CBI

CBI

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (CBI) ಭಾರತದ ಪ್ರಮುಖ ಅಪರಾಧ ತನಿಖಾ ಸಂಸ್ಥೆಯಾಗಿದ್ದು, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಮೂಲತಃ ಭ್ರಷ್ಟಾಚಾರ ಪ್ರಕರಣಗಳ ಮೇಲೆ ಕೇಂದ್ರೀಕರಿಸಿದ ಇದು 1965 ರಲ್ಲಿ ವಿವಿಧ ಕೇಂದ್ರ ಕಾನೂನು ಉಲ್ಲಂಘನೆಗಳು, ಬಹು-ರಾಜ್ಯ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಪ್ರಕರಣಗಳನ್ನು ಒಳಗೊಳ್ಳಲು ತನ್ನ ಪಾತ್ರವನ್ನು ವಿಸ್ತರಿಸಿತು. ಇಂಟರ್‌ಪೋಲ್‌ನೊಂದಿಗೆ ಭಾರತದ ಸಂಪರ್ಕದ ಕೇಂದ್ರವಾಗಿದ್ದರೂ, ಸಿಬಿಐ ಅಕ್ರಮಗಳು, ರಾಜಕೀಯ ಪ್ರಭಾವ ಮತ್ತು ಕಡಿಮೆ ಶಿಕ್ಷೆಯ ಪ್ರಮಾಣಕ್ಕಾಗಿ ಟೀಕೆಗಳನ್ನು ಎದುರಿಸಿದೆ. ಗಮನಾರ್ಹವಾಗಿ, ಇದು ಮಾಹಿತಿ ಹಕ್ಕು ಕಾಯ್ದೆಯಿಂದ ವಿನಾಯಿತಿ ಪಡೆದಿದೆ.

ಇನ್ನೂ ಹೆಚ್ಚು ಓದಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಮಲ್ಲಮ್ಮ ಸಾಕ್ಷ್ಯ ಹೇಳಿಕೆ ಬೇಡ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ ಸಿಬಿಐ!

ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ತೀವ್ರವಾಗಿ ನಡೆಯುತ್ತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಈಗಾಗಲೇ ಮಾಫಿ ಸಾಕ್ಷಿಯಗಿರುವ ಬಸವರಾಜ ಮುತ್ತಗಿ ಹೇಳಿಕೆ ದಾಖಲು ಮಾಡಿದ್ದಾನೆ. ಇದೇ ವೇಳೆ, ಮೃತ ಯೋಗೀಶ್ ಅವರ ಪತ್ನಿ ಮಲ್ಲಮ್ಮ ಅವರ ಸಾಕ್ಷ್ಯ ಹೇಳಿಕೆ ಬೇಡ ಎಂದು ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿರುವುದು ಕುತೂಹಲ ಕೆರಳಿಸಿದೆ.

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ, ಕನಕಲಕ್ಷ್ಮೀ ಬಂಧನ ಆಗಬೇಕು: ವಕೀಲರ ಸಂಘದ ಅಧ್ಯಕ್ಷ ವಿವೇಕ್ ಆಗ್ರಹ

Advocate Jeeva suicide case: ಭೋವಿ ನಿಗಮ ಅವ್ಯವಹಾರದ ಆರೋಪಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆನ್ನಲಾದ ಡಿವೈಎಸ್​ಪಿ ಕನಕಲಕ್ಷ್ಮೀಯನ್ನು ಕೂಡಲೇ ಬಂಧಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಜೀವಾಳಿಗೆ ಚಿತ್ರ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಲಾಗಿದೆ ಎನ್ನುವ ಆರೋಪ ಇದೆ.

