್ ಮತ್ತು ಇತರ ರೀತಿಯ ಸಾರಿಗೆಯೊಂದಿಗೆ ಸಂಯೋಜಿಸಿದೆ. ಈ ಮೂಲಕ ತಡೆರಹಿತ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ
ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು
ಇತ್ತೀಚೆಗೆ ಶಕ್ತಿ ಯೋಜನೆ ಆರಂಭವಾದ ಮೇಲೆ ಪ್ರತಿದಿನ ಬಿಎಂಟಿಸಿ ಬಸ್ ನಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ಆದರೆ ಹಳೆಯ ಟಿಕೆಟ್ ಮೆಷಿನ್ ಗಳಿಂದ ಟಿಕೆಟ್ ಕೊಡಲು ಆಗದೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಗಲಾಟೆಗಳು ಆಗುತ್ತಿದ್ದವು.ಇದನ್ನು ತಪ್ಪಿಸಲು ಸಾರಿಗೆ ಇಲಾಖೆ, ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಜಾರಿಗೆ ತರಲು ಮುಂದಾಗಿದೆ. ಏನಿದು ಸ್ಮಾರ್ಟ್ ಕಾರ್ಡ್? ಮಾಹಿತಿ ಈ ಕೆಳಗಿನಂತಿದೆ.
- Kiran Surya
- Updated on: Mar 10, 2026
- 9:52 pm
ಮೆಟ್ರೋದಲ್ಲಿ ಗನ್ ಪ್ರಾಂಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯುವಕ!
ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ ಯುವಕನ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ದೀಪಾಂಜಲಿ ನಗರ ನಿಲ್ದಾಣದಲ್ಲಿ ಪ್ರಯಾಣಿಕರ ಆತಂಕಕ್ಕೆ ಕಾರಣನಾದ ಯುವಕ ಅರ್ಜುನ್ರನ್ನು ಮೆಟ್ರೋ ಸಿಬ್ಬಂದಿ ಮತ್ತು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಬಳಿಕ ಎಚ್ಚರಿಕೆ ನೀಡಿ, 400 ರೂ. ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ.
- Kiran Surya
- Updated on: Mar 9, 2026
- 2:47 pm
ಬೆಂಗಳೂರಿಗರಿಗೆ ಗುಡ್ನ್ಯೂಸ್: ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ನಾಳೆಯಿಂದ 8ನೇ ರೈಲು ಸಂಚಾರ
ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ 8ನೇ ರೈಲು ಸೇರ್ಪಡೆಯಾಗಿದ್ದು, ಫೆಬ್ರವರಿ 27 ರಿಂದ ಸೇವೆಗೆ ಲಭ್ಯವಾಗಲಿದೆ. ಇದರಿಂದಾಗಿ ಸೋಮವಾರದಿಂದ ಶನಿವಾರದವರೆಗೆ ಪೀಕ್ ಅವಧಿಯಲ್ಲಿ 9 ನಿಮಿಷಕ್ಕೆ ಹಾಗೂ ನಾನ್-ಪೀಕ್ ಅವಧಿಯಲ್ಲಿ 14 ನಿಮಿಷಕ್ಕೆ ಮೆಟ್ರೋ ನಡುವಿನ ಸಂಚಾರದ ಅಂತರ ಕಡಿಮೆ ಆಗಲಿದೆ. ಇದರಿಂದ ಪ್ರಯಾಣಿಕರ ಕಾಯುವ ಸಮಯ ಕಡಿಮೆಯಾಗಲಿದ್ದು, ದಟ್ಟಣೆಯೂ ಇಳಿಕೆಯಾಗುವ ನಿರೀಕ್ಷೆ ಇದೆ.
- Kiran Surya
- Updated on: Feb 26, 2026
- 6:51 pm
ನಮ್ಮ ಮೆಟ್ರೋ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ: ಕಾರಣ ಇಲ್ಲಿದೆ
ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ನ ಪಿಲ್ಲರ್ ಕಾಮಗಾರಿ ಮುಗಿದರೂ, ರಸ್ತೆ ಪಕ್ಕ ಅಳವಡಿಸಲಾದ ಬ್ಯಾರಿಕೇಡ್ಗಳನ್ನುಬಿಎಂಆರ್ಸಿಎಲ್ ತೆರವುಗೊಳಿಸಿಲ್ಲ. ಈ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದು, ವಾಹನ ಸವಾರರು ತೀವ್ರ ತೊಂದರೆಗೊಳಗಾಗಿದ್ದಾರೆ. ಹೀಗಿದ್ದರೂ ಬಿಎಂಆರ್ಸಿಎಲ್ಗೆ ಈ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಕಿಡಿ ಕಾರಿದ್ದಾರೆ.
