AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET

KCET

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET ಅಥವಾ K-CET) ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಕರ್ನಾಟಕ ಸರ್ಕಾರವು 1994 ರಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕವನ್ನು ಸ್ಥಾಪಿಸಿತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತದೆ. ಇದು ಕರ್ನಾಟಕದ ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಸಮಯದ ಎಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ, ಕೃಷಿ ಶಿಕ್ಷಣ (ಕೃಷಿ ವಿಜ್ಞಾನ) ಮತ್ತು ಪಶುವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ಆಫ್‌ಲೈನ್ ಪರೀಕ್ಷೆಯಾಗಿದೆ. ಸಿಇಟಿ ಮೂಲಕ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಾತಿ ನೀಡಲಾಗುತ್ತದೆ. ವೈದ್ಯಕೀಯ (ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಇತ್ಯಾದಿ) ಪ್ರವೇಶ ಪರೀಕ್ಷೆಗೆ ಭಾರತದಲ್ಲಿ ನೀಟ್ ಪರೀಕ್ಷೆಯನ್ನು ರಾಷ್ಟ್ರೀಕರಣಗೊಳಿಸುವ ಮೊದಲು, ಸಿಇಟಿ ಪರೀಕ್ಷೆಯ ಮುಖಾಂತರ ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕದಾದ್ಯಂತ ಬಹುತೇಕ ಎಲ್ಲ ಜಿಲ್ಲೆ, ನಗರಗಳಲ್ಲಿ ಏಪ್ರಿಲ್ – ಮೇ ತಿಂಗಳಲ್ಲಿ ನಡೆಸಲಾಗುತ್ತದೆ

ಇನ್ನೂ ಹೆಚ್ಚು ಓದಿ

KCET Result 2025 Today: ಇಂದು ಸಿಇಟಿ ಫಲಿತಾಂಶ, ಎಷ್ಟು ಗಂಟೆಗೆ? ರಿಸಲ್ಟ್‌ ಚೆಕ್​ ಮಾಡುವುದ್ಹೇಗೆ? ಇಲ್ಲಿದೆ ವಿವರ

KCET Result 2025: ಸಿಇಟಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಇದು. ಇಂದು (ಮೇ 24) UG CET-2025 ಫಲಿತಾಂಶ ಪ್ರಕಟ ಮಾಡುವ ಮುಹೂರ್ತ ಫಿಕ್ಸ್ ಆಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟ ಮಾಡಲಿದ್ದಾರೆ. ಹಾಗಾದ್ರೆ, ಎಷ್ಟು ಗಂಟೆ ರಿಸಲ್ಟ್​ ಪ್ರಕಟವಾಗುತ್ತೆ? ಆನ್​ಲೈನ್​ನಲ್ಲಿ ಫಲಿತಾಂಶ ಚೆಕ್​ ಮಾಡುವುದ್ಹೇಗೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

KCET Results 2025: ನಾಳೆ ಕರ್ನಾಟಕ ಸಿಇಟಿ ಫಲಿತಾಂಶ; ರಿಸಲ್ಟ್ ಚೆಕ್‌ ಮಾಡುವ ವಿಧಾನ ಇಲ್ಲಿದೆ

KCET Result 2025 Date: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶ ನಾಳೆ ಅಂದರೆ ಮೇ 24ರಂದು ಪ್ರಕಟವಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸಿಇಟಿ ರಿಸಲ್ಟ್ ಯಾವಾಗ ಎಂದು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾತರರಿಂದ ಕಾಯುತ್ತಿದ್ದರು. ಇದೀಗ ಕೊನೆಗೂ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಫಲಿತಾಂಶವನ್ನು ಹೇಗೆ ಚೆಕ್​ ಮಾಡಬೇಕೆನ್ನುವ ವಿಧಾನ ಈ ಕೆಳಗಿನಂತಿದೆ ನೋಡಿ.

KCET Result 2025 LIVE: ಮೇ 24ರಂದು ಕೆಸಿಇಟಿ ​​ಫಲಿತಾಂಶ ಪ್ರಕಟ

ಕರ್ನಾಟಕ ಸಿಇಟಿ ಫಲಿತಾಂಶ 2025 ಲೈವ್​: ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ಫಲಿತಾಂಶ ಮೇ 24ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಅವರ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸುವ ಮೂಲಕ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ನೋಡಬಹುದಾಗಿದೆ .

Career Options After KCET: ಕೆಸಿಇಟಿ ಫಲಿತಾಂಶ ಬಂದ ನಂತರ ಮುಂದೇನು? ಯಾವ ಕೋರ್ಸ್​​​​​ ಆಯ್ಕೆ ಮಾಡಬೇಕು?

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025 ರ ಫಲಿತಾಂಶ ಶೀಘ್ರದಲ್ಲೇ ಹೊರಬೀಳಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಫಾರ್ಮಸಿ ಮುಂತಾದ ಹಲವು ವೃತ್ತಿ ಆಯ್ಕೆಗಳು ಲಭ್ಯವಿದೆ. ಈ ಲೇಖನದಲ್ಲಿ ವಿವಿಧ ಕೋರ್ಸ್‌ಗಳು, ಪ್ರಮುಖ ಕಾಲೇಜುಗಳು ಮತ್ತು ಭವಿಷ್ಯದ ವೃತ್ತಿಪರ ಆಯ್ಕೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ನಿಮ್ಮ ಆಸಕ್ತಿ ಮತ್ತು ರ‍್ಯಾಂಕ್ ಆಧರಿಸಿ ಸೂಕ್ತವಾದ ವೃತ್ತಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಿ.

