AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

ಈ ಸಿನಿಮಾ ಹಿಟ್ ಆಗುತ್ತಿದ್ದಂತೇ ಪಿವಿಆರ್ ಐನಾಕ್ಸ್ ಷೇರಿಗೆ ಭರ್ಜರಿ ಬೇಡಿಕೆ

PVR Inox share price increase on Monday: ಸಿನಿಮಾಗಳು ಹಿಟ್ ಆದರೆ ಥಿಯೇಟರ್​ಗಳು ನಳನಳಿಸುತ್ತವೆ. ಬ್ಯುಸಿನೆಸ್ ಹೆಚ್ಚಾಗುತ್ತದೆ. ಪಿವಿಆರ್ ಐನಾಕ್ಸ್ ಸಿನಿಮಾ ಮಂದಿರಗಳು ಕಳೆದ ಒಂದು ವಾರದಿಂದ ಮಿಂಚುತ್ತಿವೆ. ಧುರಂಧರ್ ಸಿನಿಮಾ ನೋಡಲು ಜನರು ಮಾಲ್​ಗಳತ್ತ ನುಗ್ಗುತ್ತಿದ್ದಾರೆ. ಇದೇ ಮ್ಯಾಡ್ ರಶ್ ಷೇರು ಬಜಾರಿನಲ್ಲಿ ಪಿವಿಆರ್ ಷೇರು ಖರೀದಿಗೂ ಆಗುತ್ತಿದೆ.

‘ಧುರಂಧರ’ ನಿರ್ಮಾಪಕರ ಹೆಸರಲ್ಲಿ ರಾಹುಲ್ ಗಾಂಧಿ ಹೆಸರು

ರಣವೀರ್ ಸಿಂಗ್ ನಟನೆಯ 'ಧುರಂಧರ್' ಚಿತ್ರ ಭಾರತದಲ್ಲಿ 350 ಕೋಟಿಗೂ ಹೆಚ್ಚು ಬಾಚಿಕೊಂಡು ಬ್ಲಾಕ್‌ಬಸ್ಟರ್ ಆಗಿದೆ. ಆದರೆ ಚಿತ್ರದ ಕಾರ್ಯಕಾರಿ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ ಹೆಸರು ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಹಾಗಾದರೆ ಈ ಹೆಸರು ಏಕೆ ಬಂತು? ಆ ಬಗ್ಗೆ ಇಲ್ಲಿದೆ ವಿವರ.

ವಯಸ್ಸಲ್ಲಿ 15 ವರ್ಷ ಕಿರಿಯವಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ರಾಮ್​ಪಾಲ್

ಬಾಲಿವುಡ್ ನಟ ಅರ್ಜುನ್ ರಾಮ್​ಪಾಲ್ ಅವರು ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಿಯಾ ಚಕ್ರವರ್ತಿ ಪಾಡ್​ಕಾಸ್ಟ್​ನಲ್ಲಿ ಈ ವಿಷಯವನ್ನು ಖಚಿತಪಡಿಸಲಾಗಿದೆ. 15 ವರ್ಷಗಳ ವಯಸ್ಸಿನ ಅಂತರವಿದ್ದರೂ, ಇವರ ಆರು ವರ್ಷಗಳ ಸಂಬಂಧ ಪ್ರೀತಿಗೆ ಅಡ್ಡಿಯಾಗಿಲ್ಲ. ಸದ್ಯಕ್ಕೆ ವಿವಾಹವಾಗಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

‘ಧುರಂಧರ್’ ಅಬ್ಬರಕ್ಕೆ 2ನೇ ಭಾನುವಾರ ಬಾಕ್ಸ್ ಆಫೀಸ್​​ ಶೇಕ್; 350 ಕೋಟಿ ಬಾಚಿದ ರಣವೀರ್ ಚಿತ್ರ

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಗಳಿಸಿದೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ಈಗಾಗಲೇ 350 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಚಿತ್ರವು 500 ಕೋಟಿ ರೂ. ತಲುಪುವ ನಿರೀಕ್ಷೆಯಿದೆ. ಇದು ರಣವೀರ್ ಸಿಂಗ್ ವೃತ್ತಿಜೀವನಕ್ಕೆ ಹೊಸ ಚೈತನ್ಯ ನೀಡಿದೆ.

