AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI

CBI

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (CBI) ಭಾರತದ ಪ್ರಮುಖ ಅಪರಾಧ ತನಿಖಾ ಸಂಸ್ಥೆಯಾಗಿದ್ದು, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೂಲತಃ ಭ್ರಷ್ಟಾಚಾರ ಪ್ರಕರಣಗಳ ಮೇಲೆ ಕೇಂದ್ರೀಕರಿಸಿದ ಇದು 1965 ರಲ್ಲಿ ವಿವಿಧ ಕೇಂದ್ರ ಕಾನೂನು ಉಲ್ಲಂಘನೆಗಳು, ಬಹು-ರಾಜ್ಯ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಪ್ರಕರಣಗಳನ್ನು ಒಳಗೊಳ್ಳಲು ತನ್ನ ಪಾತ್ರವನ್ನು ವಿಸ್ತರಿಸಿತು. ಇಂಟರ್‌ಪೋಲ್‌ನೊಂದಿಗೆ ಭಾರತದ ಸಂಪರ್ಕದ ಕೇಂದ್ರವಾಗಿದ್ದರೂ, ಸಿಬಿಐ ಅಕ್ರಮಗಳು, ರಾಜಕೀಯ ಪ್ರಭಾವ ಮತ್ತು ಕಡಿಮೆ ಶಿಕ್ಷೆಯ ಪ್ರಮಾಣಕ್ಕಾಗಿ ಟೀಕೆಗಳನ್ನು ಎದುರಿಸಿದೆ. ಗಮನಾರ್ಹವಾಗಿ, ಇದು ಮಾಹಿತಿ ಹಕ್ಕು ಕಾಯ್ದೆಯಿಂದ ವಿನಾಯಿತಿ ಪಡೆದಿದೆ.

ಇನ್ನೂ ಹೆಚ್ಚು ಓದಿ

ಜಾರ್ಖಂಡ್​ನಲ್ಲಿ 17ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ; ಜಲಫಿರಂಗಿಗೂ ಬೆದರದ ಯುವಜನರು

Jharkhand students protest enter 17th day: ಜಾರ್ಖಂಡ್​ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ನಡೆದಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆಯ 17ನೇ ದಿನ ಉಗ್ರ ರೂಪ ಪಡೆದಿದ್ದು, ವಿದ್ಯಾರ್ಥಿಗಳು ವಿಧಾನಸೌಧ ಮುತ್ತಿಗೆಗೆ ಪ್ರಯತ್ನಿಸಿದ್ದಾರೆ. ಜಾರ್ಖಂಡ್ ಪೊಲೀಸರು ಜಲಫಿರಂಗಿ ಬಳಸಿ ವಿದ್ಯಾರ್ಥಿಗಳನ್ನು ತಡೆಯಲು ಯತ್ನಿಸುತ್ತಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ತನಿಖೆ ಮುಕ್ತಾಯಗೊಳಿಸಿ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ

ಸಿಬಿಐ ತನಿಖೆಯಲ್ಲಿ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಎನ್‌ಟಿಎ ವಿಷಯ ತಜ್ಞರು, ಸಂಘಟಿತರಾಗಿ ಕ್ರಿಮಿನಲ್ ಸಂಚು ಮಾಡಿದ್ದರು ಎಂಬುದು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ (NTA) ವಿಷಯ ತಜ್ಞರು ಪರೀಕ್ಷಾ ಪ್ರಶ್ನೆಗಳನ್ನು ಸೋರಿಕೆ ಮಾಡಿ, ಹೆಚ್ಚಿನ ಹಣಕ್ಕೆ ಮಧ್ಯವರ್ತಿಗಳ ಜಾಲದ ಮೂಲಕ ಅಭ್ಯರ್ಥಿಗಳಿಗೆ ತಲುಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ತನಿಖಾ ಸಂಸ್ಥೆಯು ಚಾರ್ಜ್‌ಶೀಟ್ ಸಲ್ಲಿಸಿದ್ದು, ಎನ್‌ಟಿಎಯ ಮೂವರು ವಿಷಯ ತಜ್ಞರು, ಕೋಚಿಂಗ್ ಸೆಂಟರ್ ನಿರ್ವಾಹಕರು, ಮಧ್ಯವರ್ತಿಗಳು ಮತ್ತು ಅಭ್ಯರ್ಥಿಗಳು ಸೇರಿದಂತೆ ಒಟ್ಟು 13 ಜನರನ್ನು ಆರೋಪಿಗಳಾಗಿ ಹೆಸರಿಸಿದೆ. ಈ ಕುರಿತು ಪೂರ್ತಿ ವಿವರ ಇಲ್ಲಿದೆ.

