CET

CET

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET ಅಥವಾ K-CET) ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಕರ್ನಾಟಕ ಸರ್ಕಾರವು 1994 ರಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕವನ್ನು ಸ್ಥಾಪಿಸಿತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತದೆ. ಇದು ಕರ್ನಾಟಕದ ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಸಮಯದ ಎಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ, ಕೃಷಿ ಶಿಕ್ಷಣ (ಕೃಷಿ ವಿಜ್ಞಾನ) ಮತ್ತು ಪಶುವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ಆಫ್‌ಲೈನ್ ಪರೀಕ್ಷೆಯಾಗಿದೆ. ಸಿಇಟಿ ಮೂಲಕ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಾತಿ ನೀಡಲಾಗುತ್ತದೆ. ವೈದ್ಯಕೀಯ (ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಇತ್ಯಾದಿ) ಪ್ರವೇಶ ಪರೀಕ್ಷೆಗೆ ಭಾರತದಲ್ಲಿ ನೀಟ್ ಪರೀಕ್ಷೆಯನ್ನು ರಾಷ್ಟ್ರೀಕರಣಗೊಳಿಸುವ ಮೊದಲು, ಸಿಇಟಿ ಪರೀಕ್ಷೆಯ ಮುಖಾಂತರ ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕದಾದ್ಯಂತ ಬಹುತೇಕ ಎಲ್ಲ ಜಿಲ್ಲೆ, ನಗರಗಳಲ್ಲಿ ಏಪ್ರಿಲ್ – ಮೇ ತಿಂಗಳಲ್ಲಿ ನಡೆಸಲಾಗುತ್ತದೆ

ಇನ್ನೂ ಹೆಚ್ಚು ಓದಿ

ನೀತಿ ಸಂಹಿತೆ ಜಾರಿ ಸಮಸ್ಯೆ: ಕೆಸಿಇಟಿ ಫಲಿತಾಂಶ 2024 ಗೊಂದಲಕ್ಕೆ ತೆರೆ ಎಳೆದ ಕೆಇಎ ನಿರ್ದೇಶಕ

ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶದ್ವಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET-2024) ಫಲಿತಾಂಶವನ್ನು ಪತ್ರಿಕಾ ಪ್ರಕಟಣೆ ನೀಡಿ‌, ಸುದ್ದಿಗೋಷ್ಠಿ ಮಾಡದೇ ಏಕಾಏಕಿ ಫಲಿತಾಂಶ ಪ್ರಕಟಿಸಿತ್ತು. ಈ ಬೆನ್ನಲ್ಲೇ ವ್ಯಾಪಕ ಆಕ್ರೋಶ ಹಾಗೂ ಗೊಂದಲ ಸೃಷ್ಟಿಯಾಗಿತ್ತು. ಸದ್ಯ ಕೆಇಎಯಲ್ಲಿ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಬಳಿ ಮುಂದೆ ಈ ರೀತಿ ಆಗದೇ ಇರುವ ಹಾಗೆ ಜವಾಬ್ದಾರಿ ವಹಿಸೋದಾಗಿ ಹೇಳಿಕೆ ನೀಡಿದ್ದಾರೆ.

CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.

CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಸಿಇಟಿ ಪರೀಕ್ಷೆ ಗೊಂದಲ ಪರಿಶೀಲನೆಗೆ ರಾಜ್ಯ ಸರ್ಕಾರ ನಾಲ್ವರು ಸದಸ್ಯರ ತಜ್ಞರ ಸಮಿತಿಯನ್ನು ರಚನೆ ಮಾಡಿತ್ತು. ಇದೀಗ ಆ ತಜ್ಞರ ಸಮಿತಿಯೂ ಪರೀಕ್ಷೆ ಗೊಂದಲ ಕುರಿತಾಗಿ ವರದಿ ಸಲ್ಲಿಸಿದೆ.

CET Exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ಕಂಗಾಲಾದ ವಿದ್ಯಾರ್ಥಿಗಳು, ಪೋಷಕರು

ಸಿಇಟಿ ಪರೀಕ್ಷೆಗಳಲ್ಲಿ ಕೇಳಲಾದ ಜೀವಶಾಸ್ತ್ರ, ಗಣಿತ, ರಸಾಯನಶಾಸ್ತ್ರ ಹಾಗೂ ಭೌತಶಾಸ್ತ್ರ ವಿಷಯಗಳ ಕೈಬಿಟ್ಟಿರೋ ಪಠ್ಯಕ್ರಮ ಹಾಗೂ ವಿಷಯಗಳ ಪ್ರಶ್ನೆ ಕೇಳಿದ್ದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕವಾಗಿದೆ. ಸದ್ಯ ಸಿಇಟಿ ಪರೀಕ್ಷೆಗಳ ಇಂದು ಮುಗಿದ್ದಿದ್ದರೂ ಕೈಬಿಟ್ಟಿರೋ ಪಠ್ಯಕ್ರಮ ಹಾಗೂ ವಿಷಯಗಳ ಪ್ರಶ್ನೆ ಕೇಳಿದ್ದು ವಿದ್ಯಾರ್ಥಿಗಳ ಮಾನಸೀಕತೆಯ ಮೇಲೆ ಪರಿಣಾಮ ಬೀರಲಿದೆ ಎಂದು ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಮತ್ತು ಸಿಇಟಿ ತರಬೇತುದಾರ ಕೆಎಸ್ ಶ್ರೀಕಾಂತ ಆರೋಪಿಸಿದ್ದಾರೆ.

CET Exam: ಇಂದಿನಿಂದ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿ ಕೆಇಎ ಎಡವಟ್ಟು

ರಾಜ್ಯದಾದ್ಯಂತ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆಯ ನಡೆಯುತ್ತಿದೆ. ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿದೆ. ಪರೀಕ್ಷಾ ಅಕ್ರಮ ತಡೆಯಲೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಾಗ್ಯೂ, ವಿದ್ಯಾರ್ಥಿಗಳಿಗೆ ದೂರುದ ಊರುಗಳಲ್ಲಿ ಪರೀಕ್ಷೇ ಕೇಂದ್ರಗಳನ್ನು ನಿಗದಿಪಡಿಸಿರುವುದಕ್ಕೆ ವಿದ್ಯಾರ್ಥಿಗಳು, ಪೋಷಕರಿಂದ ಆಕ್ರೋಶ ವ್ಯಕ್ತವಾಗಿದೆ.

ಏ. 20, 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆ ದಿನಾಂಕ ಬದಲು: ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

CET Exam Date: ಇದೇ ಏಪ್ರಿಲ್ 20 ಮತ್ತು 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯ ದಿನಾಂಕ ಬದಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ ಹೊಸ ದಿನಾಂಕವನ್ನು ಪ್ರಕಟಿಸಿದೆ.

‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು