AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

‘ರಾಮಾಯಣ’ ರಿಲೀಸ್ ದಿನಾಂಕದ ಕುತೂಹಲಕ್ಕೆ ತೆರೆ? ಚಿತ್ರತಂಡದ ಪ್ಲ್ಯಾನ್ ಬಹಿರಂಗ

‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ ಎಂಬುದು ತಿಳಿದಿದ್ದರೂ ಕೂಡ ನಿರ್ದಿಷ್ಟ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಕೊಂಚ ಗೊಂದಲ ಇತ್ತು. ಈಗ ಆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಚಿತ್ರತಂಡದ ರಿಲೀಸ್ ಪ್ಲ್ಯಾನ್ ಬಗ್ಗೆ ಒಂದಷ್ಟು ವಿಷಯ ತಿಳಿದುಬಂದಿದೆ.

ಪ್ರದೀಪ್ ರಾವತ್ ಅಂತ್ಯಕ್ರಿಯೆ: ಅಂತಿಮ ದರ್ಶನ ಪಡೆದು ಭಾವುಕರಾದ ಆಮಿರ್ ಖಾನ್

ಮುಂಬೈನಲ್ಲಿ ಪ್ರದೀಪ್ ರಾವತ್ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ನಟ ಆಮಿರ್ ಖಾನ್, ನಿರ್ದೇಶಕ ಅಶುತೋಷ್ ಗೋವಾರಿಕರ್ ಸೇರಿದಂತೆ ಹಲವರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ. ಆಮಿರ್ ಖಾನ್ ಮತ್ತು ಪ್ರದೀಪ್ ರಾವತ್ ಅವರು ‘ಲಗಾನ್’ ಹಾಗೂ ‘ಘಜಿನಿ’ ಚಿತ್ರಗಳಲ್ಲಿ ಒಂದಾಗಿ ಅಭಿನಯಿಸಿದ್ದರು.

‘ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳಲಿಲ್ಲ’: ಕಂಬ್ಯಾಕ್ ಬಗ್ಗೆ ಪ್ರೀತಿ ಜಿಂಟಾ ಮಾತು

ರಾಜ್​ಕುಮಾರ್ ಸಂತೋಷಿ ನಿರ್ದೇಶನದ ‘ಬಟ್ವಾರಾ 1947’ ಸಿನಿಮಾದಲ್ಲಿ ಸನ್ನಿ ಡಿಯೋಲ್, ಪ್ರೀತಿ ಜಿಂಟಾ ಮುಖ್ಯಭೂಮಿಕೆ ನಿಭಾಯಿಸಿದ್​ದಾರೆ. ಈ ಸಿನಿಮಾ ಮೂಲಕ ಪ್ರೀತಿ ಜಿಂಟಾ ಅವರು ಕಮ್​ಬ್ಯಾಕ್ ಮಾಡುತ್ತಿದ್ದಾರೆ. ಆದರೆ ಇಷ್ಟು ವರ್ಷಗಳ ಕಾಲ ತಾವು ಸಿನಿಮಾವನ್ನು ಮಿಸ್ ಮಾಡಿಕೊಳ್ಳುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

‘ಸಂಘಿ’ ಎಂದು ಟ್ರೋಲ್ ಮಾಡಿದವರಿಗೆ ‘ಧುರಂಧರ್’ ನಟ ಆರ್‌. ಮಾಧವನ್ ತಿರುಗೇಟು

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪೋಸ್ಟ್‌ಗಳಿಗೆ ‘ಸಂಘಿ’ ಎಂದು ಕಮೆಂಟ್ ಮಾಡುವ ಮೂಲಕ ಟ್ರೋಲ್ ಮಾಡಿದವರಿಗೆ ಖ್ಯಾತ ನಟ ಆರ್. ಮಾಧವನ್ ಅವರು ಉತ್ತರ ನೀಡಿದ್ದಾರೆ. ‘ಧುರಂಧರ್’ ಸಿನಿಮಾದಲ್ಲಿ ನಟಿಸಿದ್ದಕ್ಕೆ ಕೂಡ ಮಾಧವನ್ ಅವರನ್ನು ಕೆಲವರು ಟೀಕಿಸಿದ್ದರು. ಆ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದಾರೆ.

ಹಿರಿಯ ನಟ ಪ್ರದೀಪ್ ರಾವತ್ ನಿಧನ: ‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ

‘ಘಜಿನಿ’ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದ್ದ ಹಿರಿಯ ನಟ ಪ್ರದೀಪ್ ರಾವತ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರನ್ನು ಒಂದು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಪ್ರದೀಪ್ ರಾವತ್ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಹಾಲಿವುಡ್‌ ಸಿನಿಮಾಗಳಿಗೆ ಶಾರುಖ್‌ ಖಾನ್‌ ಪೈಪೋಟಿ: ಬದಲಾಗಲ್ಲ ‘ಕಿಂಗ್‌’ ರಿಲೀಸ್‌ ದಿನಾಂಕ

ಮೂರು ವರ್ಷಗಳ ನಂತರ ಶಾರುಖ್‌ ಖಾನ್‌ ಅವರು ಕಮ್​ಬ್ಯಾಕ್ ಮಾಡುತ್ತಿದ್ದಾರೆ. ಅವರು ನಟಿಸಿರುವ ‘ಕಿಂಗ್‌’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ನಿಗದಿತ ದಿನಾಂಕದಂದೇ ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಾ ಇಲ್ಲವಾ ಎಂಬ ಅನುಮಾನ ಕೆಲವರಿಗೆ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ರಾಮಾಯಣ’ ಪಾತ್ರದ ವಸ್ತ್ರಗಳ ಬಗೆಗಿನ ಟೀಕೆಗೆ ಸ್ಪಷ್ಟನೆ ನೀಡಿದ ವಿನ್ಯಾಸಕರು

‘ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲೂ ರಾಮಾಯಣ ವಿಶೇಷ ಸ್ಥಾನ ಪಡೆದಿದೆ. ಹೀಗಾಗಿ ಕಾಸ್ಟಿಂಗ್, ಕಾಸ್ಟ್ಯೂಮ್ಸ್ ಅಥವಾ ವಿಎಫ್‌ಎಕ್ಸ್ ವಿಷಯದಲ್ಲಿ ಜನರಿಂದ ಭಿನ್ನ ಅಭಿಪ್ರಾಯಗಳು ಬರುವುದು ಸಹಜ. ಆದರೆ ಈ ಮಟ್ಟದ ನಕಾರಾತ್ಮಕತೆ ಎದುರಾಗುತ್ತದೆ ಎಂದು ನಾವು ಭಾವಿಸಿರಲಿಲ್ಲ’ ಎಂದು ರಾಮಾಯಣ ಚಿತ್ರದ ವಸ್ತ್ರವಿನ್ಯಾಸಕರು ಹೇಳಿದ್ದಾರೆ.

ವಿಪರೀತ ತೂಕ ಕಡಿಮೆ ಆಗಿದ್ದರ ಬಗ್ಗೆ ಮೌನ ಮುರಿದ ನಟ ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿರಬಹುದು ಎಂದು ಕೆಲವರು ಊಹಿಸಿದ್ದರು. ವಿಪರೀತವಾಗಿ ತೂಕ ಕಡಿಮೆ ಆಗಿದ್ದೇ ಈ ಅನುಮಾನಕ್ಕೆ ಕಾರಣ ಆಗಿತ್ತು. ತಾವು ತೂಕ ಕಳೆದುಕೊಂಡಿರುವ ಬಗ್ಗೆ ಸ್ವತಃ ಸಲ್ಮಾನ್ ಖಾನ್ ಅವರು ಈಗ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್ ಮಾಡಿದ್ದು ನಿಜವೇ? ಉತ್ತರಿಸಿದ ಬ್ರೆಟ್ ಲೀ

