AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water Dispute

Cauvery Water Dispute

Cauvery Water Dispute – ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಇಂದು ನಿನ್ನೆಯದ್ದಲ್ಲ. ನೀರು ಹಂಚಿಕೆ ಸಂಬಂಧ ಮದ್ರಾಸ್ ಪ್ರೆಸಿಡೆನ್ಸಿ ಮತ್ತು ಮೈಸೂರು ಸಂಸ್ಥಾನದ ಮಧ್ಯೆ 1892ರಲ್ಲಿ ಮತ್ತು 1924ರಲ್ಲಿ ಒಪ್ಪಂದಗಳು ಆಗಿದ್ದವು. ಆ ಪ್ರಕಾರ ಮಯಸೂರು ಸಂಸ್ಥಾನದ ಜಲಾಶಯಗಳಲ್ಲಿ ಸಂಗ್ರಹಿಸಿದ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ವಾಡಿಕೆಗಿಂತ ಹೆಚ್ಚು ಮಳೆಯಾದರೆ ನೀರು ಬಿಡಲು ಅಡ್ಡಿಯಿರಲಿಲ್ಲ. ಆದ್ರೆ, ವಾಡಿಕೆಗಿಂತ ಕಡಿಮೆ ಮಳೆಯಾಗಿ, ನೀರಿನ ಕೊರತೆ ಉಂಟಾದರೆ ಹಂಚಿಕೆ ಸಮಸ್ಯೆ ತಲೆದೂರುತ್ತಿತ್ತು. ಸ್ವಾತಂತ್ರ್ಯ ನಂತರದ ತಮಿಳುನಾಡು ಮತ್ತು ಕರ್ನಾಟಕದ ಮಧ್ಯೆಯೂ ಇದೇ ಸಮಸ್ಯೆ ಮುಂದುವರೆದೇ ಇತ್ತು.ಇದರ ಜೊತೆಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ನೀರು ಬೇಕು ಎಂಬುವುದು ವಿವಾದದ ಮತ್ತೊಂದು ಕೇಂದ್ರವಾಗಿತ್ತು. ಹಲವು ದಶಕಗಳ ನ್ಯಾಯಮಂಡಳಿ ಹೋರಾಟ ಮತ್ತು ಸುಪ್ರೀಂಕೋರ್ಟಿನಲ್ಲಿ ಹೋರಾಟದ ನಂತರ ಯಾವ ರಾಜ್ಯಕ್ಕೆ ಎಷ್ಟು ನೀರು ಹಂಚಬೇಕು ಎಂಬುವುದು ನಿರ್ಧಾರವಾಗಿದೆ. ಆದರೆ ವಾಡಿಕೆಗಿಂತ ಮಳೆಯಾದರೆ ನೀರನ್ನು ಹೇಗೆ ಹಂಚಿಕೊಳ್ಳಬೇಕು ಎಂಬುವುದನ್ನು ಸೂಚಿಸುವ ಸಂಕಷ್ಟ ಸೂತ್ರ ಇಲ್ಲ. ಇದು ಎರಡೂ ರಾಜ್ಯಗಳ ನಡುವಣ ನೀರು ಹಂಚಿಕೆ ವಿವಾದವನ್ನು ಜೀವಂತವಾಗಿ ಇರಿಸಿದೆ.

ಕಾವೇರಿ ಜಲವಿವಾದ ನ್ಯಾಯಮಂಡಳಿಯ ತೀರ್ಪನ್ನು ಮಾರ್ಪಡಿಸಿ 2018ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಗಿಂತ ಮಳೆಯಾದರೆ ವಾರ್ಷಿಕ 740 ಟಿಎಂಸಿಯಷ್ಟು ನೀರು ಲಭ್ಯವಾಗುತ್ತದ ಎಂಬುವುದನ್ನು ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಒಪ್ಪಿಕೊಂಡಿವೆ. ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕಕ್ಕೆ 284.75 ಟಿಎಂಸಿ, ತಮಿಳುನಾಡಿಗೆ 404.25 ಟಿಎಂಸಿ, ಕೇರಳಕ್ಕೆ 30 ಟಿಎಂಸಿ ಮತ್ತು ಪುದಚೇರಿಗೆ 7 ಟಿಎಂಸಿಯಷ್ಟು ನೀರನ್ನು ಸುಪ್ರೀಂಕೋರ್ಟ್ ಮರುಹಂಚಿಕೆ ಮಾಡಿದ್ದು, ಇದನ್ನು ಎಲ್ಲಾ ರಾಜ್ಯಗಳೂ ಒಪ್ಪಿಕೊಂಡಿವೆ.

