
CET
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET ಅಥವಾ K-CET) ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಕರ್ನಾಟಕ ಸರ್ಕಾರವು 1994 ರಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕವನ್ನು ಸ್ಥಾಪಿಸಿತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತದೆ. ಇದು ಕರ್ನಾಟಕದ ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಸಮಯದ ಎಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ, ಕೃಷಿ ಶಿಕ್ಷಣ (ಕೃಷಿ ವಿಜ್ಞಾನ) ಮತ್ತು ಪಶುವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾದ ಆಫ್ಲೈನ್ ಪರೀಕ್ಷೆಯಾಗಿದೆ. ಸಿಇಟಿ ಮೂಲಕ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಾತಿ ನೀಡಲಾಗುತ್ತದೆ. ವೈದ್ಯಕೀಯ (ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಇತ್ಯಾದಿ) ಪ್ರವೇಶ ಪರೀಕ್ಷೆಗೆ ಭಾರತದಲ್ಲಿ ನೀಟ್ ಪರೀಕ್ಷೆಯನ್ನು ರಾಷ್ಟ್ರೀಕರಣಗೊಳಿಸುವ ಮೊದಲು, ಸಿಇಟಿ ಪರೀಕ್ಷೆಯ ಮುಖಾಂತರ ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕದಾದ್ಯಂತ ಬಹುತೇಕ ಎಲ್ಲ ಜಿಲ್ಲೆ, ನಗರಗಳಲ್ಲಿ ಏಪ್ರಿಲ್ – ಮೇ ತಿಂಗಳಲ್ಲಿ ನಡೆಸಲಾಗುತ್ತದೆ
ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಇನ್ನೇನು ಸಿಇಟಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸಿಇಟಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಕೆಇಎ ಹೊಸ ನಿಮಯ ಜಾರಿಗೆ ತಂದಿದೆ. ಈ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.
- Vinay Kashappanavar
- Updated on: Apr 26, 2025
- 6:59 pm
ಜನಿವಾರ ಧರಿಸಬಾರದೆಂದು ಪ್ರಾಧಿಕಾರವು ವಸ್ತ್ರಸಂಹಿತೆ ವಿಷಯದಲ್ಲಿ ಹೇಳಿಲ್ಲ: ಹೆಚ್ ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ-ಕೆಇಎ
ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಜನಿವಾರ ಧರಿಸಬಾದು ಅಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿಲ್ಲ, ವೆಬ್ಸೈಟ್ನಲ್ಲಿ ಅದನ್ನು ಪರಿಶೀಲಿಸಬಹುದು, ಸಿಇಟಿಯ ಉಸ್ತುವಾರಿಯನ್ನು 20,000 ಶಿಕ್ಷಕರಿಗೆ ವಹಿಸಲಾಗಿತ್ತು, ಅದರೆ ಕಾಲೇಜಿನ ಮುಖ್ಯದ್ವಾರದ ಬಳಿಯ ಒಬ್ಬ ಸಿಬ್ಬಂದಿಯಿಂದ ಉಳಿದವರೆಲ್ಲ ನೋವು ಅನುಭವಿಸುತ್ತಿದ್ದಾರೆ, ಅಚಾತುರ್ಯ ನಡೆದಿದ್ದೇಯಾದರೆ ಪ್ರಾಧಿಕಾರದ ಪರವಾಗಿ ಮತ್ತು ವೈಯಕ್ತಿಕವಾಗಿ ತಾನು ಬ್ರಾಹ್ಮಣ ಸಮಾಜದ ಕ್ಷಮೆ ಕೋರುವುದಾಗಿ ಪ್ರಸನ್ನ ಹೇಳಿದರು.
- Arun Belly
- Updated on: Apr 18, 2025
- 7:36 pm
ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನು ಹೇಳುತ್ತೆ?
ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಬೆನ್ನಲ್ಲೇ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದೆ. ಕೊನೆಯ ದಿನವಾದ ನಿನ್ನೆ(ಏಪ್ರಿಲ್ 17) ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಸೂಚಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಬ್ರಾಹ್ಮಣ ಸಮುದಾಯ ಸಿಡಿದೆದ್ದಿದೆ. ಅಷ್ಟಕ್ಕೂ ಈ ಸಿಇಟಿ ವಸ್ತ್ರ ಸಂಹಿತೆ ಏನ್ ಹೇಳುತ್ತೆ? ಎನ್ನುವ ವಿವರ ಇಲ್ಲಿದೆ.
- Vinay Kashappanavar
- Updated on: Apr 18, 2025
- 3:29 pm
ಬೀದರ್: ಜನಿವಾರ ಧರಿಸಿದ್ದಕ್ಕೆ ಸಿಈಟಿ ಬರೆಯಲು ವಿದ್ಯಾರ್ಥಿಗೆ ನಿರಾಕರಣೆ, ನ್ಯಾಯ ಕೇಳುತ್ತಿರುವ ಯುವಕನ ಅಮ್ಮ
ಖಾಸಗಿ ಕಾಲೇಜುಗಳಲ್ಲಿ ಫೀಸ್ ಕಟ್ಟಲಾಗಲ್ಲ ನನ್ನ ಮಗನಿಗೆ ಸರ್ಕಾರೀ ಇಂಜಿನೀಯರಿಂಗ್ ಕಾಲೇಜಲ್ಲಿ ಸೀಟು ಕೊಡಲೇ ಬೇಕು ಅಂತ ಯುವಕನ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಘಟನೆಯನ್ನು ಖಂಡಿಸಿದ್ದಾರೆ, ಅಕ್ಷಮ್ಯ ಪ್ರಮಾದವೆಸಗಿರುವ ಕಾಲೇಜು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮತ್ತು ಯವಕನಿಗೆ ತೊಂದರೆಯಾಗದಂತೆ ಆಧಿಕಾರಿಗಳ ಜೊತೆ ಮಾತಾಡಿ ಪರಿಹಾರ ಸೂಚಿಸುವುದಾಗಿ ಹೇಳಿದ್ದಾರೆ.
- Arun Belly
- Updated on: Apr 18, 2025
- 2:23 pm
ಪರೀಕ್ಷಾ ಪ್ರಾಧಿಕಾರದ ಎಡವಟ್ಟು, ಹಾಲ್ ಟಿಕೆಟ್ನಲ್ಲಿ ಮಲ್ಲೇಶ್ವರಂ 18ನೇ ಕ್ರಾಸ್ ಬದಲು 13ನೇ ಕ್ರಾಸ್ ನಮೂದು!
ಇದು ಟೈಪೋನೋ ಅಥವಾ ಮತ್ತೊಂದೋ ಅಂತ ಕೆಇಎ ಅಧಿಕಾರಿಗಳೇ ಹೇಳಬೇಕು, ಸಾಮಾನ್ಯವಾಗಿ ಪ್ರಾಧಿಕಾರದಿಂದ ಪರೀಕ್ಷಾ ಸಮಯದಲ್ಲಿ ಇಂಥ ಪ್ರಮಾದಗಳು ಜರುಗುವುದಿಲ್ಲ. ಮಹಿಳೆ ಹೇಳುವಂತೆ ಬದಲೀ ಪರೀಕ್ಷಾ ಕೇಂದ್ರ 18ನೇ ಕ್ರಾಸ್ ನಲ್ಲಿರದೆ ಬೇರೆ ದೂರದ ಕಾಲೇಜಾಗಿದ್ದರೆ ವಿದ್ಯಾರ್ಥಿನಿ ಏನು ಮಾಡಬೇಕಿತ್ತು? ಅವರು ಕೇಳುವ ಪ್ರಶ್ನೆಯಲ್ಲಿ ತರ್ಕವಿದೆ, ಕೆಇಎ ಯೋಚಿಸಬೇಕು.
- Arun Belly
- Updated on: Apr 15, 2025
- 1:12 pm
KCET Exam 2025: ಸಿಇಟಿ ಪರೀಕ್ಷೆ ಹಾಲ್ ಟಿಕೆಟ್ ಬಿಡುಗಡೆ, ಆನ್ಲೈನ್ನಲ್ಲಿ ಡೌನ್ಲೋಡ್ ಮಾಡುವುದು ಹೇಗೆ?
