Chanakya Niti
ಚಾಣಕ್ಯ ನೀತಿ, ಪ್ರಾಚೀನ ಭಾರತೀಯ ವಿದ್ವಾಂಸ ಚಾಣಕ್ಯರಿಂದ ಕ್ರಿ.ಪೂ. 300 ರ ಸುಮಾರಿಗೆ ಸಂಯೋಜಿಸಲ್ಪಟ್ಟಿದೆ, ಇದು ಪೂರ್ಣವಾದ ಜೀವನಕ್ಕಾಗಿ ಪ್ರಾಯೋಗಿಕ ಮಾರ್ಗದರ್ಶನವನ್ನು ನೀಡುವ ಸಲಹೆಗಳ ಸಂಗ್ರಹವಾಗಿದೆ. ರಾಜ ಚಂದ್ರಗುಪ್ತ ಮೌರ್ಯನಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಣಕ್ಯನ ಬೋಧನೆಗಳು ಜೀವನ, ಆಡಳಿತ ಮತ್ತು ತಂತ್ರದ ವಿವಿಧ ಅಂಶಗಳನ್ನು ಒಳಗೊಂಡಿದೆ. ಮಾನವ ಸ್ವಭಾವ, ರಾಜಕೀಯ ಮತ್ತು ಅರ್ಥಶಾಸ್ತ್ರದ ಬಗ್ಗೆ ಅವರ ಒಳನೋಟಗಳು ಈ ಪಠ್ಯದಲ್ಲಿ ಅಡಕವಾಗಿವೆ. ಸಾಮಾನ್ಯವಾಗಿ ಚಾಣಕ್ಯರನ್ನು ಮ್ಯಾಕಿಯಾವೆಲ್ಲಿ, ಅರಿಸ್ಟಾಟಲ್ ಮತ್ತು ಪ್ಲೇಟೋನಂತಹ ಚಿಂತಕರಿಗೆ ಹೋಲಿಸಲಾಗುತ್ತದೆ. ಚಾಣಕ್ಯನ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ, ಆಧುನಿಕ ಜಗತ್ತಿನಲ್ಲಿ ಯಶಸ್ಸು, ನಾಯಕತ್ವ ಮತ್ತು ನೈತಿಕ ಜೀವನವನ್ನು ಬಯಸುವವರಿಗೆ ಸ್ಫೂರ್ತಿ ಮತ್ತು ಪ್ರಾಯೋಗಿಕ ಸಲಹೆಯ ಮೂಲವಾಗಿ ಕಾರ್ಯನಿರ್ವಹಿಸುತ್ತದೆ.
Chanakya Niti: ಶ್… ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಯಾರ ಬಳಿಯೂ ಶೇರ್ ಮಾಡಿಕೊಳ್ಳಬೇಡಿ
ಇಂದಿನ ಈ ಸಾಮಾಜಿಕ ಮಾಧ್ಯಮ ಯುಗದಲ್ಲಿ, ಜನ ತಮ್ಮ ಜೀವನದ ಸಣ್ಣ ವಿವರಗಳನ್ನು ಸಹ ಆನ್ಲೈನ್ನಲ್ಲಿ ಅಥವಾ ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತಾರೆ. ಈ ರೀತಿ ಪ್ರತಿಯೊಂದು ವಿಚಾರವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದು ತರವಲ್ಲ, ಕುರುಡಾಗಿ ನಂಬಿ ಎಲ್ಲಾ ಸೀಕ್ರೆಟ್ಗಳನ್ನು ಇತರರ ಬಳಿ ಹಂಚಿಕೊಂಡರೆ ಮೋಸ ಹೋಗುವ, ಗೌರವವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಾದ್ದರೆ ಯಾವೆಲ್ಲಾ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಸೂಕ್ತವಲ್ಲ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 23, 2026
- 7:29 pm
Chanakya Niti: ಚಾಣಕ್ಯರ ಪ್ರಕಾರ ಮದುವೆಯಾಗುವ ಗಂಡು-ಹೆಣ್ಣಿನ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು ಗೊತ್ತಾ?
ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಗಂಡ ಹೆಂಡತಿ ಹೇಗಿರಬೇಕು, ಸಂಸಾರ ಹೇಗೆ ಸಾಗಿಸಬೇಕು ಎಂಬುದರ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಅವರು ವೈವಾಹಿಕ ಜೀವನದಲ್ಲಿ ಗಂಡ ಹೆಂಡತಿಯ ನಡುವಿನ ವಯಸ್ಸಿನ ಅಂತರವೂ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚಿನ ವಯಸ್ಸಿನ ಅಂತರವು ಸಂಸಾರದಲ್ಲಿ ಬಿರುಕು ಮೂಡಲು ಕಾರಣವಾಗಬಹುದು ಎಂದಿದ್ದಾರೆ. ಹಾಗಿದ್ದರೆ ಮದುವೆಯಾಗುವ ಗಂಡು-ಹೆಣ್ಣಿನ ನಡುವೆ ವಯಸ್ಸಿನ ಅಂತರ ಎಷ್ಟಿದ್ದರೆ ಚೆಂದ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 21, 2026
- 5:32 pm
Chanakya Niti: ಈ ಅಭ್ಯಾಸಗಳನ್ನು ಬದಲಾಯಿಸದಿದ್ದರೆ ನಿಮ್ಮ ಆದಾಯ ಎಂದಿಗೂ ಹೆಚ್ಚಳವಾಗುವುದಿಲ್ಲ
ಆಚಾರ್ಯ ಚಾಣಕ್ಯರು ರಾಜಕೀಯ ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ. ಯಶಸ್ಸು ಗಳಿಸುವುದು ಹೇಗೆ, ಶ್ರೀಮಂತಿಕೆ ಗಳಿಸುವುದು ಹೇಗೆ ಎಂಬುದನ್ನು ಹೇಳಿದ್ದಾರೆ. ಅದೇ ರೀತಿ ಅವರು ಶ್ರೀಮಂತಿಕೆ ಗಳಿಸಲು ಹಣ ಉಳಿತಾಯ ಮಾಡುವುದು ಎಷ್ಟು ಮುಖ್ಯ, ಹಣ ಉಳಿತಾಯ ಮಾಡಲು ಏನು ಮಾಡಬೇಕು ಎಂಬುದನ್ನು ತಿಳಿಸಿದ್ದಾರೆ. ಜೊತೆಗೆ ಈ ಕೆಲವೊಂದು ಅಭ್ಯಾಸಗಳನ್ನು ಬದಲಾಯಿಸದಿದ್ದರೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಉಳಿತಾಯ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ. ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 20, 2026
- 7:41 pm
Chanakya Niti: ಮಹಿಳೆಯರಿಗೆ ಇಷ್ಟವಾಗೋದೇ ಪುರುಷರ ಈ ಗುಣಗಳು ಎನ್ನುತ್ತಾರೆ ಚಾಣಕ್ಯ
ಮಹಿಳೆಯರು ಆಕರ್ಷಿತರಾಗೋದೇ ಪುರುಷರ ಅಂದ-ಚಂದ, ಅವರ ಆಸ್ತಿ ಅಂತಸ್ತಿಗೆ ಎಂದು ಹಲವರು ಭಾವಿಸುತ್ತಾರೆ. ಆದರೆ ಚಾಣಕ್ಯರ ಪ್ರಕಾರ, ಪ್ರತಿಯೊಬ್ಬ ಮಹಿಳೆಯೂ ಪುರುಷರ ಈ ಗುಣಗಳಿಗೆ ಆಕರ್ಷಿತಳಾಗುವುದು, ಆಕೆ ತನ್ನ ಜೀವನ ಸಂಗಾತಿಯು ಉತ್ತಮ ಗುಣಗಳನ್ನು ಹೊಂದಿರಬೇಕು ಎಂದು ಬಯಸುತ್ತಾಳೆ. ಚಾಣಕ್ಯರು ಹೇಳಿರುವಂತ ಪುರುಷರ ಯಾವ ಗುಣಗಳು ಮಹಿಳೆಯರಿಗೆ ಇಷ್ಟವಾಗುತ್ತದೆ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 15, 2026
- 7:33 pm
Chanakya Niti: ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಈ ಪಾಠಗಳನ್ನು ಕಲಿಸಬೇಕು ಎನ್ನುತ್ತಾರೆ ಚಾಣಕ್ಯ
ಮಕ್ಕಳನ್ನು ಬೆಳೆಸುವುದೆಂದರೆ ಅವರಿಗೆ ಕೇವಲ ಉತ್ತಮ ಶಿಕ್ಷಣ ನೀಡುವುದು ಮಾತ್ರವಲ್ಲ, ಉತ್ತಮ ಅಭ್ಯಾಸಗಳು ಮತ್ತು ಮೌಲ್ಯಗಳನ್ನು ಕಲಿಸುವುದು ಹೌದು. ಇಂತಹ ಜೀವನ ಪಾಠಗಳನ್ನು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಕಲಿಸಿದರೆ ಮಕ್ಕಳ ಭವಿಷ್ಯವು ಉಜ್ವಲವಾಗಿರುತ್ತದೆ. ಅದರಲ್ಲೂ ಈ ಒಂದಷ್ಟು ಜೀವನ ಪಾಠಗಳನ್ನು ಪ್ರತಿಯೊಬ್ಬ ಪೋಷಕರು ಸಹ ತಮ್ಮ ಮಕ್ಕಳಿಗೆ ಕಲಿಸಲೇಬೇಕು ಎಂದು ಅಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
- Malashree anchan
- Updated on: Jun 13, 2026
- 7:19 pm
Chanakya Niti: ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ; ಏಕೆ ಗೊತ್ತಾ?
