Bollywood
ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್ಬಸ್ಟರ್ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.
ಬಾಲಿವುಡ್ ನಿರ್ದೇಶಕರ ಬಗ್ಗೆ ಹೃತಿಕ್ ರೋಷನ್ ಬೇಸರ; ವಿಲನ್ ಪಾತ್ರ ಕೇಳಿದ ನಟ
ಹೃತಿಕ್ ರೋಷನ್ ಬಾಲಿವುಡ್ ನಿರ್ದೇಶಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹೀರೋ ಪಾತ್ರಗಳೇ ಸಿಗುತ್ತಿರುವುದರಿಂದ ಬೇಸರಗೊಂಡಿರುವ ಅವರು, 'ಲಕ್ ಬೈ ಚಾನ್ಸ್' ಚಿತ್ರದ 'ಜಫರ್' ರೀತಿಯ ನೆಗೆಟಿವ್ ಶೇಡ್ ಪಾತ್ರಗಳಿಗೆ ಒಲವು ತೋರಿದ್ದಾರೆ. ಸ್ಟಾರ್ ನಟರಿಗೆ ಒಂದೇ ರೀತಿಯ ಪಾತ್ರಗಳನ್ನು ನೀಡುವ ನಿರ್ದೇಶಕರ ಧೋರಣೆಯು ಸಿನಿಮಾಗಳ ಸಂಖ್ಯೆ ಕಡಿಮೆಯಾಗಲು ಕಾರಣ ಎಂದು ಹೃತಿಕ್ ಹೇಳಿದ್ದಾರೆ.
- Rajesh Duggumane
- Updated on: Jun 5, 2026
- 10:45 am
ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ
‘ಕಾಲಾ ಹಿರನ್’ ಸಿನಿಮಾ ತಂಡ ಮತ್ತು ಸಲ್ಮಾನ್ ಖಾನ್ ನಡುವಿನ ಕಿರಿಕ್ ಮತ್ತೊಂದು ಹಂತಕ್ಕೆ ಹೋಗಿದೆ. ಸಲ್ಮಾನ್ ಖಾನ್ ಅಭಿಮಾನಿಗಳು ತಮಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನಿರ್ಮಾಪಕ ಅಮಿತ್ ಜಾನಿ ಹೇಳಿದ್ದಾರೆ. ಅಲ್ಲದೇ, ಸಲ್ಮಾನ್ ಖಾನ್ ಅವರ ಟೀಮ್ ಕಳಿಸಿದ ಲೀಗಲ್ ನೋಟಿಸ್ ಅನ್ನು ಅಮಿತ್ ಜಾನಿ ಅವರು ಹರಿದು ಹಾಕಿದ್ದಾರೆ.
- Madan Kumar
- Updated on: Jun 4, 2026
- 10:33 pm
ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?
ಯಾವುದೇ ಪಾತ್ರ ಕೊಟ್ಟರೂ ನಟ ರಣವೀರ್ ಸಿಂಗ್ ಅವರು ಯಶಸ್ವಿಯಾಗಿ ನಿಭಾಯಿಸುತ್ತಾರೆ. ಲಲಿತ್ ಮೋದಿ ಬಯೋಪಿಕ್ನಲ್ಲಿ ನಟಿಸಲು ರಣವೀರ್ ಸಿಂಗ್ ಆಸಕ್ತಿ ತೋರಿಸಿದ್ದರು ಎಂಬ ವಿಷಯ ತಿಳಿದುಬಂದಿದೆ. ಈ ವಿಚಾರವನ್ನು ಸ್ವತಃ ಲಲಿತ್ ಮೋದಿ ಅವರೇ ಬಹಿರಂಗಪಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Jun 4, 2026
- 9:46 pm
ಶಿವಾಜಿ ಚಿತ್ರವಿರುವ ಟಿ-ಶರ್ಟ್ ಧರಿಸಿ ರಿತೇಶ್ ದೇಶ್ಮುಖ್ ಪಾರ್ಟಿ; ಕ್ಷಮೆ ಕೇಳಿದ ನಟ
ಖ್ಯಾತ ನಟ ರಿತೇಶ್ ದೇಶ್ಮುಖ್ ಅವರ ಮೇಲೆ ಒಂದು ಗಂಭೀರ ಆರೋಪ ಕೇಳಿಬಂದಿತ್ತು. ಶಿವಾಜಿ ಮಹಾರಾಜರ ಚಿತ್ರವಿರುವ ಟಿ-ಶರ್ಟ್ ಧರಿಸಿದ ಅವರು ಎಣ್ಣೆ ಪಾರ್ಟಿ ಮಾಡಿದ್ದರು ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಆ ಆರೋಪವನ್ನು ರಿತೇಶ್ ದೇಶ್ಮುಖ್ ಅವರು ತಳ್ಳಿಹಾಕಿದ್ದಾರೆ. ವೈರಲ್ ವಿಡಿಯೋಗೆ ಅವರು ಸ್ಪಷ್ಟನೆ ನೀಡಿದ್ದಾರೆ.
