AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti

Chanakya Niti

ಚಾಣಕ್ಯ ನೀತಿ, ಪ್ರಾಚೀನ ಭಾರತೀಯ ವಿದ್ವಾಂಸ ಚಾಣಕ್ಯರಿಂದ ಕ್ರಿ.ಪೂ. 300 ರ ಸುಮಾರಿಗೆ ಸಂಯೋಜಿಸಲ್ಪಟ್ಟಿದೆ, ಇದು ಪೂರ್ಣವಾದ ಜೀವನಕ್ಕಾಗಿ ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡುವ ಸಲಹೆಗಳ ಸಂಗ್ರಹವಾಗಿದೆ. ರಾಜ ಚಂದ್ರಗುಪ್ತ ಮೌರ್ಯನಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಣಕ್ಯನ ಬೋಧನೆಗಳು ಜೀವನ, ಆಡಳಿತ ಮತ್ತು ತಂತ್ರದ ವಿವಿಧ ಅಂಶಗಳನ್ನು ಒಳಗೊಂಡಿದೆ. ಮಾನವ ಸ್ವಭಾವ, ರಾಜಕೀಯ ಮತ್ತು ಅರ್ಥಶಾಸ್ತ್ರದ ಬಗ್ಗೆ ಅವರ ಒಳನೋಟಗಳು ಈ ಪಠ್ಯದಲ್ಲಿ ಅಡಕವಾಗಿವೆ. ಸಾಮಾನ್ಯವಾಗಿ ಚಾಣಕ್ಯರನ್ನು ಮ್ಯಾಕಿಯಾವೆಲ್ಲಿ, ಅರಿಸ್ಟಾಟಲ್ ಮತ್ತು ಪ್ಲೇಟೋನಂತಹ ಚಿಂತಕರಿಗೆ ಹೋಲಿಸಲಾಗುತ್ತದೆ. ಚಾಣಕ್ಯನ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ, ಆಧುನಿಕ ಜಗತ್ತಿನಲ್ಲಿ ಯಶಸ್ಸು, ನಾಯಕತ್ವ ಮತ್ತು ನೈತಿಕ ಜೀವನವನ್ನು ಬಯಸುವವರಿಗೆ ಸ್ಫೂರ್ತಿ ಮತ್ತು ಪ್ರಾಯೋಗಿಕ ಸಲಹೆಯ ಮೂಲವಾಗಿ ಕಾರ್ಯನಿರ್ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

Chanakya Niti: ಕೌಟುಂಬಿಕ ಕಲಹಗಳಿಗೆ ಮೂಲ ಕಾರಣವೇ ಈ ಅಂಶಗಳು ಎನ್ನುತ್ತಾರೆ ಚಾಣಕ್ಯರು

ಪ್ರತಿ ಕುಟುಂಬದಲ್ಲೂ ಸಣ್ಣಪುಟ್ಟ ಜಗಳಗಳು, ಮನಸ್ತಾಪಗಳು ಇದ್ದೇ ಇರುತ್ತವೆ. ಆದರೆ ಮನೆಯಲ್ಲಿ ನಿತ್ಯ ಜಗಳಗಳು, ಕಲಹಗಳು ನಡೆದರೆ ಮನೆಯ ನೆಮ್ಮದಿ, ಸಂತೋಷವೆಲ್ಲಾ ಹಾಳಾಗುತ್ತದೆ. ಹೀಗೆ ಅಪಶ್ರುತಿ ಉಂಟಾಗಲು, ಜಗಳಗಳು ಏರ್ಪಡಲು ಈ ಕೆಲವು ತಪ್ಪುಗಳೇ ಮುಖ್ಯ ಕಾರಣ, ಅದನ್ನು ಸರಿಪಡಿಸಿದರೆ ಖಂಡಿತವಾಗಿಯೂ ಮನೆಯಲ್ಲಿ ಸಂತೋಷ, ಶಾಂತಿ ನೆಲೆಸುತ್ತದೆ ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಆ ತಪ್ಪುಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಬಹುತೇಕ ಹೆಚ್ಚಿನವರು ಮನೆ ಕಟ್ಟುವಾಗ, ಮದುವೆ ಮಾಡುವಾಗ, ಬ್ಯುಸಿನೆಸ್‌ ಮಾಡುವ ಸಂದರ್ಭದಲ್ಲಿ ಸಾಲ ಪಡೆಯುತ್ತಾರೆ. ಹೀಗೆ ಸಾಲ ತೆಗೆದುಕೊಳ್ಳುವಾಗ ಮತ್ತು ಮುಖ್ಯವಾಗಿ ಸಾಲ ಕೊಡುವಾಗ ಒಂದಷ್ಟು ವಿಚಾರಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಈ ಸಾಲದ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಬಹುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವು ಯಾವುವು ಎಂಬ ಸಂಪೂರ್ಣ ವಿವರ ಇಲ್ಲಿದೆ.

