Bollywood
ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್ಬಸ್ಟರ್ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.
‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು
ಟೀಸರ್ ಬಿಡುಗಡೆ ನಂತರ ‘ರಾಮಾಯಣ’ ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಬಗೆಬಗೆಯ ಅಭಿಪ್ರಾಯ ಕೇಳಿಬರಲು ಶುರುವಾಗಿದೆ. ಈಗ ಈ ಸಿನಿಮಾದ ಅವಧಿ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ಎರಡು ಭಾಗಗಳಲ್ಲಿ ಬರಲಿರುವ ಈ ಚಿತ್ರದ ಅವಧಿ ಸುಮಾರು 6 ಗಂಟೆಗಳು ಎನ್ನಲಾಗಿದೆ. ಆ ಕುರಿತು ಇಲ್ಲಿದೆ ವಿವರ..
- Madan Kumar
- Updated on: Apr 5, 2026
- 12:08 pm
‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ
ಕೇರಳದಲ್ಲಿ ಚುನಾವಣಾ ಭಾಷಣ ಮಾಡುವಾಗ ನರೇಂದ್ರ ಮೋದಿ ಅವರು ‘ಧುರಂಧರ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ತೋರಿಸಿರುವುದು ಸುಳ್ಳು ಎಂದವರನ್ನು ಮೋದಿ ಟೀಕಿಸಿದ್ದಾರೆ. ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗಳ ಬಗ್ಗೆಯೂ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.
- Madan Kumar
- Updated on: Apr 5, 2026
- 11:01 am
‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ದ್ವಿಪಾತ್ರ: ಶ್ರೀರಾಮನ ಜೊತೆಗೆ ಪರಶುರಾಮನ ದರ್ಶನ
ನಟ ರಣಬೀರ್ ಕಪೂರ್ ಅಭಿಮಾನಿಗಳು ‘ರಾಮಾಯಣ’ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ದ್ವಿಪಾತ್ರ ಮಾಡಿದ್ದಾರೆ ಎಂಬುದು ಖಚಿತವಾಗಿದೆ. ರಾಮನಾಗಿ ಮತ್ತು ಪರಶುರಾಮನಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಮಾಯಣ ಸಿನಿಮಾ ರಿಲೀಸ್ ಆಗಲಿದೆ.
- Madan Kumar
- Updated on: Apr 5, 2026
- 8:18 am
ಬಾಕ್ಸ್ ಆಫೀಸ್ನಲ್ಲಿ ‘ಧುರಂಧರ್ 2’ ಅಬ್ಬರ: ಭಾರತದಲ್ಲೇ ಸಾವಿರ ಕೋಟಿ ರೂಪಾಯಿ ಸನಿಹ
ಭಾರತದ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳ ದಾಖಲೆಯನ್ನು ‘ಧುರಂಧರ್ 2’ ಸಿನಿಮಾ ಈಗಾಗಲೇ ಹಿಂದಿಕ್ಕಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಶೀಘ್ರವೇ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ. ನಟ ರಣವೀರ್ ಸಿಂಗ್, ನಿರ್ದೇಶಕ ಆದಿತ್ಯ ಧರ್ ಅವರ ಖ್ಯಾತಿ ಈ ಸಿನಿಮಾದಿಂದ ಡಬಲ್ ಆಗಿದೆ.
- Madan Kumar
- Updated on: Apr 5, 2026
- 7:16 am
‘ಧುರಂಧರ್’ ರೆಹಮಾನ್ ಡಕಾಯಿತ್ ಪಾತ್ರದ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ
ಧುರಂಧರ್ ಮತ್ತು ಧುರಂಧರ್ 2 ಸಿನಿಮಾಗಳು ಎಲ್ಲಾ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಗೆದ್ದಿವೆ. ಅದರಲ್ಲೂ ಅಕ್ಷಯ್ ಖನ್ನಾ ಅವರ ರೆಹಮಾನ್ ಡಕಾಯಿತ ಪಾತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಈ ಪಾತ್ರವನ್ನು ಮೊದಲು ಮೂವರು ಖ್ಯಾತ ನಟರು ರಿಜೆಕ್ಟ್ ಮಾಡಿದ್ದ ಸಂಗತಿ ಈಗ ಬಹಿರಂಗವಾಗಿದೆ. ಕಾಸ್ಟಿಂಗ್ ಡೈರೆಕ್ಟರ್ ಮುಕೇಶ್ ಛಬ್ರಾ ಈ ವಿಷಯವನ್ನು ತಿಳಿಸಿದ್ದರು.
- Rajesh Duggumane
- Updated on: Apr 4, 2026
- 9:08 am
‘ರಾಮಾಯಣ’ ಎಐ ಎಂದವರಿಗೆ ಉತ್ತರಿಸಲು ಬಿಟಿಎಸ್ ವಿಡಿಯೋ ರಿಲೀಸ್ ಮಾಡಿದ ತಂಡ?
ಯಶ್, ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಸಿನಿಮಾದ ಟೀಸರ್ಗೆ ‘AI’ ಆರೋಪ ಎದುರಾಗಿದೆ. ಟೀಸರ್ ಕಳಪೆ ಗುಣಮಟ್ಟದ್ದು ಎಂದು ಕೆಲವರು ಟೀಕಿಸಿದ್ದರೆ, ಮತ್ತೆ ಕೆಲವರು ಇದು AI ನಿರ್ಮಿತ ಎಂದಿದ್ದರು. ಇದಕ್ಕೆ ಉತ್ತರವಾಗಿ ಬಿಡುಗಡೆಯಾದ ‘ಬಿಹೈಂಡ್ ದಿ ಸೀನ್’ (BTS) ವಿಡಿಯೋ ಕೂಡ AI ನಿರ್ಮಿತ ಎಂದು ಈಗ ಚರ್ಚೆ ನಡೆಯುತ್ತಿದೆ.
- Rajesh Duggumane
- Updated on: Apr 4, 2026
- 7:11 am
ವಿಜಯ್ ಮಲ್ಯ ಅಥವಾ ಲಲಿತ್ ಮೋದಿ ಪಾತ್ರದಲ್ಲಿ ‘ಧುರಂಧರ್’ ನಟ ಅರ್ಜುನ್ ರಾಮ್ಪಾಲ್?
‘ಧುರಂಧರ್’ ಯಶಸ್ಸಿನ ಬಳಿಕ ನಟ ಅರ್ಜುನ್ ರಾಮ್ಪಾಲ್ ಅವರ ಜನಪ್ರಿಯತೆ ಹೆಚ್ಚಾಗಿದೆ. ಸಿನಿಮಾ ಮಾತ್ರವಲ್ಲದೇ ಒಟಿಟಿ ಕ್ಷೇತ್ರದಲ್ಲೂ ಅವರಿಗೆ ಭರ್ಜರಿ ಬೇಡಿಕೆ ಇದೆ. ಅವರು ನಟಿಸಿರುವ ‘ಬಿಲಿಯನೇರ್’ ವೆಬ್ ಸರಣಿ ಬಿಡುಗಡೆಗೆ ಸಜ್ಜಾಗುತ್ತಿದೆ. ಇದರ ಕಥಾವಸ್ತು ಯಾರಿಗೆ ಸಂಬಂಧಿಸಿದ್ದು ಎಂಬ ಕೌತುಕ ಮೂಡಿದೆ.
- Madan Kumar
- Updated on: Apr 3, 2026
- 9:15 pm
ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ
‘ರಾಮಾಯಣ’ ನಿರ್ಮಾಪಕರು 700 ಕೋಟಿ ರೂಪಾಯಿ ಆಫರ್ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿರ ಕೋಟಿ ರೂಪಾಯಿ ಡೀಲ್ ಮೇಲೆ ಅವರು ಕಣ್ಣು ಇಟ್ಟಿರುವಂತಿದೆ. ಇದೇ ರೀತಿ ಎಸ್ಎಸ್ ರಾಜಮೌಳಿ ನಿರ್ದೇಶನದ ‘ವಾರಾಣಸಿ’ ಸಿನಿಮಾ ಕೂಡ ಒಟಿಟಿ ವ್ಯವಹಾರದ ಕಾರಣದಿಂದ ಸುದ್ದಿ ಆಗುತ್ತಿದೆ.
