Cauvery Water Dispute
Cauvery Water Dispute – ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಇಂದು ನಿನ್ನೆಯದ್ದಲ್ಲ. ನೀರು ಹಂಚಿಕೆ ಸಂಬಂಧ ಮದ್ರಾಸ್ ಪ್ರೆಸಿಡೆನ್ಸಿ ಮತ್ತು ಮೈಸೂರು ಸಂಸ್ಥಾನದ ಮಧ್ಯೆ 1892ರಲ್ಲಿ ಮತ್ತು 1924ರಲ್ಲಿ ಒಪ್ಪಂದಗಳು ಆಗಿದ್ದವು. ಆ ಪ್ರಕಾರ ಮಯಸೂರು ಸಂಸ್ಥಾನದ ಜಲಾಶಯಗಳಲ್ಲಿ ಸಂಗ್ರಹಿಸಿದ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ವಾಡಿಕೆಗಿಂತ ಹೆಚ್ಚು ಮಳೆಯಾದರೆ ನೀರು ಬಿಡಲು ಅಡ್ಡಿಯಿರಲಿಲ್ಲ. ಆದ್ರೆ, ವಾಡಿಕೆಗಿಂತ ಕಡಿಮೆ ಮಳೆಯಾಗಿ, ನೀರಿನ ಕೊರತೆ ಉಂಟಾದರೆ ಹಂಚಿಕೆ ಸಮಸ್ಯೆ ತಲೆದೂರುತ್ತಿತ್ತು. ಸ್ವಾತಂತ್ರ್ಯ ನಂತರದ ತಮಿಳುನಾಡು ಮತ್ತು ಕರ್ನಾಟಕದ ಮಧ್ಯೆಯೂ ಇದೇ ಸಮಸ್ಯೆ ಮುಂದುವರೆದೇ ಇತ್ತು.ಇದರ ಜೊತೆಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ನೀರು ಬೇಕು ಎಂಬುವುದು ವಿವಾದದ ಮತ್ತೊಂದು ಕೇಂದ್ರವಾಗಿತ್ತು. ಹಲವು ದಶಕಗಳ ನ್ಯಾಯಮಂಡಳಿ ಹೋರಾಟ ಮತ್ತು ಸುಪ್ರೀಂಕೋರ್ಟಿನಲ್ಲಿ ಹೋರಾಟದ ನಂತರ ಯಾವ ರಾಜ್ಯಕ್ಕೆ ಎಷ್ಟು ನೀರು ಹಂಚಬೇಕು ಎಂಬುವುದು ನಿರ್ಧಾರವಾಗಿದೆ. ಆದರೆ ವಾಡಿಕೆಗಿಂತ ಮಳೆಯಾದರೆ ನೀರನ್ನು ಹೇಗೆ ಹಂಚಿಕೊಳ್ಳಬೇಕು ಎಂಬುವುದನ್ನು ಸೂಚಿಸುವ ಸಂಕಷ್ಟ ಸೂತ್ರ ಇಲ್ಲ. ಇದು ಎರಡೂ ರಾಜ್ಯಗಳ ನಡುವಣ ನೀರು ಹಂಚಿಕೆ ವಿವಾದವನ್ನು ಜೀವಂತವಾಗಿ ಇರಿಸಿದೆ.
ಕಾವೇರಿ ಜಲವಿವಾದ ನ್ಯಾಯಮಂಡಳಿಯ ತೀರ್ಪನ್ನು ಮಾರ್ಪಡಿಸಿ 2018ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಗಿಂತ ಮಳೆಯಾದರೆ ವಾರ್ಷಿಕ 740 ಟಿಎಂಸಿಯಷ್ಟು ನೀರು ಲಭ್ಯವಾಗುತ್ತದ ಎಂಬುವುದನ್ನು ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಒಪ್ಪಿಕೊಂಡಿವೆ. ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕಕ್ಕೆ 284.75 ಟಿಎಂಸಿ, ತಮಿಳುನಾಡಿಗೆ 404.25 ಟಿಎಂಸಿ, ಕೇರಳಕ್ಕೆ 30 ಟಿಎಂಸಿ ಮತ್ತು ಪುದಚೇರಿಗೆ 7 ಟಿಎಂಸಿಯಷ್ಟು ನೀರನ್ನು ಸುಪ್ರೀಂಕೋರ್ಟ್ ಮರುಹಂಚಿಕೆ ಮಾಡಿದ್ದು, ಇದನ್ನು ಎಲ್ಲಾ ರಾಜ್ಯಗಳೂ ಒಪ್ಪಿಕೊಂಡಿವೆ.