Chanakya Niti: ಜೀವನದಲ್ಲಿ ಹಣದ ಕೊರತೆ ಬರಬಾರದೆಂದರೆ ಈ ವಿಚಾರಗಳನ್ನು ಅನುಸರಿಸಿ

ಆಚಾರ್ಯ ಚಾಣಕ್ಯರು ಯಶಸ್ಸು, ವೈಯಕ್ತಿಕ ಜೀವನ ಮಾತ್ರವಲ್ಲ ಶ್ರೀಮಂತಿಕೆ ಗಳಿಕೆ, ಹಣ ಉಳಿತಾಯದ ಬಗ್ಗೆಯೂ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು, ಹಣ ಉಳಿತಾಯದ ಮಾರ್ಗಗಳೇನು ಹೀಗೆ ಹಲವು ಸಂಗತಿಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಅವರು ಆದಾಯ ಕಡಿಮೆ ಇದ್ದರೂ ಸಹ ಜೀವನದಲ್ಲಿ ಆರ್ಥಿಕ ಸಂಕಷ್ಟ ಎಂದಿಗೂ ಬರಬಾರದೆಂದರೆ ಏನು ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Chanakya Niti: ಚಾಣಕ್ಯರ ಪ್ರಕಾರ ಈ ಗುಣಗಳಿರುವ ಹೆಣ್ಣು ಮನೆಯ ನಿಜವಾದ ಶಕ್ತಿ

ಆಚಾರ್ಯ ಚಾಣಕ್ಯರು ಮಹಿಳೆಯರ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಹೆಣ್ಣಿನಲ್ಲಿ ಯಾವೆಲ್ಲಾ ಸದ್ಗುಣಗಳಿರಬೇಕು, ಮದುವೆಯಾದ ಮಹಿಳೆ ಹೇಗಿದ್ದರೆ ಚೆಂದ, ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಅವರು ಈ ಒಂದಷ್ಟು ಗುಣಗಳಿರುವ ಹೆಣ್ಣನ್ನು ಲಕ್ಷ್ಮಿಗೆ ಹೋಲಿಸಿದ್ದಾರೆ. ಅಂತಹ ಮಹಿಳೆಯರಿರುವ ಮನೆಯಲ್ಲಿ ಸಂತೋಷ, ಸಮೃದ್ಧಿ ಸದಾ ನೆಲೆಸಿರುತ್ತದೆ ಎಂದಿದ್ದಾರೆ.

Chanakya Niti: ಈ ಅಭ್ಯಾಸಗಳಿಂದ ನಿಮ್ಮ ಇಮೇಜ್‌ ಹಾಳಾಗಬಹುದು… ಜೋಕೆ!

ಪ್ರತಿಯೊಬ್ಬ ವ್ಯಕ್ತಿಗೂ ಗೌರವ ಎನ್ನುವಂತಹದ್ದು ತುಂಬಾನೇ ಮುಖ್ಯ. ಗೌರವವನ್ನು ಕಳೆದುಕೊಂಡು ಈ ಸಮಾಜದಲ್ಲಿ ಬುದುಕುವುದು ಕಷ್ಟಸಾಧ್ಯ. ಹಾಗಾಗಿ ಪ್ರತಿಯೊಬ್ಬರೂ ಸಹ ದುಡ್ಡು, ಸಂಪತ್ತನ್ನು ಸಂಪಾದಿಸುವ ಜೊತೆ ಜೊತೆಗೆ ಗೌರವ ಗಳಿಸಲು ಕೂಡ ಶ್ರಮಿಸುತ್ತಾರೆ. ಆದರೆ ಈ ಕೆಲವು ಅಭ್ಯಾಸಗಳಿದ್ದರೆ, ಇರುವ ಗೌರವವೂ ಸಹ ಮಣ್ಣುಪಾಲಾಗುತ್ತದೆ ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಆ ಅಭ್ಯಾಸಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

