AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti

Chanakya Niti

ಚಾಣಕ್ಯ ನೀತಿ, ಪ್ರಾಚೀನ ಭಾರತೀಯ ವಿದ್ವಾಂಸ ಚಾಣಕ್ಯರಿಂದ ಕ್ರಿ.ಪೂ. 300 ರ ಸುಮಾರಿಗೆ ಸಂಯೋಜಿಸಲ್ಪಟ್ಟಿದೆ, ಇದು ಪೂರ್ಣವಾದ ಜೀವನಕ್ಕಾಗಿ ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡುವ ಸಲಹೆಗಳ ಸಂಗ್ರಹವಾಗಿದೆ. ರಾಜ ಚಂದ್ರಗುಪ್ತ ಮೌರ್ಯನಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಣಕ್ಯನ ಬೋಧನೆಗಳು ಜೀವನ, ಆಡಳಿತ ಮತ್ತು ತಂತ್ರದ ವಿವಿಧ ಅಂಶಗಳನ್ನು ಒಳಗೊಂಡಿದೆ. ಮಾನವ ಸ್ವಭಾವ, ರಾಜಕೀಯ ಮತ್ತು ಅರ್ಥಶಾಸ್ತ್ರದ ಬಗ್ಗೆ ಅವರ ಒಳನೋಟಗಳು ಈ ಪಠ್ಯದಲ್ಲಿ ಅಡಕವಾಗಿವೆ. ಸಾಮಾನ್ಯವಾಗಿ ಚಾಣಕ್ಯರನ್ನು ಮ್ಯಾಕಿಯಾವೆಲ್ಲಿ, ಅರಿಸ್ಟಾಟಲ್ ಮತ್ತು ಪ್ಲೇಟೋನಂತಹ ಚಿಂತಕರಿಗೆ ಹೋಲಿಸಲಾಗುತ್ತದೆ. ಚಾಣಕ್ಯನ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ, ಆಧುನಿಕ ಜಗತ್ತಿನಲ್ಲಿ ಯಶಸ್ಸು, ನಾಯಕತ್ವ ಮತ್ತು ನೈತಿಕ ಜೀವನವನ್ನು ಬಯಸುವವರಿಗೆ ಸ್ಫೂರ್ತಿ ಮತ್ತು ಪ್ರಾಯೋಗಿಕ ಸಲಹೆಯ ಮೂಲವಾಗಿ ಕಾರ್ಯನಿರ್ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

Chanakya Niti: ಈ ತಪ್ಪುಗಳನ್ನು ಮಾಡಿದರೆ ಎಂದಿಗೂ ಮನೆಯಲ್ಲಿ ಶಾಂತಿ, ಸಮೃದ್ಧಿ ನೆಲೆಸುವುದಿಲ್ಲ

ಪ್ರತಿಯೊಬ್ಬರೂ ಸಹ ನಮ್ಮ ಮನೆಯಲ್ಲಿ ಶಾಂತಿ ನೆಲೆಸಬೇಕು, ಮನೆ ಇನ್ನಷ್ಟು ಸಮೃದ್ಧಿಯಾಗಬೇಕು ಎಂದು ಬಯಸುತ್ತಾರೆ. ಆದರೆ ಕೆಲವೊಂದು ಮನೆಗಳಲ್ಲಿ ಯಾವಾಗ ನೋಡಿದರೂ ಜಗಳಗಳು, ಮನಸ್ತಾಪಗಳು ನಡೆಯುತ್ತಿರುತ್ತವೆ. ಆ ಮನೆಯಲ್ಲಿ ಶಾಂತಿಯೇ ಇರೋದಿಲ್ಲ. ಇದಕ್ಕೆ ಮುಖ್ಯ ಕಾರಣವೇ ದೈನಂದಿನ ಜೀವನದಲ್ಲಿ ಮಾಡುವ ಒಂದಷ್ಟು ತಪ್ಪುಗಳು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಈ ತಪ್ಪುಗಳನ್ನು ಸರಿಪಡಿಸುವ ಮೂಲಕ ಖಂಡಿತವಾಗಿಯೂ ಮನೆಯಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಸುವಂತೆ ಮಾಡಬಹುದು.

