AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Super Kings

Chennai Super Kings

Chennai Super Kings

IPL 2027: ಹಾರ್ದಿಕ್ ಪಾಂಡ್ಯ ಖರೀದಿ ಬಗ್ಗೆ ಮೌನ ಮುರಿದ ಸಿಎಸ್​ಕೆ ಸಿಇಒ

Hardik Pandya to CSK for IPL 2027: 2027ರ ಐಪಿಎಲ್‌ಗೆ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಬಿಟ್ಟು ಸಿಎಸ್‌ಕೆ ಸೇರುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಕೆಕೆಆರ್, ರಾಜಸ್ಥಾನ್ ಕೂಡ ಆಸಕ್ತಿ ಹೊಂದಿವೆ ಎನ್ನಲಾಗಿತ್ತು. ಆದರೆ, ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಈ ಎಲ್ಲಾ ಸುದ್ದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಇದು ಕೇವಲ ಊಹಾಪೋಹ. ಪಾಂಡ್ಯ ಅಥವಾ ಮುಂಬೈ ಇಂಡಿಯನ್ಸ್‌ನೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ

Hardik Pandya's IPL 2027 Future: 2027ರ IPL ಗೂ ಮುನ್ನ ಕಳಪೆ ಪ್ರದರ್ಶನದಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೇರಿದಂತೆ ಹಲವು ತಂಡಗಳು ಪಾಂಡ್ಯರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಪೈಪೋಟಿ ನಡೆಸುತ್ತಿವೆ. ಆಲ್‌ರೌಂಡರ್ ಆಗಿ ಪಾಂಡ್ಯರ ಸಾಮರ್ಥ್ಯ ಮತ್ತು ಜನಪ್ರಿಯತೆ ಅವರನ್ನು ಆಕರ್ಷಕ ಆಟಗಾರನನ್ನಾಗಿ ಮಾಡಿದೆ.

IPL 2026 Final: ಸತತ 2ನೇ ಟ್ರೋಫಿ; ಸಿಎಸ್​​ಕೆ, ಮುಂಬೈ ದಾಖಲೆ ಸರಿಗಟ್ಟಿದ ಆರ್​ಸಿಬಿ

RCB Crowned 2026 IPL Champions: 2026ರ ಐಪಿಎಲ್ ಫೈನಲ್‌ನಲ್ಲಿ ರಜತ್ ಪಾಟಿದಾರ್ ನಾಯಕತ್ವದ RCB, ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಐಪಿಎಲ್ ಪ್ರಶಸ್ತಿ ಗೆದ್ದಿದೆ. ವಿರಾಟ್ ಕೊಹ್ಲಿಯವರ ಅಜೇಯ 75 ರನ್ ನೆರವಿನಿಂದ RCB 5 ವಿಕೆಟ್ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ, ಚೆನ್ನೈ ಮತ್ತು ಮುಂಬೈ ನಂತರ ಸತತವಾಗಿ ಪ್ರಶಸ್ತಿ ಗೆದ್ದ ಮೂರನೇ ತಂಡ ಎಂಬ ಇತಿಹಾಸವನ್ನು ಆರ್​​ಸಿಬಿ ನಿರ್ಮಿಸಿದೆ.

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು!

Chennai Super Kings: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 14 ಪಂದ್ಯಗಳನ್ನಾಡಿದೆ. ಈ ಹದಿನಾಲ್ಕು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಂದರೆ ಕೇವಲ 12 ಅಂಕಗಳನ್ನು ಮಾತ್ರ ಪಡೆದುಕೊಂಡಿದೆ. ಈ ಅಂಕಗಳೊಂದಿಗೆ 7ನೇ ಸ್ಥಾನ ಪಡೆದಿರುವ ಸಿಎಸ್​ಕೆಗೆ ಮೇಜರ್ ಸರ್ಜರಿ ಮಾಡಲು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

