Bollywood
ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್ಬಸ್ಟರ್ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.
ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ? ‘ಸತ್ಲುಜ್’ ವಿವಾದದ ಬೆನ್ನಲ್ಲೇ ಕೇಂದ್ರದ ಚಿಂತನೆ
ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಸಿನಿಮಾವನ್ನು ಸೆನ್ಸಾರ್ ಪ್ರಮಾಣಪತ್ರ ಇಲ್ಲದೇ ಒಟಿಟಿಯಲ್ಲಿ ಬಿಡುಗಡೆ ಮಾಡಿದ್ದರಿಂದ ದೊಡ್ಡ ವಿವಾದ ಸೃಷ್ಟಿ ಆಗಿದೆ. ಈ ಹಿನ್ನೆಲೆಯಲ್ಲಿ ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಆ ಕುರಿತು ಇಲ್ಲಿದೆ ವಿವರ..
- Madan Kumar
- Updated on: Jul 15, 2026
- 10:40 pm
ಆಮಿರ್ ಖಾನ್ಗೆ ಕೊಲೆ ಬೆದರಿಕೆ; ಕೊಂದವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಅಯೋಧ್ಯೆ ಧಾರ್ಮಿಕ ಮುಖಂಡ
ಆಮಿರ್ ಖಾನ್ ಅವರ ಮೂರನೇ ಮದುವೆಯು ವಿವಾದಕ್ಕೆ ಕಾರಣ ಆಗಿದೆ. ಈ ಮದುವೆಯನ್ನು ಲವ್ ಜಿಹಾದ್ ಎಂದು ಅನೇಕರು ಟೀಕಿಸಿದ್ದಾರೆ. ಆಮಿರ್ ಖಾನ್ ಅವರನ್ನು ಕೊಲ್ಲಲು ಜಗದ್ಗುರು ಪರಮಹಂಸ ಆಚಾರ್ಯ ಅವರು ಬಹಿರಂಗವಾಗಿ ಕರೆ ನೀಡಿದ್ದಾರೆ. ಅವರು ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Jul 15, 2026
- 8:05 pm
ಮೇಕಪ್ ಇಲ್ಲದೇ ಬಂದ ಮೌನಿ ರಾಯ್; ಫೋಟೋ ತೆಗೆಯಲು ಬಂದವರ ಮೇಲೆ ಗರಂ
ಖ್ಯಾತ ನಟಿ ಮೌನಿ ರಾಯ್ ಅವರು ಬ್ಲಾಕ್ ಡ್ರೆಸ್ ಧರಿಸಿ, ಯಾವುದೇ ಮೇಕಪ್ ಇಲ್ಲದೆ ಸಿಂಪಲ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಫೋಟೋ ತೆಗೆಯಲು ಬಂದ ಪಾಪರಾಜಿಗಳ ಮೇಲೆ ಅವರು ಗರಂ ಆಗಿದ್ದಾರೆ. ಈ ವೈರಲ್ ವಿಡಿಯೋ ಬಗ್ಗೆ ಸದ್ಯಕ್ಕೆ ಸಾರ್ವಜನಿಕವಾಗಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
- Madan Kumar
- Updated on: Jul 15, 2026
- 5:44 pm
ಶಾರುಖ್ ಖಾನ್ ಒಡೆತನದ ಮನ್ನತ್ ಬಂಗಲೆಯ ನವೀಕರಣ ಪ್ರಶ್ನಿಸಿದ್ದ ಅರ್ಜಿ ವಜಾ
ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರು ಮನ್ನತ್ ಬಂಗಲೆಯ ಆವರಣದಲ್ಲಿರುವ ಆರು ಅಂತಸ್ತಿನ ಕಟ್ಟಡಕ್ಕೆ ಹೆಚ್ಚುವರಿಯಾಗಿ ಇನ್ನೂ ಎರಡು ಮಹಡಿಗಳನ್ನು ನಿರ್ಮಿಸಲು ಪ್ರಸ್ತಾಪಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದರಿಂದ ಮನ್ನತ್ ಬಂಗಲೆಯ ವಿಸ್ತರಣಾ ಕಾರ್ಯ ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದೆ.
- Madan Kumar
- Updated on: Jul 14, 2026
- 9:38 pm
7 ವರ್ಷಗಳ ಬಳಿಕ ಚಿತ್ರರಂಗಕ್ಕೆ ನಟ ಗೋವಿಂದ ಕಮ್ಬ್ಯಾಕ್; ಹೊಸ ಸಿನಿಮಾ ‘ರೂಪಾ’ ಘೋಷಣೆ
ಬೇಡಿಕೆ ಇದ್ದರೂ ಕೂಡ ನಟ ಗೋವಿಂದ ಅವರು ಇಷ್ಟು ವರ್ಷಗಳ ಕಾಲ ಯಾವುದೇ ಸಿನಿಮಾ ಒಪ್ಪಿಕೊಂಡಿರಲಿಲ್ಲ. ಈಗ ತಮ್ಮದೇ ನಿರ್ಮಾಣದ ಹೊಸ ಸಿನಿಮಾದಲ್ಲಿ ಅವರು ನಟಿಸುವುದಾಗಿ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಹೊಸ ನಟಿಗೆ ಅವಕಾಶ ನೀಡುತ್ತಿದ್ದಾರೆ. ಈ ಚಿತ್ರಕ್ಕೆ ‘ರೂಪಾ’ ಎಂದು ಹೆಸರಿಡಲಾಗಿದೆ.
