AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti

Chanakya Niti

ಚಾಣಕ್ಯ ನೀತಿ, ಪ್ರಾಚೀನ ಭಾರತೀಯ ವಿದ್ವಾಂಸ ಚಾಣಕ್ಯರಿಂದ ಕ್ರಿ.ಪೂ. 300 ರ ಸುಮಾರಿಗೆ ಸಂಯೋಜಿಸಲ್ಪಟ್ಟಿದೆ, ಇದು ಪೂರ್ಣವಾದ ಜೀವನಕ್ಕಾಗಿ ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡುವ ಸಲಹೆಗಳ ಸಂಗ್ರಹವಾಗಿದೆ. ರಾಜ ಚಂದ್ರಗುಪ್ತ ಮೌರ್ಯನಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಣಕ್ಯನ ಬೋಧನೆಗಳು ಜೀವನ, ಆಡಳಿತ ಮತ್ತು ತಂತ್ರದ ವಿವಿಧ ಅಂಶಗಳನ್ನು ಒಳಗೊಂಡಿದೆ. ಮಾನವ ಸ್ವಭಾವ, ರಾಜಕೀಯ ಮತ್ತು ಅರ್ಥಶಾಸ್ತ್ರದ ಬಗ್ಗೆ ಅವರ ಒಳನೋಟಗಳು ಈ ಪಠ್ಯದಲ್ಲಿ ಅಡಕವಾಗಿವೆ. ಸಾಮಾನ್ಯವಾಗಿ ಚಾಣಕ್ಯರನ್ನು ಮ್ಯಾಕಿಯಾವೆಲ್ಲಿ, ಅರಿಸ್ಟಾಟಲ್ ಮತ್ತು ಪ್ಲೇಟೋನಂತಹ ಚಿಂತಕರಿಗೆ ಹೋಲಿಸಲಾಗುತ್ತದೆ. ಚಾಣಕ್ಯನ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ, ಆಧುನಿಕ ಜಗತ್ತಿನಲ್ಲಿ ಯಶಸ್ಸು, ನಾಯಕತ್ವ ಮತ್ತು ನೈತಿಕ ಜೀವನವನ್ನು ಬಯಸುವವರಿಗೆ ಸ್ಫೂರ್ತಿ ಮತ್ತು ಪ್ರಾಯೋಗಿಕ ಸಲಹೆಯ ಮೂಲವಾಗಿ ಕಾರ್ಯನಿರ್ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ

ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಅನುಸರಿಸಿದರೆ ಗಂಡ ಹೆಂಡತಿ ಸುಖವಾಗಿ ಸಂಸಾರ ಸಾಗಿಸಬಹುದು. ಅದೇ ರೀತಿ ಕೆಲವೊಂದು ವಿಚಾರಗಳು ಗಂಡ ಹೆಂಡತಿಯ ನಡುವಿನ ಸಂಬಂಧವನ್ನು ಹಾಳು ಮಾಡುತ್ತದೆ. ಅದನ್ನು ತಿದ್ದಿ ನಡೆದರೆ ಸುಖಿ ದಾಂಪತ್ಯ ಜೀವನವನ್ನು ನಡೆಸಬಹುದು ಎಂದಿದ್ದಾರೆ. ಹಾಗಾದ್ರೆ ಯಾವ ವಿಷಯಗಳು ದಾಂಪತ್ಯ ಜೀವನ ಹಾಳಾಗಲು ಕಾರಣ ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ಕೆಲವು ಸಂದರ್ಭಗಳಲ್ಲಿ ಮೌನವಾಗಿರುವುದೇ ಉತ್ತಮ

ಕೆಲವೊಮ್ಮೆ ಮಾತುಗಳು ದುಬಾರಿಯಾಬಹುದು, ಈ ಮಾತುಗಳೇ ಸಂಕಷ್ಟಗಳಿಗೆ ಮುನ್ನುಡಿಯಾಗಬಹುದು. ಆದ್ದರಿಂದ ಒಂದಷ್ಟು ಸಂದರ್ಭಗಳಲ್ಲಿ ಮಾತನಾಡದೆ ಸುಮ್ಮನಿದ್ದರೆಯೇ ತುಂಬಾ ಒಳ್ಳೆಯದು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಜೀವನದಲ್ಲಿ ಎದುರಾಗುವ ಅನಗತ್ಯ ತೊಂದರೆಗಳಿಂದ ಪಾರಾಗಲು ಯಾವ ಸಂದರ್ಭಗಳಲ್ಲಿ ಮೌನವಾಗಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು

ಕೊನೆಗಾಲದಲ್ಲಿ ನೆಮ್ಮದಿಯಾಗಿರಬೇಕು, ಯಾವುದೇ ನೋವು, ಹತಾಶೆಯಿಲ್ಲದೆ ಸಂತೋಷದಿಂದ ಕಾಲ ಕಳೆಯಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಹೀಗೆ ವೃದ್ಧಾಪ್ಯ ಸಂತೋಷ, ಶಾಂತಿಯಿಂದ ಕೂಡಿರಬೇಕೆಂದರೆ ಯೌವನದಲ್ಲಿ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವು ಯಾವುವು ಎಂಬ ಸಂಕ್ಷಿಪ್ತ ವರದಿ ಇಲ್ಲಿದೆ.

Chanakya Niti: ಈ ಗುಣಗಳು ವ್ಯಕ್ತಿಗೆ ಯಶಸ್ಸು, ಗೌರವವನ್ನು ತಂದುಕೊಡುತ್ತದೆ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ, ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳನ್ನು ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ ಅದೆಷ್ಟೋ ಮಂದಿ ಜೀವನದಲ್ಲಿ ಯಶಸ್ಸನ್ನು ಸಾಧಿಸಿದವರಿದ್ದಾರೆ, ಇದೇ ರೀತಿ ನೀವು ಕೂಡ ಯಶಸ್ಸನ್ನು ಸಾಧಿಸಬೇಕಾ? ಹಾಗಿದ್ರೆ ಚಾಣಕ್ಯರು ಹೇಳಿರುವ ಈ ಗುಣಗಳನ್ನು ನಿಮ್ಮಲ್ಲಿ ಬೆಳೆಸಿಕೊಳ್ಳಿ.

Chanakya Niti: ಉಚಿತವಾಗಿ ಪಡೆಯುವ ವಸ್ತುಗಳು ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತೆ ಗೊತ್ತಾ?

ಆಚಾರ್ಯ ಚಾಣಕ್ಯರು ರಾಜಕೀಯ ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಉಚಿತವಾಗಿ ಪಡೆಯುವ ಏನಾದರೂ ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತದೆ ಎಂಬುದನ್ನೂ ಸಹ ವಿವರಿಸಿದ್ದಾರೆ. ಯಾವುದೇ ಶ್ರಮವಿಲ್ಲದೆ ಉಚಿತವಾಗಿ ಪಡೆಯುವ ಯಾವುದೇ ಸಂಗತಿಗಳಾಗಿದ್ದರೂ ಸರಿ, ಅವು ಖುಷಿಯನ್ನು ನೀಡಬಹುದು. ಆದರೆ ಇವು ವ್ಯಕ್ತಿಯನ್ನು ಕ್ರಮೇಣವಾಗಿ ದುರ್ಬಲಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು

ಪ್ರತಿಯೊಬ್ಬರು ಶಾಂತಿಯುತವಾಗಿ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತದೆಯೋ ಅವರು ಖಂಡಿತವಾಗಿಯೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವೇ ಇಲ್ಲ, ಅವರು ಯಾವಾಗಲೂ ಚಿಂತೆಯಲ್ಲಿಯೇ ಇರುತ್ತಾರೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಮನುಷ್ಯನ ನೆಮ್ಮದಿ ಹಾಳಾಗಲು ಕಾರಣ ಯಾವ ವಿಚಾರಗಳು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ, ಅದೇ ರೀತಿ ಇತರರಿಗೆ ಸಹಾಯ ಮಾಡಬೇಕು ಎಂಬುದನ್ನೂ ಹೇಳಿದ್ದಾರೆ. ಇದು ಮಾತ್ರವಲ್ಲದೆ ಈ ಕೆಲವೊಂದಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬಾರದು, ಅವರಿಂದು ದೂರವಿದ್ದಷ್ಟು ಒಳ್ಳೆಯದು ಎಂಬ ವಿಚಾರವನ್ನು ತಿಳಿಸಿದ್ದಾರೆ. ಹಾಗಿದ್ರೆ ಯಾರಿಂದ ದೂರವಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಚಾರಗಳು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಜೀವನದಲ್ಲಿ ಪ್ರಗತಿ ಸಾಧಿಸಲು, ಶ್ರೀಮಂತಿಕೆಯನ್ನು ಗಳಿಸಲು, ಯಶಸ್ವಿ ಜೀವನವನ್ನು ನಡೆಸಲು ಏನು ಮಾಡಬೇಕು ಎಂಬುದನ್ನು ಸಹ ವಿವರಿಸಿದ್ದಾರೆ. ಇದಕ್ಕಾಗಿ ಹಲವಾರು ದಾರಿಗಳ ಬಗ್ಗೆ ಹೇಳಿಕೊಟ್ಟಿದ್ದಾರೆ. ಅದರಲ್ಲಿ ಒಂದು ರಾತ್ರಿ ಮಲಗುವ ಮುನ್ನ ಒಂದಷ್ಟು ಕೆಲಸಗಳನ್ನು ಮಾಡಬೇಕು ಎಂದಿದ್ದಾರೆ. ಹಾಗಿದ್ರೆ ಯಶಸ್ಸನ್ನು ಗಳಿಸಲು ರಾತ್ರಿ ಮಲಗುವ ಮುನ್ನ ಮಾಡಬೇಕಾದ ಕೆಲಸಗಳೇನು ಎಂಬುದನ್ನು ನೋಡೋಣ ಬನ್ನಿ.

Chanakya Niti: ಇಂತಹ ಮಕ್ಕಳನ್ನು ಪಡೆದ ಪೋಷಕರೇ ನಿಜವಾದ ಅದೃಷ್ಟವಂತರು ಎನ್ನುತ್ತಾರೆ ಚಾಣಕ್ಯ

ಪ್ರತಿಯೊಬ್ಬ ಪೋಷಕರ ಸಂತೋಷ ಮಕ್ಕಳ ಮೇಲೆ ಅವಲಂಬಿತವಾಗಿರುತ್ತದೆ. ಅದರಲ್ಲೂ ಮಕ್ಕಳು ಜೀವನದಲ್ಲಿ ಯಶಸ್ಸು ಗಳಿಸಿದರೆ ತಂದೆ-ತಾಯಿ ಬಹಳಷ್ಟು ಖುಷಿಪಡುತ್ತಾರೆ. ಯಶಸ್ಸು ಒಂದುಕಡೆಯಾದರೆ, ಈ ಕೆಲವೊಂದು ಗುಣಗಳನ್ನು ಹೊಂದಿರುವ ಮಕ್ಕಳನ್ನು ಹೊಂದಿರುವ ಪೋಷಕರೇ ನಿಜವಾದ ಅದೃಷ್ಟವಂತರು ಎನ್ನುತ್ತಾರೆ ಚಾಣಕ್ಯ. ಪೋಷಕರಿಗೆ ಅದೃಷ್ಟವನ್ನು ತಂದುಕೊಡುವ, ಗೌರವವನ್ನು ಹೆಚ್ಚಿಸುವ ಮಕ್ಕಳ ಆ ಗುಣಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಸ್ನೇಹಿತರು, ಸಂಬಂಧಿಕರಿಗೆ ಹಣ ಸಾಲ ನೀಡುವ ಮುನ್ನ ನೀವು ಈ ಪ್ರಶ್ನೆಗಳನ್ನು ಕೇಳಲೇಬೇಕು