IPL 2026: 34 ಸಿಕ್ಸ್, 530 ರನ್; ಸಿಎಸ್​ಕೆ ವೇಗಿಯ ಅಪರೂಪದ ದಾಖಲೆ

Anshul Kamboj Bowling Record: ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2026 ಪ್ಲೇಆಫ್​ನಿಂದ ಹೊರಬಿದ್ದಿದೆ. ಸತತ ಮೂರನೇ ಸೀಸನ್‌ನಲ್ಲಿ ಸಿಎಸ್‌ಕೆ ಅರ್ಹತೆ ಪಡೆಯಲು ವಿಫಲವಾಗಿದೆ. ತಂಡದ ಬೌಲಿಂಗ್ ವಿಭಾಗದ ವೈಫಲ್ಯ ಪ್ರಮುಖ ಕಾರಣ. ಅದರಲ್ಲೂ ಅನ್ಶುಲ್ ಕಾಂಬೋಜ್ 530 ರನ್ ಹಾಗೂ 34 ಸಿಕ್ಸರ್‌ಗಳನ್ನು ನೀಡಿ, ಈ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಮತ್ತು ಸಿಕ್ಸರ್ ಬಿಟ್ಟುಕೊಟ್ಟ ಅನಗತ್ಯ ದಾಖಲೆ ನಿರ್ಮಿಸಿದ್ದಾರೆ.

IPL 2026: ಧೋನಿ ಮುಂದಿನ ಸೀಸನ್ ಆಡ್ತಾರಾ? ಅಡ್ಡ ಗೋಡೆ ಮೇಲೆ ದೀಪವಿಟ್ಟ ರುತುರಾಜ್

MS Dhoni future IPL: ಐಪಿಎಲ್ 2026ರಲ್ಲಿ ಸಿಎಸ್‌ಕೆ ಲೀಗ್ ಹಂತದಲ್ಲೇ ಮುಕ್ತಾಯಗೊಂಡಿದ್ದು, ಕಳಪೆ ಪ್ರದರ್ಶನಕ್ಕೆ ಎಂಎಸ್ ಧೋನಿ ಗೈರು ಪ್ರಮುಖ ಕಾರಣ. ಅವರು ಗಾಯದಿಂದಾಗಿ ಇಡೀ ಸೀಸನ್ ಆಡಿಲ್ಲ. ಇದರ ಪರಿಣಾಮವಾಗಿ, ತಂಡವು ಪ್ಲೇಆಫ್ ಪ್ರವೇಶಿಸಲು ವಿಫಲವಾಯಿತು. ಧೋನಿ ಮುಂದಿನ ಸೀಸನ್‌ನಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ನಾಯಕ ರುತುರಾಜ್ ಗಾಯಕ್ವಾಡ್ ಸ್ಪಷ್ಟ ಉತ್ತರ ನೀಡದೆ, ಭವಿಷ್ಯದಲ್ಲಿ ತಿಳಿಯಲಿದೆ ಎಂದಿದ್ದಾರೆ.

GT vs CSK: ಸಿಎಸ್​ಕೆ ವಿರುದ್ಧ 89 ರನ್​ಗಳಿಂದ ಗೆದ್ದ ಗುಜರಾತ್‌; ಅಗ್ರಸ್ಥಾನದಲ್ಲಿ ಆರ್​ಸಿಬಿ ಸೇಫ್

IPL 2026 GT vs CSK: ಐಪಿಎಲ್ 2026 ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಶುಭಮನ್ ಗಿಲ್, ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಗುಜರಾತ್ 229 ರನ್ ಗಳಿಸಿತು. ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ ಮತ್ತು ರಶೀದ್ ಖಾನ್ ತಲಾ ಮೂರು ವಿಕೆಟ್ ಪಡೆದು ಸಿಎಸ್​ಕೆಯನ್ನು 140 ರನ್‌ಗಳಿಗೆ ಆಲೌಟ್ ಮಾಡಿದರು. ಈ ಸೋಲಿನಿಂದ ಸಿಎಸ್‌ಕೆ ಟೂರ್ನಿಯಿಂದ ಹೊರಬಿದ್ದಿದೆ.

GT vs CSK: ಸತತ 5ನೇ ಅರ್ಧಶತಕ; ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್

Sai Sudharsan's IPL Record: ಗುಜರಾತ್ ಟೈಟಾನ್ಸ್ ಆಟಗಾರ ಸಾಯಿ ಸುದರ್ಶನ್ ಐಪಿಎಲ್‌ನಲ್ಲಿ ಸತತ ಐದನೇ ಅರ್ಧಶತಕ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈ ವಿರುದ್ಧ 84 ರನ್ ಸಿಡಿಸಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಏಳು ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಇವರಾಗಿದ್ದಾರೆ. ಸತತ ಅಮೋಘ ಪ್ರದರ್ಶನ ನೀಡುತ್ತಿರುವ ಸುದರ್ಶನ್, ಈ ಆವೃತ್ತಿಯಲ್ಲಿ ಒಟ್ಟು 638 ರನ್ ಗಳಿಸಿ ಮಿಂಚಿದ್ದಾರೆ.