Chanakya Niti: ಮನೆಯ ಶಾಂತಿಗೆ ಭಂಗ ತರಬಹುದು ಮಹಿಳೆಯರ ಈ ಅಭ್ಯಾಸಗಳು

ಮಹಿಳೆಯನ್ನು ಕುಟುಂಬದ ಆಧಾರಸ್ತಂಭ ಎಂದು ಹೇಳಲಾಗುತ್ತದೆ. ಮನೆಯ ಶ್ರೇಯೋಭಿವೃದ್ಧಿ, ಕುಟುಂಬದ ಶಾಂತಿ, ನೆಮ್ಮದಿ ಆಕೆಯ ಮೇಲೆಯೇ ಅವಲಂಬಿತವಾಗಿರುತ್ತದೆ. ಹೀಗಿರುವಾಗ ಆಕೆಯಲ್ಲಿ ಈ ಕೆಲವು ಅಭ್ಯಾಸಗಳು, ಗುಣಗಳಿದ್ದರೆ, ಇದರಿಂದ ಮನೆಯ ಶಾಂತಿ, ನೆಮ್ಮದಿಯೆಲ್ಲಾ ಹಾಳಾಗಬಹುದು ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಹಾಗಾದರೆ ಮಹಿಳೆಯರ ಯಾವ ಅಭ್ಯಾಸಗಳು ಮನೆಯ ಶಾಂತಿಯನ್ನು ಹಾಳು ಮಾಡುತ್ತದೆ ಎಂಬುದನ್ನು ನೋಡೋಣ ಬನ್ನಿ.

Chanakya Niti: ಪುರುಷರಲ್ಲಿ ಈ ಅಭ್ಯಾಸಗಳಿದ್ದರೆ, ಮನೆಯ ನೆಮ್ಮದಿಯೇ ಹಾಳಾಗುತ್ತದೆ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ನಮ್ಮ ಜೀವನಕ್ಕೆ ಬೇಕಾದ ಪ್ರತಿಯೊಂದು ಅಂಶಗಳನ್ನು ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಈ ಕೆಲವು ಅಭ್ಯಾಸಗಳನ್ನು ಹೊಂದಿರುವ ಪುರುಷರು ತಮ್ಮ ಮನೆಗಳನ್ನು ತಾವೇ ನಾಶಪಡಿಸುತ್ತಾರೆ, ಅವರಿಂದ ಮನೆಯ ಶಾಂತಿ ಮತ್ತು ನೆಮ್ಮದಿಯೇ ಹಾಳಾಗುತ್ತದೆ ಎಂದಿದ್ದಾರೆ. ಹಾಗಿದ್ರೆ ಪುರುಷರ ಯಾವ ಅಭ್ಯಾಸಗಳು ಮನೆಯ ನೆಮ್ಮದಿಯನ್ನು ಹಾಳು ಮಾಡುತ್ತದೆ ಎಂಬುದನ್ನು ನೋಡೋಣ ಬನ್ನಿ.

Chanakya Niti: ಚಾಣಕ್ಯರ ಪ್ರಕಾರ ಬುದ್ಧಿವಂತ ಜನರಲ್ಲಿ ಮಾತ್ರ ಈ ವಿಶೇಷ ಗುಣಗಳಿರುವುದಂತೆ

ಬುದ್ಧಿವಂತ ಜನರು ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡುವ ಕೆಲವು ಗುಣಗಳನ್ನು ಹೊಂದಿರುತ್ತಾರೆ. ಈ ಗುಣಗಳ ಕಾರಣದಿಂದಲೇ ಅವರು ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ರೆ ಬುದ್ಧಿವಂತ ವ್ಯಕ್ತಿಗಳಲ್ಲಿರುವ ಆ ಗುಣಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

Chanakya Niti: ನಿಮ್ಮ ಜೀವನದ ಈ ರಹಸ್ಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎನ್ನುತ್ತಾರೆ ಚಾಣಕ್ಯ