- Madan Kumar
- Updated on: Jun 4, 2026
- 8:46 pm
‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ
ಸಿನಿಮಾದ ಕಥೆಗಿಂತಲೂ ಹೆಚ್ಚಾಗಿ ಬಜೆಟ್ ಮತ್ತು ಬಾಕ್ಸ್ ಆಫೀಸ್ ಅಂಕಿಅಂಶಗಳ ಬಗ್ಗೆಯೇ ಜನರು ಹೆಚ್ಚು ಮಾತನಾಡುತ್ತಿದ್ದಾರೆ. ಆ ಬಗ್ಗೆ ಖ್ಯಾತ ನಟ ಮನೋಜ್ ಬಾಜಪೇಯಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರೇಕ್ಷಕರಿಗೆ ಸಿನಿಮಾ ಇಷ್ಟ ಆಯಿತೋ ಇಲ್ಲವೋ ಎಂಬುದು ಮಾತ್ರ ಮುಖ್ಯವಾಗಬೇಕು ಎಂದು ಅವರು ಹೇಳಿದ್ದಾರೆ.
- Madan Kumar
- Updated on: Jun 4, 2026
- 7:35 pm
‘ನಾನು 3ನೇ ಮದುವೆ ಆಗುತ್ತಿರುವುದು ನಿಜ’; ನೇರವಾಗಿ ಒಪ್ಪಿಕೊಂಡ ಆಮಿರ್ ಖಾನ್
2025ರ ಮಾರ್ಚ್ನಲ್ಲಿ ನಡೆದ ತಮ್ಮ 60ನೇ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಆಮಿರ್ ಖಾನ್ ಅವರು ಗೌರಿ ಅವರನ್ನು ಮಾಧ್ಯಮಗಳಿಗೆ ಮೊದಲ ಬಾರಿಗೆ ಪರಿಚಯಿಸಿದ್ದರು. ಈಗ ಅವರೊಂದಿಗೆ ಮದುವೆಯಾಗಲು ಅವರು ನಿರ್ಧರಿಸಿದ್ದಾರೆ. ಮದುವೆಯ ಸುದ್ದಿಯನ್ನು ಅವರು ಖಚಿತಪಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..
- Madan Kumar
- Updated on: Jun 4, 2026
- 6:26 pm
7.1 ಕೋಟಿ ರೂಪಾಯಿಗೆ 2 ಫ್ಲಾಟ್ ಮಾರಾಟ ಮಾಡಿದ ನಟ ಅಕ್ಷಯ್ ಕುಮಾರ್
ನಟ ಅಕ್ಷಯ್ ಕುಮಾರ್ ಅವರಿಗೆ ಆದಾಯದ ಹಲವು ಮೂಲಗಳಿವೆ. ರಿಯಲ್ ಎಸ್ಟೇಟ್ ಕೂಡ ಅದರಲ್ಲಿ ಪ್ರಮುಖವಾಗಿದೆ. ಸಿನಿಮಾಗಳಿಂದ ಕೈತುಂಬ ಸಂಭಾವನೆ ಪಡೆಯುವ ಅಕ್ಷಯ್ ಕುಮಾರ್ ಅವರು ಆ ಹಣವನ್ನು ರಿಯಲ್ ಎಸ್ಟೇಟ್ ಮೇಲೆ ಹೂಡಿಕೆ ಮಾಡುತ್ತಾರೆ. ಅದರಿಂದ ಅವರಿಗೆ ಭರ್ಜರಿ ಲಾಭ ಆಗುತ್ತಿದೆ.
- Madan Kumar
- Updated on: Jun 4, 2026
- 5:50 pm
ಖ್ಯಾತ ನಿರ್ಮಾಪಕ, ಸಿಬಿಎಫ್ಸಿ ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ ನಿಧನ
ಬಾಲಿವುಡ್ನ ಯಶಸ್ವಿ ನಿರ್ಮಾಪಕ ಪಹ್ಲಾಜ್ ನಿಹಲಾನಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಿಭಿನ್ನ ಶೈಲಿಯ ಸಿನಿಮಾಗಳನ್ನು ಅವರು ಚಿತ್ರರಂಗಕ್ಕೆ ನೀಡಿದ್ದರು. ಪಹ್ಲಾಜ್ ನಿಹಲಾನಿ ಅವರು ಸೆನ್ಸಾರ್ ಮಂಡಳಿಯ (CBFC) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆಗ ಅವರು ತೆಗೆದುಕೊಂಡ ಕಠಿಣ ನಿರ್ಧಾರಗಳು ವಿವಾದಕ್ಕೆ ಕಾರಣ ಆಗಿತ್ತು.
