Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

ಆಮಿರ್ ಖಾನ್ ಜತೆ ‘ಘಜಿನಿ 2’ ಮಾಡ್ತೀರಾ? ಉತ್ತರ ನೀಡಿದ ನಿರ್ದೇಶಕ ಮುರುಗದಾಸ್

ಸೂಪರ್ ಹಿಟ್ ‘ಘಜನಿ’ ಸಿನಿಮಾಗೆ ಸೀಕ್ವೆಲ್ ಯಾವಾಗ ಬರಲಿದೆ ಎಂದು ಸಿನಿಪ್ರಿಯರು ಕೇಳುತ್ತಲೇ ಇದ್ದಾರೆ. ಈ ಬಗ್ಗೆ ನಿರ್ದೇಶಕ ಎ.ಆರ್. ಮುರುಗದಾಸ್ ಅವರು ಸುಳಿವು ನೀಡಿದ್ದಾರೆ. ಸೀಕ್ವೆಲ್ ಕುರಿತಂತೆ ಅವರು ಈಗಾಗಲೇ ಆಮಿರ್ ಖಾನ್ ಜೊತೆ ಮಾತುಕತೆ ನಡೆಸಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಆನ್​ಲೈನ್​ನಲ್ಲಿ ಲೀಕ್ ಆಯ್ತು ‘ಛಾವ’ ಸಿನಿಮಾ; ನೂರಾರು ಕೋಟಿ ಬಿಸ್ನೆಸ್​ಗೆ ತೊಂದರೆ

ಒಟಿಟಿಯಲ್ಲಿ ‘ಛಾವ’ ಸಿನಿಮಾವನ್ನು ನೋಡಬೇಕು ಎಂದು ಪ್ರೇಕ್ಷಕರು ಕಾಯುತ್ತಿದ್ದರು. ಅಷ್ಟರಲ್ಲಾಗಲೇ ಈ ಸಿನಿಮಾಗೆ ಪೈರಸಿ ಕಾಟ ಶುರು ಆಗಿದೆ. ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ, ಅಕ್ಷಯ್ ಖನ್ನಾ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಪೈರಸಿ ಕಾಪಿ ಸಾವಿರಾರು ಲಿಂಕ್​ಗಳ ಮೂಲಕ ಹರಿದಾಡುತ್ತಿದೆ.

ಸುಶಾಂತ್ ಮಾಜಿ ಮ್ಯಾನೇಜರ್​ದು ಆತ್ಮಹತ್ಯೆಯಲ್ಲ ಕೊಲೆ; ರಾಜಕಾರಣಿ ಮಕ್ಕಳ ಮೇಲೆ ಆರೋಪ

ದಿಶಾ ಸಾಲಿಯನ್ ಅವರ ತಂದೆ ಅವರ ಮಗಳ ಸಾವು ಆತ್ಮಹತ್ಯೆಯಲ್ಲ, ಬದಲಿಗೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಮತ್ತು ಇತರರನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಈ ಪ್ರಕರಣವು ಸುಶಾಂತ್ ಸಿಂಗ್ ರಜಪೂತ್‌ರ ಸಾವಿನೊಂದಿಗೆ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತಿದೆ.

ಎರಡನೇ ಮಗು ಮಾಡಿಕೊಳ್ಳಲು ಏಳು ವರ್ಷ ಕಷ್ಟಪಟ್ಟ ರಾಣಿ ಮುಖರ್ಜಿ; ಆದರೂ ಆಗಲಿಲ್ಲ

Rani Mukerji Birthday: ರಾಣಿ ಮುಖರ್ಜಿ ಅವರು ಎರಡನೇ ಮಗುವಿಗಾಗಿ ಏಳು ವರ್ಷಗಳ ಕಾಲ ಹೋರಾಟ ನಡೆಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಗರ್ಭಪಾತದ ನೋವು ಅನುಭವಿಸಿದ್ದಾರೆ. ತಮ್ಮ ಮಗಳಾದ ಅದಿರಾ ಅವರನ್ನು ಅವರು "ಮಿರಾಕಲ್ ಬೇಬಿ" ಎಂದು ಕರೆದಿದ್ದಾರೆ. ಈಗ ಅವರು ತಮ್ಮ ಮಗಳ ಜೊತೆ ಸಂತೋಷದಿಂದ ಇದ್ದಾರೆ.