Shahrukhz Tower: ಶಾರುಕ್ ಖಾನ್ ಎಂದ್ರೆ ದುಬೈನಲ್ಲಿ ಬಲು ಕ್ರೇಜ್; ಅವರ ಹೆಸರಿನ ಟವರ್​ಗೆ 5,000 ಕೋಟಿ ರೂಗೂ ಅಧಿಕ ಬೆಲೆ

Danube Group sells Sharukhz Tower for Rs 5,000 crore in Dubai: ದುಬೈನ ಶೇಖ್ ಜಾಯೇದ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಶಾರುಖ್ಸ್ ಟವರ್ 5,000 ಕೋಟಿ ರೂಗೆ ಮಾರಾಟವಾಗಿದೆ. 3,500 ಕೋಟಿ ರೂ ವೆಚ್ಚದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಹೆಸರಿನ ಈ 55 ಮಹಡಿಯ ಕಮರ್ಷಿಯಲ್ ಟವರ್​ಗೆ ನಿರೀಕ್ಷೆಮೀರದ ಬೆಲೆ ಸಿಕ್ಕಿದೆ. ಮುಂಬೈ ಸಂಜಾತ ರಿಜ್ವಾಲ್ ಸಾಜನ್ ಮಾಲೀಕರಾಗಿರುವ ಡ್ಯಾನೂಬ್ ಗ್ರೂಪ್ ಈ ಕಮರ್ಷಿಯಲ್ ಟವರ್ ಕಟ್ಟುತ್ತಿದೆ.

ಸತತ 24 ಗಂಟೆ ಪ್ರದರ್ಶನ ಕಂಡ ‘ಧುರಂಧರ್’ ಸಿನಿಮಾ; ಹೆಚ್ಚುತ್ತಲೇ ಇದೆ ಡಿಮ್ಯಾಂಡ್

ಎಲ್ಲ ಕಡೆಗಳಲ್ಲೂ ‘ಧುರಂಧರ್’ ಸಿನಿಮಾದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಅಷ್ಟರಮಟ್ಟಿಗೆ ಕ್ರೇಜ್ ಸೃಷ್ಟಿ ಆಗಿದೆ. ವಿಶೇಷ ಏನೆಂದರೆ ಪುಣೆ, ಮಂಬೈ ನಗರದ ಕೆಲವು ಕಡೆಗಳಲ್ಲಿ 24 ಗಂಟೆಯೂ ಈ ಸಿನಿಮಾದ ಪ್ರದರ್ಶನ ಆಗಿದೆ. ಪ್ರೇಕ್ಷಕರ ಬೇಡಿಕೆಗೆ ತಕ್ಕಂತೆ ಚಿತ್ರಮಂದಿರಗಳಲ್ಲಿ ‘ಧುರಂಧರ್’ ಸಿನಿಮಾದ ಶೋಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

9ನೇ ದಿನ 50 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ‘ಧುರಂಧರ್’ ಸಿನಿಮಾ

ಬಿಡುಗಡೆಯಾಗಿ ಒಂದು ವಾರ ಕಳೆದರೂ ‘ಧುರಂಧರ್’ ಸಿನಿಮಾ ಹಲವು ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ರಣವೀರ್ ಸಿಂಗ್ ನಟನೆಯ ಈ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಆದ್ದರಿಂದ ಭರ್ಜರಿ ಕಲೆಕ್ಷನ್ ಆಗುತ್ತಿದೆ. 9ನೇ ದಿನ ಈ ಸಿನಿಮಾ ಮಾಡಿರುವ ಕಲೆಕ್ಷನ್ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಧುರಂಧರ್’ ಚಿತ್ರವನ್ನು ಹಾಡಿ ಹೊಗಳಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ಇತ್ತೀಚೆಗೆ 'ಧುರಂಧರ್' ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಡಿಸೆಂಬರ್ 5ರಂದು ತೆರೆಕಂಡು ದೇಶಾದ್ಯಂತ 239 ಕೋಟಿ ರೂಪಾಯಿ ಗಳಿಸಿದೆ. ಅಲ್ಲು ಅರ್ಜುನ್, ರಣವೀರ್ ಸಿಂಗ್, ಅಕ್ಷಯ್ ಖನ್ನಾ ಸೇರಿದಂತೆ ಇಡೀ ತಾರಾಗಣ ಹಾಗೂ ನಿರ್ದೇಶಕ ಆದಿತ್ಯ ಧರ್ ಅವರ ಅದ್ಭುತ ಕೆಲಸವನ್ನು ಶ್ಲಾಘಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ದಾಖಲೆ ಮುರಿಯಲು ರೆಡಿ ಆದ ‘ಧುರಂಧರ್’; ದೊಡ್ಡ ರೆಕಾರ್ಡ್ ಬ್ರೇಕ್?

