Bollywood
ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್ಬಸ್ಟರ್ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.
‘ಮಕ್ಕಳ ಬದಲು ನಾಯಿಗಳನ್ನು ಸಾಕಿ’: ಮದುವೆ ಬಗ್ಗೆ ನಟಿ ಶೆಫಾಲಿ ಶಾ ಅಚ್ಚರಿಯ ಹೇಳಿಕೆ
ನಟಿ ಶೆಫಾಲಿ ಶಾ ಅವರು ಮದುವೆ ಮತ್ತು ಮಕ್ಕಳ ಬಗ್ಗೆ ಈ ರೀತಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. ಶೆಫಾಲಿ ಶಾ ಅವರ ಖಾಸಗಿ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಆ ಅನುಭವಗಳ ಆಧಾರದಲ್ಲಿ ಅವರು ತಮ್ಮ ಪ್ರಮಾಣಿಕ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
- Madan Kumar
- Updated on: May 15, 2026
- 7:17 pm
ದಿಶಾ ಪಟಾನಿ-ಮೌನಿ ರಾಯ್ ಈ ರೀತಿ ಸ್ನೇಹ; ಇದೇ ಕಾರಣಕ್ಕೆ ವಿಚ್ಛೇದನ ನೀಡಿದ್ರಾ ಸೂರಜ್?
ಮೌನಿ ರಾಯ್ ಮತ್ತು ದಿಶಾ ಪಟಾನಿ ಯಾವಾಗಲೂ ಜೊತೆಯಾಗಿ ಇರುತ್ತಾರೆ. ಮೌನಿ ರಾಯ್ ಅವರು ಪತಿ ಸೂರಜ್ ನಂಬಿಯಾರ್ಗೆ ವಿಚ್ಛೇದನ ನೀಡಿದ್ದಾರೆ. ಇದಕ್ಕೆ ದಿಶಾ ಪಟಾನಿ ಕಾರಣ ಎಂದು ಹಲವರು ಆರೋಪಿಸುತ್ತಿದ್ದಾರೆ. ಅಲ್ಲದೇ, ದಿಶಾ ಮತ್ತು ಮೌನಿ ರಾಯ್ ನಡುವಿನ ಸ್ನೇಹವನ್ನು ಅನುಮಾನದ ದೃಷ್ಟಿಯಿಂದ ಕೆಲವರು ನೋಡುತ್ತಿದ್ದಾರೆ.
- Madan Kumar
- Updated on: May 15, 2026
- 4:34 pm
‘ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಮನೆಗೆ ಹೋದ್ರೆ ಅದು ಜೀವನವೇ ಅಲ್ಲ’: ಸೈಫ್ ಅಲಿ ಖಾನ್
ವೃತ್ತಿಜೀವನಕ್ಕೆ ಹೆಚ್ಚು ಮಹತ್ವ ನೀಡಿದರೆ ವೈಯಕ್ತಿಕ ಬದುಕು ಹಾಳಾಗುತ್ತದೆ. ನಟ ಸೈಫ್ ಅಲಿ ಖಾನ್ ಅವರಿಗೂ ಅಂತಹ ಅನುಭವ ಆಗಿದೆ. ಆ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಕೆಲಸದ ಸಲುವಾಗಿ ಖಾಸಗಿ ಬದುಕಿನಲ್ಲಿ ತಾವು ಹಲವು ತ್ಯಾಗಗಳನ್ನು ಮಾಡಿರುವುದಾಗಿ ಸೈಫ್ ಅಲಿ ಖಾನ್ ಹೇಳಿದ್ದಾರೆ.
- Madan Kumar
- Updated on: May 15, 2026
- 3:43 pm
ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್
ನಟ ಶಾರುಖ್ ಖಾನ್ ಅವರು ಈ ಕಾರನ್ನು ವಿದೇಶದಿಂದ ತರಿಸಿಕೊಂಡಿದ್ದಾರೆ. ಇದರ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈಗಾಗಲೇ ಅವರ ಬಳಿಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಹಲವು ಕಾರುಗಳು ಇವೆ. ಅವರು ಖರೀದಿಸಿರುವ ಹೊಸ ಕಾರಿನ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: May 15, 2026
- 2:59 pm
ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ?