ಕೆಲವೊಬ್ಬರು ತುಂಬಾನೇ ಒಳ್ಳೆಯವರಾಗಿರುತ್ತಾರೆ, ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಆದರೆ ಈ ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ ಎಂದಿದ್ದಾರೆ ಆಚಾರ್ಯ ಚಾಣಕ್ಯ. ನಾವು ಜಾಸ್ತಿ ಒಳ್ಳೆಯತನವನ್ನು ತೋರಿದರೆ ಕೆಲವೊಮ್ಮೆ ಅದೇ ಗುಣವು ದೌರ್ಬಲ್ಯವಾಗಿ ಬದಲಾಗಬಹುದು ಆದ್ದರಿಂದ, ಪರಿಸ್ಥಿತಿಯ ಬಗ್ಗೆ ಯೋಚಿಸಿ ಸಮತೋಲನದಿಂದ ವರ್ತಿಸುವುದು ಬಹಳ ಮುಖ್ಯ ಎಂದಿದ್ದಾರೆ.
- Malashree anchan
- Updated on: Jun 11, 2026
- 7:33 pm
Chanakya Niti: ಚಾಣಕ್ಯರ ಈ ಮಾತುಗಳನ್ನು ಅನುಸರಿಸಿದವರು ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸು ಕಾಣುತ್ತಾರಂತೆ
ಜೀವನದಲ್ಲಿ ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಯಶಸ್ಸನ್ನು ಗಳಿಸುವ ಸರಿಯಾದ ಮಾರ್ಗವನ್ನು ತಿಳಿದಿರುವವರು ಬಹಳ ಕಡಿಮೆ. ಹೀಗಿರುವಾಗ ನೀವು ಆಚಾರ್ಯ ಚಾಣಕ್ಯರ ಈ ಯಶಸ್ಸಿನ ಸಲಹೆಗಳನ್ನು ಅನುಸರಿಸಬಹುದು. ಚಾಣಕ್ಯರು ಒಬ್ಬ ವ್ಯಕ್ತಿಯು ಯಶಸ್ಸನ್ನು ಗಳಿಸಲು ಬೇಕಾಗಿರುವಂತಹ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಇವುಗಳನ್ನು ಅನುಸಿದರೆ ನೀವು ಸಹ ಖಂಡಿತವಾಗಿಯೂ ಲೈಫಲ್ಲಿ ಸಕ್ಸಸ್ ಆಗ್ತೀರಿ.
- Malashree anchan
- Updated on: Jun 10, 2026
- 8:46 pm
Chanakya Niti: ಈ ಅಭ್ಯಾಸಗಳಿದ್ದರೆ ನೀವು ಜೀವನಪರ್ಯಂತ ಬಡವರಾಗಿಯೇ ಉಳಿಯುತ್ತೀರಿ ಜೋಕೆ!
ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ಮಾನವಕುಲಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ವಿಷಯಗಳ ಬಗ್ಗೆ ಹೇಳಿದ್ದಾರೆ. ಹೌದು ಶ್ರೀಮಂತಿಕೆ, ಯಶಸ್ವಿ ಜೀವನ, ದಾಂಪತ್ಯ ಜೀವನ ಸೇರಿದಂತೆ ಸಾಕಷ್ಟು ವಿಚಾರಗಳನ್ನು ಹೇಳಿದ್ದಾರೆ. ಅದೇ ರೀತಿ ಅವರು ಕೆಲವರು ಎಷ್ಟೇ ಸಂಪಾದನೆ ಮಾಡಿದರೂ ಬಡವರಾಗಿಯೇ ಉಳಿಯುತ್ತಾರೆ. ಇದಕ್ಕೆ ಅವರ ಕೆಲವೊಂದು ಅಭ್ಯಾಸಗಳೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಹಾಗಿದ್ದರೆ ಬಡತನಕ್ಕೆ ಕಾರಣವಾಗುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 7, 2026
- 6:39 pm
Chanakya Niti: ಗಂಡ ಹೆಂಡತಿ ನಡುವಿನ ಜಗಳಗಳಿಗೆ ನಿಜವಾದ ಕಾರಣವೇ ಈ ಅಂಶಗಳು
ಗಂಡ ಹೆಂಡತಿಯ ನಡುವೆ ಮನಸ್ತಾಪ, ಜಗಳಗಳು ನಡೆಯುವುದು ಸಾಮಾನ್ಯ. ಕೆಲವೊಂದು ಬಾರಿ ಈ ಜಗಳಗಳು ತೀರಾ ಅತಿರೇಕಕ್ಕೆ ಹೋಗುತ್ತವೆ. ಪತಿ ಪತ್ನಿಯರ ನಡುವೆ ಈ ರೀತಿ ಪದೇ ಪದೇ ಜಗಳಗಳು ಉಂಟಾಗಲು ಈ ಕೆಲವು ಸಂಗತಿಗಳೇ ಮುಖ್ಯ ಕಾರಣ, ಅವುಗಳನ್ನು ಬಗೆಹರಿಸಿದರೆ ದಾಂಪತ್ಯ ಜೀವನವು ಸುಗಮವಾಗಿ ಸಾಗುವುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಗಂಡ ಹೆಂಡತಿ ನಡುವೆ ಜಗಳಗಳು ನಡೆಯಲು ಮುಖ್ಯ ಕಾರಣಗಳು ಏನು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 4, 2026
- 7:16 pm
Chanakya Niti: ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂದರೆ ತಕ್ಷಣವೇ ಈ ಅಭ್ಯಾಸಗಳನ್ನು ತ್ಯಜಿಸಿ
ನಮ್ಮನ್ನು ಎಲ್ಲರೂ ಇಷ್ಟಪಡಬೇಕು, ನಮ್ಮನ್ನು ಎಲ್ಲರೂ ಗೌರವಿಸಬೇಕು ಎಂದು ಬಯಸುತ್ತೇವೆ. ಈ ಗೌರವವು ಅತ್ಯಗತ್ಯ. ಇದು ವೈಯಕ್ತಿಕ ಮತ್ತು ವೃತ್ತಿಪೆ ಜೀವನದ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಈ ಗೌರವನ್ನು ಗಳಿಸಬೇಕು ಎಂದಾದರೆ ಈ ಕೆಲವೊಂದು ಅಭ್ಯಾಸಗಳನ್ನು ತ್ಯಜಿಸಬೇಕು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಚಾಣಕ್ಯರು ಹೇಳಿರುವಂತೆ ಯಾವ ಅಭ್ಯಾಸಗಳನ್ನು ತ್ಯಜಿಸುವ ಮೂಲಕ ಗೌರವವನ್ನು ಗಳಿಸಲು ಸಾಧ್ಯ ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 3, 2026
- 8:05 pm
Chanakya Niti: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ
ಇಂದಿನ ಈ ದುಬಾರಿ ದುನಿಯಾದಲ್ಲಿ ನಾವು ಎಷ್ಟು ದುಡಿದರೂ ಸಾಲೋದೇ ಇಲ್ಲ. ಹೆಚ್ಚಿನವರು ಆದಾಯಕ್ಕಿಂತ ಹೆಚ್ಚು ಖರ್ಚನ್ನೇ ಮಾಡುತ್ತಿರುತ್ತಾರೆ. ಇದು ಮುಂದೊಂದು ದಿನ ಆರ್ಥಿಕ ಸಂಕಷ್ಟ ಎದುರಾಗಲು ಕಾರಣವಾಗಬಹುದು. ಹೀಗಿರುವಾಗ ನಿಮ್ಮ ಜೀವನದಲ್ಲಿ ಇಂತಹ ಆರ್ಥಿಕ ಸಮಸ್ಯೆಗಳು ಎದುರಾಗಬಾರದು ಎಂದಾದರೆ ಆಚಾರ್ಯ ಚಾಣಕ್ಯರ ಈ ಸಲಹೆಗಳನ್ನು ತಪ್ಪದೇ ಪಾಲಿಸಿ.
- Malashree anchan
- Updated on: Jun 2, 2026
- 8:58 pm
Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ
ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ನೆಮ್ಮದಿಯಿಂದ ಜಜೀವನ ನಡೆಸಲು ತಾಳ್ಮೆ ಮತ್ತು ಚಿಂತನಶೀಲ ನಿರ್ಧಾರ ತೆಗೆದುಕೊಳ್ಳುವುದು ಅತ್ಯಗತ್ಯ. ಅದರಲ್ಲೂ ಈ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಂದಿಗೂ ಆತುರ ಪಡಬಾರದು ಇದರಿಂದ ಜೀವನವೇ ಹಾಳಾಗುವ ಸಾಧ್ಯತೆ ಇದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಜೀವನದಲ್ಲಿ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ.
- Malashree anchan
- Updated on: Jun 1, 2026
- 7:21 pm