Chanakya Niti: ಎಷ್ಟೇ ಕ್ಲೋಸ್‌ ಆಗಿದ್ರೂ ಸರಿ, ಇಂತಹ ಸ್ವಭಾವದ ಜನರಿಗೆ ನಿಮ್ಮನೆ ವಿಚಾರಕ್ಕೆ ತಲೆ ಹಾಕಲು ಬಿಡಬೇಡಿ

ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಮನೆಯಲ್ಲಿ ನಡೆಯುವ ಪ್ರತಿಯೊಂದು ವಿಚಾರಗಳನ್ನು ಸಹ ಈ ಕೆಲವೊಂದು ಜನರಿಗೆ ಹೇಳುವುದರಿಂದ ಕುಟುಂಬದ ನೆಮ್ಮದಿಯೇ ಹಾಳಾಗುತ್ತದೆ. ಆದ್ದರಿಂದ ಈ ಸ್ವಭಾವದ ಜನರಿಗೆ ನಿಮ್ಮ ಮನೆಯ ವಿಚಾರಗಳನ್ನು ಹೇಳಬೇಡಿ ಮತ್ತು ಅಂತಹ ಜನರನ್ನು ನಿಮ್ಮ ಮನೆಯ ವಿಷಯಗಳಿಗೆ ತಲೆ ಹಾಕಲು ಬಿಡಬಾರದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ.

Chanakya Niti: ಈ ನಾಲ್ಕು ತಪ್ಪುಗಳು ವ್ಯಕ್ತಿಯ ಜೀವನವನ್ನೇ ಹಾಳು ಮಾಡುತ್ತವೆ

ನಾವು ನಮ್ಮ ಜೀವನದಲ್ಲಿ ಯಾವ ಅಭ್ಯಾಸಗಳನ್ನು ರೂಢಿಸಿಕೊಳ್ಳುತ್ತೇವೆಯೋ ಅದೇ ರೀತಿ ನಮ್ಮ ಜೀವನ ಇರುತ್ತದೆ. ಅದಕ್ಕಾಗಿಯೇ ಒಳ್ಳೆಯವರ ಸಹವಾಸದಲ್ಲಿರಬೇಕು, ಒಳ್ಳೆಯ ಅಭ್ಯಾಸಗಳನ್ನು ಮೈಗೂಡಿಕೊಳ್ಳಬೇಕು ಎಂದು ಹಿರಿಯರು ಕಿವಿಮಾತು ಹೇಳೋದು. ಹೀಗೆ ಒಳ್ಳೆಯ ಅಭ್ಯಾಸಗಳು ನಮ್ಮ ಜೀವನ ವನ್ನು ಬೆಳಗುವಂತೆ ಕೆಲವೊಂದು ಅಭ್ಯಾಸಗಳು ಜೀವನವನ್ನು ಸಂಪೂರ್ಣವಾಗಿ ಹಾಳು ಮಾಡುತ್ತವೆ. ಆಚಾರ್ಯ ಚಾಣಕ್ಯರ ಪ್ರಕಾರ ಯಾವೆಲ್ಲಾ ಅಭ್ಯಾಸಗಳು ವ್ಯಕ್ತಿಯ ಜೀವನವನ್ನು ನಾಶ ಮಾಡುತ್ತವೆ ಎಂಬುದನ್ನು ನೋಡೋಣ ಬನ್ನಿ.

Chanakya Niti: ಈ ರೀತಿಯ ಜನರು ಮೋಸ ಹೋಗ್ತಾರೆ ಎನ್ನುತ್ತಾರೆ ಚಾಣಕ್ಯ

ಪ್ರೀತಿ, ನಂಬಿಕೆ ಪ್ರತಿಯೊಂದು ವಿಚಾರದಲ್ಲೂ ಕೆಲವೊಂದಿಷ್ಟು ಜನರು ಬಹು ಬೇಗನೆ ಮೋಸ ಹೋಗುತ್ತಾರೆ. ಈ ಕೆಲವು ಗುಣಗಳ ಕಾರಣದಿಂದಲೇ ಕೆಲವು ಜನರು ಮೋಸ ಹೋಗುವ ಸಾಧ್ಯತೆ ಹೆಚ್ಚು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಯಾವ ರೀತಿಯ ಜನರು ಸುಲಭವಾಗಿ ಮೋಸ ಹೋಗ್ತಾರೆ, ನಿಮ್ಮಲ್ಲೂ ಆ ಗುಣಗಳಿವೆಯೇ ಎಂಬುದನ್ನು ಪರೀಕ್ಷಿಸಿ.

