AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer

Cancer

ಕ್ಯಾನ್ಸರ್ ಎನ್ನುವುದು ಅಸಹಜ ಜೀವಕೋಶದ ಬೆಳವಣಿಗೆಯನ್ನು ಒಳಗೊಂಡಿರುವ ರೋಗಗಳ ಗುಂಪಾಗಿದ್ದು, ಇದು ದೇಹದ ಇತರ ಭಾಗಗಳಿಗೆ ಆಕ್ರಮಣ ಮಾಡುವ ಅಥವಾ ಹರಡುವ ಸಾಮರ್ಥ್ಯವನ್ನು ಹೊಂದಿದೆ. ಗೆಡ್ಡೆಗಳ ಮೂಲಕ ಕ್ಯಾನ್ಸರ್ ನಮ್ಮ ದೇಹವನ್ನು ಆವರಿಸಿಕೊಳ್ಳುತ್ತದೆ. ಕ್ಯಾನ್ಸರ್ ರೋಗ ಆರಂಭಿಕ ಹಂತದಲ್ಲಿ ಪತ್ತೆಯಾದರೆ ಅದನ್ನು ಗುಣಪಡಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದರೆ, ಕ್ಯಾನ್ಸರ್​ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಜನರಿಗೆ ಕ್ಯಾನ್ಸರ್ ರೋಗಲಕ್ಷಣದ ಬಗ್ಗೆ ಜನರಿಗೆ ಹೆಚ್ಚಿನ ತಿಳಿವಳಿಕೆ ಇರದಿರುವುದು ಒಂದು ಮುಖ್ಯ ಕಾರಣ. ಕ್ಯಾನ್ಸರ್​ನ ಸಂಭವನೀಯ ರೋಗಲಕ್ಷಣಗಳು ಗಡ್ಡೆ, ಅಸಹಜ ರಕ್ತಸ್ರಾವ, ದೀರ್ಘಕಾಲದ ಕೆಮ್ಮು, ಅತಿಯಾಗಿ ತೂಕ ಇಳಿಯುವುದು, ಮಲವಿಸರ್ಜನೆಯಲ್ಲಿ ಸಮಸ್ಯೆ ಇತ್ಯಾದಿ. 100 ಕ್ಕೂ ಹೆಚ್ಚು ರೀತಿಯ ಕ್ಯಾನ್ಸರ್‌ಗಳು ಮನುಷ್ಯರ ಮೇಲೆ ಪರಿಣಾಮ ಬೀರುತ್ತವೆ.ತಂಬಾಕು ಸೇವನೆಯು ಸುಮಾರು 22%ರಷ್ಟು ಕ್ಯಾನ್ಸರ್ ಸಂಬಂಧಿತ ಸಾವುಗಳಿಗೆ ಕಾರಣವಾಗಿದೆ.

ಇನ್ನೂ ಹೆಚ್ಚು ಓದಿ

ಪುಟಾಣಿ ಮಕ್ಕಳಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್: ಆಘಾತಕಾರಿ ಅಂಕಿಅಂಶ ಬಯಲು

ಕರ್ನಾಟಕದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ವರ್ಷ 1,889 ಮಕ್ಕಳು ಬಾಧಿತರಾಗಿ, 312 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರೊಂದರಲ್ಲೇ 349 ಪ್ರಕರಣಗಳು ದಾಖಲಾಗಿವೆ. ಕಿದ್ವಾಯಿ ಆಸ್ಪತ್ರೆಯಲ್ಲಿ ನಿತ್ಯ 120ಕ್ಕೂ ಹೆಚ್ಚು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳ ಆರೋಗ್ಯ ಜಾಗೃತಿ ಹಾಗೂ ಹೆಚ್ಚುವರಿ ಸರ್ಕಾರಿ ಕ್ಯಾನ್ಸರ್ ಆಸ್ಪತ್ರೆಗಳ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಗೃಹ ಆರೋಗ್ಯದಡಿ ಸ್ಕ್ರೀನಿಂಗ್ ಮಾಡಿದಾಗ ಹೊರಬಿತ್ತು ಆಘಾತಕಾರಿ ಮಾಹಿತಿ: 2 ತಿಂಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪತ್ತೆ