- Kiran Surya
- Updated on: Feb 25, 2026
- 2:40 pm
Namma Metro: ಪರ್ಪಲ್ ಮತ್ತು ಗ್ರೀನ್ ಲೈನ್ಗೆ ಬರಲಿವೆ ಮೂರು ಹೊಸ ರೈಲುಗಳು!
ಬೆಂಗಳೂರು ಮೆಟ್ರೋದಲ್ಲಿ ಹೆಚ್ಚುತ್ತಿರುವ ಜನಸಂದಣಿ, ವಿಶೇಷವಾಗಿ ಪರ್ಪಲ್ ಮತ್ತು ಗ್ರೀನ್ ಮಾರ್ಗಗಳಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ವಾರದಲ್ಲಿ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋ ಬಳಸುತ್ತಿದ್ದಾರೆ. ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಿ, ಮೇ–ಜೂನ್ ವೇಳೆಗೆ ಮೂರು ಹೊಸ ರೈಲುಗಳನ್ನು ಸೇವೆಗೆ ಸೇರಿಸಲು ಯೋಜಿಸಲಾಗಿದೆ. ಇದು ಪೀಕ್ ಅವರ್ ಜನದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡಲಿದೆ.
- Bhavana Hegde
- Updated on: Feb 24, 2026
- 11:14 am
ಮತ್ತೆ ಮೆಟ್ರೋ ಟಿಕೆಟ್ ದರ ಏರಿಕೆ ಶಾಕ್ ನಿಶ್ಚಿತ! ಖರ್ಚು ವೆಚ್ಚಗಳ ಆಡಿಟ್ ಮುಕ್ತಾಯ, ಡಿಸಿಎಂಗೆ ವರದಿ ಸಲ್ಲಿಸಿದ ಬಳಿಕ ದರ ನಿಗದಿ
Namma Metro ticket price: ಮೆಟ್ರೋ ಪ್ರಯಾಣ ದರ ಏರಿಕೆಗೆ ಇತ್ತೀಚೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ. ದರ ಏರಿಕೆ ಆಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಮೆಟ್ರೋ ಟಿಕೆಟ್ ದರ ಹೆಚ್ಚಳ ಆದರೆ ಎಷ್ಟು ಶೇಕಡಾ ಏರಿಕೆ ಆಗಬಹುದು? ಮಾಹಿತಿ ಇಲ್ಲಿದೆ.
- Kiran Surya
- Updated on: Feb 24, 2026
- 7:35 am
ಆತ್ಮಹತ್ಯೆ ತಡೆಗೆ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮೊರೆ ಹೋದ ಬಿಎಂಆರ್ಸಿಎಲ್
ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲ ಪ್ರಯಾಣಿಕರು ನಮ್ಮ ಮೆಟ್ರೋ ಟ್ರ್ಯಾಕ್ಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಈ ಹಿನ್ನೆಲೆ ಪ್ರಯಾಣಿಕರು ನಮ್ಮ ಮೆಟ್ರೋ ಸ್ಟೇಷನ್ಗಳಲ್ಲಿ ಪಿಎಸ್ಡಿ ಡೋರ್ ಅಳವಡಿಸುವಂತೆ ಆಗ್ರಹಿಸಿದ್ದರು. ಸದ್ಯ ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್ ಪಿಎಸ್ಡಿ ಬದಲಿಗೆ ಸ್ಟೀಲ್ ಬ್ಯಾರಿಕೇಡ್, ಗೇಟ್ಗಳನ್ನು ಅಳವಡಿಸಲು ಮುಂದಾಗಿದೆ.
- Kiran Surya
- Updated on: Feb 23, 2026
- 7:13 am
BMRCL ಜೊತೆಗೆ ಪ್ರೆಸ್ಟೀಜ್ ಗ್ರೂಪ್ 90 ಕೋಟಿ ಒಪ್ಪಂದ: ಬೆಳ್ಳಂದೂರು ಮೆಟ್ರೋ ಇನ್ಮುಂದೆ ‘ಪ್ರೆಸ್ಟೀಜ್ ಬೆಳ್ಳಂದೂರು ಸ್ಟೇಷನ್’
ಬಿಎಂಆರ್ಸಿಎಲ್ ಮತ್ತು ಪ್ರೆಸ್ಟೀಜ್ ಗ್ರೂಪ್, ಬೆಳ್ಳಂದೂರು ಮೆಟ್ರೋ ನಿಲ್ದಾಣದ ನಾಮಕರಣ ಹಕ್ಕುಗಳಿಗಾಗಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ. ನೀಲಿ ಮಾರ್ಗದಲ್ಲಿರುವ ಈ ನಿಲ್ದಾಣವು 30 ವರ್ಷಗಳ ಕಾಲ 'ಪ್ರೆಸ್ಟೀಜ್ ಬೆಳ್ಳಂದೂರು ಮೆಟ್ರೋ ನಿಲ್ದಾಣ' ಎಂದು ಕರೆಯಲ್ಪಡಲಿದೆ. ಒಟ್ಟು 90 ಕೋಟಿ ರೂ. ಮೊತ್ತದ ಒಪ್ಪಂದವಾಗಿದೆ.