ನ್ಯಾಯಮಂಡಳಿಯು ತಮಿಳುನಾಡಿಗೆ ನೀರು ಹಂಚಿಕೆ ಮಾಡುವಾಗ ಪ್ರತಿ ತಿಂಗಳು ಎಷ್ಟು ನೀರು ಬಿಡಬೇಕು ಎಂಬುವುದನ್ನೂ ನಿಗದಿ ಮಾಡಿದೆ. ನೀರು ಹಂಚಿಕೆ ಮತ್ತು ನೀರು ಬಿಡುವ ಕಾರ್ಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಕಾವೇರಿ ನೀರು ಮೇಲ್ವಿಚಾರಣಾ ಪ್ರಾಧಿಕಾರವನ್ನು ರಚಿಸಲಾಗಿದೆ. ಮಳೆ ಕೊರತೆಯಾಗಿ ನೀರಿನ ಲಭ್ಯತೆ ಕಡಿಮೆಯಾದರೆ, ಏನು ಮಾಡಬೇಕು ಎಂಬುವುದನ್ನು ಪ್ರಾಧಿಕಾರ ನಿರ್ಧರಿಸಬೇಕು ಎಂದು ನ್ಯಾಯಮಂಡಳಿ ಹೇಳಿದೆ. ಆದ್ರೆ, ಕಡಿಮೆಯಾದಾಗ ನೀರನ್ನು ಎಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎಂಬುವುದನ್ನು ವಿವರಿಸುವ ಯಾವುದೇ ಸೂತ್ರವನ್ನು ನ್ಯಾಯಮಂಡಳಿ ರೂಪಿಸಿಲ್ಲ. ಹೀಗಾಗಿ ಮಳೆ ಕಡಿಮೆಯಾದರೆ ಏನು ಮಾಡಬೇಕು ಎಂಬುವುದು ಸಂಪೂರ್ಣವಾಗಿ ಪ್ರಾಧಿಕಾರದ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ತಮಿಳುನಾಡಿಗೆ ಎಷ್ಟು ದಿನ? ಎಷ್ಟು ಪ್ರಮಾಣ ನೀರು ಹರಿಸಬೇಕೆಂದು ಕಾವೇರಿ ನೀರು ಮೇಲ್ವಿಚಾರಣಾ ಪ್ರಾಧಿಕಾರ ತೀರ್ಮಾನಿಸುತ್ತೆ.
ಇನ್ನೂ ಹೆಚ್ಚು ಓದಿಕಾವೇರಿ ವಿವಾದ: ಕರ್ನಾಟಕಕ್ಕೆ ಬಿಗ್ ಶಾಕ್, ತಮಿಳುನಾಡಿಗೆ ನೀರು ಹರಿಸುವ CWMA ಸೂಚನೆ ಪಾಲಿಸಲು ಸುಪ್ರೀಂ ಆದೇಶ
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
- Harish GR
- Updated on: Aug 17, 2026
- 12:30 pm
ಕದ್ದು ಮುಚ್ಚಿ ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಸರ್ಕಾರ
Cauvery Water Dispute: ರಾತ್ರೋರಾತ್ರಿ ಕೆಆರ್ಎಸ್ನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಬಿಡಲಾಗಿದೆ. ಕಬಿನಿ ಒಳಹರಿವು ಇಳಿದ ಕಾರಣ ಹಾಗೂ CWMA ನಿರ್ದೇಶನದಂತೆ ನೀರು ಹರಿಸಲಾಗಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
- Dileep CP
- Updated on: Aug 15, 2026
- 3:19 pm
ಕಾವೇರಿ ಕಿಚ್ಚು: ಬಂದ್ಗೆ ಧುಮುಕಿದ್ದ ವಾಟಾಳ್ ನಾಗರಾಜ್ ವಶಕ್ಕೆ, ‘ಪೋಲಿಸರಿಗೆ ಧಿಕ್ಕಾರ’ ಕೂಗಿ ಪ್ರತಿಭಟನಾಕಾರರ ಅಕ್ರೋಶ
ಕಾವೇರಿ ನೀರು ವಿವಾದ ಮತ್ತು CWRC ಆದೇಶ ಖಂಡಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಈ ವೇಳೆ ಪ್ರಮುಖ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಮೆಜೆಸ್ಟಿಕ್ನತ್ತ ತೆರಳುವಾಗ ವಶಕ್ಕೆ ಪಡೆದಿದ್ದಾರೆ. ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ವಾಟಾಳ್ ಬಂಧನವು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.