ಡಿಎ ಪ್ರಕರಣ: ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳ ಎದುರು ಹಾಜರಾದ ಡಿಕೆ ಶಿವಕುಮಾರ್

ಶಿವಕುಮಾರ್ ಅವರ ಡಿಎ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅದನ್ನೀಗ ಲೋಕಾಯುಕ್ತಗೆ ಟ್ರಾನ್ಸ್​​ಫರ್ ಮಾಡಿದೆಯೆಂದು ಖುದ್ದು ಡಿಸಿಎಂ ಹೇಳುತ್ತಾರೆ. ಹಾಗೆ ಮಾಡಲು ಅವಕಾಶವಿದೆಯೇ? ಎರಡೂ ಸ್ವಾಯತ್ತ ಸಂಸ್ಥೆಗಳಾದರೂ ಸಿಬಿಯ ಕೇಂದ್ರ ಸರ್ಕಾರದ ಅಡಿ ಬರುತ್ತದೆ.

ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ರಾಜಕೀಯ ಅಸ್ತ್ರಗಳಾಗಿ ಬಳಸಬಾರದು: ಜಿ ಪರಮೇಶ್ವರ್

ವಾಲ್ಮೀಕಿ ನಿಗಮದ ಹಗರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಮತ್ತು ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಎಲ್ಲೂ ಓಡಿಹೋಗಿಲ್ಲ ತಮ್ಮ ಕುಟುಂಬದವರೊಂದಿಗೆ ಓಡಾಡಿಕೊಂಡಿದ್ದಾರೆ ಎಂದು ಹೇಳಿದ ಪರಮೇಶ್ವರ್ ದದ್ದಲ್ ಮತ್ತು ನಾಗೇಂದ್ರ ಇಬ್ಬರನ್ನೂ ಎಸ್ಐಟಿ ತನಿಖೆಗೊಳಪಡಿಸಿದೆ ಎಂದರು.

ಮಾಜಿ ಸಚಿವ ಬಿ ನಾಗೇಂದ್ರ ಮನೆ ಮೇಲೆ ದಾಳಿ ನಡೆಸುವ ಅವಕಾಶ ಈಡಿಗೆ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು ನಗರದ ಬಿಜೆಪಿ ನಾಯಕ ಎನ್ ಆರ್ ರಮೇಶ್ ಜಾರಿ ನಿರ್ದೇನಾಲಯಕ್ಕೆ ದೂರು ನೀಡಿರುವುದನ್ನು ಶಿವಕುಮಾರ್ ಅವರಿಗೆ ಪತ್ರಕರ್ತರು ತಿಳಿಸಿದಾಗ, ಅವರ ದೂರನ್ನು ಮಾನ್ಯ ಮಾಡಲು ಸ್ವೀಕರಿಸಲು ಬರಲ್ಲ, ದೂರು ಸಲ್ಲಿಕೆಯಾಗಬೇಕಾದರೆ ಅದಕ್ಕೊಂದು ವ್ಯವಸ್ಥೆ ಇದೆ ಎಂದು ಹೇಳಿದರು.

180 ಕೋಟಿ ರೂ ಸಾಲದ ಪ್ರಕರಣ: ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿದ ಸಿಬಿಐ ಕೋರ್ಟ್

Non bailable warrant issued against Vijay Mallya: ಎಂಟು ವರ್ಷದ ಹಿಂದೆ ದೇಶ ತೊರೆದು ಹೋದ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಮತ್ತೊಂದು ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ. ಮುಂಬೈನ ವಿಶೇಷ ಸಿಬಿಐ ಕೋರ್ಟ್ ಕಳೆದ ವಾರ ಓಪನ್ ಎಂಡೆಡ್ ವಾರಂಟ್ ಹೊರಡಿಸಿದೆ. ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ ಪಡೆದ ಸಾಲವನ್ನು ಉದ್ದೇಶಿತ ಕಾರ್ಯಗಳಿಗೆ ಬಳಸದೆ ಬೇರೆಡೆಗೆ ವರ್ಗಾಯಿಸಿ, ಸಾಲ ತೀರಿಸದೇ ಡೀಫಾಲ್ಟ್ ಆದ ಆರೋಪ ಮಲ್ಯ ಮೇಲಿದೆ.

