AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

ದಿ ಡೆವಿಲ್, ಅಖಂಡ 2, ಧುರಂಧರ್ ಸಿನಿಮಾಗಳ ನಡುವೆ ಕ್ಲ್ಯಾಶ್: ಯಾರಿಗೆ ಲಾಭ?

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಡೆವಿಲ್’, ‘ಧುರಂಧರ್’ ಹಾಗೂ ‘ಅಖಂಡ 2’ ಸಿನಿಮಾಗಳು ಪರಸ್ಪರ ಫೈಟ್ ನೀಡುತ್ತಿವೆ. ‘ಧುರಂಧರ್’ ಸಿನಿಮಾವನ್ನು 2ನೇ ವಾರ ಕೂಡ ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಬಾಲಯ್ಯ ಅಭಿನಯದ ‘ಅಖಂಡ 2’ ಸಿನಿಮಾಗೆ ಬಹುತೇಕ ನೆಗೆಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿವರ..

ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರವೇ ತಲೆಕೆಳಗೆ; ಒಂದೇ ವಾರಕ್ಕೆ ‘ಧುರಂಧರ್’ ದಾಖಲೆಯ ಗಳಿಕೆ

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದೆ. ಫ್ಲಾಪ್ ಆಗುತ್ತದೆ ಎಂದು ಭವಿಷ್ಯ ನುಡಿದರೂ, ಈ ಚಿತ್ರ ಕೇವಲ 7 ದಿನಗಳಲ್ಲಿ 200 ಕೋಟಿ ರೂ. ಗಳಿಸಿ ಅಚ್ಚರಿ ಮೂಡಿಸಿದೆ. ನೆಗೆಟಿವಿಟಿ, ದೀರ್ಘ ರನ್ ಟೈಮ್ ನಡುವೆಯೂ ಸಕಾರಾತ್ಮಕ ವಿಮರ್ಶೆಗಳಿಂದ ಚಿತ್ರ ಯಶಸ್ಸು ಕಂಡಿದೆ. ವಾರದ ದಿನಗಳಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಸ್ಪರ್ಧೆಯಿದ್ದರೂ ಮುನ್ನುಗ್ಗುತ್ತಿದೆ.

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರ ಆರು ದೇಶಗಳಲ್ಲಿ ಬ್ಯಾನ್

ರಣವೀರ್ ಸಿಂಗ್ ಅವರ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದ್ದರೂ, ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತ-ಪಾಕ್ ಬೇಹುಗಾರಿಕೆ ಆಧಾರಿತ ಈ ಚಿತ್ರಕ್ಕೆ ಪಾಕಿಸ್ತಾನ ವಿರೋಧಿ ಅಂಶಗಳ ಕಾರಣ 6 ದೇಶಗಳು ನಿಷೇಧ ಹೇರಿವೆ. ಈ ಸವಾಲಿನ ನಡುವೆಯೂ ಚಿತ್ರ ಜಾಗತಿಕವಾಗಿ 300 ಕೋಟಿ ರೂ. ಗಳಿಸಿ ಯಶಸ್ಸು ಕಂಡಿದೆ.

ಇನ್​​ಸ್ಟಾಗ್ರಾಮ್​ನಲ್ಲಿರೋದು ಆರಾಧ್ಯಾ ಖಾತೆಯಾ? ಐಶ್ವರ್ಯಾ ನೀಡಿದರು ಸ್ಪಷ್ಟನೆ

ಐಶ್ವರ್ಯಾ ರೈ ಬಚ್ಚನ್ ಇತ್ತೀಚೆಗೆ ರೆಡ್ ಸೀ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಮಾಧ್ಯಮದ ಸಾಧಕ-ಬಾಧಕಗಳ ಬಗ್ಗೆ ಮಾತನಾಡಿದರು. ಈ ವೇಳೆ, ಮಗಳು ಆರಾಧ್ಯಾ ಬಚ್ಚನ್ ಹೆಸರಿನಲ್ಲಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳು ನಕಲಿ ಎಂದು ಸ್ಪಷ್ಟಪಡಿಸಿದರು. ಆರಾಧ್ಯಾ ಯಾವುದೇ ಡಿಜಿಟಲ್ ವೇದಿಕೆಯಲ್ಲಿ ಸಕ್ರಿಯಳಾಗಿಲ್ಲ ಎಂದರು. ಹಿತೈಷಿಗಳಿಗೆ ಧನ್ಯವಾದ ಹೇಳಿದ ಅವರು, ಸುಳ್ಳು ಮಾಹಿತಿಗಳಿಂದ ಎಚ್ಚರವಿರಲು ಮನವಿ ಮಾಡಿದರು.

