AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

‘ಕಿಂಗ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ?

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ರೊಮ್ಯಾಂಟಿಕ್ ಹಾಡು ಗಮನ ಸೆಳೆದಿದೆ. ಇವರು ಡ್ಯಾನ್ಸ್ ಮಾಡುತ್ತಿದ್ದು ಹಿನ್ನೆಲೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆ. ಇಬ್ಬರ ನಡುವಿನ ಚುಂಬನ ದೃಶ್ಯವೂ ವೀಡಿಯೊದಲ್ಲಿ ಕಂಡುಬರುತ್ತದೆ. ಈ ಕಾರಣದಿಂದಾಗಿ, ಸೋರಿಕೆಯಾದ ಈ ವೀಡಿಯೊ ನಿಜವಾಗಿಯೂ 'ಕಿಂಗ್' ಚಿತ್ರದ್ದೇ ಎಂದು ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.

ಧೂಳೆಬ್ಬಿಸುತ್ತಿದೆ ‘ಧುರಂಧರ್’: ವೀಕೆಂಡ್, ಕ್ರಿಸ್ಮಸ್, ಹೊಸ ವರ್ಷವೂ ಭರ್ಜರಿ ಕಲೆಕ್ಷನ್ ನಿರೀಕ್ಷೆ

ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಾರಾ ಅರ್ಜುನ್ ನಟನೆಯ ‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಪ್ರತಿ ದಿನವೂ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಇನ್ನೂ ಹಲವು ದಿನ ಈ ಹವಾ ಮುಂದುವರಿಯಲಿದೆ. ಭಾರತದಲ್ಲಿ ಈಗಾಗಲೇ 470 ಕೋಟಿ ರೂ. ಗಳಿಸಿದ ಈ ಸಿನಿಮಾ 600 ಪ್ಲಸ್ ಕೋಟಿ ರೂ. ಗಳಿಸುವ ಸಾಧ್ಯತೆ ಕೂಡ ಇದೆ.

ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಅಕ್ಷಯ್ ಕುಮಾರ್; ಗೆದ್ದವರಿಗೆ ಕೋಟಿ ಕೋಟಿ ಹಣ?

ಇಂಗ್ಲಿಷ್​​ನ ಜನಪ್ರಿಯ 'ವೀಲ್ಸ್ ಆಫ್ ಫಾರ್ಚೂನ್' ಗೇಮ್ ಶೋ ಭಾರತಕ್ಕೆ ಬರಲಿದೆ. ಸೋನಿ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗುವ ಈ ರಿಯಾಲಿಟಿ ಶೋಗೆ ಅಕ್ಷಯ್ ಕುಮಾರ್ ನಿರೂಪಕರಾಗಿ ಆಯ್ಕೆಯಾಗಿದ್ದಾರೆ. ಕೋಟಿ ರೂಪಾಯಿ ಬಹುಮಾನ ಗೆಲ್ಲುವ ಅವಕಾಶವಿರುವ ಈ ಕಾರ್ಯಕ್ರಮವನ್ನು ಹೈಗೇಟ್ ಎಂಟರ್‌ಟೈನ್‌ಮೆಂಟ್ ನಿರ್ಮಿಸುತ್ತಿದೆ. ಅಮೆರಿಕದಲ್ಲಿ 8000ಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿರುವ ಈ ಶೋ ಬಗ್ಗೆ ಕುತೂಹಲ ಹೆಚ್ಚಿದೆ.

ಬ್ಯಾನ್ ಮಧ್ಯೆಯೂ ಕಳ್ಳ ಮಾರ್ಗದಲ್ಲಿ ‘ಧುರಂಧರ್’ ವೀಕ್ಷಿಸಿದ 20 ಲಕ್ಷ ಪಾಕ್ ಮಂದಿ

'ಧುರಂಧರ್' ಚಿತ್ರದಲ್ಲಿ ರಣವೀರ್ ಸಿಂಗ್ ಪಾಕಿಸ್ತಾನದ ಉಗ್ರ ಸಂಘಟನೆಗಳ ವಿರುದ್ಧ ಹೋರಾಡುವ ಭಾರತೀಯ ಸೈನಿಕನ ಪಾತ್ರ ಮಾಡಿದ್ದಾರೆ. ಪಾಕಿಸ್ತಾನದ ಕೆಟ್ಟ ಕೆಲಸಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಅಲ್ಲಿ ಸಿನಿಮಾ ಬ್ಯಾನ್ ಆದರೂ ಸಿನಿಮಾ ಸೂಪರ್ ಹಿಟ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್

ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಎದುರಾಗಿದೆ. ಕೇಸ್ ದಾಖಲಾದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಅವರಿಗೆ ಸೇರಿದ ಜಾಗಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಪಬ್ ಮೇಲೆ ದಾಳಿ ಆಗಿದೆ. ಅಲ್ಲದೇ ಮುಂಬೈ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

167 ಕೋಟಿ ರೂ. ಒಡೆಯ, ಧುರಂಧರ್ ನಟ ಅಕ್ಷಯ್ ಖನ್ನಾ ಮದುವೆ ಆಗಿಲ್ಲ ಯಾಕೆ?

‘ಧುರಂಧರ್’ ಸಿನಿಮಾದಲ್ಲಿ ರೆಹಮಾನ್ ಡಕಾಯಿತ್ ಆಗಿ ಕಾಣಿಸಿಕೊಂಡ ಅಕ್ಷಯ್ ಖನ್ನಾ ಅವರಿಗೆ ಈಗ 50 ವರ್ಷ ವಯಸ್ಸು. ಅಂದಾಜು 167 ಕೋಟಿ ರೂಪಾಯಿ ಆಸ್ತಿಯನ್ನು ಅವರು ಹೊಂದಿದ್ದಾರೆ. ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಹಾಗಿದ್ದರೂ ಕೂಡ ಅಕ್ಷಯ್ ಖನ್ನಾ ಅವರು ಮದುವೆ ಆಗುವ ಮನಸ್ಸು ಮಾಡಿಲ್ಲ. ಆ ಬಗ್ಗೆ ಅವರಿಗೆ ಸ್ಪಷ್ಟತೆ ಇದೆ.

ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ

IT Raid on Shilpa Shetty Pub; ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ, ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ದಾಳಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಕೆಲವು ಪ್ರಕರಣಗಳನ್ನು ಎದುರಿಸುತ್ತಿರುವುದರಿಂದ, ಈ ದಾಳಿಯು ಅವುಗಳ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಮೂಡಿದೆ.

ರಣವೀರ್ ಅದೃಷ್ಟ ಬದಲಿಸಿದ ‘ಧುರಂಧರ್’; ದಕ್ಷಿಣದ ನಿರ್ಮಾಣ ಸಂಸ್ಥೆ ಜೊತೆ ಬಿಗ್ ಬಜೆಟ್ ಸಿನಿಮಾ

'ಧುರಂಧರ್' ಸಿನಿಮಾ ಯಶಸ್ಸಿನೊಂದಿಗೆ ರಣವೀರ್ ಸಿಂಗ್ ವೃತ್ತಿಜೀವನಕ್ಕೆ ಭಾರಿ ತಿರುವು ಸಿಕ್ಕಿದೆ. ಸತತ ಸೋಲುಗಳ ನಂತರ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿಗೂ ಹೆಚ್ಚು ಗಳಿಸಿದೆ. ದಕ್ಷಿಣದ ಮೈತ್ರಿ ಮೂವೀ ಮೇಕರ್ಸ್‌ನಂತಹ ದೊಡ್ಡ ನಿರ್ಮಾಣ ಸಂಸ್ಥೆ ರಣವೀರ್ ಜೊತೆ ಗ್ಯಾಂಗ್‌ಸ್ಟರ್ ಕಥೆಯ ಬಿಗ್ ಬಜೆಟ್ ಸಿನಿಮಾ ಮಾಡಲು ಆಸಕ್ತಿ ತೋರಿಸಿದ್ದು, ಅವರ ಅದೃಷ್ಟ ನಿಜಕ್ಕೂ ಬದಲಾಗಿದೆ.

