AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Super Kings

Chennai Super Kings

Chennai Super Kings

IPL 2027: ಐಪಿಎಲ್ ಹರಾಜಿಗೂ ಮುನ್ನ CSK ‘ಮಾಸ್ಟರ್​ ಪ್ಲ್ಯಾನ್’

IPL 2027: ಐಪಿಎಲ್ 2027ರ ಮೆಗಾ ಹರಾಜಿಗೂ ಮುನ್ನ ಐದು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ಭಾರಿ ಸಂಚಲನ ಸೃಷ್ಟಿಸಿದೆ. ಕಳೆದ ಸೀಸನ್‌ನ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಮ್ಯಾನೇಜ್‌ಮೆಂಟ್, ಈ ಬಾರಿ ಆಟಗಾರರ ಆಯ್ಕೆಗೆ ಕೇವಲ 'ಸ್ಟಾರ್ ಗಿರಿ' ಅಥವಾ ಹಳೆಯ ದಾಖಲೆಗಳನ್ನು ನಂಬಿ ಕೂರದೆ ಕಠಿಣ ಹಾದಿ ಹಿಡಿದಿದೆ. 

IPL: ಅತ್ಯಧಿಕ ಬ್ರಾಂಡ್ ಮೌಲ್ಯ ಹೊಂದಿರುವ ತಂಡ ಆರ್​ಸಿಬಿ; ಸಿಎಸ್​ಕೆಗೆ ಯಾವ ಸ್ಥಾನ?

IPL brand valuation 2026: ಹೌಲಿಹಾನ್ ಲೋಕೆ 2026ರ ಐಪಿಎಲ್ ಬ್ರಾಂಡ್ ಮೌಲ್ಯಮಾಪನ ಅಧ್ಯಯನದ ಪ್ರಕಾರ, ಐಪಿಎಲ್ ವ್ಯವಹಾರ ಮೌಲ್ಯ 2 ಲಕ್ಷ ಕೋಟಿ ರೂ. ತಲುಪಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು $312 ಮಿಲಿಯನ್ ಬ್ರಾಂಡ್ ಮೌಲ್ಯದೊಂದಿಗೆ ಅಗ್ರಸ್ಥಾನದಲ್ಲಿದೆ, $300 ಮಿಲಿಯನ್ ದಾಟಿದ ಮೊದಲ ಐಪಿಎಲ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬೈ ಇಂಡಿಯನ್ಸ್, ಕೆಕೆಆರ್, ಮತ್ತು ಸಿಎಸ್​ಕೆ ಕೂಡ ಗಮನಾರ್ಹ ಬ್ರಾಂಡ್ ಮೌಲ್ಯಗಳನ್ನು ಹೊಂದಿವೆ. ಐಪಿಎಲ್ ಜಾಗತಿಕವಾಗಿ ಕ್ರೀಡಾ ಕ್ಷೇತ್ರದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ.

IPL 2027: ಮತ್ತೊಬ್ಬ ಸ್ಟಾರ್ ಆಟಗಾರನನ್ನು ಬಿಟ್ಟುಕೊಡಲು ಮುಂದಾದ ಲಕ್ನೋ

CSK-LSG IPL Player Trade: ಐಪಿಎಲ್ 2027 ರ ಮಿನಿ ಹರಾಜಿಗೂ ಮುನ್ನ, ಸಿಎಸ್‌ಕೆ ಮತ್ತು ಎಲ್‌ಎಸ್‌ಜಿ ನಡುವೆ ಮಹತ್ವದ ಆಟಗಾರರ ವಿನಿಮಯ ನಡೆಯುವ ಸಾಧ್ಯತೆಯಿದೆ. ಎಲ್‌ಎಸ್‌ಜಿ ಯುವ ಬ್ಯಾಟ್ಸ್‌ಮನ್ ಉರ್ವಿಲ್ ಪಟೇಲ್ ಅವರನ್ನು ಪಡೆಯಲು ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಸಿಎಸ್‌ಕೆ ತಂಡಕ್ಕೆ ನೀಡಲು ಸಿದ್ಧವಿದೆ. ಸಿಎಸ್‌ಕೆ ಬೌಲಿಂಗ್ ಬಲಪಡಿಸಲು ಶಮಿ ಅಗತ್ಯವಿದ್ದರೆ, ಎಲ್‌ಎಸ್‌ಜಿ ತಮ್ಮ ಬ್ಯಾಟಿಂಗ್ ಲೈನ್ ಅಪ್ ಬಲಪಡಿಸಲು ನೋಡುತ್ತಿದೆ.