ಕ್ಯಾನ್ಸರ್ ಎಂಬ ಕೇಳಿದರೆ ಸಾಕು, ಒಂದು ರೀತಿಯಲ್ಲಿ ಎಲ್ಲರೂ ಬೆಚ್ಚಿ ಬೀಳುತ್ತೇವೆ. ವಯಸ್ಕರು, ವೃದ್ದರು, ಪುಟ್ಟಪುಟ್ಟ ಮಕ್ಕಳು ಎಂಬ ಭೇದಭಾವವಿಲ್ಲದೇ ಪ್ರತಿವರ್ಷವು ಸಾವಿರಾರು ಮಂದಿ ಕ್ಯಾನ್ಸರ್​‌ಗೆ ತುತ್ತಾಗುತ್ತಿದ್ದು, ಅದರಲ್ಲೂ ಬೆಂಗಳೂರಂತೂ ಕ್ಯಾನ್ಸರ್ ಹಾಟ್‌ಸ್ಪಾಟ್ ಆಗಿ ಬದಲಾಗುತಿದೆ. ‘ಗೃಹ ಆರೋಗ್ಯ’ ಯೋಜನೆ ಅಡಿ ಸ್ಕ್ರೀನಿಂಗ್ ಮಾಡಿದಾಗ ಕ್ಯಾನ್ಸರ್ ಬಗ್ಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಚಿಕಿತ್ಸೆ ನೀಡಿದರೂ ಹರೀಶ್ ರಾಯ್ ಬದುಕಲಿಲ್ಲ ಯಾಕೆ? ಪೂರ್ತಿ ಮಾಹಿತಿ ನೀಡಿದ ವೈದ್ಯರು

ನಟ ಹರೀಶ್ ರಾಯ್ ಅವರು ಕ್ಯಾನ್ಸರ್ ಕಾಯಿಲೆಯಿಂದ ನಿಧನರಾಗಿದ್ದಾರೆ. ಇದರಿಂದ ಚಿತ್ರರಂಗಕ್ಕೆ ನೋವಾಗಿದೆ. 3 ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಕಳೆದ ಎರಡು-ಮೂರು ತಿಂಗಳಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಆ ಬಗ್ಗೆ ವೈದ್ಯರು ‘ಟಿವಿ9’ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ನಿಧನಕ್ಕೆ ಕಾರಣವನ್ನು ತಿಳಿಸಿದ್ದಾರೆ.

ನಟ ಹರೀಶ್ ರಾಯ್ ನಿಧನ: ಉಡುಪಿಯ ಅಂಬಲಪಾಡಿಯಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಅವರು ಇಂದು (ನವೆಂಬರ್ 6) ಕ್ಯಾನ್ಸರ್​​ನಿಂದ ನಿಧನರಾಗಿದ್ದಾರೆ. ಅವರು ಮೂಲತಃ ಉಡುಪಿಯವರಾಗಿದ್ದು, ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು. ಬೆಂಗಳೂರಿನ ನಿವಾಸದಿಂದ ಮಧ್ಯಾಹ್ನದ ನಂತರ ಹರೀಶ್ ರಾಯ್ ಅವರ ಪಾರ್ಥಿವ ಶರೀರ ಉಡುಪಿಗೆ ರವಾನೆ ಆಗಲಿದೆ.

ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ: ಆಸ್ಪತ್ರೆ ಎದುರು ಪತ್ನಿ, ಮಗನ ಕಣ್ಣೀರು

ಹಲವು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ಹರೀಶ್ ರಾಯ್ ಅವರು ಕೊನೆಯುಸಿರು ಎಳೆದಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಇಂದು (ನವೆಂಬರ್ 6) ನಿಧನರಾಗಿದ್ದಾರೆ. ಅವರ ಕುಟುಂಬದವರು ಶೋಕದಲ್ಲಿ ಮುಳುಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಕರುಳಿನ ಕ್ಯಾನ್ಸರ್: ರಷ್ಯಾದಿಂದ ಲಸಿಕೆ ಸಿದ್ಧ; ನಿರುಪದ್ರವಿ ವೈರಸ್ ಬಳಸಿ ಕ್ಯಾನ್ಸರ್ ಕೋಶಗಳ ನಾಶ ಮಾಡಬಲ್ಲ ಪ್ರಬಲ ವ್ಯಾಕ್ಸಿನ್