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025: ಸಿಇಟಿ ಪರೀಕ್ಷೆ ಹಾಲ್ ಟಿಕೆಟ್ ಭಾನುವಾರ ಬಿಡುಗಡೆಯಾಗಿದೆ. ಏಪ್ರಿಲ್ 15 ರಿಂದ 17 ರವರೆಗೆ ನಡೆಯುವ ಪರೀಕ್ಷೆಗೆ 3.6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಆನ್ಲೈನ್ನಲ್ಲಿ ಹಾಲ್ ಟಿಕೆಟ್ ಮತ್ತು ಮಾದರಿ OMR ಶೀಟ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಡೌನ್ಲೋಡ್ ಮಾಡುವ ವಿಧಾನ ಇಲ್ಲಿದೆ.
- Vinay Kashappanavar
- Updated on: Apr 7, 2025
- 12:09 pm
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಹೊಸ ನಿಯಮ ತರಲು ಮುಂದಾದ ಕೆಇಎ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಕೌನ್ಸೆಲಿಂಗ್ನಲ್ಲಿನ ಅಕ್ರಮಗಳನ್ನು ತಡೆಯಲು 2025ರಿಂದ ಎಲ್ಲಾ ಪ್ರವೇಶ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ. ಇದು ಸೀಟ್ ಬ್ಲಾಕಿಂಗ್, ನಕಲಿ ಅರ್ಜಿಗಳು ಮತ್ತು ಇತರ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದ್ದಾರೆ.
- Web contact
- Updated on: Jan 29, 2025
- 7:26 pm
ನೀತಿ ಸಂಹಿತೆ ಜಾರಿ ಸಮಸ್ಯೆ: ಕೆಸಿಇಟಿ ಫಲಿತಾಂಶ 2024 ಗೊಂದಲಕ್ಕೆ ತೆರೆ ಎಳೆದ ಕೆಇಎ ನಿರ್ದೇಶಕ
ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶದ್ವಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET-2024) ಫಲಿತಾಂಶವನ್ನು ಪತ್ರಿಕಾ ಪ್ರಕಟಣೆ ನೀಡಿ, ಸುದ್ದಿಗೋಷ್ಠಿ ಮಾಡದೇ ಏಕಾಏಕಿ ಫಲಿತಾಂಶ ಪ್ರಕಟಿಸಿತ್ತು. ಈ ಬೆನ್ನಲ್ಲೇ ವ್ಯಾಪಕ ಆಕ್ರೋಶ ಹಾಗೂ ಗೊಂದಲ ಸೃಷ್ಟಿಯಾಗಿತ್ತು. ಸದ್ಯ ಕೆಇಎಯಲ್ಲಿ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಬಳಿ ಮುಂದೆ ಈ ರೀತಿ ಆಗದೇ ಇರುವ ಹಾಗೆ ಜವಾಬ್ದಾರಿ ವಹಿಸೋದಾಗಿ ಹೇಳಿಕೆ ನೀಡಿದ್ದಾರೆ.
- Vinayak Hanamant Gurav
- Updated on: Jun 3, 2024
- 10:00 am
CET Exam 2024: ಔಟ್ ಆಫ್ ಸಿಲೆಬಸ್ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ
ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.
- Vinay Kashappanavar
- Updated on: Apr 28, 2024
- 10:57 pm
CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಸಿಇಟಿ ಪರೀಕ್ಷೆ ಗೊಂದಲ ಪರಿಶೀಲನೆಗೆ ರಾಜ್ಯ ಸರ್ಕಾರ ನಾಲ್ವರು ಸದಸ್ಯರ ತಜ್ಞರ ಸಮಿತಿಯನ್ನು ರಚನೆ ಮಾಡಿತ್ತು. ಇದೀಗ ಆ ತಜ್ಞರ ಸಮಿತಿಯೂ ಪರೀಕ್ಷೆ ಗೊಂದಲ ಕುರಿತಾಗಿ ವರದಿ ಸಲ್ಲಿಸಿದೆ.
- Vinay Kashappanavar
- Updated on: Apr 27, 2024
- 3:10 pm