
Cancer
ಕ್ಯಾನ್ಸರ್ ಎನ್ನುವುದು ಅಸಹಜ ಜೀವಕೋಶದ ಬೆಳವಣಿಗೆಯನ್ನು ಒಳಗೊಂಡಿರುವ ರೋಗಗಳ ಗುಂಪಾಗಿದ್ದು, ಇದು ದೇಹದ ಇತರ ಭಾಗಗಳಿಗೆ ಆಕ್ರಮಣ ಮಾಡುವ ಅಥವಾ ಹರಡುವ ಸಾಮರ್ಥ್ಯವನ್ನು ಹೊಂದಿದೆ. ಗೆಡ್ಡೆಗಳ ಮೂಲಕ ಕ್ಯಾನ್ಸರ್ ನಮ್ಮ ದೇಹವನ್ನು ಆವರಿಸಿಕೊಳ್ಳುತ್ತದೆ. ಕ್ಯಾನ್ಸರ್ ರೋಗ ಆರಂಭಿಕ ಹಂತದಲ್ಲಿ ಪತ್ತೆಯಾದರೆ ಅದನ್ನು ಗುಣಪಡಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದರೆ, ಕ್ಯಾನ್ಸರ್ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಜನರಿಗೆ ಕ್ಯಾನ್ಸರ್ ರೋಗಲಕ್ಷಣದ ಬಗ್ಗೆ ಜನರಿಗೆ ಹೆಚ್ಚಿನ ತಿಳಿವಳಿಕೆ ಇರದಿರುವುದು ಒಂದು ಮುಖ್ಯ ಕಾರಣ. ಕ್ಯಾನ್ಸರ್ನ ಸಂಭವನೀಯ ರೋಗಲಕ್ಷಣಗಳು ಗಡ್ಡೆ, ಅಸಹಜ ರಕ್ತಸ್ರಾವ, ದೀರ್ಘಕಾಲದ ಕೆಮ್ಮು, ಅತಿಯಾಗಿ ತೂಕ ಇಳಿಯುವುದು, ಮಲವಿಸರ್ಜನೆಯಲ್ಲಿ ಸಮಸ್ಯೆ ಇತ್ಯಾದಿ. 100 ಕ್ಕೂ ಹೆಚ್ಚು ರೀತಿಯ ಕ್ಯಾನ್ಸರ್ಗಳು ಮನುಷ್ಯರ ಮೇಲೆ ಪರಿಣಾಮ ಬೀರುತ್ತವೆ.ತಂಬಾಕು ಸೇವನೆಯು ಸುಮಾರು 22%ರಷ್ಟು ಕ್ಯಾನ್ಸರ್ ಸಂಬಂಧಿತ ಸಾವುಗಳಿಗೆ ಕಾರಣವಾಗಿದೆ.
ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ನನಗಾಗಿ ಪ್ರಾರ್ಥನೆ ಮಾಡಿದ್ದರು: ಶಿವಣ್ಣ
ನಟ ಶಿವರಾಜ್ಕುಮಾರ್ ಕ್ಯಾನ್ಸರ್ ಗೆದ್ದು ಬಂದಿದ್ದಾರೆ. ಆಪರೇಷನ್ ಆದ ಬಳಿಕ ಅವರು ‘ಟಿವಿ9’ ಜತೆ ಮಾತನಾಡಿದ್ದಾರೆ. ಈ ಸಂದರ್ಶನದಲ್ಲಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಆದಷ್ಟು ಬೇಗ ಗುಣಮುಖರಾಗಲಿ ಅಂತ ಬೇರೆ ನಟರ ಫ್ಯಾನ್ಸ್ ಕೂಡ ಪ್ರಾರ್ಥನೆ ಮಾಡಿದ್ದರು. ಆ ಬಗ್ಗೆ ಶಿವರಾಜ್ಕುಮಾರ್ ಮಾತನಾಡಿದ್ದಾರೆ.
- Madan Kumar
- Updated on: Mar 5, 2025
- 9:12 pm
ಬೆಂಗಳೂರಿನಲ್ಲಿ ಆಪರೇಷನ್ ಇಡ್ಲಿ: ಹೋಟೆಲ್ಗಳ ಮೇಲೆ ಅಧಿಕಾರಿಗಳ ರೇಡ್, ಇಂಚಿಂಚೂ ಶೋಧ
ಬೆಂಗಳೂರಿನ ಹೋಟೆಲ್, ದರ್ಶಿನಿಗಳ ಇಡ್ಲಿಯಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಹಲವೆಡೆ ದಾಳಿ ನಡೆಸಿ ಇಡ್ಲಿ ತಯಾರಿ ಪ್ರಕ್ರಿಯೆಯ ಪರಿಶೀಲನೆ ನಡೆಸಿದೆ. ಈ ಮಧ್ಯೆ, ಹಸಿರು ಬಟಾಣಿಯಲ್ಲಿ ಕೃತಕ ಬಣ್ಣದ ಬಳಕೆಯೂ ಪತ್ತೆಯಾಗಿದೆ. ‘ಟಿವಿ9’ ಅಭಿಯಾನದಿಂದ ಈ ಸಮಸ್ಯೆ ಬೆಳಕಿಗೆ ಬಂದಿದ್ದು, ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.