ಪ್ರಭಾಸ್ ಜೊತೆ 'ಕಲ್ಕಿ', ಅಲ್ಲು ಅರ್ಜುನ್ ಜೊತೆ 'ರಾಕಾ' ಚಿತ್ರಗಳಲ್ಲಿ ಮಿಂಚುತ್ತಿರುವ ದೀಪಿಕಾ ಪಡುಕೋಣೆ ಅವರ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. 'ಚೆನ್ನೈ ಎಕ್ಸ್ಪ್ರೆಸ್' ಸೆಟ್ನಲ್ಲಿ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದಂತೆ ಕಾಣುವ ಈ ದೃಶ್ಯವು ಸಕ್ಕರೆ ಬಾಟಲಿ ಮತ್ತು ಮೇಕಪ್ನಿಂದ ಮಾಡಿದ ತಮಾಷೆಯಾಗಿತ್ತು. ಇದು ಬ್ಲೂಪರ್ ವಿಡಿಯೋ ಆಗಿದ್ದು, ಈಗ ಮತ್ತೆ ಚರ್ಚೆಯಲ್ಲಿದೆ.
- Shreelaxmi H
- Updated on: May 15, 2026
- 8:14 am
ಥಿಯೇಟರ್ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು?
ರಣವೀರ್ ಸಿಂಗ್ ಅಭಿನಯದ 'ಧುರಂಧರ್ 2: ದಿ ರಿವೆಂಜ್' ಚಿತ್ರ ಈ ವಾರ ಒಟಿಟಿಗೆ ಬರಲು ಸಿದ್ಧವಾಗಿದೆ. ಭಾರತದಲ್ಲಿ ಜಿಯೋ ಹಾಟ್ಸ್ಟಾರ್ನಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲಿದೆ. ಥಿಯೇಟರ್ಗಳಲ್ಲಿ ಕತ್ತರಿಸಿದ ದೃಶ್ಯಗಳನ್ನು ಒಳಗೊಂಡಿರುವ ಒಟಿಟಿ ಆವೃತ್ತಿ ಹೆಚ್ಚು ರೋಚಕವಾಗಿದೆ. ಈಗಾಗಲೇ ವಿಶ್ವದಾದ್ಯಂತ 1796 ಕೋಟಿಗೂ ಹೆಚ್ಚು ಗಳಿಕೆ ಕಂಡಿರುವ ಈ ಚಿತ್ರ, 'ಬಾಹುಬಲಿ 2' ದಾಖಲೆ ಮುರಿಯುವ ಸನಿಹದಲ್ಲಿದೆ.
- Rajesh Duggumane
- Updated on: May 15, 2026
- 7:06 am
‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ
Cannes 2026: ಕಾನ್ ಚಿತ್ರೋತ್ಸವದಲ್ಲಿ ಆಲಿಯಾ ಭಟ್ ಅವರನ್ನು ಯಾರೂ ಗಮನಿಸಿಲ್ಲ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ವಿಡಿಯೋಗಳು ವೈರಲ್ ಆಗಿವೆ. ಟ್ರೋಲ್ ಮಾಡಿದ ಮಂದಿಗೆ ಆಲಿಯಾ ಭಟ್ ಅವರು ಸರಿಯಾಗಿ ತಿರುಗೇಟು ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: May 14, 2026
- 8:51 pm
ಅಯೋಧ್ಯೆಯಲ್ಲಿ ರಣಬೀರ್ ಕಪೂರ್ ಹೂಡಿಕೆ: 3.31 ಕೋಟಿ ರೂಪಾಯಿಗೆ ಜಮೀನು ಖರೀದಿಸಿದ ನಟ
ಅಮಿತಾಭ್ ಬಚ್ಚನ್ ಹಾದಿಯಲ್ಲೇ ರಣಬೀರ್ ಕಪೂರ್ ಕೂಡ ಸಾಗುತ್ತಿದ್ದಾರೆ. ಅಯೋಧ್ಯೆಯ ಆಕರ್ಷಣೆಗೆ ಮಾರುಹೋಗಿರುವ ರಣಬೀರ್ ಅಲ್ಲಿನ ಐಷಾರಾಮಿ ರಿಯಲ್ ಎಸ್ಟೇಟ್ ಯೋಜನೆಯಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದಾರೆ. ರಾಮಮಂದಿರ ನಿರ್ಮಾಣದ ಬಳಿಕ ಅಯೋಧ್ಯೆಯು ದೇಶದ ಪ್ರಮುಖ ಪ್ರವಾಸಿ ಮತ್ತು ರಿಯಲ್ ಎಸ್ಟೇಟ್ ಕೇಂದ್ರವಾಗಿ ಮಾರ್ಪಟ್ಟಿದೆ.