Anil Ambani vs EPFO: ಇಪಿಎಫ್​ಒಗೆ ಅಂಬಾನಿಯಿಂದ 1,816 ಕೋಟಿ ರೂ ನಷ್ಟ; ಸಿಬಿಐನಿಂದ ಪ್ರಕರಣ ದಾಖಲು

CBI books case against Anil Ambani for allegedly causing loss to EPFO: ಇಪಿಎಫ್​ಒ ಸಂಸ್ಥೆಗೆ 1,816 ಕೋಟಿ ರೂ ನಷ್ಟ ತಂದ ಆರೋಪ ಅನಿಲ್ ಅಂಬಾನಿ ಹಾಗೂ ರಿಲಯನ್ಸ್ ಕ್ಯಾಪಿಟಲ್ ಸಂಸ್ಥೆ ಮೇಲಿದೆ. ಇಪಿಎಫ್​ಒ ನೀಡಿದ ದೂರಿನ ಮೇರೆಗೆ ಸಿಬಿಐ ಎಫ್​ಐಆರ್ ದಾಖಲಿಸಿದೆ. ರಿಲಯನ್ಸ್ ಕ್ಯಾಪಿಟಲ್ ಹೊರಡಿಸಿದ ಡಿಬಂಚರ್​ಗಳ (ಎನ್​ಸಿಡಿ) ಮೇಲೆ ಇಪಿಎಫ್​ಒ ಹೂಡಿಕೆ ಮಾಡಿ ಈ ನಷ್ಟ ಕಂಡಿದ್ದು ತಿಳಿದುಬಂದಿದೆ.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್​ಶೀಟ್ ಸಲ್ಲಿಸಿದ ಸಿಬಿಐ

ವಾಲ್ಮೀಕಿ ಅಭಿವೃದ್ಧಿ ನಿಗಮದ 89.63 ಕೋಟಿ ರೂ. ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಜನರ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ. ಸಚಿವರ ಕುಟುಂಬಸ್ಥರ ಖಾತೆಗಳಿಗೆ 1.20 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿರುವುದು ಹಾಗೂ ಬೆನಾಮಿ ಕಾರು ಖರೀದಿಯ ಬಗ್ಗೆ ಚಾರ್ಜ್​ಶೀಟ್​​​ನಲ್ಲಿ ತನಿಖಾ ಸಂಸ್ಥೆ ಉಲ್ಲೇಖಿಸಿದೆ.

ತ್ವಿಶಾ ಶರ್ಮಾ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಬಿಐನಿಂದ ಗಿರಿಬಾಲಾ ಸಿಂಗ್ ಬಂಧನ

CBI Nabs Ex-Judge Giribala Singh in Twisha Sharma Case: ಮಾಜಿ ಮಾಡೆಲ್ ತ್ವಿಶಾ ಶರ್ಮಾ ಶಂಕಾಸ್ಪದ ಸಾವು ಪ್ರಕರಣದಲ್ಲಿ ಸಿಬಿಐ ಮಹತ್ವದ ಕಾರ್ಯಾಚರಣೆ ನಡೆಸಿ, ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಬಂಧಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ, ಗರ್ಭಪಾತದ ಒತ್ತಡದ ವಾಟ್ಸಾಪ್ ಚಾಟ್‌ಗಳು ಹಾಗೂ ವರದಕ್ಷಿಣೆ ಕಿರುಕುಳದ ಆರೋಪಗಳು ಜಾಮೀನು ರದ್ದತಿಗೆ ಪ್ರಮುಖ ಕಾರಣಗಳಾಗಿವೆ.

