AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

ಜುಲೈ 5ಕ್ಕೆ ಸರಳವಾಗಿ ಮದುವೆಯಾಗಲಿದ್ದಾರೆ ಆಮಿರ್ ಖಾನ್; ವೈಯಕ್ತಿಕ ಜೀವನದ ಚರ್ಚೆಗೆ ನಟ ಬೇಸರ

ಬಾಲಿವುಡ್‌ನ 'ಮಿಸ್ಟರ್ ಪರ್ಫೆಕ್ಷನಿಸ್ಟ್' ಆಮಿರ್ ಖಾನ್ ಜುಲೈ 5ರಂದು ಗೌರಿ ಸ್ಪ್ರ್ಯಾಟ್ ಅವರನ್ನು ವಿವಾಹವಾಗಲಿದ್ದಾರೆ. ವೈಯಕ್ತಿಕ ಜೀವನದ ಬಗ್ಗೆ ಕುತೂಹಲಕ್ಕಿಂತ ತಮ್ಮ ಕೆಲಸ ಮತ್ತು ಚಲನಚಿತ್ರಗಳಿಗೆ ಗಮನ ನೀಡಲು ಅವರು ಜನರನ್ನು ಕೇಳಿದ್ದಾರೆ. ಯಾವುದೇ ಅದ್ಧೂರಿ ಸಮಾರಂಭವಿಲ್ಲದೆ, ಕುಟುಂಬ ಸದಸ್ಯರ ಸಮ್ಮುಖದಲ್ಲಿಯೇ ಸರಳವಾಗಿ ನೋಂದಾಯಿತ ವಿವಾಹ ನಡೆಯಲಿದೆ ಎಂದು ಆಮಿರ್ ಸ್ಪಷ್ಟಪಡಿಸಿದ್ದಾರೆ. ಇದು ಅವರ ಮೂರನೇ ಮದುವೆಯಾಗಿದೆ.

‘ವೆಲ್ಕಮ್ ಟು ದಿ ಜಂಗಲ್’: ದೇಶಾದ್ಯಂತ ಪ್ರದರ್ಶಕರಿಗೆ ದೊಡ್ಡ ಬೇಡಿಕೆಯಿಟ್ಟ ವಿತರಕರು

ಅಕ್ಷಯ್ ಕುಮಾರ್ ಅಭಿನಯದ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಬಹಳ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಅತಿ ಹೆಚ್ಚು ಸ್ಕ್ರೀನ್‌ಗಳನ್ನು ಕಬಳಿಸಿ, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್ ಮಾಡುವ ಉದ್ದೇಶ ವಿತರಕರದ್ದಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ‘ಧುರಂಧರ್’ ನಟ ಆರ್. ಮಾಧವನ್: ವಿಡಿಯೋ ನೋಡಿ..

‘ಧುರಂಧರ್’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಆರ್. ಮಾಧವನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಆಪ್ತರು ಮಾಧವನ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

‘ಈಠಾ’ ಟೀಸರ್ ರಿಲೀಸ್: ಲಾವಣಿ ಕಲಾವಿದೆಯಾಗಿ ಶ್ರದ್ಧಾ ಕಪೂರ್ ನಟನೆಗೆ ಫ್ಯಾನ್ಸ್ ಫಿದಾ

‘ಸ್ತ್ರೀ’ ಮತ್ತು ‘ಸ್ತ್ರೀ 2’ ಚಿತ್ರಗಳ ಭರ್ಜರಿ ಯಶಸ್ಸಿನ ಬಳಿಕ ‘ಮ್ಯಾಡಾಕ್ ಫಿಲ್ಮ್ಸ್’ ಸಂಸ್ಥೆಯೊಂದಿಗೆ ಶ್ರದ್ಧಾ ಕಪೂರ್ ಅವರು ‘ಈಠಾ’ ಸಿನಿಮಾ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಲಾವಣಿ ಕಲಾವಿದೆಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆ ಆಗಿ ಧೂಳೆಬ್ಬಿಸುತ್ತಿದೆ. ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಶಾಕ್; ಬಿಕಿನಿ ದೃಶ್ಯಕ್ಕೆ ಕತ್ತರಿ

