Bollywood

Bollywood

ಭಾರತದ ಸಮೃದ್ಧ ಚಲನಚಿತ್ರೋದ್ಯಮಗಳಲ್ಲಿ ಬಾಲಿವುಡ್ ಕೂಡ ಒಂದು. ಈವರೆಗೆ ಹಲವು ಸೂಪರ್ ಹಿಟ್ ಚಿತ್ರಗಳು ಇಲ್ಲಿ ಸಿದ್ಧಗೊಳ್ಳುತ್ತವೆ. ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಆಗುತ್ತದೆ. 1930ರ ಸಂದರ್ಭದಲ್ಲಿ ಬಾಲಿವುಡ್ ಆರಂಭ ಆಯಿತು. ನಂತರ ಜಾಗತಿಕವಾಗಿ ಅತಿದೊಡ್ಡ ಮತ್ತು ಅತ್ಯಂತ ಪ್ರಭಾವಶಾಲಿ ಚಿತ್ರರಂಗವಾಗಿ ಬೆಳೆಯಿತು. ಬಾಲಿವುಡ್ನಲ್ಲಿ ಈವರೆಗೆ ಎಲ್ಲಾ ರೀತಿಯ ಸಿನಿಮಾಗಳು ಸಿದ್ಧಗೊಂಡಿವೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಐಶ್ವರ್ಯ ರೈ ಮತ್ತು ಅಮಿತಾಭ್ ಬಚ್ಚನ್ ಅವರಂತಹ ಅಪ್ರತಿಮ ನಟರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಬಾಲಿವುಡ್ನಲ್ಲಿ ರೊಮ್ಯಾಂಟಿಕ್ ಡ್ರಾಮಾದಿಂದ ಹಿಡಿದು ಆ್ಯಕ್ಷನ್ ಪ್ಯಾಕ್ಡ್ ಬ್ಲಾಕ್‌ಬಸ್ಟರ್‌ಗಳವರೆಗೆ ವೈವಿಧ್ಯಮಯ ಶ್ರೇಣಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಬಾಲಿವುಡ್‌ನ ಪ್ರಭಾವವು ಮನರಂಜನೆಯನ್ನು ಮೀರಿ ವಿಸ್ತರಿಸಿದೆ.

ಇನ್ನೂ ಹೆಚ್ಚು ಓದಿ

‘ಇನ್ಮೇಲೆ ಎಲ್ಲ ನಟರನ್ನೂ ಪ್ರೀತಿಸುತ್ತೇನೆ’: ವಿವಾದದ ಬಳಿಕ ಅರ್ಷದ್ ವಾರ್ಸಿ ನಿರ್ಧಾರ

ಪ್ರಭಾಸ್​ ಬಗ್ಗೆ ಅರ್ಷದ್ ವಾರ್ಸಿ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿತ್ತು. ಆ ಬಳಿಕ ಅವರು ಎಚ್ಚೆತ್ತುಕೊಂಡಿದ್ದಾರೆ. ಇನ್ಮುಂದೆ ಎಲ್ಲ ನಟರನ್ನು ತಾವು ಪ್ರೀತಿಸುವುದಾಗಿ ಅರ್ಷದ್ ತಿಳಿಸಿದ್ದಾರೆ. ಜನರು ಈ ಮೊದಲು ಟ್ರೋಲ್ ಮಾಡಲು ಆರಂಭಿಸಿದಾಗ ಸೋಶಿಯಲ್ ಮೀಡಿಯಾದಲ್ಲಿ ಅರ್ಷದ್ ವಾರ್ಸಿ ಅವರು ಕಮೆಂಟ್ ಆಯ್ಕೆಯನ್ನು ತೆಗೆದುಹಾಕಿದ್ದರು.

ಜೀವ ಬೆದರಿಕೆ ನಡುವೆಯೂ ‘ಸಿಂಘಂ ಅಗೇನ್’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ ಸಲ್ಮಾನ್ ಖಾನ್

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ ಇದೆ ಎಂಬ ಕಾರಣದಿಂದ ಸಲ್ಮಾನ್ ಖಾನ್ ಅವರು ಕೆಲಸಗಳನ್ನು ನಿಲ್ಲಿಸಿಲ್ಲ. ‘ಸಿಂಘಂ ಅಗೇನ್’ ಸಿನಿಮಾದ ಶೂಟಿಂಗ್​ನಲ್ಲಿ ಅವರು ಭಾಗಿ ಆಗಿದ್ದಾರೆ. ಹಾಗಾಗಿ ಅವರ ಅತಿಥಿ ಪಾತ್ರ ಈ ಸಿನಿಮಾದಲ್ಲಿ ಇರಲಿದೆ ಎಂಬ ಮಾಹಿತಿ ಸಿಕ್ಕಿದೆ. ಬಾಲಿವುಡ್​ನ ಅನೇಕರು ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ.

‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಲ್ಮಾನ್ ಖಾನ್ ಅವರು ‘ಸಿಂಘಂ ಅಗೇನ್’ ಸಿನಿಮಾದಲ್ಲಿ ನಟಿಸಬೇಕಿತ್ತು. ಆದರೆ ನಿರ್ದೇಶಕರ ಪ್ಲ್ಯಾನ್ ಪ್ರಕಾರ ಶೂಟಿಂಗ್​ ನಡೆದಿಲ್ಲ. ಸಿನಿಮಾವನ್ನು ಸೆನ್ಸಾರ್​ಗೆ ಕಳಿಸುವ ಗಡಿಬಿಡಿಯಲ್ಲಿ ಇದ್ದ ಡೈರೆಕ್ಟರ್​ ರೋಹಿತ್ ಶೆಟ್ಟಿ ಅವರು ಸಲ್ಮಾನ್​ ಖಾನ್​ಗಾಗಿ ಕಾಯಲು ಸಾಧ್ಯವಾಗಿಲ್ಲ.

ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಕುರಿತು ಬರಲಿದೆ ವೆಬ್ ಸಿರೀಸ್

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ನಿಧನದ ಬಳಿಕ ಲಾರೆನ್ಸ್ ಬಿಷ್ಣೋಯ್ ಬಗ್ಗೆ ಹತ್ತು ಹಲವು ಸುದ್ದಿಗಳು ಕೇಳಿಬರುತ್ತಿವೆ. ಈ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಹೊತ್ತುಕೊಂಡಿದ್ದಾರೆ. ಸಲ್ಮಾನ್​ ಖಾನ್​ ಮೇಲೂ ಇದೇ ಗ್ಯಾಂಗ್ ಕಣ್ಣಿಟ್ಟಿದೆ. ಭಾರಿ ಕುಖ್ಯಾತಿ ಗಳಿಸಿರುವ ಲಾರೆನ್ಸ್ ಬಿಷ್ಣೋಯ್ ಜೀವನದ ಮೇಲೆ ವೆಬ್ ಸಿರೀಸ್ ಮಾಡಲು ಸಿದ್ಧತೆ ನಡೆದಿದೆ.

ಚುನಾವಣೆಯಲ್ಲಿ ಸೋತ ಸ್ಮೃತಿ ಇರಾನಿ ಮತ್ತೆ ಧಾರಾವಾಹಿಯಲ್ಲಿ ನಟಿಸುತ್ತಾರಾ? ಸಿಕ್ತು ಸ್ಪಷ್ಟನೆ

ಕಿರುತೆರೆಯಿಂದ ಜನಪ್ರಿಯತೆ ಪಡೆದ ಸ್ಮೃತಿ ಇರಾನಿ ಅವರು ಹಲವು ವರ್ಷಗಳ ಗ್ಯಾಪ್ ಬಳಿಕ ಮತ್ತೆ ಸೀರಿಯಲ್​ನಲ್ಲಿ ನಟಿಸುತ್ತಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ‘ಅನುಪಮಾ’ ಧಾರಾವಾಹಿಯಲ್ಲಿ ಸ್ಮೃತಿ ಇರಾನಿ ಅವರು ಒಂದು ಅತಿಥಿ ಪಾತ್ರ ನಿಭಾಯಿಸುತ್ತಾರೆ ಎಂಬ ಗಾಸಿಪ್ ಹಬ್ಬಿದೆ. ಅದಕ್ಕೆ ಸ್ವತಃ ಸ್ಮೃತಿ ಇರಾನಿ ಅವರು ಪ್ರತಿಕ್ರಿಯಿಸಿದ್ದಾರೆ.

‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಹಿಂದೆ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಸಲ್ಮಾನ್​ ಖಾನ್​ಗೆ ಬಾಬಾ ಸಿದ್ಧಿಕಿ ಆಪ್ತವಾಗಿದ್ದರು. ಆ ಕಾರಣದಿಂದಲೇ ಹತ್ಯೆ ನಡೆಯಿತು ಎಂಬ ಮಾತು ಕೇಳಿಬಂದಿದೆ. ಈ ಎಲ್ಲ ವಿಚಾರಗಳ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಲು ಶುರು ಮಾಡಿದ್ದಾರೆ.

ಸೊಂಟ ನೋವು ಮಾಡಿಕೊಂಡ ರಕುಲ್ ಪ್ರೀತ್ ಸಿಂಗ್; ಪರಿಸ್ಥಿತಿ ಗಂಭೀರ: ಕಾರಣ ಏನು?