- Madan Kumar
- Updated on: Jun 4, 2026
- 5:21 pm
ಆಮಿರ್ ಖಾನ್ಗೆ ಮೂರನೇ ವಿವಾಹ; ಮೊದಲ ಎರಡು ವೈವಾಹಿಕ ಬದುಕು ಮುರಿದುಬಿದ್ದಿದ್ದು ಏಕೆ?
ಬಾಲಿವುಡ್ ನಟ ಆಮಿರ್ ಖಾನ್ 61ನೇ ವಯಸ್ಸಿನಲ್ಲಿ ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಮೂರನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಈ ಮೂಲಕ ಆಮಿರ್ ಖಾನ್ ಅವರ ವೈಯಕ್ತಿಕ ಜೀವನ ಮತ್ತೆ ಚರ್ಚೆಗೆ ಬಂದಿದೆ. ಅವರ ಮೊದಲ ಪತ್ನಿ ರೀನಾ ದತ್ತಾ ಹಾಗೂ ಎರಡನೇ ಪತ್ನಿ ಕಿರಣ್ ರಾವ್ ಜೊತೆಗಿನ ವಿಚ್ಛೇದನಗಳಿಗೆ ಕಾರಣಗಳೇನು? ಅವರ ಮಾಜಿ ಪತ್ನಿಯರು ಈಗ ಎಲ್ಲಿದ್ದಾರೆ? ಎಂಬ ಕುರಿತು ಸಮಗ್ರ ಮಾಹಿತಿ ಇಲ್ಲಿದೆ.
- Shreelaxmi H
- Updated on: Jun 4, 2026
- 11:22 am
26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್
‘26/11 ಉಗ್ರರ ದಾಳಿ ನಡೆದ ದಿನ ನೀವು ಎಲ್ಲಿದ್ರಿ?’ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಕಂಗನಾ ರಣಾವತ್ ಉತ್ತರಿಸಿದ್ದಾರೆ. ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಉಗ್ರರ ದಾಳಿಯನ್ನು ಆಧರಿಸಿದ ಸಿನಿಮಾದಲ್ಲಿ ಕಂಗನಾ ಅವರು ನಟಿಸಿದ್ದು, ಈಗ ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.
- Madan Kumar
- Updated on: Jun 3, 2026
- 10:37 pm
ಲೈಂಗಿಕ ಕಿರುಕುಳದ ಸುಳ್ಳು ಕೇಸ್ ಹಾಕಿದ್ದನ್ನು ಒಪ್ಪಿಕೊಂಡ ಶಿಲ್ಪಾ ಶಿಂಧೆ; ನಟಿಯ ಬಂಧನಕ್ಕೆ ಒತ್ತಾಯ
ಶಿಲ್ಪಾ ಶಿಂಧೆ ವಿರುದ್ಧ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕುತ್ತಿದ್ದಾರೆ. ಒಬ್ಬ ಪುರುಷನ ಗೌರವ ಮತ್ತು ವೃತ್ತಿಜೀವನಕ್ಕೆ ಧಕ್ಕೆ ತಂದಿರುವುದಕ್ಕಾಗಿ ನಿರ್ಮಾಪಕರು ನಟಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
- Madan Kumar
- Updated on: Jun 3, 2026
- 10:06 pm
‘ಲಗಾನ್’ ಸಿನಿಮಾಗೆ 25 ವರ್ಷಗಳ ಸಂಭ್ರಮ; ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆ
ಆಮಿರ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಲಗಾನ್’ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ. ಈ ಸಿನಿಮಾ ರಿಲೀಸ್ ಆಗಿ 25 ವರ್ಷಗಳು ಕಳೆದಿದ್ದು, ಆ ಪ್ರಯುಕ್ತ ಮರುಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಜೂನ್ 12, 13 ಮತ್ತು 14ರಂದು ಚಿತ್ರಮಂದಿರಗಳಲ್ಲಿ ‘ಲಗಾನ್’ ಸಿನಿಮಾ ಪ್ರದರ್ಶನ ಆಗಲಿದೆ.
- Madan Kumar
- Updated on: Jun 3, 2026
- 9:22 pm