GT vs CSK: ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು

Shubman Gill's IPL 2026 Blaze: ಶುಭ್​ಮನ್ ಗಿಲ್ ಐಪಿಎಲ್ 2026ರಲ್ಲಿ ಸಿಎಸ್​ಕೆ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ 600 ರನ್ ಗಳಿಸಿದ ಮೊದಲ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಇದು ಅವರ 6ನೇ ಅರ್ಧಶತಕ. ವಾರ್ನರ್ ಮತ್ತು ಗೇಲ್ ಅವರ 600+ ರನ್ ದಾಖಲೆ ಸರಿಗಟ್ಟಿದ ಗಿಲ್, 6000 ಟಿ20 ರನ್ ಹಾಗೂ ಸುದರ್ಶನ್ ಜೊತೆ 10 ಶತಕದ ಜೊತೆಯಾಟದ ಮೂಲಕ ಕೊಹ್ಲಿ-ಎಬಿಡಿ ದಾಖಲೆಯನ್ನೂ ಸರಿಗಟ್ಟಿದ್ದಾರೆ.

GT vs CSK: ಪಂದ್ಯದ ಆರಂಭದಲ್ಲೇ ಗಾಯಗೊಂಡು ಮೈದಾನದಿಂದ ಹೊರ ನಡೆದ ಸಂಜು

Sanju Samson Injury: ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗಾಯದ ಸಮಸ್ಯೆ ಬೆನ್ನಟ್ಟಿದೆ. ಪ್ರಮುಖ ಆಟಗಾರರು ಹೊರಗುಳಿದಿರುವಾಗಲೇ, ಇದೀಗ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಬೆರಳಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಇದರಿಂದ ಅವರು ಮೈದಾನ ತೊರೆದಿದ್ದು, ಸಿಎಸ್‌ಕೆ ಪ್ಲೇಆಫ್ ಕನಸು ಮತ್ತಷ್ಟು ಮಂಕಾಗಿದೆ. ಸಂಜು ಬ್ಯಾಟಿಂಗ್ ಮಾಡುತ್ತಾರಾ ಎಂಬ ಆತಂಕ ಅಭಿಮಾನಿಗಳಲ್ಲಿ ಮನೆ ಮಾಡಿದೆ.

GT vs CSK: ಕೊನೆಯ ಲೀಗ್ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ

MS Dhoni Misses Entire IPL 2026: ಐಪಿಎಲ್ 2026 ರ ಸಿಎಸ್‌ಕೆ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಅಂತಿಮ ಲೀಗ್ ಪಂದ್ಯದಲ್ಲಿ ಎಂಎಸ್ ಧೋನಿ ಕಣಕ್ಕಿಳಿಯಲಿಲ್ಲ. ಗಾಯದ ಕಾರಣ, ಧೋನಿ ಈ ಆವೃತ್ತಿಯ ಒಂದೇ ಒಂದು ಲೀಗ್ ಪಂದ್ಯವನ್ನು ಆಡಿಲ್ಲ. ಇದು ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ. ಅಭಿಮಾನಿಗಳು ಧೋನಿಯನ್ನು ನೋಡಲು ಕಾತರರಾಗಿದ್ದರೂ, ಕೊನೆಗೆ ಎದುರಾಗಿದ್ದು ನಿರಾಸೆ ಮಾತ್ರ.

GT vs CSK IPL 2026 Highlights: ಗುಜರಾತ್ ವಿರುದ್ಧ ಹೀನಾಯವಾಗಿ ಸೋತ ಸಿಎಸ್​ಕೆ

Gujarat Titans vs Chennai Super Kings, IPL 2026 Highlights: ಐಪಿಎಲ್ 2026 ರ 66 ನೇ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ತಂಡವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 4 ವಿಕೆಟ್‌ಗೆ 229 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಸಿಎಸ್‌ಕೆ 140 ರನ್‌ಗಳಿಗೆ ಆಲೌಟ್ ಆಯಿತು.

'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು