AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

Shahrukhz Tower: ಶಾರುಕ್ ಖಾನ್ ಎಂದ್ರೆ ದುಬೈನಲ್ಲಿ ಬಲು ಕ್ರೇಜ್; ಅವರ ಹೆಸರಿನ ಟವರ್​ಗೆ 5,000 ಕೋಟಿ ರೂಗೂ ಅಧಿಕ ಬೆಲೆ

Danube Group sells Sharukhz Tower for Rs 5,000 crore in Dubai: ದುಬೈನ ಶೇಖ್ ಜಾಯೇದ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಶಾರುಖ್ಸ್ ಟವರ್ 5,000 ಕೋಟಿ ರೂಗೆ ಮಾರಾಟವಾಗಿದೆ. 3,500 ಕೋಟಿ ರೂ ವೆಚ್ಚದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಹೆಸರಿನ ಈ 55 ಮಹಡಿಯ ಕಮರ್ಷಿಯಲ್ ಟವರ್​ಗೆ ನಿರೀಕ್ಷೆಮೀರದ ಬೆಲೆ ಸಿಕ್ಕಿದೆ. ಮುಂಬೈ ಸಂಜಾತ ರಿಜ್ವಾಲ್ ಸಾಜನ್ ಮಾಲೀಕರಾಗಿರುವ ಡ್ಯಾನೂಬ್ ಗ್ರೂಪ್ ಈ ಕಮರ್ಷಿಯಲ್ ಟವರ್ ಕಟ್ಟುತ್ತಿದೆ.

ಸತತ 24 ಗಂಟೆ ಪ್ರದರ್ಶನ ಕಂಡ ‘ಧುರಂಧರ್’ ಸಿನಿಮಾ; ಹೆಚ್ಚುತ್ತಲೇ ಇದೆ ಡಿಮ್ಯಾಂಡ್

ಎಲ್ಲ ಕಡೆಗಳಲ್ಲೂ ‘ಧುರಂಧರ್’ ಸಿನಿಮಾದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಅಷ್ಟರಮಟ್ಟಿಗೆ ಕ್ರೇಜ್ ಸೃಷ್ಟಿ ಆಗಿದೆ. ವಿಶೇಷ ಏನೆಂದರೆ ಪುಣೆ, ಮಂಬೈ ನಗರದ ಕೆಲವು ಕಡೆಗಳಲ್ಲಿ 24 ಗಂಟೆಯೂ ಈ ಸಿನಿಮಾದ ಪ್ರದರ್ಶನ ಆಗಿದೆ. ಪ್ರೇಕ್ಷಕರ ಬೇಡಿಕೆಗೆ ತಕ್ಕಂತೆ ಚಿತ್ರಮಂದಿರಗಳಲ್ಲಿ ‘ಧುರಂಧರ್’ ಸಿನಿಮಾದ ಶೋಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

9ನೇ ದಿನ 50 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ‘ಧುರಂಧರ್’ ಸಿನಿಮಾ

ಬಿಡುಗಡೆಯಾಗಿ ಒಂದು ವಾರ ಕಳೆದರೂ ‘ಧುರಂಧರ್’ ಸಿನಿಮಾ ಹಲವು ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ರಣವೀರ್ ಸಿಂಗ್ ನಟನೆಯ ಈ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಆದ್ದರಿಂದ ಭರ್ಜರಿ ಕಲೆಕ್ಷನ್ ಆಗುತ್ತಿದೆ. 9ನೇ ದಿನ ಈ ಸಿನಿಮಾ ಮಾಡಿರುವ ಕಲೆಕ್ಷನ್ ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಧುರಂಧರ್’ ಚಿತ್ರವನ್ನು ಹಾಡಿ ಹೊಗಳಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ಇತ್ತೀಚೆಗೆ 'ಧುರಂಧರ್' ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಡಿಸೆಂಬರ್ 5ರಂದು ತೆರೆಕಂಡು ದೇಶಾದ್ಯಂತ 239 ಕೋಟಿ ರೂಪಾಯಿ ಗಳಿಸಿದೆ. ಅಲ್ಲು ಅರ್ಜುನ್, ರಣವೀರ್ ಸಿಂಗ್, ಅಕ್ಷಯ್ ಖನ್ನಾ ಸೇರಿದಂತೆ ಇಡೀ ತಾರಾಗಣ ಹಾಗೂ ನಿರ್ದೇಶಕ ಆದಿತ್ಯ ಧರ್ ಅವರ ಅದ್ಭುತ ಕೆಲಸವನ್ನು ಶ್ಲಾಘಿಸಿದ್ದಾರೆ.