Arvind Kejriwal: ಸಿಬಿಐನಿಂದ ಕೇಜ್ರಿವಾಲ್ ಬಂಧನ; ಸಕ್ಕರೆ ಮಟ್ಟ ಕಡಿಮೆಯಾಗಿ ಕೋರ್ಟ್​ನಲ್ಲಿ ಸುಸ್ತಾದ ಸಿಎಂ

Delhi Excise Policy Scam: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Arvind Kejriwal: ದೆಹಲಿ ಅಬಕಾರಿ ನೀತಿ ಹಗರಣ; ಜಾಮೀನು ವಿಚಾರಣೆಗೂ ಮೊದಲೇ ಸಿಬಿಐನಿಂದ ಅರವಿಂದ್ ಕೇಜ್ರಿವಾಲ್ ಬಂಧನ

Delhi Excise Policy Scam: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದರು. ಸುಪ್ರೀಂ ಕೋರ್ಟ್​ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆ (ಬುಧವಾರ) ನಡೆಯಬೇಕಿತ್ತು. ಅದಕ್ಕೂ ಮೊದಲೇ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ, ತನ್ನ ವಶಕ್ಕೆ ಪಡೆದಿದೆ.

ಲಂಚ ಪಡೆದ ಜಿಎಸ್​ಟಿ ಅಧಿಕಾರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ: ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ತನಿಖೆ ಮತ್ತು ವಿಚಾರಣೆ ನಡೆಸಲು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಲಾಗಿದೆ. ಹೀಗಾಗಿ ಆರೋಪಿಗೆ 5 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ ಎಂದು ಭಾರಿ ಮೊತ್ತದ ದಂಡ ವಿಧಿಸಿದ್ದಕ್ಕೆ ನ್ಯಾಯಾಲಯ ಕಾರಣ ನೀಡಿದೆ. ದೂರುದಾರಿಂದ ಲಂಚ ಪಡೆಯುತ್ತಿದ್ದಾಗ 2021 ರ ಮಾರ್ಚ್‌ನಲ್ಲಿ ಅಧಿಕಾರಿಯನ್ನು ಸಿಬಿಐ ರೆಡ್​​ಹ್ಯಾಂಡ್ ಆಗಿ ಹಿಡಿದಿತ್ತು.

ಹೇಯ್, ಏನು ಯಾವಾಗ್ಲೂ ನೀನೇ ಕೇಳ್ತಿರ್ತೀಯಾ?: ಸುದ್ದಿಗಾರರೊಬ್ಬರನ್ನು ಗದರಿದ ಸಿದ್ದರಾಮಯ್ಯ

Siddaramaiah at Mysore: ಮೈಸೂರಿಗೆ ಹೋಗಿದ್ದ ಸಿದ್ದರಾಮಯ್ಯಗೆ ಅಲ್ಲಿ ಸುದ್ದಿಗಾರರಿಂದ ಪ್ರಶ್ನೆಗಳ ಸುರಿಮಳೆಯೇ ಆಯಿತು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕೇಳಲಾದ ಸಾಲು ಸಾಲು ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಂಯಮದಿಂದಲೇ ಉತ್ತರ ನೀಡಿದರು. ಕೆಲವೊಮ್ಮೆ ಮಾಧ್ಯಮದವರ ಪ್ರಶ್ನೆ ಅತಿರೇಕಕ್ಕೆ ಹೋದಾಗ ಗದರಿದ ಘಟನೆಯೂ ಆಯಿತು. ಸಾಲು ಸಾಲಾಗಿ ಪ್ರಶ್ನೆ ಕೇಳಲು ಹೋದ ಮಾಧ್ಯಮದವರೊಬ್ಬರಿಗೆ ಸಿದ್ದರಾಮಯ್ಯ ಗದರಿದರು.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