Chanakya Niti for business: ಹೊಸದಾಗಿ ಬಿಸಿನೆಸ್‌ ಆರಂಭಿಸುವ ಪ್ರತಿಯೊಬ್ಬರೂ ಚಾಣಕ್ಯರ ಈ ಸಲಹೆಗಳನ್ನು ಪಾಲಿಸಲೇಬೇಕು

ಇತ್ತೀಚಿನ ದಿನಗಳಲ್ಲಂತೂ ಯುವ ಜನರು ಹೊಸ ಹೊಸ ಉದ್ಯಮಗಳನ್ನು ಆರಂಭವಿಸುವಲ್ಲಿ ತುಂಬಾನೇ ಉತ್ಸುಹಕರಾಗಿದ್ದಾರೆ. ಹೌದು ಇನ್ನೊಬ್ಬರ ಕೈ ಕೆಳಗೆ ದುಡಿಯೋದು ಬೇಡ, ಸ್ವಂತದ್ದಾಗಿ ಏನಾದರೂ ಮಾಡಬೇಕು ಎಂದು ತಮ್ಮದೇ ಬ್ಯುಸಿನೆಸ್‌ಗಳನ್ನು ಆರಂಭಿಸುತ್ತಿದ್ದಾರೆ. ಹೀಗೆ ಯಾವುದೇ ಉದ್ಯಮವನ್ನು ಆರಂಭಿಸುತ್ತಿದ್ದರೂ, ಆ ಉದ್ಯಮದಲ್ಲಿ ಯಶಸ್ಸನ್ನು ಸಾಧಿಸಲು ಸರಿಯಾದ ಮಾರ್ಗದರ್ಶನ ಅತ್ಯಗತ್ಯ ಎಂದಿದ್ದಾರೆ ಆಚಾರ್ಯ ಚಾಣಕ್ಯ. ನೀವು ಕೂಡ ಹೊಸ ಉದ್ಯಮವನ್ನು ಆರಂಭಿಸುವ ಯೋಜನೆಯಲ್ಲಿದ್ದರೆ ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ.

Chanakya Niti: ಜೀವನದಲ್ಲಿ ಮುಂದೆ ಬರಬೇಕು ಅಂದ್ರೆ ಈ ವಿಷಯಗಳನ್ನು ನಿಯಂತ್ರಿಸಲು ಕಲಿಯಿರಿ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹತ್ತು ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಜೀವನದಲ್ಲಿ ಮುಂದುವರೆಯಲು ಬಯಸುವವರು ಒಂದಷ್ಟು ವಿಷಯಗಳನ್ನು ನಿಯಂತ್ರಿಸಲು ಕಲಿಯಲೇಬೇಕು, ಇಲ್ಲದಿದ್ದರೆ ಪ್ರಗತಿಯ ಹಾದಿ ಹಿಡಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹಾಗಿದ್ರೆ ಜೀವನದಲ್ಲಿ ಮುಂದುವರೆಯಲು ಯಾವೆಲ್ಲಾ ವಿಷಯಗಳನ್ನು ನಿಯಂತ್ರಿಸಬೇಕು ಎಂಬುದನ್ನು ನೋಡೋಣ ಬನ್ನಿ.

Chanakya Niti: ಒತ್ತಡರಹಿತ ಜೀವನಕ್ಕಾಗಿ ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ

ಒತ್ತಡಮುಕ್ತ ಮತ್ತು ಸಂತೋಷದಾಯಕ ಜೀವನವನ್ನು ನಡೆಸಬೇಕು ಎಂದು ಪ್ರತಿಯೊಬ್ಬರೂ ಹಾತೊರೆಯುತ್ತಿದ್ದಾರೆ. ಆದರೆ ಅನೇಕರಿಗೆ ಸಂತೋಷವಾಗಿರುವುದು ಹೇಗೆ, ಒತ್ತಡಮುಕ್ತ ಜೀವನ ನಡೆಸಲು ಏನು ಮಾಡಬೇಕು ಎಂಬುದೇ ಗೊತ್ತಿಲ್ಲ. ನೀವು ಕೂಡ ಸಂತೋಷದಾಯಕ ಜೀವನಕ್ಕಾಗಿ ಹಾತೊರೆಯುತ್ತಿದ್ದೀರಾ? ಹಾಗಿದ್ರೆ ಆಚಾರ್ಯ ಚಾಣಕ್ಯರು ಹೇಳಿಕೊಟ್ಟಿರುವ ಈ ಮಾತುಗಳನ್ನು ಚಾಚು ತಪ್ಪದೇ ಪಾಲಿಸಿ, ಇದರಿಂದ ಖಂಡಿತವಾಗಿಯೂ ನಿಮ್ಮ ಜೀವನದಲ್ಲೂ ಸಂತೋಷ ನೆಲೆಸುತ್ತದೆ.

