AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

ನಟಿ ಹೇಮಾ ಮಾಲಿನಿಗೆ ಯಾರೋ ಕತ್ತು ಹಿಸುಕಿದ ಅನುಭವ

ನಟಿ ಹೇಮಾ ಮಾಲಿನಿ ತಮ್ಮ 'ಬಿಯಾಂಡ್ ದಿ ಡ್ರೀಮ್ ಗರ್ಲ್' ಪುಸ್ತಕದಲ್ಲಿ ದೆವ್ವದ ಬಂಗಲೆಯೊಂದರಲ್ಲಿನ ತಮ್ಮ ಭಯಾನಕ ಅನುಭವಗಳನ್ನು ಬಹಿರಂಗಪಡಿಸಿದ್ದಾರೆ. ಜುಹುವಿನ ಆ ಮನೆಯಲ್ಲಿ ಪ್ರತಿದಿನ ರಾತ್ರಿ ಯಾರೋ ತನ್ನ ಕತ್ತು ಹಿಸುಕಿದಂತೆ ಭಾಸವಾಗುತ್ತಿತ್ತು ಎಂದು ಅವರು ವಿವರಿಸಿದ್ದಾರೆ. ಈ ಅತಿಮಾನುಷ ಘಟನೆಗಳು ಅವರ ನಿದ್ರೆಗೆ ಭಂಗ ತಂದು, ಉಸಿರಾಟದ ತೊಂದರೆಗೆ ಕಾರಣವಾಗಿದ್ದವು.

ಜನಪ್ರಿಯತೆಯಲ್ಲಿ ವಿಜಯ್, ಪ್ರಭಾಸ್​ ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ 20 ವರ್ಷದ ನಟಿ

'ಧುರಂಧರ್' ಚಿತ್ರದ ಯಶಸ್ಸಿನ ನಂತರ 20 ವರ್ಷದ ಸಾರಾ ಅರ್ಜುನ್, IMDb ಯ ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ದಳಪತಿ ವಿಜಯ್ ಮತ್ತು ಪ್ರಭಾಸ್‌ರಂತಹ ಸೂಪರ್‌ಸ್ಟಾರ್‌ಗಳನ್ನು ಹಿಂದಿಕ್ಕಿ ಸಾರಾ ಈ ಸಾಧನೆ ಮಾಡಿದ್ದಾರೆ. ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಸಾರಾ, 'ಧುರಂಧರ್' ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿ, ಭಾರತೀಯ ಸಿನಿಮಾದ ಹೊಸ ತಾರೆಯಾಗಿ ಹೊರಹೊಮ್ಮಿದ್ದಾರೆ.

ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮಗುವಿಗೆ ನಾಮಕರಣ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರು ಇಟ್ಟಿದ್ದಾರೆ. ಮಗುವಿನ ಮುಖವನ್ನು ಇನ್ನೂ ತೋರಿಸಿಲ್ಲ. ಮಗುವಿನ ಕೈ ಫೋಟೋ ವೈರಲ್ ಆಗಿದೆ. ಫ್ಯಾನ್ಸ್ ಜೊತೆ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್?

ಬಾಲಿವುಡ್ ಸ್ಟಾರ್ ನಟ ಅನಿಲ್ ಕಪೂರ್ ಅವರು ‘ಪಲ್ಲವಿ ಅನುಪಲ್ಲವಿ’ ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ. 1983ರ ಜನವರಿ 7ರಂದು ಕನ್ನಡದ ಆ ಸಿನಿಮಾ ರಿಲೀಸ್ ಆಗಿತ್ತು. ಇಂದಿಗೆ 43 ವರ್ಷಗಳು ಕಳೆದಿವೆ. ಮತ್ತೆ ಕನ್ನಡ ಸಿನಿಮಾಗಳಲ್ಲಿ ನಟಿಸಲು ಅನಿಲ್ ಕಪೂರ್ ಅವರು ಉತ್ಸಾಹ ಹೊಂದಿದ್ದಾರೆ.

‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾಗೆ ಭಾರತದಲ್ಲಿ ಈವರೆಗೂ 831.40 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ಹಿಂದಿ ವರ್ಷನ್ ಗಳಿಕೆಯನ್ನು ‘ಧುರಂಧರ್’ ಸಿನಿಮಾ ಹಿಂದಿಕ್ಕಿ ಹೊಸ ದಾಖಲೆ ಮಾಡಿದೆ. ಇಂದಿಗೂ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕಲೆಕ್ಷನ್ ಹೆಚ್ಚಾಗುತ್ತಲೇ ಇದೆ.

ಅಪ್ರಾಪ್ತೆ ಜೊತೆ ಕಾರ್ತಿಕ್ ಆರ್ಯನ್ ಡೇಟಿಂಗ್? ಇಬ್ಬರ ಮಧ್ಯೆ 18 ವರ್ಷ ವಯಸ್ಸಿನ ಅಂತರ

ಕಾರ್ತಿಕ್ ಆರ್ಯನ್ ಅಪ್ರಾಪ್ತೆ ಜೊತೆ ಡೇಟಿಂಗ್ ವಿಷಯವಾಗಿ ಸುದ್ದಿಯಲ್ಲಿದ್ದಾರೆ. ಇಬ್ಬರ ನಡುವೆ 18 ವರ್ಷಗಳ ವಯಸ್ಸಿನ ಅಂತರ ಇರುವುದು ಚರ್ಚೆಗೆ ಕಾರಣವಾಗಿದೆ. ಗೋವಾ ಫೋಟೋಗಳು ವೈರಲ್ ಆದ ನಂತರ ಈ ವಿಷಯ ಬಹಿರಂಗವಾಗಿದೆ. ಕರೀನಾ ತಾವು ಕಾರ್ತಿಕ್ ಗೆಳತಿಯಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಅಭಿಮಾನಿಗಳು ಇದನ್ನು ಒಪ್ಪಿಕೊಂಡಿಲ್ಲ.

ಪಾಕಿಸ್ತಾನದಲ್ಲೂ ‘ಬಾರ್ಡರ್ 2’ ಸಿನಿಮಾ ರಿಲೀಸ್ ಮಾಡುವಂತೆ ಫ್ಯಾನ್ಸ್ ಒತ್ತಾಯ

‘ಧುರಂಧರ್’ ಯಶಸ್ಸಿನ ಬಳಿಕ ‘ಬಾರ್ಡರ್ 2’ ಸಿನಿಮಾ ಕೂಡ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಟಿಸಿರುವ ವರುಣ್ ಧವನ್ ಅವರು ‘ಎಕ್ಸ್’ ಖಾತೆ ಮೂಲಕ ಫ್ಯಾನ್ಸ್ ಜೊತೆ ಸಂವಾದ ಮಾಡಿದ್ದಾರೆ. ಪಾಕಿಸ್ತಾನದಿಂದಲೂ ಅಭಿಮಾನಿಗಳು ವರುಣ್ ಧವನ್​​ಗೆ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ವರಣ್ ಪ್ರತಿಕ್ರಿಯಿಸಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕರ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ?

‘ದಿ ಫ್ಯಾಮಿಲಿ ಮ್ಯಾನ್’ ಡೈರೆಕ್ಟರ್ ರಾಜ್ ಮತ್ತು ಡಿಕೆ ಜೊತೆ ಸಲ್ಮಾನ್ ಖಾನ್ ಅವರು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕಥೆ ನಡೆದಿದ್ದು, ಆ್ಯಕ್ಷನ್-ಕಾಮಿಡಿ ಶೈಲಿಯ ಸಿನಿಮಾಗಾಗಿ ಪ್ಲ್ಯಾನ್ ಮಾಡಲಾಗುತ್ತಿದೆ. ಈ ಬಗ್ಗೆ ಸಲ್ಮಾನ್ ಖಾನ್ ಕಡೆಯಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲವೂ ಅಂತೆ-ಕಂತೆಯ ಹಂತದಲ್ಲಿದೆ.

‘ಧುರಂಧರ್’ ಸಿನಿಮಾದ ಟಿಕೆಟ್ ಬೆಲೆ ತಗ್ಗಿಸಿದ ಚಿತ್ರತಂಡ; ಕಾರಣ ಏನು?

ಈಗ ಕೇವಲ 199 ರೂಪಾಯಿಗೆ ‘ಧುರಂಧರ್’ ಸಿನಿಮಾ ನೋಡಬಹುದು ಎಂದು ಚಿತ್ರತಂಡ ಹೇಳಿದೆ. ಆದರೆ ಪ್ರೇಕ್ಷಕರಿಗೆ ಈ ಆಫರ್ ಸಿಗುವುದು ಕೇವಲ ಒಂದೇ ದಿನ ಮಾತ್ರ ಎಂದು ಕೂಡ ಹೇಳಲಾಗಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ 800 ಕೋಟಿ ರೂಪಾಯಿ ಮೀರಲಿದೆ.

‘ಧುರಂಧರ್’ ನಿರ್ದೇಶಕ ದೇವರ ಮಗ: ಸಿಕ್ಕಾಪಟ್ಟೆ ಹೊಗಳಿದ ವಿವೇಕ್ ಅಗ್ನಿಹೋತ್ರಿ

ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆದಿರುವ ‘ಧುರಂಧರ್’ ಸಿನಿಮಾವನ್ನು ನೋಡಿ ವಿವೇಕ್ ಅಗ್ನಿಹೋತ್ರಿ ಮೆಚ್ಚಿಕೊಂಡಿದ್ದಾರೆ. ಚಿತ್ರದ ನಿರ್ದೇಶಕ ಆದಿತ್ಯ ಧಾರ್ ಅವರನ್ನು ವಿವೇಕ್ ಮನಸಾರೆ ಹೊಗಳಿದ್ದಾರೆ. ಚಿತ್ರದ ಬಗ್ಗೆ ತಮ್ಮ ವಿಮರ್ಶೆ ನೀಡಿದ್ದಾರೆ. ಭಾರತದಲ್ಲಿ ಈ ಸಿನಿಮಾದ ಕಲೆಕ್ಷನ್ ಈವರೆಗೂ 774 ಕೋಟಿ ರೂಪಾಯಿ ಆಗಿದೆ. ಈಗಲೂ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ.

ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಸಿನಿಮಾಗಳ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ!

‘ಧುರಂಧರ್’ ಸಿನಿಮಾದ ಯಶಸ್ಸಿನಿಂದ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರು ಸೂಪರ್ ಸ್ಟಾರ್ ಆಗಿದ್ದಾರೆ. 2025ರಲ್ಲಿ ಅವರು ನಟಿಸಿದ ಎರಡು ಸಿನಿಮಾಗಳು ಬ್ಲಾಕ್ ಬಸ್ಟರ್ ಹಿಟ್ ಆಗಿ ಅಪಾರ ಖ್ಯಾತಿ ತಂದುಕೊಟ್ಟಿವೆ. ಬಾಕ್ಸ್ ಆಫೀಸ್​ ಕಲೆಕ್ಷನ್ ವಿಚಾರದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಅಪರೂಪದ ದಾಖಲೆ ಮಾಡಿದ್ದಾರೆ.

ರಸ್ತೆ ಅಪಘಾತ: ನಟ ಆಶಿಷ್ ವಿದ್ಯಾರ್ಥಿ, ರೂಪಾಲಿ ದಂಪತಿ ಪರಿಸ್ಥಿತಿ ಹೇಗಿದೆ?

ಆಶಿಷ್ ವಿದ್ಯಾರ್ಥಿ ಹಾಗೂ ರೂಪಾಲಿ ಅವರಿಗೆ ಬೈಕ್ ಡಿಕ್ಕಿ ಹೊಡೆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈಗ ತಮ್ಮಿಬ್ಬರ ಪರಿಸ್ಥಿತಿ ಹೇಗಿದೆ ಎಂದು ಸ್ವತಃ ಆಶಿಷ್ ವಿದ್ಯಾರ್ಥಿ ಅವರು ಇನ್​ಸ್ಟಾಗ್ರಾಮ್ ಲೈವ್ ಮೂಲಕ ತಿಳಿಸಿದ್ದಾರೆ. ಈ ಅಪಘಾತದಿಂದ ಯಾರಿಗೂ ಗಂಭೀರ ಗಾಯ ಆಗಿಲ್ಲ ಎಂಬುದನ್ನು ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