KCET Results 2025: ಈ ವಾರದಲ್ಲೇ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ಪರಿಶೀಲಿಸಲು ನೇರ ಲಿಂಕ್​ ಇಲ್ಲಿದೆ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025 ರ ಫಲಿತಾಂಶವು ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ. KEA ಅಧಿಕಾರಿಗಳು ಈ ವಾರ ಫಲಿತಾಂಶ ಪ್ರಕಟಿಸುವ ಸಾಧ್ಯತೆಯನ್ನು ಸೂಚಿಸಿದ್ದಾರೆ. cetonline.karnataka.gov.in ಅಥವಾ karresults.nic.in ವೆಬ್‌ಸೈಟ್‌ಗಳ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು. ಫಲಿತಾಂಶದಲ್ಲಿ ದೋಷ ಕಂಡುಬಂದರೆ, ಫಲಿತಾಂಶ ಪ್ರಕಟಣೆಯ ದಿನಾಂಕದಿಂದ ಮೂರು ದಿನಗಳ ವರೆಗೆ ಮರು ಸಲ್ಲಿಸುವ ಅವಕಾಶವಿದೆ.

ಸಿಇಟಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹೊಸ ಮೊಬೈಲ್ ಆ್ಯಪ್ ಮತ್ತು ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ. ಆ ಮೂಲಕ ಸಿಇಟಿ ಅರ್ಜಿ ಸಲ್ಲಿಸಲು ಸೈಬರ್​​ ಸೆಂಟರ್​ಗೆ ಹೋಗಬೇಕಾಗಿಲ್ಲ. ಮೊಬೈಲ್ ಆ್ಯಪ್​​, ಪೋರ್ಟಲ್​ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಇನ್ನೇನು ಸಿಇಟಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸಿಇಟಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಕೆಇಎ ಹೊಸ ನಿಮಯ ಜಾರಿಗೆ ತಂದಿದೆ. ಈ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.

ಜನಿವಾರ ಧರಿಸಬಾರದೆಂದು ಪ್ರಾಧಿಕಾರವು ವಸ್ತ್ರಸಂಹಿತೆ ವಿಷಯದಲ್ಲಿ ಹೇಳಿಲ್ಲ: ಹೆಚ್ ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ-ಕೆಇಎ

ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಜನಿವಾರ ಧರಿಸಬಾದು ಅಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿಲ್ಲ, ವೆಬ್ಸೈಟ್​​ನಲ್ಲಿ ಅದನ್ನು ಪರಿಶೀಲಿಸಬಹುದು, ಸಿಇಟಿಯ ಉಸ್ತುವಾರಿಯನ್ನು 20,000 ಶಿಕ್ಷಕರಿಗೆ ವಹಿಸಲಾಗಿತ್ತು, ಅದರೆ ಕಾಲೇಜಿನ ಮುಖ್ಯದ್ವಾರದ ಬಳಿಯ ಒಬ್ಬ ಸಿಬ್ಬಂದಿಯಿಂದ ಉಳಿದವರೆಲ್ಲ ನೋವು ಅನುಭವಿಸುತ್ತಿದ್ದಾರೆ, ಅಚಾತುರ್ಯ ನಡೆದಿದ್ದೇಯಾದರೆ ಪ್ರಾಧಿಕಾರದ ಪರವಾಗಿ ಮತ್ತು ವೈಯಕ್ತಿಕವಾಗಿ ತಾನು ಬ್ರಾಹ್ಮಣ ಸಮಾಜದ ಕ್ಷಮೆ ಕೋರುವುದಾಗಿ ಪ್ರಸನ್ನ ಹೇಳಿದರು.

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನು ಹೇಳುತ್ತೆ?

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಬೆನ್ನಲ್ಲೇ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದೆ. ಕೊನೆಯ ದಿನವಾದ ನಿನ್ನೆ(ಏಪ್ರಿಲ್ 17) ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಸೂಚಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಬ್ರಾಹ್ಮಣ ಸಮುದಾಯ ಸಿಡಿದೆದ್ದಿದೆ. ಅಷ್ಟಕ್ಕೂ ಈ ಸಿಇಟಿ ವಸ್ತ್ರ ಸಂಹಿತೆ ಏನ್ ಹೇಳುತ್ತೆ? ಎನ್ನುವ ವಿವರ ಇಲ್ಲಿದೆ.

ಬೀದರ್: ಜನಿವಾರ ಧರಿಸಿದ್ದಕ್ಕೆ ಸಿಈಟಿ ಬರೆಯಲು ವಿದ್ಯಾರ್ಥಿಗೆ ನಿರಾಕರಣೆ, ನ್ಯಾಯ ಕೇಳುತ್ತಿರುವ ಯುವಕನ ಅಮ್ಮ

ಖಾಸಗಿ ಕಾಲೇಜುಗಳಲ್ಲಿ ಫೀಸ್ ಕಟ್ಟಲಾಗಲ್ಲ ನನ್ನ ಮಗನಿಗೆ ಸರ್ಕಾರೀ ಇಂಜಿನೀಯರಿಂಗ್ ಕಾಲೇಜಲ್ಲಿ ಸೀಟು ಕೊಡಲೇ ಬೇಕು ಅಂತ ಯುವಕನ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಘಟನೆಯನ್ನು ಖಂಡಿಸಿದ್ದಾರೆ, ಅಕ್ಷಮ್ಯ ಪ್ರಮಾದವೆಸಗಿರುವ ಕಾಲೇಜು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮತ್ತು ಯವಕನಿಗೆ ತೊಂದರೆಯಾಗದಂತೆ ಆಧಿಕಾರಿಗಳ ಜೊತೆ ಮಾತಾಡಿ ಪರಿಹಾರ ಸೂಚಿಸುವುದಾಗಿ ಹೇಳಿದ್ದಾರೆ.

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?