ಸೆನ್ಸಾರ್ ಮಂಡಳಿ ಮತ್ತು ಸಿನಿಮಾಗಳ ನಡುವಿನ ವಿವಾದ ಮುಂದುವರಿದಿದೆ. ಅಕ್ಷಯ್ ಕುಮಾರ್ ನಟನೆಯ 'ವೆಲ್ಕಮ್ ಟು ದಿ ಜಂಗಲ್' ಚಿತ್ರಕ್ಕೆ ಸೆನ್ಸಾರ್ ಬೋರ್ಡ್ UA 16+ ಪ್ರಮಾಣಪತ್ರ ನೀಡಿ, 18 ಬದಲಾವಣೆಗಳನ್ನು ಸೂಚಿಸಿದೆ. ಸಂಭಾಷಣೆಗಳು, ದೃಶ್ಯಗಳು, ಮತ್ತು ಬಿಕಿನಿ ಶಾಟ್‌ಗಳಿಗೆ ಕತ್ತರಿ ಹಾಕಲಾಗಿದೆ. ಈ ಕಠಿಣ ಕ್ರಮಗಳಿಂದಾಗಿ ಚಿತ್ರ ಸಂಕಷ್ಟಕ್ಕೆ ಸಿಲುಕಿದೆ.

‘ದುಡ್ಡಿಗಾಗಿ ಶಕ್ತಿಮಾನ್ ತನ್ನನ್ನೇ ಮಾರಿಕೊಂಡ’: ಜನರಿಂದ ಮುಕೇಶ್ ಖನ್ನಾಗೆ ತೀವ್ರ ಟೀಕೆ

ಕೆಲವೇ ದಿನಗಳ ಹಿಂದೆ ಸಮಯ್ ರೈನಾ ಮತ್ತು ಮುಕೇಶ್ ಖನ್ನಾ ಕಿತ್ತಾಡಿಕೊಂಡಿದ್ದರು. ಆದರೆ ಈಗ ಕೈ ಜೋಡಿಸಿದ್ದಾರೆ. ಅವರಿಬ್ಬರು ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. ಹಣದ ಆಸೆಗಾಗಿ ಜಾಹೀರಾತಿನಲ್ಲಿ ಜೊತೆಯಾಗಿ ನಟಿಸಿದ್ದಾರೆ. ಅವರ ಈ ನಡೆಯನ್ನು ಕಂಡು ಜನರು ತೀವ್ರವಾಗಿ ಟೀಕೆ ಮಾಡಿದ್ದಾರೆ.

ಬಾಡಿಗಾರ್ಡ್ ವರ್ತನೆಗೆ ನೆಟ್ಟಿಗರ ಆಕ್ರೋಶ: ಜಾಕ್ವೆಲಿನ್ ಕೈ ಹಿಡಿದು ಎಳೆದ ಭದ್ರತಾ ಸಿಬ್ಬಂದಿ

‘ವೆಲ್ಕಮ್ ಟು ದಿ ಜಂಗಲ್’ ಚಿತ್ರದ ಬಿಡುಗಡೆಗೆ ಕಾದಿರುವ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅವರ ಬಾಡಿಗಾರ್ಡ್ ನಡೆದುಕೊಂಡ ರೀತಿಯನ್ನು ಕಂಡು ನೆಟ್ಟಿಗರು ಗರಂ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಆಮಿರ್ ಖಾನ್ 3ನೇ ಮದುವೆ: ಗೌರಿ ಜತೆ ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್

ಖ್ಯಾತ ನಟ ಆಮಿರ್ ಖಾನ್ ಅವರು 3ನೇ ಮದುವೆಗೆ ಸಜ್ಜಾಗಿದ್ದಾರೆ. ಪ್ರಿಯತಮೆ ಗೌರಿ ಜೊತೆ ಮದುವೆ ಯಾವ ರೀತಿ ನಡೆಯಲಿದೆ ಎಂಬ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ. ಕೇವಲ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಳ್ಳಲು ಆಮಿರ್ ಖಾನ್ ಮತ್ತು ಗೌರಿ ನಿರ್ಧಾರ ಮಾಡಿದ್ದಾರೆ.

