Bollywood
ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್ಬಸ್ಟರ್ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.
‘ಧುರಂಧರ್’ ಸಿನಿಮಾ ವಿಷಯದಲ್ಲಿ ಕೊನೆಗೂ ತಪ್ಪು ತಿದ್ದಿಕೊಂಡ ನೆಟ್ಫ್ಲಿಕ್ಸ್
ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿ ಆರಂಭದಲ್ಲಿ ರನ್ಟೈಮ್, ಪ್ರಿಂಟ್ ಮತ್ತು ಆಡಿಯೋ ಸಮಸ್ಯೆಗಳಿಂದ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಯಿತು. ವ್ಯಾಪಕ ಟೀಕೆಗಳ ನಂತರ, ನೆಟ್ಫ್ಲಿಕ್ಸ್ ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, OTT ಆವೃತ್ತಿಯನ್ನು ನವೀಕರಿಸಿದೆ. ಈಗ ಚಿತ್ರದ ಗುಣಮಟ್ಟ ಸುಧಾರಿಸಿದೆ ಎಂದು ವೀಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
- Shreelaxmi H
- Updated on: Feb 3, 2026
- 8:09 am
ಸೋತು ಸುಣ್ಣವಾಗಿರೋ ನಿರ್ದೇಶಕನ ಜೊತೆ ಕೈ ಜೋಡಿಸಿದ ರಣವೀರ್ ಸಿಂಗ್?
ರಣವೀರ್ ಸಿಂಗ್ ನಟನೆಯ 'ಧುರಂಧರ್' ಯಶಸ್ಸಿನ ನಂತರ, ಅವರು ದಕ್ಷಿಣದ ನಿರ್ದೇಶಕ ಶಂಕರ್ ಅವರ ಕನಸಿನ ಯೋಜನೆ 'ವೇಲ್ಪಾರಿ'ಗೆ ಕೈಜೋಡಿಸಲಿದ್ದಾರೆ. ಈ ಐತಿಹಾಸಿಕ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಬಹುಮುಖ ನಟ ವಿಕ್ರಮ್ ಕೂಡ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ. ಶಂಕರ್ ತಮ್ಮ ಹಿಂದಿನ ವೈಭವವನ್ನು ಮರಳಿ ಪಡೆಯಲು ಈ ಕಥೆಯನ್ನು ನಂಬಿದ್ದು, ರಣವೀರ್ ಅವರ ಜನಪ್ರಿಯತೆ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.
- Shreelaxmi H
- Updated on: Feb 2, 2026
- 8:39 am
ಬಾಲಿವುಡ್ಗೆ ಮತ್ತೆ ಭೀತಿ ಹುಟ್ಟಿಸಿದ ಬಿಷ್ಣೋಯ್ ಗ್ಯಾಂಗ್ನ ಶುಭಂ ಲೋಂಕರ್ ಯಾರು?
ರೋಹಿತ್ ಶೆಟ್ಟಿ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಘಟನೆಯು ಬಾಲಿವುಡ್ಗೆ ಹೊಸ ಆತಂಕ ಸೃಷ್ಟಿಸಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಶುಭಂ ಲೋಂಕರ್ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. 'ಮುಂದಿನ ಗುಂಡು ಎದೆಗೆ' ಎಂದು ನಿರ್ದೇಶಕರಿಗೆ ಬೆದರಿಕೆ ಹಾಕಲಾಗಿದ್ದು, ಬಾಬಾ ಸಿದ್ದಿಕಿಗಿಂತ ಕೆಟ್ಟ ಪರಿಸ್ಥಿತಿ ಎದುರಾಗಲಿದೆ ಎಂದು ಇಡೀ ಬಾಲಿವುಡ್ಗೆ ಎಚ್ಚರಿಕೆ ನೀಡಲಾಗಿದೆ. ಶುಭಂ ಲೋಂಕರ್ ಮುಂಬೈ ಪೊಲೀಸರ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ.
- Shreelaxmi H
- Updated on: Feb 2, 2026
- 8:23 am
‘ಗೋಲ್ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ
ಸ್ಟಾರ್ ಡೈರೆಕ್ಟರ್ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಈ ಘಟನೆಯಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ. ದಾಳಿಗೆ ಕಾರಣ ತಿಳಿದು ಬಂದಿಲ್ಲ. ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೋಹಿತ್ ಶೆಟ್ಟಿ ಮನೆಯ ಎದುರು ಭದ್ರತೆ ಹೆಚ್ಚಿಸಲಾಗಿದೆ.
- Madan Kumar
- Updated on: Feb 1, 2026
- 9:12 am
ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ?