Russian scientists develop EnteroMix vaccine against Colon Cancer: ಕರುಳಿನ ಕ್ಯಾನ್ಸರ್ ರೋಗಕ್ಕೆ ರಷ್ಯನ್ ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಪಡಿಸಿದ್ದಾರೆ. ಪ್ರೀಕ್ಲಿನಿಕಲ್ ಟ್ರಯಲ್​ಗಳೆಲ್ಲವೂ ಯಶಸ್ವಿಯಾಗಿವೆ. ಮನುಷ್ಯರ ಮೇಲೆ ಬಳಕೆಗೆ ಇದು ಸಿದ್ಧವಾಗಿದೆ. ಈ ಪ್ರಯೋಗ ಯಶಸ್ವಿಯಾದಲ್ಲಿ ಕ್ಯಾನ್ಸರ್ ರೋಗಿಗಳಿಗೆ ನೀಡಬಹುದು. ರಷ್ಯನ್ ವಿಜ್ಞಾನಿಗಳ ಈ ಯಶಸ್ಸು ಕ್ಯಾನ್ಸರ್ ರೋಗಚಿಕಿತ್ಸೆಯಲ್ಲಿ ಗೇಮ್ ಚೇಂಜರ್ ಎನಿಸಬಹುದು.

ನಾಯಿ ಮೂಸಿದರೆ ಮನುಷ್ಯರ ಕಾಯಿಲೆ ಪತ್ತೆ; ಬೆಂಗಳೂರಿನ ಸ್ಟಾರ್ಟಪ್​ನಿಂದ ಹೊಸ ರೋಗಪತ್ತೆ ಸಾಧನ ಆವಿಷ್ಕಾರ

Bengaluru startup Dognosis uses dogs to detect diseases in humans: ನಿಮ್ಮ ದೇಹದಲ್ಲಿರುವ ರೋಗಗಳನ್ನು ನಾಯಿಗಳು ಗುರುತಿಸಬಲ್ಲವು. ಅವುಗಳಿಗೆ ಅಂಥ ತೀಕ್ಷ್ಣ ವಾಸನಾ ಗ್ರಹಿಕೆ ಸಾಮರ್ಥ್ಯ ಇದೆ. ಬೆಂಗಳೂರಿನ ಡಾಗ್ನಾಸಿಸ್ ಎನ್ನುವ ಸ್ಟಾರ್ಟಪ್​ವೊಂದು ಈ ಶ್ವಾನ ಶಕ್ತಿ ಬಳಸಿ ಹೊಸ ಡಯಾಗ್ನಾಸಿಸ್ ವಿಧಾನ ಆವಿಷ್ಕರಿಸಿದ್ಧಾರೆ. ವಿಶೇಷ ತರಬೇತಿ ಪಡೆದ ಶ್ವಾನದ ಹಾಗೂ ಎಐ ತಂತ್ರಜ್ಞಾನದ ನೆರವಿನಿಂದ ರೋಗ ಪತ್ತೆ ಮಾಡುತ್ತದೆ ಡಾಗ್ನಾಸಿಸ್.

ತಮಿಳು ಚಿತ್ರರಂಗದ ಖ್ಯಾತ ನಟ ಮದನ್ ಬಾಬ್ ನಿಧನ; ಕ್ಯಾನ್ಸರ್​ನಿಂದ ವಿಧಿವಶ

ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿದ್ದ ನಟ ಮದನ್ ಬಾಬ್ ಅವರು ಚೈನ್ನೈನಲ್ಲಿ ಶನಿವಾರ (ಆ.3) ನಿಧನರಾದರು. ನಟನೆ ಮಾತ್ರವಲ್ಲದೇ ಸಂಗೀತದಲ್ಲಿ ಕೂಡ ಅವರಿಗೆ ಆಸಕ್ತಿ ಇತ್ತು. ಮದನ್ ಬಾಬ್ ಅವರ ನಿಧನದಿಂದ ತಮಿಳು ಚಿತ್ರಕ್ಕೆ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರಲಾಗುತ್ತಿದೆ. ಹಲವು ಸೆಲೆಬ್ರಿಟಿಗಳು ಕಂಬಿ ಮಿಡಿಯುತ್ತಿದ್ದಾರೆ.

ಕ್ಯಾನ್ಸರ್ ರೋಗಿಗಳಿಗೆ ಗುಡ್​ನ್ಯೂಸ್ ನೀಡಿದ ಕರ್ನಾಟಕ ಆರೋಗ್ಯ ಇಲಾಖೆ

ದಿನದಿಂದ ದಿನಕ್ಕೆ ಕ್ಯಾನ್ಸರ್​ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಕರ್ನಾಟಕದಲ್ಲಿ ಪ್ರತಿ ವರ್ಷ 70 ಸಾವಿರ ಹೊಸ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಕಳೆದ ಬಜೆಟ್​ನಲ್ಲಿ ಜಿಲ್ಲಾ ಕೀಮೋಥೆರಪಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿತ್ತು. ಅದರಂತೆ ಸರ್ಕಾರ ನಡೆದುಕೊಂಡಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆ ಸಂಬಂಧ ಮಹತ್ವದ ತೀರ್ಮಾನ ಕೈಗೊಂಡಿದೆ.