- Vinay Kashappanavar
- Updated on: Feb 28, 2025
- 1:06 pm
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೆ ಬರಬಹುದು ಕ್ಯಾನ್ಸರ್! ಆಘಾತಕಾರಿ ವರದಿ ಬಹಿರಂಗ
ರಾಸಾಯನಿಕ, ಕೃತ ಬಣ್ಣಗಳನ್ನು ಬಳಸುವ ಕಾರಣ ಗೋಬಿ ಮಂಚೂರಿ, ಪಾನಿ ಪುರಿ ಹಾಗೂ ಇನ್ನಿತರ ಫಾಸ್ಟ್ ಫುಡ್ ಐಟಂಗಳು ಅವುಗಳನ್ನು ಸೇವಿಸುವವರಲ್ಲಿ ಕ್ಯಾನ್ಸರ್ ಉಂಟು ಮಾಡಬಲ್ಲವು ಎಂದು ಈ ಹಿಂದೆ ಆಹಾರ ಇಲಾಖೆ ಅವುಗಳ ವಿರುದ್ಧ ಕ್ರಮ ಕೈಗೊಂಡಿತ್ತು. ರಾಸಾಯನಿಕ, ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿತ್ತು. ಇದೀಗ ಅನೇಕರ ನೆಚ್ಚಿನ ಆಹಾರ ಇಡ್ಲಿಯ ಬಗ್ಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
- Vinay Kashappanavar
- Updated on: Feb 28, 2025
- 1:01 pm
World Cancer Day 2025: ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಈ ರೀತಿಯ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ
ಜನರಿಗೆ ಕ್ಯಾನ್ಸರ್ ಬಗ್ಗೆ ಸರಿಯಾದ ಶಿಕ್ಷಣ ನೀಡಲು ಮತ್ತು ಕ್ಯಾನ್ಸರ್ ಪೀಡಿತ ರೋಗಿಗಳ ಕುಟುಂಬಗಳನ್ನು ಬೆಂಬಲಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕ್ಯಾನ್ಸರ್ ಅಪಾಯವನ್ನು ತಡೆಗಟ್ಟುವ ಮೂಲಕ 30 ರಿಂದ 50% ರಷ್ಟು ಕ್ಯಾನ್ಸರ್ ಗಳನ್ನು ತಡೆಗಟ್ಟಬಹುದು. ಹಾಗದರೆ ಕ್ಯಾನ್ಸರ್ ತಡೆಯಲು ಯಾವ ರೀತಿಯ ಜೀವನಶೈಲಿಯನ್ನು ಅನುಸರಿಸಬೇಕು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Feb 4, 2025
- 9:52 am
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಕ್ಯಾನ್ಸರ್ನಿಂದ ಗುಣಮುಖರಾಗಿ ಬಂದಿರುವ ಶಿವರಾಜ್ಕುಮಾರ್ ಅವರನ್ನು ಅನೇಕ ಸೆಲೆಬ್ರಿಟಿಗಳು ಭೇಟಿ ಆಗುತ್ತಿದ್ದಾರೆ. ಇಂದು (ಜ.27) ಡಾಲಿ ಧನಂಜಯ ಅವರು ಶಿವಣ್ಣನ ಭೇಟಿ ಮಾಡಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ಖುಷಿಯ ಸುದ್ದಿ ಹಂಚಿಕೊಂಡರು. ಶಿವಣ್ಣ ನಮಗೆಲ್ಲ ಮಾದರಿ ಎಂದು ಡಾಲಿ ಹೇಳಿದ್ದಾರೆ.
- Madan Kumar
- Updated on: Jan 27, 2025
- 2:37 pm
ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ
‘ಶಿವರಾಜ್ಕುಮಾರ್ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗುವಾಗ ದುಃಖದಲ್ಲಿ ಕಳಿಸಿಕೊಟ್ಟೆವು. ಇಂದು ಯಶಸ್ವಿ ಚಿಕಿತ್ಸೆ ಮುಗಿಸಿಕೊಂಡು ವಾಪಸ್ ಬಂದಿದ್ದಾನೆ. ಒಬ್ಬ ಮಗನಿಗೆ ತಂದೆಯನ್ನು ನೋಡಿದಾಗ ಎಷ್ಟು ಖುಷಿ ಆಗತ್ತೋ ಅಷ್ಟೇ ಖುಷಿ ನನಗೆ ಆಗಿದೆ. ಅಭಿಮಾನಿಗಳ ಪೂಜೆಯೇ ಅವನನ್ನು ವಾಪಸ್ ಕರೆದುಕೊಂಡಿದೆ’ ಎಂದು ನಟ ರಾಘವೇಂದ್ರ ರಾಜ್ಕುಮಾರ್ ಅವರು ಹೇಳಿದ್ದಾರೆ.