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ ಮತ್ತು ಸೆಂಥಿಲ್ ಬಾಲಾಜಿಗೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 15ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಿಜಯ್ ಮಾತ್ರವಲ್ಲದೇ ಸೆಂಥಿಲ್ ಬಾಲಾಜಿ ಕೂಡ ಮಾರ್ಚ್ 17ರಂದು ಸಿಬಿಐ ವಿಚಾರಣೆ ಎದುರಿಸಬೇಕಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತ ವಿಶ್ವನಾಥ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಶ್ವನಾಥ್ ಸಹೋದರನನ್ನು ಬ್ರೂಸ್‌ಪೇಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎನ್ನಲಾಗಿದೆ.

5 ಕೋಟಿ ರೂ ನಗದು, ಮರ್ಸಿಡಿಸ್, ಆಡಿ ಕಾರುಗಳು, ಕೆಜಿಗಟ್ಟಲೆ ಚಿನ್ನ ಸಹಿತ ಭ್ರಷ್ಟ ಐಪಿಎಸ್ ಅಧಿಕಾರಿ ಸೆರೆ!

ಪಂಜಾಬ್ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿದ್ದಾರೆ. 8 ಲಕ್ಷ ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಡಿಐಜಿ ಮನೆಯಲ್ಲಿ 5 ಕೋಟಿ ರೂ. ನಗದು, 1.5 ಕೆಜಿ ಚಿನ್ನ ಸೇರಿ ಅಪಾರ ಅಕ್ರಮ ಸಂಪತ್ತು ಪತ್ತೆಯಾಗಿದೆ.

ಕರೂರು ಕಾಲ್ತುಳಿತ ಘಟನೆ: ಸಿಬಿಐಗೆ ತನಿಖೆ ಹೊಣೆ ವಹಿಸಿದ ಸುಪ್ರೀಂಕೋರ್ಟ್

SC Hands Over Karur Stampede Investigation To CBI: ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ನಟ ವಿಜಯ್ ರಾಜಕೀಯ ಕಾರ್ಯಕ್ರಮದಲ್ಲಿ ಕಾಲ್ತುಳಿತವಾಗಿ ಹಲವರು ಬಲಿಯಾಗಿದ್ದರು. ಆ ಘಟನೆಯ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿ ಸರ್ವೋಚ್ಚ ನ್ಯಾಯಾಲಯ ಇಂದು (ಅ. 13) ಆದೇಶ ಹೊರಡಿಸಿದೆ. ನಟ ವಿಜಯ್ ಕೂಡ ಆ ಘಟನೆಯನ್ನು ಸಿಬಿಐ ತನಿಖೆಗೆ ಕೊಡಬೇಕೆಂದು ಒತ್ತಾಯಿಸಿದ್ದರು.

ಸಿಬಿಐ ದಾಳಿ: ಕರ್ನಾಟಕ ವಾಲ್ಮೀಕಿ ನಿಗಮ ಹಗರಣದಲ್ಲಿ ಬಿಜೆಪಿಗೂ ನಂಟು?

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ Valmiki Scam) ವರ್ಗಾವಣೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬಳಿಕ ಇದೀಗ ಸಿಬಿಐ ದಾಳಿ ಮಾಡಿದೆ. ಹೌದು..ಬಳ್ಳಾರಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಗೋವಿಂದರಾಜಲು ಅವರ ಮನೆ ಮೇಲೆ ಸಿಬಿಐ ದಾಳಿ ಮಾಡಿದೆ. ಇಂದು ಬೆಳಗ್ಗೆ 3 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದ CBI ಅಧಿಕಾರಿಗಳು, ಗೋವಿಂದರಾಜಲು ಮನೆಯಿಂದ ಕೆಲ ಮಹತ್ವದ ದಾಖಲೆಗಳನ್ನು ಮೂಟೆಯಲ್ಲಿ ಕೊಂಡೊಯ್ದಿದ್ದಾರೆ. ಹಾಗಾದ್ರೆ, ವಾಲ್ಮೀಕಿ ನಿಗಮದ ಹಗರಣದಲ್ಲಿ ಬಿಜೆಪಿಗೂ ನಂಟು ಇದೆಯಾ ಎನ್ನು ಪ್ರಶ್ನೆಗಳು ಉದ್ಭವಿಸಿವೆ.