‘ಲಗಾನ್’ ಸಿನಿಮಾಗೆ 25 ವರ್ಷ: ಚಿತ್ರತಂಡಕ್ಕೆ ಅತ್ಯಮೂಲ್ಯ ಸಲಹೆ ನೀಡಿದ್ದ ಸಚಿನ್ ತೆಂಡುಲ್ಕರ್

‘ಲಗಾನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತದ ಹೆಸರನ್ನು ಎತ್ತಿಹಿಡಿದಿತ್ತು. 74ನೇ ‘ಆಸ್ಕರ್ ಪ್ರಶಸ್ತಿ’ಯ ‘ಅತ್ಯುತ್ತಮ ವಿದೇಶಿ ಭಾಷಾ ಚಿತ್ರ’ ವಿಭಾಗದಲ್ಲಿ ನಾಮಿನೇಟ್ ಆಗಿತ್ತು. ಈ ಸಿನಿಮಾಗೆ ಸಚಿನ್ ತೆಂಡುಲ್ಕರ್ ಕೂಡ ಒಂದು ಮುಖ್ಯವಾದ ಸಲಹೆ ನೀಡಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

ಆಮಿರ್ ಖಾನ್ ಪ್ರೊಡಕ್ಷನ್ಸ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸ್ಪೂರ್ತಿದಾಯಕ ಜೀವನದ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿದೆ. ಒಡಿಶಾದ ಪುಟ್ಟ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನಕ್ಕೇರಿದ ಅವರ ರೋಚಕ ಪಯಣ ಅನಾವರಣಗೊಳಿಸಲಿದೆ. ಸ್ವಾತಿ ಚಕ್ರವರ್ತಿ ನಿರ್ದೇಶನದ ಈ ಡಾಕ್ಯುಮೆಂಟರಿ, ದ್ರೌಪದಿ ಮುರ್ಮು ಅವರ ವೈಯಕ್ತಿಕ ಕಷ್ಟಗಳು, ಧೈರ್ಯದ ಕಥೆ ಮತ್ತು ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯಾದ ಅವರ ಮಹತ್ವವನ್ನು ಎತ್ತಿ ಹಿಡಿಯುತ್ತದೆ. ಚಿತ್ರೀಕರಣ ಈಗಾಗಲೇ ಆರಂಭಗೊಂಡಿದೆ.

ಕೆಲಸದ ಒತ್ತಡದಿಂದ ನಿದ್ದೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ ಅಮಿತಾಭ್ ಬಚ್ಚನ್

ಅಮಿತಾಭ್ ಬಚ್ಚನ್ ಅವರ ಐದು ದಶಕಗಳ ಕೆಲಸದ ಶ್ರದ್ಧೆ ಈಗಲೂ ಹಾಗೆಯೇ ಇದೆ. ಚಿತ್ರೀಕರಣದ ಒತ್ತಡದಿಂದ ರಾತ್ರಿ ಇಡೀ ನಿದ್ರೆ ಬರುವುದಿಲ್ಲ ಎಂದು ಬಿಗ್ ಬಿ ಹೇಳಿದ್ದಾರೆ. ಮುಂಬರುವ ಚಿತ್ರಗಳ ಆಲೋಚನೆಗಳಿಂದ ವಿಶ್ರಾಂತಿ ಸಿಗುತ್ತಿಲ್ಲ. 'ಕಲ್ಕಿ 2898 AD' ಚಿತ್ರದ ಸೀಕ್ವೆಲ್‌ನಲ್ಲಿ ಅಶ್ವತ್ಥಾಮ ಪಾತ್ರದಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ. ಅವರ ದಣಿವರಿಯದ ಕೆಲಸ ನಿಜಕ್ಕೂ ಸ್ಪೂರ್ತಿದಾಯಕ.

ಸಲ್ಮಾನ್ ಖಾನ್‌ಗೆ ಹಿನ್ನಡೆ: ‘ಕಾಲಾ ಹಿರಣ್’ ಚಿತ್ರದ ತುರ್ತು ನಿಷೇಧಕ್ಕೆ ದೆಹಲಿ ಹೈಕೋರ್ಟ್ ನಿರಾಕರಣೆ

ಸಲ್ಮಾನ್ ಖಾನ್ ಅವರು ‘ಕಾಲಾ ಹಿರಣ್’ ಚಿತ್ರತಂಡದ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದಾರೆ. ವಾದ ಆಲಿಸಿದ ನ್ಯಾಯಾಲಯವು ಸದ್ಯಕ್ಕೆ ಈ ಸಿನಿಮಾಗೆ ತಡೆ ನೀಡಲು ನಿರಾಕರಿಸಿದೆ. ಮೊದಲು ಚಿತ್ರತಂಡಕ್ಕೆ ಎಲ್ಲಾ ದಾಖಲೆಗಳನ್ನು ನೀಡಿ, ಅವರು ತಮ್ಮ ಪರ ವಾದ ಸಿದ್ಧಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸಲ್ಮಾನ್ ತಂಡಕ್ಕೆ ಕೋರ್ಟ್ ಸೂಚಿಸಿದೆ.

ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?