- Kiran Surya
- Updated on: Aug 13, 2026
- 12:40 pm
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ಕನ್ನಡಪರ ಹೋರಾಟಗಾರರು: ಪ್ರಮುಖ ಬೇಡಿಕೆಗಳೇನು?
ಕರ್ನಾಟಕ ಬಂದ್ಗೆ ಕರೆಯ ನಡುವೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಕರವೇ ಶಿವರಾಮೇಗೌಡ ಬಣದ ಮುಖಂಡರು ನೇತೃತ್ವದ ಕನ್ನಡಪರ ಹೋರಾಟಗಾರರ ನಿಯೋಗವು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ತಮಿಳುನಾಡಿಗೆ ನೀರು ತಡೆ ಹಿಡಿಯುವುದು ಹಾಗೂ ಮೇಕೆದಾಟು ಯೋಜನೆ ಆರಂಭ ಸೇರಿದಂತೆ ಪ್ರಮುಖ ಬೇಡಿಕೆಗಳ ಮನವಿ ಸಲ್ಲಿಸಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Kiran Surya
- Updated on: Aug 13, 2026
- 11:30 am
ಕರ್ನಾಟಕ ಬಂದ್ ಎಫೆಕ್ಟ್: ಬಾಟಲ್ ಹಿಡಿದು ಹೋದ್ರೆ ಇಂದು ಬಂಕ್ಗಳಲ್ಲಿ ಸಿಗಲ್ಲ ಪೆಟ್ರೋಲ್!
Karnataka Bandh: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಪೆಟ್ರೋಲ್ ಬಂಕ್ಗಳಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಅಹಿತಕರ ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಬಾಟಲಿಗಳಲ್ಲಿ ಪೆಟ್ರೋಲ್ ನೀಡದಂತೆ ಸೂಚಿಸಲಾಗಿದೆ. ಇದರ ಜೊತೆಗೆ, ಕಾವೇರಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ನಲ್ಲಿ ನಡೆಯಬೇಕಿದ್ದ ಅರ್ಜಿ ವಿಚಾರಣೆ ಮುಂದೂಡಲ್ಪಟ್ಟಿದೆ.
- Prasanna Hegde
- Updated on: Aug 13, 2026
- 10:42 am
ಬಸ್, ಕ್ಯಾಬ್ ಸಿಗಲ್ಲ ಎಂಬ ಆತಂಕ: ಅರ್ಧ ರಾತ್ರಿಯಲ್ಲೇ ಏರ್ಪೋರ್ಟ್ ತಲುಪಿ ಕಷ್ಟಪಟ್ಟು ಕಾಲಕಳೆದ ಪ್ರಯಾಣಿಕರು
ಕರ್ನಾಟಕ ಬಂದ್ನ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದ ಭೀತಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಅವಧಿಗೂ ಮುನ್ನವೇ ಆಗಮಿಸಿದ್ದಾರೆ. ಬಸ್, ಕ್ಯಾಬ್ಗಳು ಸಿಗುವುದಿಲ್ಲ ಎಂಬ ಆತಂಕದಲ್ಲಿ ಬಂದಿರುವ ಜನರು, ಮಹಿಳೆಯರು ಹಾಗೂ ಮಕ್ಕಳ ಸಮೇತ ಕುಳಿತಲ್ಲೇ ನಿದ್ದೆಗೆ ಜಾರಿದ್ದಾರೆ. ಆದಾಗ್ಯೂ, ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿಲ್ಲ.
- Akshay Pallamajalu
- Updated on: Aug 13, 2026
- 10:12 am
ಬಂದ್ ನಡುವೆಯೂ ಮೆಜೆಸ್ಟಿಕ್ನಲ್ಲಿ ಬಸ್ ಸಂಚಾರ ಯಥಾಸ್ಥಿತಿ: ಬಿಎಂಟಿಸಿ, ಕೆಎಸ್ಆರ್ಟಿಸಿಯಲ್ಲಿ ಪ್ರಯಾಣಿಕರ ಸಂಖ್ಯೆ ಕ್ಷೀಣ
ಕಾವೇರಿ ನೀರು ಬಿಡುಗಡೆ ವಿವಾದದ ಹಿನ್ನಲೆಯಲ್ಲಿ ವಾಟಾಳ್ ನಾಗರಾಜ್ ಕರೆ ನೀಡಿದ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಬಸ್ ಸಂಚಾರ ಯಥಾಸ್ಥಿತಿಯಲ್ಲಿದೆ. ಮೆಜೆಸ್ಟಿಕ್ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ, ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ವಾಟಾಳ್ ನಾಗರಾಜ್ ಅವರು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಚಾಲಕರಿಗೆ ಬೆಂಬಲ ಕೋರಲಿದ್ದಾರೆ.