ನಮ್ಮ ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ವಿಷಯಗಳನ್ನು ಸಹ ನಾವು ನಮ್ಮ ಹತ್ತಿರದವರೊಂದಿಗೆ ಶೇರ್‌ ಮಾಡಿಕೊಳ್ಳುತ್ತೇವೆ. ಹೀಗೆ ಪ್ರತಿಯೊಂದು ವಿಷಯಗಳನ್ನು ಹಂಚಿಕೊಳ್ಳಬಾರದು, ಈ ಕೆಲವೊಂದು ವಿಷಯಗಳನ್ನು ರಹಸ್ಯವಾಗಿ ಇಟ್ಟುಕೊಂಡಷ್ಟು ಒಳ್ಳೆಯದು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ಹಾಗಿದ್ರೆ ಜೀವನಕ್ಕೆ ಸಂಬಂಧಿಸಿದ ಯಾವ ಸಂಗತಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಚಾಣಕ್ಯರ ಪ್ರಕಾರ ಪುರುಷರ ಈ ಗುಣಗಳಿಗೆ ಮಹಿಳೆಯರು ಹೆಚ್ಚು ಆಕರ್ಷಿತರಾಗುತ್ತಾರಂತೆ

ಮಹಿಳೆಯರ ಸೌಂದರ್ಯ, ನಡವಳಿಕೆ, ತಾಳ್ಮೆ, ಮೃದು ಮಾತುಗಳು ಪುರುಷರಿಗೆ ಇಷ್ಟವಾಗುವಂತೆ, ಪುರುಷರ ಈ ಒಂದಷ್ಟು ಗುಣಗಳು ಮಹಿಳೆಯರನ್ನು ಆಕರ್ಷಿಸುತ್ತದಂತೆ. ಮಹಿಳೆಯರು ಹೆಚ್ಚಾಗಿ ಈ ಗುಣಗಳನ್ನು ಹೊಂದಿರುವವರನ್ನೇ ಇಷ್ಟಪಡುತ್ತಾರೆಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಒಂದು ಹೆಣ್ಣಿಗೆ ಪುರುಷನ ಯಾವ ಗುಣಗಳು ಇಷ್ಟವಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.

Chanakya Niti: ಯುವಕರೇ… ನೀವು ಇಂತಹ ಹುಡುಗಿಯರನ್ನು ಮದುವೆಯಾದ್ರೆ ಅದೃಷ್ಟ ಎನ್ನುತ್ತಾರೆ ಚಾಣಕ್ಯ

ಒಂದು ಕುಟುಂಬವು ಸಂತೋಷದಿಂದ ಮತ್ತು ಶಾಂತಿಯುತವಾಗಿ ಇರಬೇಕೆಂದರೆ ಅಲ್ಲಿ ಮಹಿಳೆಯ ಪಾತ್ರ ಬಹು ಮುಖ್ಯವಾಗಿರುತ್ತದೆ. ಹಾಗಾಗಿ ಪುರುಷರು ಮದುವೆಯಾಗುವಾಗ ಒಳ್ಳೆಯ ಗುಣಗಳಿರುವ ಹೆಣ್ಣನ್ನೇ ಆಯ್ಕೆ ಮಾಡಬೇಕು. ಅದರಲ್ಲೂ ಈ ಕೆಲವು ವಿಶೇಷ ಗುಣಗಳನ್ನು ಹೊಂದಿರುವ ಹೆಣ್ಣು ಮನೆಯ ನಿಜವಾದ ಮಹಾಲಕ್ಷ್ಮಿ, ಅಂತಹ ಹೆಣ್ಣನ್ನು ಮದುವೆಯಾದರೆ ಸೂಕ್ತ ಎನ್ನುತ್ತಾರೆ ಆಚಾರ್ಯ ಚಾಣಕ್ಯರು.

Chanakya Niti: ಬೆಳಗ್ಗೆ ಎದ್ದ ತಕ್ಷಣ ಇವುಗಳನ್ನು ನೋಡುವ ತಪ್ಪನ್ನು ಮಾಡಲೇಬೇಡಿ

ಆಚಾರ್ಯ ಚಾಣಕ್ಯರು ಯಶಸ್ಸು, ದಾಂಪತ್ಯ ಜೀವನ, ವೃತ್ತಿ ಜೀವನ ಸೇರಿದಂತೆ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಅದೇ ರೀತಿ ಅವರು ಬೆಳಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಗ್ಗೆ ಎದ್ದ ತಕ್ಷಣ ಯಾವ ಸಂಗತಿಗಳನ್ನು ನೋಡಬಾರದು, ಇದರಿಂದಾಗುವ ಪರಿಣಾಮಗಳೇನು ಎಂಬುದರ ಬಗ್ಗೆಯೂ ವಿವರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