ರಕುಲ್ ಪ್ರೀತ್ ಸಿಂಗ್ ಅವರು ಅತಿಯಾದ ಭಾರ ಎತ್ತಲು ಪ್ರಯತ್ನಿಸಿ ಸೊಂಟದ ನೋವು ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ರಕುಲ್ ಅವರು ಹಾಸಿಗೆ ಹಿಡಿದಿದ್ದಾರೆ. ಸದ್ಯಕ್ಕಂತೂ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಕೇಳಿಬಂದಿದೆ. ನೋವು ಕಾಣಿಸಿಕೊಂಡ ನಂತರವೂ ಅವರು ನಿರ್ಲಕ್ಷ್ಯ ಮಾಡಿದ್ದರಿಂದ ಸಮಸ್ಯೆ ಉಲ್ಬಣ ಆಗಿದೆ.

ಬಾಬಾ ಸಿದ್ಧಿಕಿ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್ ಕಾಣಿಸಿಕೊಂಡಿಲ್ಲ ಯಾಕೆ?

ಶಾರುಖ್​ ಖಾನ್​ ಅವರು ಸಲ್ಮಾನ್ ಖಾನ್ ಜೊತೆ ಬಾಬಾ ಸಿದ್ಧಿಕಿಯ ಮನೆಗೆ ಹೋಗಿ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದು ಬಹಳ ಸುದ್ದಿ ಆಗಿತ್ತು. ಅಷ್ಟರಮಟ್ಟಿಗೆ ಅವರು ಬಾಬಾ ಸಿದ್ಧಿಕಿ ಜೊತೆ ಆಪ್ತರಾಗಿದ್ದರು. ಆದರೆ ಈಗ ಬಾಬಾ ಸಿದ್ಧಿಕಿಯ ಅಂತ್ಯಕ್ರಿಯೆಗೆ ಶಾರುಖ್ ಖಾನ್ ಬಂದಿಲ್ಲ. ಯಾಕೆ ಎಂಬ ಬಗ್ಗೆ ಬಿ-ಟೌನ್​ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ.

ರಣಬೀರ್​ ಕಪೂರ್​ ಹೊಸ ಲುಕ್ ವೈರಲ್; ‘ಧೂಮ್​ 4’ ಸಿನಿಮಾ ಟಾಕ್​ ಶುರು

ಒಂದೆಡೆ ‘ಧೂಮ್​ 4’ ಸಿನಿಮಾಗೆ ತಯಾರಿ ನಡೆಯುತ್ತಿದೆ. ಇನ್ನೊಂದೆಡೆ ರಣಬೀರ್​ ಕಪೂರ್ ಅವರ ಹೊಸ ಲುಕ್​ ವೈರಲ್​ ಆಗುತ್ತಿದೆ. ‘ಧೂಮ್​ 4’ ಸಿನಿಮಾ ಸಲುವಾಗಿಯೇ ಅವರು ಹೊಸ ಗೆಟಪ್​ ಮಾಡಿಕೊಂಡಿದ್ದಾರೆ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ. ‘ಅನಿಮಲ್’ ಸಕ್ಸಸ್ ಬಳಿಕ ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ನಟ ಸಲ್ಮಾನ್​ ಖಾನ್​ಗೆ ವೈ ಪ್ಲಸ್​ ಭದ್ರತೆ

ನಟ ಸಲ್ಮಾನ್​ ಖಾನ್​ ಅವರಿಗೆ ಜೀವ ಬೆದರಿಕೆ ಇದೆ. ಬಾಬಾ ಸಿದ್ಧಿಕಿ ಕೊಲೆ ಬಳಿಕ ಆತಂಕ ಹೆಚ್ಚಿದೆ. ಆದ್ದರಿಂದ ಸಲ್ಮಾನ್​ ಖಾನ್​ ಅವರಿಗೆ ವೈ ಪ್ಲಸ್​ ಭದ್ರತೆ ಒದಗಿಸಲಾಗುತ್ತಿದೆ. ಎಷ್ಟೇ ಬೆದರಿಕೆ ಇದ್ದರೂ ಕೂಡ ಸಲ್ಮಾನ್​ ಖಾನ್​ ಅವರು ಬಾಬಾ ಸಿದ್ಧಿಕಿ ಅವರ ಫ್ಯಾಮಿಲಿ ಜೊತೆ ನಿಂತಿದ್ದಾರೆ. ಕಷ್ಟದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಸಲ್ಲು ಸಹಾಯ ಮಾಡುತ್ತಿದ್ದಾರೆ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