‘ಧುರಂಧರ್’ ಸಿನಿಮಾ ನೋಡಿ ನಮ್ಮ ಭಾವನೆಗಳ ಜೊತೆ ಆಟವಾಡಬೇಡಿ ಎಂದ ಶ್ರದ್ಧಾ ಕಪೂರ್

ರಣವೀರ್ ಸಿಂಗ್ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 410 ಕೋಟಿಗೂ ಹೆಚ್ಚು ಗಳಿಸಿ ಭಾರಿ ಯಶಸ್ಸು ಕಂಡಿದೆ. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರಕ್ಕೆ ಸ್ಟಾರ್‌ಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ನಟಿ ಶ್ರದ್ಧಾ ಕಪೂರ್ 'ಧುರಂಧರ್' ವೀಕ್ಷಿಸಿ, ಮುಂದಿನ ಭಾಗಕ್ಕಾಗಿ ಕುತೂಹಲ ವ್ಯಕ್ತಪಡಿಸಿದ್ದಾರೆ. 'ಧುರಂಧರ್ 2' ಮಾರ್ಚ್ 19 ರಂದು ಬಿಡುಗಡೆಯಾಗಲಿದೆ.

ಧುರಂಧರ್: ಇವರೆಲ್ಲ ಪಾಕಿಸ್ತಾನಕ್ಕೆ ಸ್ಪೈ ಆಗಿ ಹೋದರೆ ಮಾಡುವ ಎಡವಟ್ಟು ಒಂದೆರಡಲ್ಲ

ಸಿನಿಮಾಗಳು ಸೂಪರ್ ಹಿಟ್ ಆದಾಗ ಅದಕ್ಕೆ ತಕ್ಕಂತೆ ಜನರು ರೀಲ್ಸ್ ಮಾಡುವುದು ಸಹಜ. ‘ಧುರಂಧರ್’ ವಿಚಾರದಲ್ಲೂ ಹಾಗೆಯೇ ಆಗುತ್ತಿದೆ. ಈ ಸಿನಿಮಾದ ಕಥೆಗೆ ಅನುಗುಣವಾಗಿ ಸೋಶಿಯಲ್ ಮೀಡಿಯಾದಲ್ಲಿ ನಾನಾ ಬಗೆಯ ರೀಲ್ಸ್ ಮಾಡಲಾಗುತ್ತಿದೆ. ‘First day as a spy in Pakistan’ ಎಂಬುದು ಇನ್​ಸ್ಟಾಗ್ರಾಮ್​ ತುಂಬೆಲ್ಲ ಹಾವಳಿ ಎಬ್ಬಿಸಿದೆ.

‘ಧುರಂಧರ್’ ಸಿನಿಮಾ ವೀಕ್ಷಿಸಿದ ಟೀಮ್ ಇಂಡಿಯಾ; ಪೂರ್ತಿ ಆಡಿ ಬುಕ್

ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಧುರಂಧರ್’ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಇತ್ತೀಚೆಗೆ ಬಿಡುವು ಮಾಡಿಕೊಂಡ ಲಖನೌನಲ್ಲಿ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಇದರಿಂದಾಗಿ ಸಿನಿಮಾದ ಹವಾ ಇನ್ನಷ್ಟು ಜಾಸ್ತಿ ಆಗಿದೆ. ಈಗಾಗಲೇ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗಿದೆ.

‘ಧುರಂಧರ್’ ಯಶಸ್ಸಿನ ಬೆನ್ನಲ್ಲೇ ರಿಲೀಸ್ ಆಯ್ತು ‘ಬಾರ್ಡರ್ 2’ ಸಿನಿಮಾ ಟೀಸರ್

Border 2 Teaser: 1997ರಲ್ಲಿ ತೆರೆಕಂಡ ‘ಬಾರ್ಡರ್’ ಸಿನಿಮಾದ ಸೀಕ್ವೆಲ್ ಆಗಿ ‘ಬಾರ್ಡರ್ 2’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಇಂಡಿಯಾ-ಪಾಕ್ ನಡುವಿನ ಯುದ್ಧದ ಕಥೆ ಇದರಲ್ಲಿದೆ. ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ ಮುಂತಾದವರು ‘ಬಾರ್ಡರ್ 2’ ಚಿತ್ರದಲ್ಲಿ ನಟಿಸಿದ್ದಾರೆ.

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