ಸಿನಿಮಾ ನಟಿಯರು ಮತ್ತು ಕ್ರಿಕೆಟ್ ಆಟಗಾರರ ನಡುವೆ ಪ್ರೀತಿ ಚಿಗುರುವುದು ಕಾಮನ್. ಅದಕ್ಕೆ ಹಲವು ಉದಾಹರಣೆಗಳಿವೆ. ಆದರೆ ಎಲ್ಲಾ ಸ್ನೇಹವನ್ನು ಲವ್ ಎನ್ನಲು ಸಾಧ್ಯವಿಲ್ಲ. ಈ ಹಿಂದೆ ಬ್ರೆಟ್ ಲೀ ಮತ್ತು ಪ್ರೀತಿ ಜಿಂಟಾ ಕುರಿತು ಕೆಲವು ಗಾಸಿಪ್ ಹಬ್ಬಿದ್ದವು. ಅವುಗಳಿಗೆ ಈಗ ಸ್ವತಃ ಬ್ರೆಟ್ ಲೀ ಅವರು ಸ್ಪಷ್ಟನೆ ನೀಡಿದ್ದಾರೆ.

‘ಬಿಗ್ ಬಾಸ್ ಹಿಂದಿ 20’ನೇ ಸೀಸನ್​ಗೆ ಶಾರುಖ್ ಕೋ ಹೋಸ್ಟ್? ದೊಡ್ಡ ಸುಳಿವು ನೀಡಿದ ಸಲ್ಮಾನ್ ಖಾನ್

ಬಿಗ್ ಬಾಸ್ ಸೀಸನ್ 20ರ ಹೊಸ ಪ್ರೋಮೋ ಸಲ್ಮಾನ್ ಖಾನ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. 'ಕರಣ್-ಅರ್ಜುನ್' ವಿಷಯ ಪ್ರಸ್ತಾಪಿಸಿರುವ ಸಲ್ಮಾನ್, ಶಾರುಖ್ ಖಾನ್ ಆಗಮನದ ಸುಳಿವು ನೀಡಿದ್ದಾರೆ. ಸೆಪ್ಟೆಂಬರ್ 6 ರಿಂದ ಆರಂಭವಾಗಲಿರುವ ಈ ಶೋನಲ್ಲಿ ಇಬ್ಬರು ವಿನ್ನರ್ಸ್ ಇರಲಿದ್ದಾರಾ ಅಥವಾ ಜೋಡಿಯಾಗಿ ಆಟ ನಡೆಯಲಿದೆಯಾ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.

‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್‌ ಮಾಡಿದವರಿಗೆ ಕಂಗನಾ ತಿರುಗೇಟು

ನಟಿ ಕಂಗನಾ ರಣಾವತ್ ಅವರು ಒಂದರ ಮೇಲೊಂದು ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಾಗುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ರೀತಿಯನ್ನು ಟೀಕಿಸುವುದರಿಂದ ಆರಂಭವಾದ ಅವರ ವಿವಾದ ಈಗ ಇನ್ನೊಂದು ಹಂತಕ್ಕೆ ಏರಿದೆ. ‘ನಾನು ಸಂಘಿ ಆಗಬೇಕು’ ಎಂದು ಕಂಗನಾ ರಣಾವತ್ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘70 ಜನ ಒಂದೇ ಟಾಯ್ಲೆಟ್ ಬಳಸಬೇಕಿತ್ತು’: ಜೈಲು ದಿನಗಳ ಕಷ್ಟ ನೆನೆದ ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರು ‘ಅಲೈಯನ್ಸ್’ ಶೋಗೆ ಕಾಲಿಟ್ಟಿದ್ದಾರೆ. ಅಲ್ಲಿ ಅವರು ತಮ್ಮ ಜೈಲಿನ ದಿನಗಳ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ತಾವು ಅನುಭವಿಸಿದ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಸಲ್ಮಾನ್ ಖಾನ್ ಸಹೋದರ ಸೊಹೈಲ್ ಖಾನ್ ಸ್ಪರ್ಧಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅವರು ಅತಿಥಿಯಾಗಿ ಬಂದಿದ್ದಾರೆ.