ನ್ಯಾಯಮಂಡಳಿಯು ತಮಿಳುನಾಡಿಗೆ ನೀರು ಹಂಚಿಕೆ ಮಾಡುವಾಗ ಪ್ರತಿ ತಿಂಗಳು ಎಷ್ಟು ನೀರು ಬಿಡಬೇಕು ಎಂಬುವುದನ್ನೂ ನಿಗದಿ ಮಾಡಿದೆ. ನೀರು ಹಂಚಿಕೆ ಮತ್ತು ನೀರು ಬಿಡುವ ಕಾರ್ಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಕಾವೇರಿ ನೀರು ಮೇಲ್ವಿಚಾರಣಾ ಪ್ರಾಧಿಕಾರವನ್ನು ರಚಿಸಲಾಗಿದೆ. ಮಳೆ ಕೊರತೆಯಾಗಿ ನೀರಿನ ಲಭ್ಯತೆ ಕಡಿಮೆಯಾದರೆ, ಏನು ಮಾಡಬೇಕು ಎಂಬುವುದನ್ನು ಪ್ರಾಧಿಕಾರ ನಿರ್ಧರಿಸಬೇಕು ಎಂದು ನ್ಯಾಯಮಂಡಳಿ ಹೇಳಿದೆ. ಆದ್ರೆ, ಕಡಿಮೆಯಾದಾಗ ನೀರನ್ನು ಎಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎಂಬುವುದನ್ನು ವಿವರಿಸುವ ಯಾವುದೇ ಸೂತ್ರವನ್ನು ನ್ಯಾಯಮಂಡಳಿ ರೂಪಿಸಿಲ್ಲ. ಹೀಗಾಗಿ ಮಳೆ ಕಡಿಮೆಯಾದರೆ ಏನು ಮಾಡಬೇಕು ಎಂಬುವುದು ಸಂಪೂರ್ಣವಾಗಿ ಪ್ರಾಧಿಕಾರದ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ತಮಿಳುನಾಡಿಗೆ ಎಷ್ಟು ದಿನ? ಎಷ್ಟು ಪ್ರಮಾಣ ನೀರು ಹರಿಸಬೇಕೆಂದು ಕಾವೇರಿ ನೀರು ಮೇಲ್ವಿಚಾರಣಾ ಪ್ರಾಧಿಕಾರ ತೀರ್ಮಾನಿಸುತ್ತೆ.

ಇನ್ನೂ ಹೆಚ್ಚು ಓದಿ

ಕಾವೇರಿ ಜಲ ವಿವಾದ: ತಮಿಳುನಾಡಿಗೆ ನೀರು ಹರಿಸಬೇಕಿರುವ ಪ್ರಮಾಣ ಇಳಿಕೆಗೆ ಆಗ್ರಹಿಸಿ CWMAಗೆ ಕರ್ನಾಟಕ ಮನವಿ

ಕರ್ನಾಟಕದ ಜಲಾಶಯಗಳಿಗೆ ಒಳಹರಿವು ಕುಸಿದಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಬಿಡುಗಡೆ ಮಾಡಬೇಕಾದ ನೀರಿನ ಪ್ರಮಾಣವನ್ನು ದಿನಕ್ಕೆ 9,000 ಕ್ಯೂಸೆಕ್‌ನಿಂದ 2,000 ಕ್ಯೂಸೆಕ್‌ಗೆ ಇಳಿಸುವಂತೆ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮನವಿ ಮಾಡಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಸುಮಾರು 55 ಟಿಎಂಸಿ ನೀರು ಸಂಗ್ರಹವಿದ್ದು, ಮಧ್ಯಂತರ ಜಲಾನಯನ ಪ್ರದೇಶಗಳಿಂದ 45 ಟಿಎಂಸಿ ಅಥವಾ ಅದಕ್ಕಿಂತ ಹೆಚ್ಚಿನ ನೀರು ಹರಿದುಬರುವ ನಿರೀಕ್ಷೆಯಿದೆ ಎಂದೂ ಮನವಿಯಲ್ಲಿ ಉಲ್ಲೇಖಿಸಿದೆ.

ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು: ಕೆಆರ್​​​ಎಸ್​​ನಲ್ಲಿ ನೀರಿನ ಮಟ್ಟ ಕುಸಿತ

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದು ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇನ್ನೊಂದೆಡೆ ಸದ್ದಿಲ್ಲದೇ ತಮಿಳುನಾಡಿಗೆ ಕಾವೇರಿ ಹರಿದು ಹೋಗುತ್ತಿದ್ದಾಳೆ. ದಿನೇ ದಿನೆ ಹೊರ ಹರಿವು ಹೆಚ್ಚಾಗುತ್ತಲೇ ಇದೆ. ಇದರಿಂದ ಜಲಾಶದಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಇನ್ನು ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದ ಹಿನ್ನೆಲೆ‌‌ಯಲ್ಲಿ ತಮಿಳುನಾಡಿಗೆ ಬಹುಪಾಲು ನೀರು ಕೆಆರ್ ಎಸ್ ನಿಂದಲೇ ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಸಹ ಕುಸಿಯುತ್ತಿದೆ. 3 ದಿನದಲ್ಲಿ 3 ಅಡಿಯಷ್ಟು ನೀರಿನ ಮಟ್ಟ ಇಳಿಕೆಯಾಗಿದೆ. ಇದರೊಂದಿಗೆ 111 ಅಡಿಯಿಂದ 108 ಅಡಿಗೆ ಕುಸಿದಿದೆ.

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನೀರು ಬಿಡುಗಡೆ; ಒಳಹರಿವಿಗಿಂತ ಹೊರಹರಿವು ದುಪ್ಪಟ್ಟು

Cauvery Water Release: ರೈತರ ಹಾಗೂ ಕನ್ನಡಿಗರ ತೀವ್ರ ಆಕ್ರೋಶದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಪ್ರಕ್ರಿಯೆ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಕೆಆರ್ಎಸ್ ಡ್ಯಾಂನಿಂದಲೂ ನೀರು ಬಿಡಲಾಗುತ್ತಿದ್ದು, 8,544 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದು ರಾಜ್ಯದ ಜನತೆಯ ಆತಂಕಕ್ಕೆ ಕಾರಣವಾಗಿದೆ.

ಕಬಿನಿ ಜಲಾಶಯಕ್ಕೆ ರೈತರ ಮುತ್ತಿಗೆ: ತಮಿಳುನಾಡಿಗೆ ನೀರು ಹರಿಸುವುದಕ್ಕೆ ತೀವ್ರ ಆಕ್ರೋಶ!

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಕಬಿನಿ ಡ್ಯಾಂ ನೀರಿನ ಮಟ್ಟ 72 ಅಡಿಗೆ ಕುಸಿದಿದ್ದರೂ ಪ್ರತಿನಿತ್ಯ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಲು ಆಗ್ರಹಿಸಿದ್ದಾರೆ.

  • Ram
  • Updated on: Sep 1, 2026
  • 11:27 am

ಕೆಆರ್‌ಎಸ್‌ನಿಂದಲೂ 7 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರೈತರ ಆಕ್ರೋಶ

KRS Cauvery Water Release: ತಮಿಳುನಾಡಿಗೆ ನೀರು ಹರಿಸುವ ಆದೇಶವನ್ನು CWMA ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ಮತ್ತಷ್ಟು ಸೂಕ್ಷ್ಮವಾಗಿದೆ. ಇದೇ ವೇಳೆ ಕೆಆರ್‌ಎಸ್‌ನಿಂದಲೂ ಸುಮಾರು 7 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದು ಮಂಡ್ಯ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ತಮಿಳುನಾಡಿಗೆ 9,000 ಕ್ಯೂಸೆಕ್ ಕಾವೇರಿ ನೀರು ಬಿಡಬೇಕೆಂಬ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಕರ್ನಾಟಕ ನಿರ್ಧಾರ