ಜಾನ್ ಅಬ್ರಹಾಂ ಅವರ ಕಟ್ಟುಮಸ್ತಾದ ದೇಹ ಮತ್ತು ಫಿಟ್ನೆಸ್ ಪ್ರತಿಯೊಬ್ಬರಿಗೂ ಸ್ಫೂರ್ತಿ. ಅವರು ಕಳೆದ 25 ವರ್ಷಗಳಿಂದ ಸಿಹಿ ಪದಾರ್ಥಗಳನ್ನು ಸೇವಿಸಿಲ್ಲ ಮತ್ತು ಸಸ್ಯಾಹಾರಿಯಾಗಿ ಅಚ್ಚರಿ ಮೂಡಿಸಿದ್ದಾರೆ. 53ರ ವಯಸ್ಸಿನಲ್ಲೂ ಅತ್ಯಂತ ಆರೋಗ್ಯಕರ ಜೀವನಶೈಲಿ ಅನುಸರಿಸುವ ಜಾನ್, ಜಿಮ್ನಿಂದ ದೂರವಿರಲ್ಲ. ಆದರೆ ಇತ್ತೀಚೆಗೆ ಅವರ ಸಾರ್ವಜನಿಕ ಕಾಣಿಸಿಕೊಳ್ಳುವಿಕೆ ಅನೇಕರಲ್ಲಿ ಅವರ ಆರೋಗ್ಯದ ಬಗ್ಗೆ ಆತಂಕ ಮೂಡಿಸಿದೆ.
- Shreelaxmi H
- Updated on: Jan 30, 2026
- 8:07 am
ಗುರುತು ಸಿಗದಂತೆ ಬದಲಾದ ಜಾನ್ ಅಬ್ರಾಹಂ; ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ
ಖ್ಯಾತ ನಟ ಜಾನ್ ಅಬ್ರಾಹಂ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಅದನ್ನು ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ಆ್ಯಕ್ಷನ್ ಸಿನಿಮಾಗಳ ಮೂಲಕ ಅಬ್ಬರಿಸಿದ ಜಾನ್ ಅಬ್ರಾಹಂ ನಿಜಕ್ಕೂ ಇವರೇನಾ ಎಂದು ನೆಟ್ಟಿಗರು ಕೇಳುತ್ತಿದ್ದಾರೆ. ಜಾನ್ ಅಬ್ರಾಹಂ ಅವರ ಆರೋಗ್ಯದಲ್ಲಿ ಏನಾದರೂ ಸಮಸ್ಯೆ ಉಂಟಾಗಿರಬಹುದಾ ಎಂಬ ಅನುಮಾನ ಕೂಡ ಮೂಡಿದೆ.
- Madan Kumar
- Updated on: Jan 29, 2026
- 3:17 pm
‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು
FIR on Ranveer Singh: ರಣವೀರ್ ಸಿಂಗ್ ದೈವ ಅನುಕರಿಸಿ ವಿವಾದಕ್ಕೆ ಸಿಲುಕಿದ್ದರು. ಗೋವಾದಲ್ಲಿ ದೈವವನ್ನು ಅನುಕರಿಸಿದ ವಿಡಿಯೋ ವೈರಲ್ ಆಗಿತ್ತು. ಭಕ್ತರ ಭಾವನೆಗೆ ಧಕ್ಕೆ ತಂದಿದೆ ಎಂದು ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಿಂದ ನಟ ಕಾನೂನು ಸಂಕಷ್ಟ ಎದುರಿಸುತ್ತಿದ್ದಾರೆ. ಇದು ಅವರ 'ಧುರಂಧರ್' ಸಿನಿಮಾ ಯಶಸ್ಸಿನ ಖುಷಿಯನ್ನು ತಗ್ಗಿಸಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jan 29, 2026
- 1:42 pm
‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ
ಇತ್ತೀಚೆಗೆ ಬಿಡುಗಡೆ ಆದ ‘ಬಾರ್ಡರ್ 2’ ಸಿನಿಮಾ ಸೂಪರ್ ಹಿಟ್ ಆಗಿದೆ. ಸಖತ್ ಕಲೆಕ್ಷನ್ ಆಗುತ್ತಿದೆ. ಈ ಸಿನಿಮಾದ ಗೆಲುವಿನ ಖುಷಿಯಲ್ಲಿ ಇರುವ ನಿರ್ಮಾಪಕರು ‘ಬಾರ್ಡರ್ 3’ ಮಾಡಲು ನಿರ್ಧರಿಸಿದ್ದಾರೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ಸೀಕ್ವಲ್ ಮಾಡುವುದು ಖಚಿತ ಎಂಬ ಸುದ್ದಿ ಕೇಳಿಬಂದಿದೆ.