ಊಹೆಗೂ ಮೀರಿ ಧುರಂಧರ್ ಕಲೆಕ್ಷನ್; ಸೋಮವಾರಕ್ಕಿಂತ ಮಂಗಳವಾರದ ಗಳಿಕೆ ಜೋರು

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಕೇವಲ 5 ದಿನಗಳಲ್ಲಿ 150 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿ, 300 ಕೋಟಿ ಕ್ಲಬ್ ಸೇರುವತ್ತ ಸಾಗಿದೆ. ವಾರದ ದಿನಗಳಲ್ಲೂ ಕುಸಿಯದ ಗಳಿಕೆ ದಾಖಲೆ ನಿರ್ಮಿಸಿದೆ. ವಿವಾದಗಳನ್ನು ಮೆಟ್ಟಿ ನಿಂತು ಪ್ರೇಕ್ಷಕರ ಮನ ಗೆದ್ದ 'ಧುರಂಧರ್', ರಣವೀರ್ ಸಿಂಗ್‌ಗೆ ದೊಡ್ಡ ಗೆಲುವು ತಂದಿದೆ.

ಭಾರಿ ದೊಡ್ಡ ಮೊತ್ತಕ್ಕೆ ಮಾರಾಟ ಆಯ್ತು ‘ಧುರಂಧರ್’ ಒಟಿಟಿ ಹಕ್ಕು

ಹಲವು ವಿಘ್ನಗಳನ್ನು ದಾಟಿಕೊಂಡು ಬಿಡುಗಡೆ ಆದ ‘ಧುರಂಧರ್’ ಸಿನಿಮಾ ಜನರ ಮೆಚ್ಚುಗೆ ಗಳಿಸಿದೆ. ಚಿತ್ರಮಂದಿರಗಳಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡುತ್ತಿರುವಾಗಲೇ ಈ ಚಿತ್ರದ ಒಟಿಟಿ ವ್ಯವಹಾರ ನಡೆದಿದೆ. ಬರೋಬ್ಬರಿ 130 ಕೋಟಿ ರೂಪಾಯಿಗೆ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಸೇಲ್ ಆಗಿವೆ ಎನ್ನಲಾಗಿದೆ.

ಸೋಮವಾರವೂ ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದ ‘ಧುರಂಧರ್’; ರಣವೀರ್​ಗೆ ದೊಡ್ಡ ಗೆಲುವು

ರಣವೀರ್ ಸಿಂಗ್ ಅವರ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ನೆಗೆಟಿವ್ ಟಾಕ್ ಮತ್ತು ದೀರ್ಘ ಅವಧಿಯ ನಡುವೆಯೂ, ಮೂರೇ ದಿನದಲ್ಲಿ 100 ಕೋಟಿ ರೂ. ಗಳಿಸಿ ಬಾಲಿವುಡ್‌ಗೆ ಹೊಸ ಚೈತನ್ಯ ನೀಡಿದೆ. ಇದು ರಣವೀರ್ ವೃತ್ತಿಜೀವನದ ದೊಡ್ಡ ಹಿಟ್ ಆಗುವ ನಿರೀಕ್ಷೆಯಿದೆ. ಡಿಸೆಂಬರ್ ರಜೆಗಳು ಚಿತ್ರಕ್ಕೆ ಲಾಭ ತಂದುಕೊಟ್ಟಿವೆ.

ನೆಟ್​ಫ್ಲಿಕ್ಸ್ ವಾರ್ನರ್ ಬ್ರೋಸ್ ಡೀಲ್​ನಿಂದ ಭಾರತೀಯ ಚಿತ್ರೋದ್ಯಮ ಕಂಗಾಲು; ಸಿನಿಮಾ ರಂಗದ ಆತಂಕವೇನು?

Why Indian film industry worried over Netflix acquiring Warner Bros: ವಾರ್ನರ್ ಬ್ರೋಸ್ ಡಿಸ್ಕವರಿ ಸಂಸ್ಥೆಯನ್ನು ನೆಟ್​ಫ್ಲಿಕ್ಸ್ ಖರೀದಿಸಲಾಗುತ್ತಿರುವ ಸುದ್ದಿಗೆ ಭಾರತದ ಮಲ್ಟಿಪ್ಲೆಕ್ಸ್​ಗಳು ಆತಂಕಗೊಂಡಿವೆ. ಈ ಬೆಳವಣಿಗೆಯಿಂದ ಚಿತ್ರಮಂದಿರಗಳಿಗೆ ಹಿನ್ನಡೆಯಾಗಬಹುದು ಎಂಬುದು ಮಲ್ಟಿಪ್ಲೆಕ್ಸ್​ಗಳ ಸಂಘಟನೆಯಾದ ಎಂಎಐ ಹೇಳಿಕೊಂಡಿದೆ. ವಿಶ್ವದ ಅತಿದೊಡ್ಡ ಸ್ಟ್ರೀಮಿಂಗ್ ಕಂಪನಿಯಾದ ನೆಟ್​ಫ್ಲಿಕ್ಸ್ 83 ಬಿಲಿಯನ್ ಡಾಲರ್​ಗೆ ವಾರ್ನರ್ ಬ್ರೋಸ್ ಅನ್ನು ಖರೀದಿಸುತ್ತಿದೆ.

ಧರ್ಮೇಂದ್ರ ಹುಟ್ಟುಹಬ್ಬ; ನಮನ ಸಲ್ಲಿಸಲು ಅಭಿಮಾನಿಗಳಿಗೆ ವಿಶೇಷ ಅವಕಾಶ

ಹಿರಿಯ ನಟ ಧರ್ಮೇಂದ್ರ ನವೆಂಬರ್ 24ರಂದು ನಿಧನರಾದರು. ಅವರ 90ನೇ ಹುಟ್ಟುಹಬ್ಬದಂದು (ಡಿಸೆಂಬರ್ 8) ಕುಟುಂಬವು ಖಂಡಾಲಾದ ತೋಟದ ಮನೆಯಲ್ಲಿ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಿದೆ. ಕೊನೆಯ ದರ್ಶನಕ್ಕೆ ಅವಕಾಶವಿಲ್ಲದ ಕಾರಣ, ಅಭಿಮಾನಿಗಳಿಗೆ ಗೌರವ ಸಲ್ಲಿಸಲು ಡಿಯೋಲ್ ಕುಟುಂಬವು ಆಹ್ವಾನಿಸಿದೆ. ಸನ್ನಿ ಮತ್ತು ಬಾಬಿ ಡಿಯೋಲ್ ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ.

ಅಬ್ಬಬಾ,‘ಧುರಂಧರ್’ ಭಾನುವಾರದ ಗಳಿಕೆ ಇಷ್ಟೊಂದಾ? ಕೊನೆಗೂ ಗೆದ್ದ ರಣವೀರ್ ಸಿಂಗ್

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಮೂರೇ ದಿನಕ್ಕೆ 100 ಕೋಟಿ ರೂಪಾಯಿ ಗಳಿಸಿ ದಾಖಲೆ ಸೃಷ್ಟಿಸಿದೆ. ಭಾನುವಾರ ಒಂದೇ ದಿನ 40 ಕೋಟಿ ಗಳಿಸಿದ್ದು, ಚಿತ್ರರಂಗದಲ್ಲಿ ರಣವೀರ್ ಸಿಂಗ್‌ಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ. ವಿವಾದಗಳನ್ನು ಮೆಟ್ಟಿ ನಿಂತು ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.

ವಿರೋಧದ ನಡುವೆಯೂ ಗೆದ್ದ ರಣವೀರ್ ಸಿಂಗ್: ‘ಧುರಂಧರ್’ ಕಲೆಕ್ಷನ್ ಸೂಪರ್

ರಣವೀರ್ ಸಿಂಗ್ ಅವರ ವೃತ್ತಿಜೀವನದ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ ಧುರಂಧರ್ ಸಹ ಸೇರ್ಪಡೆ ಆಗಿದೆ. 2 ದಿನದಲ್ಲಿ ಈ ಸಿನಿಮಾದ ಕಲೆಕ್ಷನ್ 60 ಕೋಟಿ ರೂಪಾಯಿ ಸಮೀಪಿಸಿದೆ. 3ನೇ ದಿನ ಕೂಡ ಉತ್ತಮ ಕಲೆಕ್ಷನ್ ಆಗಲಿದೆ. ರಣವೀರ್ ಸಿಂಗ್ ಜತೆ ಅಕ್ಷಯ್ ಖನ್ನಾ, ಆರ್. ಮಾಧವನ್, ಸಂಜಯ್ ದತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಮಧ್ಯ ಬೆರಳು ತೋರಿಸಿದ ಆರ್ಯನ್ ಖಾನ್ ಮೇಲೆ ದೂರು; ಅಲ್ಲೇನಾಯಿತು ವಿವರಿಸಿದ ಝೈದ್ ಖಾನ್

ಶಾರುಖ್ ಖಾನ್ ಮಗ ಆರ್ಯನ್ ಖಾನ್ ವಿವಾದಗಳ ಮೂಲಕವೇ ಹೆಚ್ಚು ಚರ್ಚೆ ಆಗಿದ್ದಾರೆ. ಬೆಂಗಳೂರಿಗೆ ಬಂದಾಗ ಅವರು ಎಡವಟ್ಟು ಮಾಡಿಕೊಂಡರು. ಜನರಿಗೆ ಮಧ್ಯ ಬೆರಳು ತೋರಿಸಿದ್ದರ ವಿಡಿಯೋ ವೈರಲ್ ಆಗಿತ್ತು. ಆರ್ಯನ್ ಖಾನ್ ವಿರುದ್ಧ ಎಲ್ಲರೂ ಕೋಪ ಹೊರಹಾಕಿದ್ದರು. ಈಗ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