- Kiran Surya
- Updated on: Feb 21, 2026
- 10:37 pm
Namma Metro: ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು!
ಬೆಂಗಳೂರಿನ ಯೆಲ್ಲೋ ಲೈನ್ನಲ್ಲಿ ಚಲಿಸುತ್ತಿದ್ದ ಚಾಲಕರಹಿತ ಮೆಟ್ರೋ ರೈಲು ಜನವರಿ 15ರಂದು ಹೆಬ್ಬಗೋಡಿ ಡಿಪೋದಲ್ಲಿ ಹಳಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಅವಘಡವು ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂಬ ಆತಂಕ ಸೃಷ್ಟಿಸಿದೆ. BMRCL ಆರು ಸದಸ್ಯರ ತನಿಖಾ ಸಮಿತಿ ರಚಿಸಿದ್ದು, ಮೆಟ್ರೋ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಪ್ರಶ್ನೆಗಳು ಮೂಡಿವೆ.
- Kiran Surya
- Updated on: Feb 20, 2026
- 2:56 pm
ಖಾಲಿ ಟ್ರಂಕ್ ಹಿಡಿದು ಬಂದ ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಸಂಕಷ್ಟ
ಇತ್ತೀಚೆಗೆ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿರುದ್ಧ ಖಾಲಿ ಟ್ರಂಕ್ ಹಿಡಿದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಭಿನ್ನವಾಗಿ ಪ್ರತಿಭಟಿಸಿದ್ದರು. ಸದ್ಯ ಇದೇ ವಿಚಾರವಾಗಿ ತೇಜಸ್ವಿ ಸೂರ್ಯ ಸೇರಿದಂತೆ 9 ಜನರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಜಯನಗರ ಠಾಣೆ ಇನ್ಸ್ಪೆಕ್ಟರ್ರಿಂದ ಖಾಸಗಿ ದೂರು ದಾಖಲಾಗಿದ್ದು, ಕೋರ್ಟ್ನಿಂದ ನೋಟಿಸ್ ನೀಡಲಾಗಿದೆ.
- Ramesha M
- Updated on: Feb 18, 2026
- 9:27 pm
ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್ನ್ಯೂಸ್? ಸೀಲ್ಡ್ ಲಿಕ್ಕರ್ ಬಾಟಲ್ ಸಾಗಾಟಕ್ಕೆ ಅನುಮತಿ?
ನಮ್ಮ ಮೆಟ್ರೋದಲ್ಲಿ ಸೀಲ್ಡ್ ಮದ್ಯದ ಬಾಟಲಿಗಳನ್ನು ಸಾಗಿಸಲು ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆ ಇದೆ. BMRCL ಈ ಕುರಿತು ಸಮಾಲೋಚನೆ ನಡೆಸುತ್ತಿದ್ದು, ದೆಹಲಿ ಮೆಟ್ರೋದ ಮಾದರಿಯನ್ನು ಅನುಸರಿಸಲು ಚಿಂತಿಸುತ್ತಿದೆ. ಹಾಗಿದ್ದರೆ ಯಾವಾಗಿನಿಂದ ಈ ಅವಕಾಶ ಪ್ರಯಾಣಿಕರಿಗೆ ಸಿಗುವ ಸಾಧ್ಯತೆ ಇದೆ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
- Prasanna Hegde
- Updated on: Feb 18, 2026
- 3:59 pm
ನಮ್ಮ ಮೆಟ್ರೋ ರೆಡ್ ಲೈನ್ ಡಿಪಿಆರ್ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ
ಸರ್ಜಾಪುರ-ಹೆಬ್ಬಾಳ ಸಂಪರ್ಕಿಸುವ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯ ಡಿಪಿಆರ್ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಡಬಲ್ ಡೆಕ್ಕರ್ ಪ್ಲ್ಯಾನ್ಗೆ ಕೇಂದ್ರ ನೋ ಎಂದಿದ್ದು, ಯೋಜನೆ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
- Kiran Surya
- Updated on: Feb 12, 2026
- 11:48 am