ಅರ್ಚನಾ ಉಡುಪ ಆರೋಗ್ಯದ ಬಗ್ಗೆ ಅಪಪ್ರಚಾರ; ಕ್ಯಾನ್ಸರ್ ಕುರಿತು ಗಾಯಕಿ ಸ್ಪಷ್ಟನೆ

‘ದಯವಿಟ್ಟು ಪೂರ್ತಿ ವಿಷಯವನ್ನು ತಿಳಿದುಕೊಳ್ಳದೇ, ಸೋಶಿಯಲ್ ಮೀಡಿಯಾದಲ್ಲಿ ಅರ್ಧಂಬರ್ಧ ನೋಡಿಕೊಂಡು ಏನೇನೋ ಊಹೆ ಮಾಡಿಕೊಳ್ಳಬೇಡಿ. ಇದರಿಂದ ಯಾರೋ ಒಬ್ಬರ ವೃತ್ತಿ ಜೀವನ ಮತ್ತು ಖಾಸಗಿ ಜೀವನಕ್ಕೆ ಘಾಸಿ ಆಗುವುದು ತಪ್ಪುತ್ತದೆ’ ಎಂದು ಅರ್ಚನಾ ಉಡುಪ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

CT Scan: ಪದೇ ಪದೇ ಸಿಟಿ ಸ್ಕ್ಯಾನಿಂಗ್ ಮಾಡಿಸಿಕೊಂಡರೆ ಬರಬಹುದು ಈ ಮಾರಕ ರೋಗ!

ಸಂಶೋಧನಾ ವರದಿಯೊಂದರಲ್ಲಿ ಸಿಟಿ ಸ್ಕ್ಯಾನ್ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂಬ ಮಾಹಿತಿ ಹೊರಬಿದ್ದಿದೆ. ಹಲವಾರು ಬಾರಿ ಈ ಸ್ಕ್ಯಾನ್ ಮಾಡಿಸಿಕೊಳ್ಳುವ ಜನರು ಅಪಾಯದಲ್ಲಿದ್ದಾರೆ ಎಂದು ಈ ಸಂಶೋಧನೆ ಹೇಳುತ್ತಿದೆ. ಆದರೆ ರೋಗಗಳನ್ನು ಪತ್ತೆ ಹಚ್ಚುವ ಸಿಟಿ ಸ್ಕ್ಯಾನ್ ಕ್ಯಾನ್ಸರ್ ಗೆ ಹೇಗೆ ಕಾರಣವಾಗುತ್ತದೆ? ಸಿಟಿ ಸ್ಕ್ಯಾನ್ ಮಾಡಬಾರದೇ? ಈ ಬಗ್ಗೆ ಡಾ. ಜುಗಲ್ ಕಿಶೋರ್ ನೀಡಿರುವ ಮಾಹಿತಿ ಇಲ್ಲಿದೆ.

ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ನನಗಾಗಿ ಪ್ರಾರ್ಥನೆ ಮಾಡಿದ್ದರು: ಶಿವಣ್ಣ

ನಟ ಶಿವರಾಜ್​ಕುಮಾರ್​ ಕ್ಯಾನ್ಸರ್ ಗೆದ್ದು ಬಂದಿದ್ದಾರೆ. ಆಪರೇಷನ್ ಆದ ಬಳಿಕ ಅವರು ‘ಟಿವಿ9’ ಜತೆ ಮಾತನಾಡಿದ್ದಾರೆ. ಈ ಸಂದರ್ಶನದಲ್ಲಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಆದಷ್ಟು ಬೇಗ ಗುಣಮುಖರಾಗಲಿ ಅಂತ ಬೇರೆ ನಟರ ಫ್ಯಾನ್ಸ್ ಕೂಡ ಪ್ರಾರ್ಥನೆ ಮಾಡಿದ್ದರು. ಆ ಬಗ್ಗೆ ಶಿವರಾಜ್​ಕುಮಾರ್​ ಮಾತನಾಡಿದ್ದಾರೆ.

IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