- Madan Kumar
- Updated on: Apr 3, 2026
- 7:23 pm
ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್
ಮುಂಬೈನಲ್ಲಿ ನಟ ಆರ್. ಮಾಧವನ್ ಅವರು ‘ಧುರಂಧರ್ 2’ ಸಿನಿಮಾ ವೀಕ್ಷಿಸಿದ್ದಾರೆ. ಅಭಿಮಾನಿಗಳ ಜೊತೆಯಲ್ಲಿ ಕುಳಿತು ಅವರು ಚಿತ್ರವನ್ನು ಎಂಜಾಯ್ ಮಾಡಿದ್ದಾರೆ. ತಮ್ಮ ಸಿನಿಮಾಗೆ ಪ್ರೇಕ್ಷಕರು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಅವರು ಖುದ್ದಾಗಿ ಬಂದು ಗಮನಿಸಿದ್ದಾರೆ. ಚಿತ್ರಮಂದಿರದಲ್ಲಿ ಕುಳಿತ ಆರ್. ಮಾಧವನ್ ಅವರ ಫೋಟೋ ವೈರಲ್ ಆಗಿದೆ.
- Madan Kumar
- Updated on: Apr 3, 2026
- 5:54 pm
ಆಧಿತ್ಯ ಧರ್ ಮೇಲೆ ಕೃತಿಚೌರ್ಯದ ಆರೋಪ ಮಾಡಿದ ನಿರ್ದೇಶಕನಿಗೆ ಲೀಗಲ್ ನೋಟಿಸ್?
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಮೇಲೆ ಕೃತಿಚೌರ್ಯದ ಆರೋಪ ಬಂದಿದೆ. ನಿರ್ದೇಶಕ ಸಂತೋಷ್ ಕುಮಾರ್ ಅವರು ಈ ವಿವಾದವನ್ನು ಶುರು ಮಾಡಿದ್ದಾರೆ. ಅವರಿಗೆ ನಿರ್ದೇಶಕ ಆದಿತ್ಯ ಧರ್ ತಂಡ ಲೀಗಲ್ ನೋಟಿಸ್ ಕಳಿಸಿದೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
- Madan Kumar
- Updated on: Apr 3, 2026
- 4:54 pm
ಮತ್ತೆ ಒಂದಾಗಿ ಸಿನಿಮಾ ಮಾಡ್ತಾರಾ ಅಜಯ್ ದೇವಗನ್, ಓಂ ರಾವುತ್? ಸಿಕ್ತು ಸ್ಪಷ್ಟನೆ
‘ಆದಿಪುರುಷ್’ ಖ್ಯಾತಿಯ ನಿರ್ದೇಶಕ ಓಂ ರಾವುತ್ ಅವರ ಹೊಸ ಸಿನಿಮಾ ಬಗ್ಗೆ ವದಂತಿ ಹಬ್ಬಿದೆ. ಅಜಯ್ ದೇವಗನ್ ಜೊತೆ ಅವರು ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ವದಂತಿಗಳ ಬಗ್ಗೆ ಅಜಯ್ ದೇವಗನ್ ಅವರ ಟೀಮ್ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.
- Madan Kumar
- Updated on: Apr 3, 2026
- 3:37 pm
‘ಕೆಡಿ’ ಹಾಡಿಗಿಂತಲೂ ಅಶ್ಲೀಲ ಸಾಹಿತ್ಯ: ‘ವಾಲ್ಯೂಮ್ 1’ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ
ಸಿಕ್ಕಾಪಟ್ಟೆ ಅಶ್ಲೀಲ ಸಾಹಿತ್ಯ ಹೊಂದಿದ್ದ ‘ವಾಲ್ಯೂಮ್ 1’ ಹಾಡನ್ನು ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಸಂಗೀತದ ಹೆಸರಿನಲ್ಲಿ ಅಶ್ಲೀಲತೆ ಹರಡುವುದರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಬಾದ್ಶಾ ಮತ್ತು ಹನಿ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್ ಛೀಮಾರಿ ಹಾಕಿದೆ.
- Madan Kumar
- Updated on: Apr 2, 2026
- 7:43 pm