- Madan Kumar
- Updated on: May 14, 2026
- 8:12 pm
ನಾವು ದೂರಾಗುತ್ತಿದ್ದೇವೆ: ಡಿವೋರ್ಸ್ ವಿಷಯ ಒಪ್ಪಿಕೊಂಡ ಮೌನಿ ರಾಯ್, ಸೂರಜ್ ನಂಬಿಯಾರ್
ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಅವರ ದಾಂಪತ್ಯ ಜೀವನ ಅಂತ್ಯವಾಗಿದೆ. ನಾಲ್ಕು ವರ್ಷಗಳ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಈ ಜೋಡಿ ವಿದಾಯ ಹೇಳಿದೆ. ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಅವರು ಪರಸ್ಪರ ಅನ್ಫಾಲೋ ಮಾಡಿಕೊಂಡಿದ್ದರು. ಅದನ್ನು ಗಮನಿಸಿದ ಅಭಿಮಾನಿಗಳಿಗೆ ಅನುಮಾನ ಶುರುವಾಗಿತ್ತು.
- Madan Kumar
- Updated on: May 14, 2026
- 7:21 pm
ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು
ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಅವರಿಗೆ ಸತತ ಸೋಲು ಎದುರಾಗಿದೆ. ಹಾಗಿದ್ದರೂ ಅವರಿಗೆ ಅವಕಾಶಗಳು ಸಿಗುತ್ತಿವೆ. ಈ ಅವಕಾಶಗಳಿಗೆ ನೆಪೋಟಿಸಂ ಕಾರಣ ಎಂದು ಅವರು ಒಪ್ಪಿಕೊಂಡಿದ್ದಾರೆ. ತಾನು ಆಮಿರ್ ಖಾನ್ ಮಗ ಎಂಬ ಕಾರಣದಿಂದಲೇ ಹೊಸ ಅವಕಾಶ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ.
- Madan Kumar
- Updated on: May 14, 2026
- 6:48 pm
ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2018ರ 'ಜೀರೋ' ಬಳಿಕ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ತಮ್ಮ ಇಬ್ಬರು ಮಕ್ಕಳಾದ ವಮಿಕಾ ಮತ್ತು ಅಕಾಯ್ ಪಾಲನೆಯಲ್ಲಿ ತೊಡಗಿಸಿಕೊಂಡಿರುವ ಅವರು, ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಈ ಹಿಂದೆ ನೀಡಿದ್ದ ಹೇಳಿಕೆಯಂತೆ, ಮದುವೆ-ಮಕ್ಕಳ ನಂತರ ಸಂಸಾರಕ್ಕೆ ಗಮನ ನೀಡುತ್ತಿದ್ದಾರೆ. ಅವರ 'ಚಕ್ದಾ ಎಕ್ಸ್ಪ್ರೆಸ್' ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
- Shreelaxmi H
- Updated on: May 14, 2026
- 7:55 am
ಆಲಿಯಾ ಭಟ್ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅವಮಾನ? ವೈರಲ್ ಆಯ್ತು ವಿಡಿಯೋ
ಫ್ರಾನ್ಸ್ನ ಕಾನ್ ಸಿನಿಮೋತ್ಸವದಲ್ಲಿ ಆಲಿಯಾ ಭಟ್ ರೆಡ್ ಕಾರ್ಪೆಟ್ ಮೇಲೆ ನಡೆದರು. ಆದರೆ, ಅವರನ್ನು ಛಾಯಾಗ್ರಾಹಕರು ಗುರುತಿಸಲಿಲ್ಲ ಎಂಬ ವಿಡಿಯೋ ವೈರಲ್ ಆಗಿದೆ. ಇದರಿಂದ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಕೆಲವರು ಇದನ್ನು ಭಾರತೀಯ ಚಿತ್ರರಂಗಕ್ಕೆ ಮುಜುಗರ ಎಂದಿದ್ದರೆ, ಅಭಿಮಾನಿಗಳು ಇದನ್ನು ಸಮರ್ಥಿಸಿಕೊಂಡಿದ್ದಾರೆ.
- Rajesh Duggumane
- Updated on: May 14, 2026
- 7:01 am