'ಧುರಂಧರ್' ಸಿನಿಮಾ 350 ಕೋಟಿಗೂ ಹೆಚ್ಚು ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. 'ಎ' ಪ್ರಮಾಣಪತ್ರದ ನಡುವೆಯೂ ಯಶಸ್ಸು ಗಳಿಸಿರುವ ಈ ಸ್ಪೈ ಥ್ರಿಲ್ಲರ್, 'ಕಾಂತಾರ: ಚಾಪ್ಟರ್ 1' ದಾಖಲೆಯನ್ನು ಮುರಿಯುವತ್ತ ಸಾಗಿದೆ. ಇದು ರಣವೀರ್ ಸಿಂಗ್ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ನೀಡಿದ್ದು, ಮುಂದಿನ ದಿನಗಳಲ್ಲಿ ಇದರ ಅಬ್ಬರ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ.

ದಿ ಡೆವಿಲ್, ಅಖಂಡ 2, ಧುರಂಧರ್ ಸಿನಿಮಾಗಳ ನಡುವೆ ಕ್ಲ್ಯಾಶ್: ಯಾರಿಗೆ ಲಾಭ?

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಡೆವಿಲ್’, ‘ಧುರಂಧರ್’ ಹಾಗೂ ‘ಅಖಂಡ 2’ ಸಿನಿಮಾಗಳು ಪರಸ್ಪರ ಫೈಟ್ ನೀಡುತ್ತಿವೆ. ‘ಧುರಂಧರ್’ ಸಿನಿಮಾವನ್ನು 2ನೇ ವಾರ ಕೂಡ ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಬಾಲಯ್ಯ ಅಭಿನಯದ ‘ಅಖಂಡ 2’ ಸಿನಿಮಾಗೆ ಬಹುತೇಕ ನೆಗೆಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿವರ..

ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರವೇ ತಲೆಕೆಳಗೆ; ಒಂದೇ ವಾರಕ್ಕೆ ‘ಧುರಂಧರ್’ ದಾಖಲೆಯ ಗಳಿಕೆ

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದೆ. ಫ್ಲಾಪ್ ಆಗುತ್ತದೆ ಎಂದು ಭವಿಷ್ಯ ನುಡಿದರೂ, ಈ ಚಿತ್ರ ಕೇವಲ 7 ದಿನಗಳಲ್ಲಿ 200 ಕೋಟಿ ರೂ. ಗಳಿಸಿ ಅಚ್ಚರಿ ಮೂಡಿಸಿದೆ. ನೆಗೆಟಿವಿಟಿ, ದೀರ್ಘ ರನ್ ಟೈಮ್ ನಡುವೆಯೂ ಸಕಾರಾತ್ಮಕ ವಿಮರ್ಶೆಗಳಿಂದ ಚಿತ್ರ ಯಶಸ್ಸು ಕಂಡಿದೆ. ವಾರದ ದಿನಗಳಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಸ್ಪರ್ಧೆಯಿದ್ದರೂ ಮುನ್ನುಗ್ಗುತ್ತಿದೆ.

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದ್ದರೂ, ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತ-ಪಾಕ್ ಬೇಹುಗಾರಿಕೆ ಆಧಾರಿತ ಈ ಚಿತ್ರಕ್ಕೆ ಪಾಕಿಸ್ತಾನ ವಿರೋಧಿ ಅಂಶಗಳ ಕಾರಣ 6 ದೇಶಗಳು ನಿಷೇಧ ಹೇರಿವೆ. ಈ ಸವಾಲಿನ ನಡುವೆಯೂ ಚಿತ್ರ ಜಾಗತಿಕವಾಗಿ 300 ಕೋಟಿ ರೂ. ಗಳಿಸಿ ಯಶಸ್ಸು ಕಂಡಿದೆ.

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