Chanakya Niti: ಶ್ರೀಮಂತಿಕೆ ಗಳಿಸಲು ಚಾಣಕ್ಯರು ಹೇಳಿಕೊಟ್ಟಿರುವ ಸಲಹೆಗಳಿವು

ಶ್ರೀಮಂತಿಕೆಯನ್ನು ಗಳಿಸಿ, ಒಂದೊಳ್ಳೆ ಜೀವನವನ್ನು ಸಾಗಿಸಬೇಕು ಎಂಬ ಆಸೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಇದಕ್ಕಾಗಿ ಏನು ಮಾಡಬೇಕು ಎಂಬುದು ಅನೇಕರಿಗೆ ಗೊತ್ತೇ ಇಲ್ಲ. ಇನ್ನೂ ಅನೇಕರಿಗೆ ಈ ಕುರಿತು ಸಲಹೆ ನೀಡುವವರಿಲ್ಲ. ಹೀಗಿರುವಾಗ ಆಚಾರ್ಯ ಚಾಣಕ್ಯರು ತಿಳಿಸಿರುವ ಈ ಕೆಲವೊಂದಿಷ್ಟು ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಶ್ರೀಮಂತಿಕೆಯನ್ನು ಗಳಿಸಬಹುದು. ನಿಮಗೂ ಕೂಡ ರಿಚ್‌ ಆಗಿ ಬಾಳಬೇಕು ಎಂಬ ಆಸೆಯಿದ್ದರೆ ಚಾಣಕ್ಯರ ಈ ಸಲಹೆಗಳನ್ನು ತಪ್ಪದೇ ಪಾಲಿಸಿ.

Chanakya Niti: ಪ್ರತಿಯೊಬ್ಬ ಪುರುಷನು ಈ ವಿಚಾರಗಳನ್ನು ತನ್ನ ಹೆಂಡತಿಯಿಂದ ಮರೆಮಾಡಲೇಬೇಕು ಎನ್ನುತ್ತಾರೆ ಚಾಣಕ್ಯ

ಗಂಡ ಹೆಂಡತಿಯ ನಡುವೆ ಯಾವುದೇ ಮುಚ್ಚುಮರೆ ಎನ್ನುವುಂತಹದ್ದು ಇರೋದಿಲ್ಲ, ಇವರಿಬ್ಬರೂ ತಮ್ಮ ಪ್ರತಿಯೊಂದು ಸೀಕ್ರೆಟ್‌ಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಆದರೆ ಗಂಡನಾದವನು ಹೀಗೆ ಪ್ರತಿಯೊಂದು ವಿಚಾರವನ್ನು ಹೆಂಡತಿಯ ಬಳಿ ಹೇಳಿಕೊಳ್ಳುವುದು ಸರಿಯಲ್ಲ, ಈ ಕೆಲವು ಸಂಗತಿಗಳನ್ನು ಪತ್ನಿಯಿಂದ ಮರೆ ಮಾಡಿದಷ್ಟು ಒಳ್ಳೆಯದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರ ಪ್ರಕಾರ ಗಂಡ ತನ್ನ ಹೆಂಡತಿಯಿಂದ ಯಾವ ವಿಚಾರಗಳನ್ನು ಮರೆ ಮಾಡಬೇಕು ಮತ್ತು ಅದರ ಹಿಂದಿನ ಕಾರಣವೇನು ಎಂಬುದನ್ನು ತಿಳಿಯೋಣ ಬನ್ನಿ.

