AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು?

ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಸೆಣಸಲಿವೆ. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ‘ಧುರಂಧರ್ 2’ ಗಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್‌ಗಳು ಸಿಗುವ ಸಾಧ್ಯತೆಯಿದೆ. ಯಶ್ ಕಥೆ ಬರೆದು ನಿರ್ಮಾಣದಲ್ಲಿ ಕೈ ಜೋಡಿಸಿರುವುದು ಪ್ರಮುಖ ಆಕರ್ಷಣೆ. ಮೊದಲ ದಿನದ ಕಲೆಕ್ಷನ್‌ನಲ್ಲೂ ‘ಟಾಕ್ಸಿಕ್’ ಭಾರಿ ಮುನ್ನಡೆ ಸಾಧಿಸುವ ನಿರೀಕ್ಷೆಯಿದೆ.

ಯುವ ಉದ್ಯಮಿ ಜೊತೆ ಮಲೈಕಾ ಡೇಟಿಂಗ್; ಇಬ್ಬರ ಮಧ್ಯೆ ಇದೆ 19 ವರ್ಷಗಳ ಅಂತರ

ಮಲೈಕಾ ಅರೋರಾ ಅವರ ಹೊಸ ಸಂಬಂಧದ ಬಗ್ಗೆ ಚರ್ಚೆ ಜೋರಾಗಿದೆ. 19 ವರ್ಷ ಚಿಕ್ಕವರಾದ ಉದ್ಯಮಿ ಹರ್ಷ್ ಮೆಹ್ತಾ ಜೊತೆ ಮಲೈಕಾ ಪ್ರೇಮಿಗಳ ದಿನದಂದು ಇಟಲಿಯಲ್ಲಿ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ. ಅರ್ಜುನ್ ಕಪೂರ್ ಜೊತೆಗಿನ ಸಂಬಂಧ ಮುರಿದ ನಂತರ, ಮಲೈಕಾ ಹೆಸರು ಹರ್ಷ್ ಜೊತೆ ತಳಕು ಹಾಕಿಕೊಂಡಿದೆ. ಮಲೈಕಾ ಮತ್ತು ಹರ್ಷ್ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ.

‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ

ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಬೆದರಿಕೆ ಸಂದೇಶ ಬಂದಿದೆ. ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡುವ ಉದ್ದೇಶದಿಂದ ಈ ರೀತಿ ಬೆದರಿಕೆ ಹಾಕಲಾಗಿದೆ. ಹಾಗಾಗಿ ರಣವೀರ್ ಸಿಂಗ್ ಅವರಿಗೆ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ.

ಪರಸ್ತ್ರೀ ಸಹವಾಸ ಆರೋಪ; ಪತಿ ಗೋವಿಂದ ಕ್ಷಮಿಸಲು ಮುಂದಾದ ಪತ್ನಿ

ನಟ ಗೋವಿಂದ ಮತ್ತು ಸುನೀತಾ ಅಹುಜಾ ದಾಂಪತ್ಯ ಕಲಹ ಮುಂದುವರಿದಿದೆ. ಸುನೀತಾ ತಮ್ಮ ವ್ಲಾಗ್‌ ಮೂಲಕ ಗೋವಿಂದರ ಅಫೇರ್‌ ಆರೋಪಿಸಿ, ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 40 ವರ್ಷಗಳ ಸಂಬಂಧ ರಾತ್ರೋರಾತ್ರಿ ಮುರಿಯುವುದಿಲ್ಲ, ಗೋವಿಂದ ಬದಲಾದರೆ ಕ್ಷಮಿಸುವುದಾಗಿ ಹೇಳಿದ್ದಾರೆ. ನನ್ನ ಹಕ್ಕುಗಳಿಗಾಗಿ ಹೋರಾಡುತ್ತೇನೆ, ಇನ್ನು ಮುಂದೆ ಒತ್ತಡ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್​​ಗೆ ಅರ್ಜಿ: ನೋಟಿಸ್ ಜಾರಿ

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಈಗ ಕಾನೂನಿನ ಸಂಕಷ್ಟ ಎದುರಾಗಿದೆ. ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ ಆಗಿದೆ. ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಕೇರಳದಲ್ಲೇ ವಿರೋಧ ವ್ಯಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಹಾಯ ಮಾಡಿದವರ ಹೆಸರು ಹೇಳಲ್ಲ: ಖಡಕ್ ಆಗಿ ತಿಳಿಸಿದ ರಾಜ್​ಪಾಲ್ ಯಾದವ್

ಸಾಲ ತೀರಿಸಲು ಸಾಧ್ಯವಾಗದೇ ಜೈಲು ಸೇರಿದ್ದ ರಾಜ್​ಪಾಲ್ ಯಾದವ್ ಅವರಿಗೆ ಹಲವರು ಸಹಾಯ ಮಾಡಿದ್ದಾರೆ. ಆದರೆ ಯಾರು ಸಹಾಯ ಮಾಡಿದರು? ಎಷ್ಟು ಹಣ ನೀಡಿದರು ಎಂಬುದನ್ನು ರಾಜ್​ಪಾಲ್ ಯಾದವ್ ಬಹಿರಂಗ ಪಡಿಸಿಲ್ಲ. ತಮಗೆ ಸಿಂಪಥಿ ಬೇಡ ಎಂದು ಅವರು ಹೇಳುತ್ತಿದ್ದಾರೆ. ಜಾಮೀನು ಪಡೆದು ಅವರು ಹೊರಗೆ ಬಂದಿದ್ದಾರೆ.

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆಯೇ ‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದದ ಕಿಡಿ ಹೊತ್ತಿಸಿದೆ. ಈ ಸಿನಿಮಾದ ಮೂಲಕ ಕೋಮುವಾದ ಹಬ್ಬಿಸುವ ಯತ್ನ ನಡೆಯುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಈ ಸಿನಿಮಾ ವಿರುದ್ಧ ಗರಂ ಆಗಿದ್ದಾರೆ.

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ

‘ಧುರಂಧರ್ 2’ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದಗಳ ಸುಳಿಯಲ್ಲಿದೆ. ‘ಟಾಕ್ಸಿಕ್’ ಚಿತ್ರದ ವಿರುದ್ಧ ವದಂತಿ ಹಬ್ಬಿಸಿದ್ದಕ್ಕೆ ‘ಧುರಂಧರ್ 2’ ತಂಡಕ್ಕೆ ‘ಕರ್ಮ’ ಸುತ್ತಿಕೊಂಡಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಟೀಸರ್ ನಿರಾಸೆ, IMDb ರೇಟಿಂಗ್‌ನಲ್ಲಿ ಹಿನ್ನಡೆ ಹಾಗೂ ನಿರ್ಬಂಧಿತ ಪ್ರದೇಶಗಳಲ್ಲಿ ಶೂಟಿಂಗ್ ಮಾಡಿ BMC ಕೆಂಗಣ್ಣಿಗೆ ಗುರಿಯಾಗಿರುವುದು ಚಿತ್ರತಂಡದ ಸಮಸ್ಯೆಗಳನ್ನು ಹೆಚ್ಚಿಸಿದೆ.

ಆಪರೇಷನ್ ಸಿಂದೂರ್ ಕುರಿತು ಸಿನಿಮಾ ಮಾಡಲಿರುವ ವಿವೇಕ್ ಅಗ್ನಿಹೋತ್ರಿ

‘ಉರಿ’ ಸಿನಿಮಾ ರೀತಿಯೇ ಆಪರೇಷನ್ ಸಿಂದೂರ್ ಕುರಿತು ಬಾಲಿವುಡ್​​ನಲ್ಲಿ ಸಿನಿಮಾ ನಿರ್ಮಾಣ ಆಗಲಿದೆ. ಖ್ಯಾತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ

ಚೆಕ್​ ಬೌನ್ಸ್ ಕೇಸ್​​ನಲ್ಲಿ ತಿಹಾರ್ ಜೈಲಿಗೆ ಹೋಗಿದ್ದ ರಾಜ್​ಪಾಲ್ ಯಾದವ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಾಮೀನು ಪಡೆದು ಹೊರಗೆ ಬಂದಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು ಎಂದು ರಾಜ್​ಪಾಲ್ ಯಾದವ್ ಅವರು ಹೇಳಿದ್ದಾರೆ.

‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್

‘ಭೂತ್ ಬಂಗ್ಲ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್, ಪರೇಶ್ ರಾವಲ್, ಟಬು ಮುಂತಾದವರು ನಟಿಸಿದ್ದಾರೆ. ಏಪ್ರಿಲ್ 10ರಂದು ರಿಲೀಸ್ ಆಗಲಿರುವ ಈ ಸಿನಿಮಾದ ಪ್ರಚಾರಕ್ಕೆ ಹಲವು ತಂತ್ರಗಳನ್ನು ರೂಪಿಸಲಾಗುತ್ತಿದೆ. ‘ಧುರಂಧರ್ 2’ ಸಿನಿಮಾ ಜೊತೆ ‘ಭೂತ್ ಬಂಗ್ಲ’ ಚಿತ್ರದ ಪ್ರಚಾರವನ್ನೂ ಮಾಡಲು ಚಿತ್ರತಂಡ ಆಲೋಚಿಸಿದೆ.

ಗೊಂದಲದ ಗೂಡಾದ ‘ಡಾನ್ 3’ ಸಿನಿಮಾ; ಮಧ್ಯಸ್ಥಿಕೆ ವಹಿಸಿದ ಸ್ಟಾರ್ ಹೀರೋ

'ಡಾನ್ 3' ಸಿನಿಮಾ ನಿರ್ಮಾಣ ವಿಳಂಬಕ್ಕೆ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಫರ್ಹಾನ್ ಅಖ್ತರ್ ನಡುವಿನ ಭಿನ್ನಾಭಿಪ್ರಾಯವೇ ಕಾರಣ. ಸ್ಕ್ರಿಪ್ಟ್ ಹಾಗೂ ಸಂಭಾವನೆ ವಿಚಾರದಲ್ಲಿ ರಣವೀರ್ ಅತೃಪ್ತರಾಗಿದ್ದು, ಚಿತ್ರತಂಡಕ್ಕೆ 40 ಕೋಟಿ ನಷ್ಟವಾಗುವ ಭೀತಿ ಎದುರಾಗಿದೆ. ಈ ಗೊಂದಲವನ್ನು ಬಗೆಹರಿಸಲು ಅಮೀರ್ ಖಾನ್ ಮಧ್ಯಪ್ರವೇಶಿಸಿದ್ದು, ಉಭಯತಾರೆಯರ ನಡುವೆ ಸಂಧಾನ ಸಭೆ ನಡೆಸಿದ್ದಾರೆ.