- Madan Kumar
- Updated on: Jan 26, 2025
- 3:15 pm
6 ಸರ್ಜರಿ, 190 ಹೊಲಿಗೆ: ಶಿವರಾಜ್ಕುಮಾರ್ ಚಿಕಿತ್ಸೆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ
ಶಿವರಾಜ್ಕುಮಾರ್ ಅವರಿಗೆ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಸರ್ಜರಿ ಆದ ಬಳಿಕ ಶಿವಣ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಅಂತೆ-ಕಂತೆಗಳು ಹಬ್ಬಿದ್ದವು. ಅವುಗಳಿಗೆಲ್ಲ ಈಗ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ಶಿವರಾಜ್ಕುಮಾರ್ ಅವರಿಗೆ ಮಾಡಿರುವ ಆಪರೇಷನ್ ಯಾವ ರೀತಿ ಇತ್ತು ಎಂಬುದನ್ನು ಅವರು ತಿಳಿಸಿದ್ದಾರೆ.
- Madan Kumar
- Updated on: Jan 15, 2025
- 3:20 pm
ಅಮೆರಿಕದಲ್ಲಿ ಶಿವರಾಜ್ಕುಮಾರ್ಗೆ ಶಸ್ತ್ರ ಚಿಕಿತ್ಸೆ; ದೂರವಾಣಿ ಮೂಲಕ ಮಾತಾಡಿದ ಸಿಎಂ
ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ಗೆ ನಟ ಶಿವರಾಜ್ಕುಮಾರ್ ದಾಖಲಾಗಿದ್ದಾರೆ. ಇಂದು (ಡಿ.24) ಸಂಜೆ 6 ಗಂಟೆ ಸುಮಾರಿಗೆ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಆ ನಂತರ ವಿಶ್ರಾಂತಿ ಪಡೆಯಲು ಸೂಚನೆ ನೀಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವರಾಜ್ಕುಮಾರ್ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
- Madan Kumar
- Updated on: Dec 24, 2024
- 6:18 pm
ಬೆಂಗಳೂರು: ಕ್ಯಾನ್ಸರ್ ನಿಯಂತ್ರಣಕ್ಕೆ ಹೊಸ ಯೋಜನೆಗೆ ಮುಂದಾದ ಆರೋಗ್ಯ ಇಲಾಖೆಗೆ ಆರಂಭದಲ್ಲೇ ವಿಘ್ನ
ಬೆಂಗಳೂರಿನಲ್ಲಿ ಕ್ಯಾನ್ಸರ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ, ಸರ್ಕಾರವು ಉಚಿತ ಡೇಕೇರ್ ಕೀಮೋಥೆರಪಿ ಆರಂಭಿಸಲು ಮುಂದಾಗಿದೆ. ಆದರೆ, ಅಂಕಾಲಜಿಸ್ಟ್ಗಳ ತೀವ್ರ ಕೊರತೆಯಿಂದಾಗಿ ಈ ಯೋಜನೆಗೆ ಅಡ್ಡಿಯಾಗಿದೆ. ಇದರಿಂದಾಗಿ ರೋಗಿಗಳು ತೊಂದರೆ ಅನುಭವಿಸುವಂತಾಗಿದೆ.
- Vinay Kashappanavar
- Updated on: Dec 9, 2024
- 7:59 am
80ಕ್ಕೂ ಅಧಿಕ ಅತ್ಯಾಚಾರ ಆರೋಪ ಇರುವ ನಿರ್ಮಾಪಕನಿಗೆ ಈಗ ಮೈತುಂಬ ಕಾಯಿಲೆ
ಬ್ಲಡ್ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದಲ್ಲಿ ನೀರು, ಮಧುಮೇಹ, ಅಧಿಕ ರಕ್ತದೊತ್ತಡ, ಬೆನ್ನು ನೋವು ಸೇರಿದಂತೆ ಹಲವು ಕಾಯಿಲೆಗಳು ಹಾರ್ವಿ ವೈನ್ಸ್ಟೀನ್ಗೆ ಅಂಟಿಕೊಂಡಿವೆ. 80ಕ್ಕೂ ಹೆಚ್ಚು ಮಹಿಳೆಯರು ಈತನ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಜೈಲಿನಲ್ಲಿ ಇರುವ ಹಾರ್ವಿ ವೈನ್ಸ್ಟೀನ್ಗೆ ಹತ್ತಾರು ಕಾಯಿಲೆಗಳು ಶುರುವಾಗಿವೆ.
- Madan Kumar
- Updated on: Oct 22, 2024
- 7:32 pm