‘ಕಾಂತಾರ: ಚಾಪ್ಟರ್ 1’ ದಾಖಲೆ ಮುರಿಯಲು ರೆಡಿ ಆದ ‘ಧುರಂಧರ್’; ದೊಡ್ಡ ರೆಕಾರ್ಡ್ ಬ್ರೇಕ್?

'ಧುರಂಧರ್' ಸಿನಿಮಾ 350 ಕೋಟಿಗೂ ಹೆಚ್ಚು ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. 'ಎ' ಪ್ರಮಾಣಪತ್ರದ ನಡುವೆಯೂ ಯಶಸ್ಸು ಗಳಿಸಿರುವ ಈ ಸ್ಪೈ ಥ್ರಿಲ್ಲರ್, 'ಕಾಂತಾರ: ಚಾಪ್ಟರ್ 1' ದಾಖಲೆಯನ್ನು ಮುರಿಯುವತ್ತ ಸಾಗಿದೆ. ಇದು ರಣವೀರ್ ಸಿಂಗ್ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ನೀಡಿದ್ದು, ಮುಂದಿನ ದಿನಗಳಲ್ಲಿ ಇದರ ಅಬ್ಬರ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ.

ದಿ ಡೆವಿಲ್, ಅಖಂಡ 2, ಧುರಂಧರ್ ಸಿನಿಮಾಗಳ ನಡುವೆ ಕ್ಲ್ಯಾಶ್: ಯಾರಿಗೆ ಲಾಭ?

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಡೆವಿಲ್’, ‘ಧುರಂಧರ್’ ಹಾಗೂ ‘ಅಖಂಡ 2’ ಸಿನಿಮಾಗಳು ಪರಸ್ಪರ ಫೈಟ್ ನೀಡುತ್ತಿವೆ. ‘ಧುರಂಧರ್’ ಸಿನಿಮಾವನ್ನು 2ನೇ ವಾರ ಕೂಡ ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಬಾಲಯ್ಯ ಅಭಿನಯದ ‘ಅಖಂಡ 2’ ಸಿನಿಮಾಗೆ ಬಹುತೇಕ ನೆಗೆಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿವರ..

ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರವೇ ತಲೆಕೆಳಗೆ; ಒಂದೇ ವಾರಕ್ಕೆ ‘ಧುರಂಧರ್’ ದಾಖಲೆಯ ಗಳಿಕೆ

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದೆ. ಫ್ಲಾಪ್ ಆಗುತ್ತದೆ ಎಂದು ಭವಿಷ್ಯ ನುಡಿದರೂ, ಈ ಚಿತ್ರ ಕೇವಲ 7 ದಿನಗಳಲ್ಲಿ 200 ಕೋಟಿ ರೂ. ಗಳಿಸಿ ಅಚ್ಚರಿ ಮೂಡಿಸಿದೆ. ನೆಗೆಟಿವಿಟಿ, ದೀರ್ಘ ರನ್ ಟೈಮ್ ನಡುವೆಯೂ ಸಕಾರಾತ್ಮಕ ವಿಮರ್ಶೆಗಳಿಂದ ಚಿತ್ರ ಯಶಸ್ಸು ಕಂಡಿದೆ. ವಾರದ ದಿನಗಳಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಸ್ಪರ್ಧೆಯಿದ್ದರೂ ಮುನ್ನುಗ್ಗುತ್ತಿದೆ.

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದ್ದರೂ, ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತ-ಪಾಕ್ ಬೇಹುಗಾರಿಕೆ ಆಧಾರಿತ ಈ ಚಿತ್ರಕ್ಕೆ ಪಾಕಿಸ್ತಾನ ವಿರೋಧಿ ಅಂಶಗಳ ಕಾರಣ 6 ದೇಶಗಳು ನಿಷೇಧ ಹೇರಿವೆ. ಈ ಸವಾಲಿನ ನಡುವೆಯೂ ಚಿತ್ರ ಜಾಗತಿಕವಾಗಿ 300 ಕೋಟಿ ರೂ. ಗಳಿಸಿ ಯಶಸ್ಸು ಕಂಡಿದೆ.

ಇನ್​​ಸ್ಟಾಗ್ರಾಮ್​ನಲ್ಲಿರೋದು ಆರಾಧ್ಯಾ ಖಾತೆಯಾ? ಐಶ್ವರ್ಯಾ ನೀಡಿದರು ಸ್ಪಷ್ಟನೆ

ಐಶ್ವರ್ಯಾ ರೈ ಬಚ್ಚನ್ ಇತ್ತೀಚೆಗೆ ರೆಡ್ ಸೀ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಮಾಧ್ಯಮದ ಸಾಧಕ-ಬಾಧಕಗಳ ಬಗ್ಗೆ ಮಾತನಾಡಿದರು. ಈ ವೇಳೆ, ಮಗಳು ಆರಾಧ್ಯಾ ಬಚ್ಚನ್ ಹೆಸರಿನಲ್ಲಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳು ನಕಲಿ ಎಂದು ಸ್ಪಷ್ಟಪಡಿಸಿದರು. ಆರಾಧ್ಯಾ ಯಾವುದೇ ಡಿಜಿಟಲ್ ವೇದಿಕೆಯಲ್ಲಿ ಸಕ್ರಿಯಳಾಗಿಲ್ಲ ಎಂದರು. ಹಿತೈಷಿಗಳಿಗೆ ಧನ್ಯವಾದ ಹೇಳಿದ ಅವರು, ಸುಳ್ಳು ಮಾಹಿತಿಗಳಿಂದ ಎಚ್ಚರವಿರಲು ಮನವಿ ಮಾಡಿದರು.

ಊಹೆಗೂ ಮೀರಿ ಧುರಂಧರ್ ಕಲೆಕ್ಷನ್; ಸೋಮವಾರಕ್ಕಿಂತ ಮಂಗಳವಾರದ ಗಳಿಕೆ ಜೋರು

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಕೇವಲ 5 ದಿನಗಳಲ್ಲಿ 150 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿ, 300 ಕೋಟಿ ಕ್ಲಬ್ ಸೇರುವತ್ತ ಸಾಗಿದೆ. ವಾರದ ದಿನಗಳಲ್ಲೂ ಕುಸಿಯದ ಗಳಿಕೆ ದಾಖಲೆ ನಿರ್ಮಿಸಿದೆ. ವಿವಾದಗಳನ್ನು ಮೆಟ್ಟಿ ನಿಂತು ಪ್ರೇಕ್ಷಕರ ಮನ ಗೆದ್ದ 'ಧುರಂಧರ್', ರಣವೀರ್ ಸಿಂಗ್‌ಗೆ ದೊಡ್ಡ ಗೆಲುವು ತಂದಿದೆ.

ಭಾರಿ ದೊಡ್ಡ ಮೊತ್ತಕ್ಕೆ ಮಾರಾಟ ಆಯ್ತು ‘ಧುರಂಧರ್’ ಒಟಿಟಿ ಹಕ್ಕು

ಹಲವು ವಿಘ್ನಗಳನ್ನು ದಾಟಿಕೊಂಡು ಬಿಡುಗಡೆ ಆದ ‘ಧುರಂಧರ್’ ಸಿನಿಮಾ ಜನರ ಮೆಚ್ಚುಗೆ ಗಳಿಸಿದೆ. ಚಿತ್ರಮಂದಿರಗಳಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡುತ್ತಿರುವಾಗಲೇ ಈ ಚಿತ್ರದ ಒಟಿಟಿ ವ್ಯವಹಾರ ನಡೆದಿದೆ. ಬರೋಬ್ಬರಿ 130 ಕೋಟಿ ರೂಪಾಯಿಗೆ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಸೇಲ್ ಆಗಿವೆ ಎನ್ನಲಾಗಿದೆ.

ಸೋಮವಾರವೂ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದ ‘ಧುರಂಧರ್’; ರಣವೀರ್​ಗೆ ದೊಡ್ಡ ಗೆಲುವು

ರಣವೀರ್ ಸಿಂಗ್ ಅವರ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ನೆಗೆಟಿವ್ ಟಾಕ್ ಮತ್ತು ದೀರ್ಘ ಅವಧಿಯ ನಡುವೆಯೂ, ಮೂರೇ ದಿನದಲ್ಲಿ 100 ಕೋಟಿ ರೂ. ಗಳಿಸಿ ಬಾಲಿವುಡ್‌ಗೆ ಹೊಸ ಚೈತನ್ಯ ನೀಡಿದೆ. ಇದು ರಣವೀರ್ ವೃತ್ತಿಜೀವನದ ದೊಡ್ಡ ಹಿಟ್ ಆಗುವ ನಿರೀಕ್ಷೆಯಿದೆ. ಡಿಸೆಂಬರ್ ರಜೆಗಳು ಚಿತ್ರಕ್ಕೆ ಲಾಭ ತಂದುಕೊಟ್ಟಿವೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