ತಮಿಳುನಾಡಿಗೆ 9,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದ ವಿರುದ್ಧ ಕರ್ನಾಟಕ ಮುಂದಿನ ವಾರ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ. ಸದ್ಯ ಆದೇಶ ಪಾಲಿಸುವುದಾಗಿ ಸರ್ಕಾರ ತಿಳಿಸಿದ್ದು, ರಾಜ್ಯದ ಮಳೆ ಕೊರತೆ ನೀಗಿಸಲು ₹27 ಕೋಟಿ ವೆಚ್ಚದಲ್ಲಿ 60 ದಿನಗಳ ಮೋಡ ಬಿತ್ತನೆ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿದ KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

Cauvery Water Dispute: ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಿಗರು ಕೆಆರ್​ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ನೀರು ಬಿಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು, ಬೆಂಗಳೂರಿನ ಕುಡಿಯುವ ನೀರಿನ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿಹಿಡಿದಿದ್ದು, ತಮಿಳುನಾಡಿಗೆ ಪ್ರತಿದಿನ 9000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಸೂಚಿಸಿದೆ. ಇದು ಕರ್ನಾಟಕಕ್ಕೆ ಭಾರಿ ಹಿನ್ನಡೆಯಾಗಿದೆ. ಇದು ರಾಜ್ಯದ ರೈತರಲ್ಲಿ ಆತಂಕ ಮೂಡಿಸಿದೆ. ರಾಜ್ಯ ಸರ್ಕಾರ ಕಾನೂನು ಹೋರಾಟ ಮುಂದಿವರಿಸುವ ಬಗ್ಗೆ ಕಾನೂನು ತಂಡ ನಿರ್ಧರಿಸಲಿದೆ ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ತಮಿಳುನಾಡಿಗೆ ಮತ್ತೆ 9 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಿಡಬ್ಲ್ಯುಆರ್‌ಸಿ ಆದೇಶ ಖಂಡಿಸಿ ಮಂಡ್ಯದಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶ್ರೀರಂಗಪಟ್ಟಣದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣ ಬರ ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಕರ್ನಾಟಕಕ್ಕೆ ಮತ್ತೆ ಶಾಕ್ ನೀಡಿದ CWRC: ತಮಿಳುನಾಡಿಗೆ 9000 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು

Cauvery Water Dispute: ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ ನೀಡಿದೆ. ಆಗಸ್ಟ್ 25 ರಿಂದ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲು ಬಳಿ ತಮಿಳುನಾಡಿಗೆ ಹರಿಸುವಂತೆ ಆದೇಶಿಸಿದೆ. ಇದು ಒಟ್ಟು 11.66 ಟಿಎಂಸಿ ನೀರಾಗುತ್ತದೆ. 141ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರಿಂದ ತೀವ್ರಗೊಂಡ ಪ್ರತಿಭಟನೆ

ಕಾವೇರಿ ನೀರು ವಿವಾದ ಮತ್ತೆ ಭುಗಿಲೆದ್ದಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಕರವೇ ಹಾಗೂ ರೈತ ಹೋರಾಟಗಾರರು ಮಳೆ ಕೊರತೆ ಎದುರಿಸುತ್ತಿರುವ ಕರ್ನಾಟಕದ ಹಿತಾಸಕ್ತಿ ಕಾಯುವಂತೆ ಒತ್ತಾಯಿಸಿದ್ದಾರೆ. ತಕ್ಷಣ ನೀರು ಹರಿಸುವುದನ್ನು ನಿಲ್ಲಿಸಿ, ರಾಜ್ಯದ ರೈತರ ಹಿತ ಕಾಯುವಂತೆ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಕಾವೇರಿ ವಿವಾದ: ಸುಪ್ರೀಂ ಕೋರ್ಟ್​ನಲ್ಲಿ ಮತ್ತೆ ವಿಚಾರಣೆ ಮುಂದೂಡಿಕೆ, ಕರ್ನಾಟಕಕ್ಕೆ ತಪ್ಪದ ಸಂಕಷ್ಟ

ಕಾವೇರಿ ನೀರು ಹಂಚಿಕೆ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಎರಡೂ ರಾಜ್ಯಗಳು ಅಂಕಿ-ಅಂಶಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಿದೆ. ಇದರಿಂದ, ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಹಳೆ ಆದೇಶವನ್ನು ಪಾಲಿಸಬೇಕಿರುವ ಕರ್ನಾಟಕಕ್ಕೆ ಸದ್ಯಕ್ಕೆ ಸಂಕಷ್ಟ ಮುಂದುವರಿದಂತಾಗಿದೆ.