- Kiran Surya
- Updated on: Aug 13, 2026
- 8:22 am
Live: ಕಾವೇರಿ ಕಿಚ್ಚು; CWRC, CWMA ಆದೇಶ ಖಂಡಿಸಿ ಕರ್ನಾಟಕ ಬಂದ್
Karnataka Bandh: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದ 'ಕನ್ನಡ ಸಂಘಟನೆಗಳ ಒಕ್ಕೂಟ' ಇಂದು (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಿದ್ದರೂ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜನಜೀವನ ಸಂಪೂರ್ಣ ಸಹಜವಾಗಿದ್ದು, ಶಾಲಾ-ಕಾಲೇಜುಗಳು, ವ್ಯಾಪಾರ-ವಹಿವಾಟು ಹಾಗೂ ವಾಹನ ಸಂಚಾರ ಎಂದಿನಂತೆ ಮುಂದುವರಿದಿದೆ.
- Prasanna Hegde
- Updated on: Aug 13, 2026
- 8:49 am
Karnataka Bandh Live Updates: ಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್, ಸಿಎಂ ಭೇಟಿಯಾದ ಕನ್ನಡಪರ ನಾಯಕರು
ಕರ್ನಾಟಕ ಬಂದ್ ಲೈವ್: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಬೆಂಗಳೂರಿನಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕ ಸಾರಿಗೆ ಸಂಚಾರದಲ್ಲಿ ವ್ಯತ್ಯಾಸವಿಲ್ಲ. ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಮನವಿ ಮಾಡಿದ್ದು, ಬಲವಂತದ ಅಂಗಡಿ ಮುಚ್ಚಿಸುವಿಕೆಗೆ ನಿಷೇಧವಿದೆ. ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನವೂ ಇಂದು ಆರಂಭ.
- Akshay Pallamajalu
- Updated on: Aug 13, 2026
- 8:10 pm
ಕರ್ನಾಟಕ ಬಂದ್: ರಾಜ್ಯದ ಶಾಲಾ, ಕಾಲೇಜುಗಳಿಗಿಲ್ಲ ಇಂದು ರಜೆ
Karnataka Bandh: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ. ಪೋಷಕರು ಪರೀಕ್ಷೆಗಳ ಕಾರಣದಿಂದ ಬಂದ್ಗೆ ಬೆಂಬಲ ನೀಡದಿರಲು ನಿರ್ಧರಿಸಿದ್ದಾರೆ. ಬಸ್ ಸಂಚಾರ ಸಹಜವಾಗಿದ್ದು, ಜನಜೀವನಕ್ಕೆ ಅಡ್ಡಿಯಾಗಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ, ಆದರೆ ಶಾಂತಿಯುತ ಪ್ರತಿಭಟನೆಗೆ ಸೂಚಿಸಲಾಗಿದೆ.
- Prasanna Hegde
- Updated on: Aug 13, 2026
- 7:51 am
ಕರ್ನಾಟಕ ಬಂದ್: ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್ಗಳಿಗೆ ತಾತ್ಕಾಲಿಕ ತಡೆ
Karnataka Bandh: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನಜೀವನ ಮತ್ತು ಸ್ಥಳೀಯ ಸಾರಿಗೆ ವ್ಯವಸ್ಥೆ ಎಂದಿನಂತೆ ಆರಂಭವಾಗಿದೆ. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡಿಗೆ ತೆರಳುವ ಬಸ್ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಕಾರಣ ನೆರೆ ರಾಜ್ಯದ ಪ್ರಯಾಣಿಕರಿಗೆ ಕೊಂಚ ಅನಾನುಕೂಲವಾಗಿದೆ.
- Shivaprasad B
- Updated on: Aug 13, 2026
- 7:38 am
ಕಾವೇರಿ ವಿವಾದ: ಇಂದು ಕರ್ನಾಟಕ ಬಂದ್; ಬೆಂಗಳೂರಲ್ಲಿ ಪೊಲೀಸರಿಂದ ಹೈ ಅಲರ್ಟ್
Cauvery Water Dispute: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಬಿಗಿ ಭದ್ರತೆ ಹಾಗೂ ಹೈ ಅಲರ್ಟ್ ಘೋಷಿಸಿದ್ದಾರೆ. ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಕೊಡಬಾರದು. ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿಸಬಾರದು ಎಂದು ಹೋರಾಟಗಾರರಿಗೆ ಸೂಚಿಸಲಾಗಿದೆ.
- Kiran Surya
- Updated on: Aug 13, 2026
- 7:39 am