ಸಂಬಂಧಿಕರು, ಸ್ನೇಹಿತರು ಆರ್ಥಿಕ ಸಹಾಯ ಅಥವಾ ಸಾಲವನ್ನು ಕೇಳುತ್ತಲೇ ಇರುತ್ತಾರೆ. ಇಂತಹ ಸಂದರ್ಭಗಳಲ್ಲಿ ಅನೇಕರು ಹಿಂದು ಮುಂದು ನೋಡದೆ ಹಣ ಕೊಟ್ಟುಬಿಡುತ್ತಾರೆ, ಕೊನೆಗೆ ತಾವು ಸಾಲವಾಗಿ ನೀಡಿದ ಹಣ ವಾಪಾಸ್‌ ಸಿಗದೆ ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂತಹ ಕ್ಲಿಷ್ಟಕರ ಪರಿಸ್ಥಿತಿ ನಿಮಗೆ ಎದುರಾಗಬಾರದೆಂದರೆ, ನಿಮ್ಮ ಹತ್ತಿರದವರಿಗೆ ಸಾಲ ನೀಡುವ ಮೊದಲು ಈ ಪ್ರಶ್ನೆಗಳನ್ನು ಅವರ ಬಳಿ ಕೇಳಲೇಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Chanakya Niti: ಜೀವನದಲ್ಲಿ ಸಂಕಷ್ಟ ಎದುರಾಗಬಾರದೆಂದರೆ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಿ

ಆಚಾರ್ಯ ಚಾಣಕ್ಯರು ಯಶಸ್ಸನ್ನು ಸಾಧಿಸಲು ಹಲವಾರು ತತ್ವಗಳನ್ನು ಹಂಚಿಕೊಂಡಿದ್ದಾರೆ. ಅದೇ ರೀತಿ ಯಶಸ್ಸಿನ ಜೊತೆಜೊತೆಗೆ ಯಾವುದೇ ಕಷ್ಟಗಳು ಎದುರಾಗದೆ ಒತ್ತಡ ರಹಿತ ಜೀವನವನ್ನು ನಡೆಸಲು ಒಂದಷ್ಟು ವೈಯಕ್ತಿಕ ವಿಚಾರಗಳನ್ನು ರಹಸ್ಯವಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ನಾವು ಯಾರೊಂದಿಗೂ ಹಂಚಿಕೊಳ್ಳಬಾರದ ಆ ವೈಯಕ್ತಿಕ ವಿಚಾರಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ರಹಸ್ಯಗಳನ್ನು ತಿಳಿದರೆ ನೀವು ಜೀವನದಲ್ಲಿ ಎಂದಿಗೂ ಸೋಲಲು ಸಾಧ್ಯವೇ ಇಲ್ಲ

ಯಶಸ್ಸು ಸಾಧಿಸುವುದೆಂದರೆ ಅದೇನು ಸುಲಭದ ಕೆಲಸವಲ್ಲ. ಇದಕ್ಕಾಗಿ ಕಠಿಣ ಪರಿಶ್ರಮ, ಆತ್ಮವಿಶ್ವಾಸ ದೃಢ ನಿರ್ಧಾರ ಎಲ್ಲವೂ ಅಗತ್ಯವಿರುತ್ತದೆ. ಜೊತೆಗೆ ಈ ಕೆಲವೊಂದು ಜೀವನದ ರಹಸ್ಯಗಳ ಬಗ್ಗೆ ತಿಳಿದಿದ್ದರೆ ನೀವು ಜೀವನದಲ್ಲಿ ಎಂದಿಗೂ ಸೋಲನ್ನು ಕಾಣಲು ಸಾಧ್ಯವಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಯಶಸ್ಸಿನ ಗುಟ್ಟುಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.