ಸ್ಟಾರ್ ಹೀರೋಗಳ ಜೊತೆ ಕೇಳಿ ಬಂದಿತ್ತು ರಾಣಿ ಮುಖರ್ಜಿ ಹೆಸರು; ಕೊನೆಗೆ ನಿರ್ಮಾಪಕನ ಮದುವೆ ಆದ ನಟಿ

ರಾಣಿ ಮುಖರ್ಜಿ ಅವರ 47ನೇ ಜನ್ಮದಿನದಂದು, ಅವರ ಹಿಂದಿನ ಪ್ರೇಮಕಥೆಗಳನ್ನು ನೆನಪಿಸಿಕೊಳ್ಳೋಣ. ಆಮಿರ್ ಖಾನ್, ಗೋವಿಂದ, ಮತ್ತು ಅಭಿಷೇಕ್ ಬಚ್ಚನ್ ಜೊತೆಗೆ ಅವರ ಹೆಸರು ಕೇಳಿ ಬಂದಿತ್ತು. ಆದಿತ್ಯ ಚೋಪ್ರಾ ಅವರೊಂದಿಗಿನ ಅವರ ವಿವಾಹ ಮತ್ತು ಸುದ್ದಿಯಾದ ಸಂಬಂಧಗಳ ಬಗ್ಗೆ ಇಲ್ಲಿದೆ ಮಾಹಿತಿ.

‘ಶಿಕ್ಷೆ ಕೊಡಲು ಸಿನಿಮಾ ತೋರಿಸಿದರು’; ಇಬ್ರಾಹಿಮ್-ಖುಷಿ ಕಪೂರ್ ಚಿತ್ರಕ್ಕೆ ಇದೆಂಥಾ ಸ್ಥಿತಿ

ಇತ್ತೀಚೆಗೆ ಬಿಡುಗಡೆಯಾದ ‘ನಾದಾನಿಯಾ’ ಸಿನಿಮಾ ಇಬ್ರಾಹಿಂ ಅಲಿ ಖಾನ್ ಮತ್ತು ಖುಷಿ ಕಪೂರ್ ಅವರ ಕಳಪೆ ನಟನೆಗಾಗಿ ತೀವ್ರ ಟೀಕೆಗೆ ಒಳಗಾಗಿದೆ. ನೆಪೋಟಿಸಂ ಹಿನ್ನೆಲೆಯ ಈ ಚಿತ್ರವು ಸ್ಟ್ಯಾಂಡಪ್ ಕಾಮಿಡಿಯನ್ ಪ್ರಣಿತ್ ಮೋರೆ ಅವರಿಂದಲೂ ತೀವ್ರ ಟೀಕೆಗೆ ಒಳಗಾಗಿದೆ. ಖುಷಿ ಕಪೂರ್ ಅವರ ನಟನೆ ವಿಶೇಷವಾಗಿ ಟ್ರೋಲ್ ಆಗುತ್ತಿದ್ದು, ಸಿನಿಮಾ ಒಟ್ಟಾರೆಯಾಗಿ ನಿರಾಶಾದಾಯಕ ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ.

‘ವಯಸ್ಸನ್ನೂ ನೋಡುವುದಿಲ್ಲ’; ಟೀಕೆಗೆ ಕಾರಣವಾಯ್ತು ಆಮಿರ್-ಗೌರಿಯ ಹೊಸ ವಿಡಿಯೋ

ಆಮಿರ್ ಖಾನ್ ಅವರು ತಮ್ಮ 60ನೇ ವಯಸ್ಸಿನಲ್ಲಿ ಗೌರಿ ಎಂಬ ಮಹಿಳೆಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇವರಿಬ್ಬರ ವಯಸ್ಸಿನ ಅಂತರದ ಕುರಿತು ಅನೇಕ ಚರ್ಚೆಗಳು ನಡೆಯುತ್ತಿವೆ. ಇವರ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಶಾರುಖ್ ಖಾನ್-ಸುಕುಮಾರ್ ಸಿನಿಮಾ ಮಾಡೋ ಸುದ್ದಿ ಶುದ್ಧ ಸುಳ್ಳು; ಇಲ್ಲಿದೆ ಸಾಕ್ಷಿ