Chanakya Niti: ಹೆಂಡತಿಯಾದವಳು ಗಂಡನ ಮುಂದೆ ಎಂದಿಗೂ ಈ ಕೆಲಸಗಳನ್ನು ಮಾಡಬಾರದು ಎನ್ನುತ್ತಾರೆ ಚಾಣಕ್ಯ

ಮದುವೆಯನ್ನು ಸ್ವರ್ಗದಲ್ಲಿಯೇ ನಿಶ್ಚಯ ಮಾಡಿರುತ್ತಾರೆ ದೇವರು ಎಂಬ ಮಾತನ್ನು ಕೇಳಿರುತ್ತೀರಿ ಅಲ್ವಾ. ಆದರೆ ಮದುವೆಯ ನಂತರ ಸಂಸಾರದ ಅಳಿವು ಉಳಿವು ಸಂಪೂರ್ಣವಾಗಿ ಗಂಡ ಹೆಂಡತಿಯ ನಡುವಿನ ಪ್ರೀತಿ, ನಂಬಿಕೆಯ ಮೇಲೆ ನಿಂತಿರುತ್ತದೆ. ಅಲ್ಲದೆ ಸಂಸಾರದಲ್ಲಿ ಮನಸ್ತಾಪ, ಜಗಳಗಳು ತಲೆದೋರಬಾರದೆಂದರೆ ಹೆಂಡತಿಯಾದವಳು ಗಂಡನ ಮುಂದೆ ಈ ಕೆಲಸಗಳನ್ನು ಮಾಡಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಪತ್ನಿ ತನ್ನ ಪತಿಯ ಮುಂದೆ ಯಾವ ಕೆಲಸಗಳನ್ನು ಮಾಡಬಾರದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಇಂತವರನ್ನು ಮದುವೆಯಾದರೆ ಜೀವನ ತುಂಬಾನೇ ಕಷ್ಟ ಎಂದಿದ್ದಾರೆ ಚಾಣಕ್ಯ

ಮದುವೆ ಎನ್ನುವುದು ಜೀವನದ ಪ್ರಮುಖ ಘಟ್ಟ. ಹಾಗಾಗಿ ಮದುವೆಯ ನಿರ್ಧಾರಗಳನ್ನು ಕೇವಲ ಹೃದಯದಿಂದ ತೆಗೆದುಕೊಳ್ಳದೆ, ಬುದ್ಧಿವಂತಿಕೆ ಮತ್ತು ಉತ್ತಮ ವಿವೇಚನೆಯಿಂದ ತೆಗೆದುಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಅದರಲ್ಲೂ ಈ ಕೆಲವೊಂದು ಸ್ವಭಾವದ ಜನರನ್ನು ಮದುವೆಯಾದರೆ ಜೀವನಪರ್ಯಂತ ಕಣ್ಣೀರಲ್ಲೇ ಕೈ ತೊಳೆಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಾಗಿದ್ದರೆ ಎಂತಹ ವ್ಯಕ್ತಿಗಳನ್ನು ಮದುವೆಯಾಗಬಾದು ಎಂಬುದನ್ನು ನೋಡೋಣ ಬನ್ನಿ.

Chanakya Niti: ಕೋಪವನ್ನು ನಿಯಂತ್ರಿಸುವುದು ಹೇಗೆ? ಇಲ್ಲಿದೆ ಚಾಣಕ್ಯರ ಸಲಹೆ

ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ, ಒಬ್ಬ ವ್ಯಕ್ತಿಯು ಭಾವನೆಗಳನ್ನು ನಿಯಂತ್ರಿಸುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದ್ದಾರೆ. ಅವರ ಪ್ರಕಾರ, ಒಬ್ಬ ವ್ಯಕ್ತಿಯು ತನ್ನ ಭಾವನೆಗಳನ್ನು, ವಿಶೇಷವಾಗಿ ಕೋಪವನ್ನು ನಿಯಂತ್ರಿಸಲು ಕಲಿತರೆ, ತಾಳ್ಮೆಯಿಂದ ಇದ್ದರೆ ಆತ ಜೀವನದಲ್ಲಿ ದೊಡ್ಡದನ್ನು ಸಾಧಿಸಬಹುದು. ಹಾಗಿದ್ದರೆ ಕೋಪವನ್ನು ನಿಯಂತ್ರಿಸಲು ಚಾಣಕ್ಯರ ಸಲಹೆಗಳೇನು ಎಂಬುದನ್ನು ವಿವರವಾಗಿ ನೋಡೋಣ.

ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