- Madan Kumar
- Updated on: Jul 14, 2026
- 4:11 pm
ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ
ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ತಮಗೆ ಪ್ರೇಮ ಪ್ರಸ್ತಾಪ ಮಾಡಿದ್ದರು ಎಂದು ನೀಡಿದ್ದ ಹಳೆಯ ಹೇಳಿಕೆ ವೈರಲ್ ಆದ ಬೆನ್ನಲ್ಲೇ ನಟ ಮುಜಮ್ಮಿಲ್ ಇಬ್ರಾಹಿಂ ಮೌನ ಮುರಿದಿದ್ದಾರೆ. ತಮ್ಮ ಹಳೆಯ ಸಂದರ್ಶನದ ವೀಡಿಯೊ ತುಣುಕುಗಳನ್ನು ಸಂದರ್ಭಕ್ಕೆ ಹೊರತಾಗಿ ತಪ್ಪಾಗಿ ಬಿಂಬಿಸಿ ಹರಿಬಿಡಲಾಗಿದೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಸ್ಪಷ್ಟನೆ ನೀಡಿರುವ ನಟ, ದೀಪಿಕಾ ಮೇಲಿರುವ ಗೌರವವನ್ನು ಪುನರುಚ್ಚರಿಸಿದ್ದಾರೆ.
- Rajesh Duggumane
- Updated on: Jul 14, 2026
- 10:36 am
ಸೋಮವಾರದ ಪರೀಕ್ಷೆಯಲ್ಲಿ ಗೆದ್ದ ‘ಧಮಾಲ್ 4’; ನಾಲ್ಕು ದಿನಕ್ಕೆ 100 ಕೋಟಿ ಕಲೆಕ್ಷನ್
ಬಾಲಿವುಡ್ನ ಬಹುನಿರೀಕ್ಷಿತ ಕಾಮಿಡಿ ಸಿನಿಮಾ 'ಧಮಾಲ್ 4' ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂಪಾಯಿ ಗಳಿಕೆಯ ಮಹತ್ವದ ಮೈಲಿಗಲ್ಲು ತಲುಪಿದೆ. ಅತ್ಯಂತ ನಿರ್ಣಾಯಕವಾಗಿದ್ದ ಸೋಮವಾರದ ಪರೀಕ್ಷೆಯಲ್ಲೂ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮುನ್ನುಗ್ಗುತ್ತಿದೆ.
- Rajesh Duggumane
- Updated on: Jul 14, 2026
- 7:30 am
ಜಪಾನ್ನಲ್ಲಿ ಮೋಡಿ ಮಾಡಲು ‘ಧುರಂಧರ್ 2’ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ
‘ಧುರಂಧರ್ 2’ ಸಿನಿಮಾ ಜಪಾನ್ನಲ್ಲಿ ಭಾರಿ ಕಲೆಕ್ಷನ್ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಸಾಧ್ಯವಾಗಿಲ್ಲ. ಮೊದಲ ದಿನ ಈ ಚಿತ್ರಕ್ಕೆ ಜಪಾನ್ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಟಾಪ್ 25 ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕೂಡ ‘ಧುರಂಧರ್ 2’ ಸೋತಿದೆ.
- Madan Kumar
- Updated on: Jul 13, 2026
- 10:31 pm
ರಾಮಮಂದಿರ ದೇಣಿಗೆ ಕಳ್ಳತನ: ಅನುಪಮ್ ಖೇರ್ ಬಗ್ಗೆ ನಾಸಿರುದ್ದೀನ್ ಶಾ ಮಾತನಾಡಿದ್ದ ವಿಡಿಯೋ ವೈರಲ್
ರಾಮಮಂದಿರದ ದೇಣಿಗೆ ಕಳ್ಳತನದ ಕುರಿತಾದ ನಟ ಅನುಪಮ್ ಖೇರ್ ಹೇಳಿಕೆಗೆ ನೆಟ್ಟಿಗರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಾಸಿರುದ್ದೀನ್ ಶಾ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಬಾಲಿವುಡ್ನ ಈ ಇಬ್ಬರು ಹಿರಿಯ ನಟರ ವಾಕ್ಸಮರದ ವಿಡಿಯೋ ಮತ್ತೆ ಇಂಟರ್ನೆಟ್ನಲ್ಲಿ ಚರ್ಚೆ ಹುಟ್ಟುಹಾಕಿದೆ.
- Madan Kumar
- Updated on: Jul 13, 2026
- 9:14 pm
2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರದ ರಿಲೀಸ್?
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಾತೃಭೂಮಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಗೆ ಅನುಮತಿ ಸಿಗಲಲ್ಲ. ಚಿತ್ರದ ಶೀರ್ಷಿಕೆ ಬದಲಾವಣೆ ಮಾಡಿದರೂ ಗ್ರೀನ್ ಸಿಗ್ನಲ್ ಸಿಗಲಿಲ್ಲ. ಸಲ್ಮಾನ್ ಖಾನ್ ನಟನೆಯ ಈ ಚಿತ್ರದ ಬಿಡುಗಡೆ ಇನ್ನಷ್ಟು ತಡವಾಗುವ ಸಾಧ್ಯತೆ ದಟ್ಟವಾಗಿದೆ.
- Madan Kumar
- Updated on: Jul 13, 2026
- 7:12 pm
ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ
ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Jul 10, 2026
- 9:30 pm
3 ತಿಂಗಳು ಜೈಲು ಶಿಕ್ಷೆ: ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್
ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ಗೆ ದೆಹಲಿ ಹೈಕೋರ್ಟ್ 3 ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಟನಿಗೆ ನ್ಯಾಯಾಲಯವು 2 ತಿಂಗಳ ಕಾಲಾವಕಾಶ ನೀಡಿದೆ.
- Madan Kumar
- Updated on: Jul 10, 2026
- 3:25 pm