ಬೆಂಗಳೂರಿನಲ್ಲಿ ಲಕ್ಷಾಂತರ ರೂ. ವಂಚನೆ: ಇಮೇಜ್ ಸರ್ಚ್ ಟೂಲ್​ಗಳನ್ನು ಬಳಸಿ 20 ವರ್ಷಗಳ ನಂತರ ಆರೋಪಿಯ ಬಂಧಿಸಿದ ಸಿಬಿಐ!

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬ್ಯಾಂಕ್ ವಂಚನೆ ಆರೋಪಿ ಮಣಿ ಎಂ ಶೇಖರ್ ಎಂಬಾಕೆಯನ್ನು ಇಮೇಜ್ ಸರ್ಚ್ ಟೂಲ್​ಗಳ ನೆರವಿನಿಂದ ಪತ್ತೆ ಮಾಡಿ ಸಿಬಿಐ ಬಂಧಿಸಿದೆ. ಆರೋಪಿಯು ಮಧ್ಯಪ್ರದೇಶದ ಇಂದೋರ್‌ನಲ್ಲಿ ವಾಸಿಸುತ್ತಿದ್ದರು. ಎಸ್​​ಬಿಐ ಬ್ಯಾಂಕ್​ನ ಬೆಂಗಳೂರಿನ ಶಾಖೆಗೆ 8 ಲಕ್ಷ ರೂಪಾಯಿಗಳ ವಂಚನೆ ಪ್ರಕರಣ ಇದಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಣಿ ಎಂ ಶೇಖರ್ ಪತಿ ರಾಮಲಿಂಗಂ ಶೇಖರ್ ಈಗಾಗಲೇ ಮೃತಪಟ್ಟಿರುವುದು ಗೊತ್ತಾಗಿದೆ.

Forgery: 6,200 ಕೋಟಿ ರೂ ಸಾಲ ಅಕ್ರಮ ಪ್ರಕರಣ, ಯುಕೋ ಬ್ಯಾಂಕ್ ಮಾಜಿ ಮುಖ್ಯಸ್ಥರ ಬಂಧನ; ಮೇ 21ರವರೆಗೆ ಇಡಿ ಕಸ್ಟಡಿಗೆ

Former UCO bank chairman Subodh Kumar Goel arrested by ED: ಕಾನ್​ಕ್ಯಾಸ್ಟ್ ಸ್ಟೀಲ್ ಕಂಪನಿಯ 6,200 ಕೋಟಿ ರೂ ಅಕ್ರಮ ಸಾಲ ಆರೋಪದ ಪ್ರಕರಣದಲ್ಲಿ ಯುಕೋ ಬ್ಯಾಂಕ್ ಮಾಜಿ ಛೇರ್ಮನ್ ಸುಬೋಧ್ ಕುಮಾರ್ ಗೋಯಲ್ ಅವರನ್ನು ಬಂಧಿಸಲಾಗಿದೆ. ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಇಡಿ ಅಧಿಕಾರಿಗಳು ಮೇ 16ರಂದು ಬಂಧಿಸಿದ್ದಾರೆ. ನ್ಯಾಯಾಲಯವು ಅವರನ್ನು ಮೇ 21ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರಕರಣ ಹಾಗೂ ಯುಕೋ ಬ್ಯಾಂಕ್​​ನ ಪಾತ್ರ ಇತ್ಯಾದಿ ವಿವರ ಇಲ್ಲಿದೆ...

ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!