ಇತ್ತೀಚೆಗೆ ಸುಕುಮಾರ್ ಮತ್ತು ಶಾರುಖ್ ಖಾನ್ ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎಂಬ ವದಂತಿಗಳು ಹಬ್ಬಿವೆ. ಆದರೆ, ಈ ಸುದ್ದಿಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಸುಕುಮಾರ್ ಅವರು ಪ್ರಸ್ತುತ ರಾಮ್ ಚರಣ್ ಜೊತೆ ಚಿತ್ರ ನಿರ್ಮಾಣದಲ್ಲಿ ನಿರತರಾಗಿದ್ದಾರೆ. ಸದ್ಯಕ್ಕೆ ಸುಕುಮಾರ್ ಅವರು ಹಿಂದಿ ಚಿತ್ರಗಳಲ್ಲಿ ಆಸಕ್ತಿ ಹೊಂದಿಲ್ಲ ಎಂಬುದು ಸ್ಪಷ್ಟವಾಗಿದೆ.

‘ಎಮರ್ಜೆನ್ಸಿ’ ಸಿನಿಮಾ ಹೊಗಳಿದವರಿಗೂ ಕ್ಲಾಸ್ ತೆಗೆದುಕೊಂಡ ಕಂಗನಾ; ಯಾಕ್ ಹಿಂಗೆ?

ಕಂಗನಾ ರಣಾವತ್ ಅವರ ನಿರ್ದೇಶನದ "ಎಮರ್ಜೆನ್ಸಿ" ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣದಿದ್ದರೂ, ಒಟಿಟಿ ಬಿಡುಗಡೆಯ ನಂತರ ಮೆಚ್ಚುಗೆ ಗಳಿಸಿದೆ. ಕಂಗನಾ ಅವರು ಚಿತ್ರದ ಬಗ್ಗೆ ಪೂರ್ವಾಗ್ರಹವಿಲ್ಲದೆ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ಸಂಜಯ್ ಗುಪ್ತಾ ಅವರ ಮೆಚ್ಚುಗೆಯನ್ನು ಉಲ್ಲೇಖಿಸಿ, ಚಲನಚಿತ್ರ ಉದ್ಯಮದಲ್ಲಿನ ಪಕ್ಷಪಾತದ ಬಗ್ಗೆ ಅವರು ಮಾತನಾಡಿದ್ದಾರೆ.

82ನೇ ವಯಸ್ಸಲ್ಲಿ ದಿನಕ್ಕೆ 1 ಕೋಟಿ ರೂ. ದುಡಿಯುತ್ತಾರೆ ಅಮಿತಾಭ್; ವರದಾನವಾಯ್ತು ಆ ಪ್ರಾಜೆಕ್ಟ್

ಅಮಿತಾಬ್ ಬಚ್ಚನ್ ಅವರು 2024-25ನೇ ಸಾಲಿನಲ್ಲಿ 120 ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದಾರೆ. ಇದಕ್ಕೆ ಕಾರಣ ಅವರ 350 ಕೋಟಿ ರೂಪಾಯಿಗಳ ವಾರ್ಷಿಕ ಆದಾಯ. 'ಕೌನ್ ಬನೇಗಾ ಕರೋಡ್ಪತಿ 16' ಕಾರ್ಯಕ್ರಮದಿಂದ ಪ್ರತಿ ಎಪಿಸೋಡ್‌ಗೆ 5 ಕೋಟಿ ರೂಪಾಯಿ ಗಳಿಕೆ, ಸಿನಿಮಾಗಳು ಮತ್ತು ಬ್ರ್ಯಾಂಡ್ ಪ್ರಚಾರಗಳು ಅವರ ಆದಾಯಕ್ಕೆ ಕಾರಣ ಆಗಿವೆ.

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