- Madan Kumar
- Updated on: Jan 28, 2026
- 6:24 pm
‘ಧುರಂಧರ್ 2’ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಲ್ಲ ಅರ್ಜುನ್ ರಾಮ್ಪಾಲ್
ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ನಿರ್ದೇಶಕ ಆದಿತ್ಯ ಧಾರ್ ಈಗಲೂ ಶೂಟಿಂಗ್ ಮಾಡುತ್ತಿದ್ದಾರೆ ಎಂದು ಗಾಸಿಪ್ ಕೇಳಿಬಂದಿದೆ. ಆದರೆ ಆ ಬಗ್ಗೆ ಚಿತ್ರತಂಡದ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ. ಯಾವುದೇ ಹೆಚ್ಚುವರಿ ಶೂಟಿಂಗ್ ಇಲ್ಲ ಎನ್ನಲಾಗಿದೆ.
- Madan Kumar
- Updated on: Jan 28, 2026
- 4:48 pm
ಮೆಟ್ರೋದಲ್ಲಿ ಸ್ಟಂಟ್ ಮಾಡಿದ ವರುಣ್ ಧವನ್ಗೆ ದಂಡ
ವರುಣ್ ಧವನ್ ಮುಂಬೈ ಮೆಟ್ರೋದಲ್ಲಿ ಮಾಡಿದ ಸ್ಟಂಟ್ ವಿವಾದಕ್ಕೆ ಕಾರಣವಾಗಿದೆ. ಮೆಟ್ರೋ ಹ್ಯಾಂಡಲ್ಗಳಿಗೆ ನೇತಾಡುವ ಮೂಲಕ ಮಾಡಿದ ವಿಡಿಯೋ ವೈರಲ್ ಆಗಿದ್ದು, ಮುಂಬೈ ಮೆಟ್ರೋ ಆಡಳಿತದಿಂದ ಎಚ್ಚರಿಕೆ ಹಾಗೂ 500 ರೂ. ದಂಡ ವಿಧಿಸಲಾಗಿದೆ. ಇದು ಮೆಟ್ರೋ ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗಿದ್ದು, ಇತರ ಪ್ರಯಾಣಿಕರಿಗೂ ತೊಂದರೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Shreelaxmi H
- Updated on: Jan 28, 2026
- 10:36 am
ನಿವೃತ್ತಿ ಘೋಷಣೆಗೂ ಮೊದಲು ಅರಿಜಿತ್ ಮಾಡಿಕೊಂಡ ಆಸ್ತಿ ಎಷ್ಟು?
ಖ್ಯಾತ ಗಾಯಕ ಅರಿಜಿತ್ ಸಿಂಗ್ 38ನೇ ವಯಸ್ಸಿಗೆ ಹಿನ್ನೆಲೆ ಗಾಯನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ನಿರ್ಧಾರ ಅವರ ಲಕ್ಷಾಂತರ ಅಭಿಮಾನಿಗಳಿಗೆ ದುಃಖ ತಂದಿದೆ. ಕೋಟ್ಯಾಂತರ ಆಸ್ತಿ, ಪ್ರತಿ ಹಾಡಿಗೆ ಲಕ್ಷಗಳಲ್ಲಿ ಶುಲ್ಕ ಪಡೆಯುತ್ತಿದ್ದ ಅರಿಜಿತ್, ಇನ್ನುಮುಂದೆ ಲೈವ್ ಕಾನ್ಸರ್ಟ್ಗಳಲ್ಲಿ ಮಾತ್ರ ಹಾಡಲಿದ್ದಾರೆ. ಅವರ ವೃತ್ತಿಜೀವನ, ಸಂಪತ್ತು, ಮತ್ತು ಮುಂದಿನ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ.
- Shreelaxmi H
- Updated on: Jan 28, 2026
- 8:12 am
38ನೇ ವಯಸ್ಸಿಗೆ ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್ರ ಮುಂದಿನ ಯೋಜನೆ ಏನು?
ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಈ ನಿರ್ಧಾರ ತಿಳಿಸಿದ್ದು, ಇನ್ನು ಮುಂದೆ ಚಲನಚಿತ್ರಗಳಿಗೆ ಹಾಡುವುದಿಲ್ಲ ಎಂದಿದ್ದಾರೆ. ಆದರೆ, ಅವರು ಸಂಗೀತ ಕ್ಷೇತ್ರದಲ್ಲೇ ಮುಂದುವರಿಯಲಿದ್ದು, ಸಂಗೀತ ಅಧ್ಯಯನ ಮತ್ತು ಸಂಗೀತ ಕಚೇರಿಗಳ ಮೇಲೆ ಗಮನಹರಿಸಲಿದ್ದಾರೆ.
- Shreelaxmi H
- Updated on: Jan 28, 2026
- 9:29 am