IPL 2027: ಹಾರ್ದಿಕ್ ಪಾಂಡ್ಯ ಖರೀದಿ ಬಗ್ಗೆ ಮೌನ ಮುರಿದ ಸಿಎಸ್​ಕೆ ಸಿಇಒ

Hardik Pandya to CSK for IPL 2027: 2027ರ ಐಪಿಎಲ್‌ಗೆ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಬಿಟ್ಟು ಸಿಎಸ್‌ಕೆ ಸೇರುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಕೆಕೆಆರ್, ರಾಜಸ್ಥಾನ್ ಕೂಡ ಆಸಕ್ತಿ ಹೊಂದಿವೆ ಎನ್ನಲಾಗಿತ್ತು. ಆದರೆ, ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಈ ಎಲ್ಲಾ ಸುದ್ದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಇದು ಕೇವಲ ಊಹಾಪೋಹ. ಪಾಂಡ್ಯ ಅಥವಾ ಮುಂಬೈ ಇಂಡಿಯನ್ಸ್‌ನೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ

Hardik Pandya's IPL 2027 Future: 2027ರ IPL ಗೂ ಮುನ್ನ ಕಳಪೆ ಪ್ರದರ್ಶನದಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೇರಿದಂತೆ ಹಲವು ತಂಡಗಳು ಪಾಂಡ್ಯರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಪೈಪೋಟಿ ನಡೆಸುತ್ತಿವೆ. ಆಲ್‌ರೌಂಡರ್ ಆಗಿ ಪಾಂಡ್ಯರ ಸಾಮರ್ಥ್ಯ ಮತ್ತು ಜನಪ್ರಿಯತೆ ಅವರನ್ನು ಆಕರ್ಷಕ ಆಟಗಾರನನ್ನಾಗಿ ಮಾಡಿದೆ.

IPL 2026 Final: ಸತತ 2ನೇ ಟ್ರೋಫಿ; ಸಿಎಸ್​​ಕೆ, ಮುಂಬೈ ದಾಖಲೆ ಸರಿಗಟ್ಟಿದ ಆರ್​ಸಿಬಿ

RCB Crowned 2026 IPL Champions: 2026ರ ಐಪಿಎಲ್ ಫೈನಲ್‌ನಲ್ಲಿ ರಜತ್ ಪಾಟಿದಾರ್ ನಾಯಕತ್ವದ RCB, ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಐಪಿಎಲ್ ಪ್ರಶಸ್ತಿ ಗೆದ್ದಿದೆ. ವಿರಾಟ್ ಕೊಹ್ಲಿಯವರ ಅಜೇಯ 75 ರನ್ ನೆರವಿನಿಂದ RCB 5 ವಿಕೆಟ್ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ, ಚೆನ್ನೈ ಮತ್ತು ಮುಂಬೈ ನಂತರ ಸತತವಾಗಿ ಪ್ರಶಸ್ತಿ ಗೆದ್ದ ಮೂರನೇ ತಂಡ ಎಂಬ ಇತಿಹಾಸವನ್ನು ಆರ್​​ಸಿಬಿ ನಿರ್ಮಿಸಿದೆ.

ಧೋನಿ ಕಾರಣ CSK ತಂಡಕ್ಕೆ ಕೋಚ್ ಆಗಲು ಹಿಂದೇಟು!

Chennai Super Kings: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 14 ಪಂದ್ಯಗಳನ್ನಾಡಿದೆ. ಈ ಹದಿನಾಲ್ಕು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಅಂದರೆ ಕೇವಲ 12 ಅಂಕಗಳನ್ನು ಮಾತ್ರ ಪಡೆದುಕೊಂಡಿದೆ. ಈ ಅಂಕಗಳೊಂದಿಗೆ 7ನೇ ಸ್ಥಾನ ಪಡೆದಿರುವ ಸಿಎಸ್​ಕೆಗೆ ಮೇಜರ್ ಸರ್ಜರಿ ಮಾಡಲು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

IPL 2026: 34 ಸಿಕ್ಸ್, 530 ರನ್; ಸಿಎಸ್​ಕೆ ವೇಗಿಯ ಅಪರೂಪದ ದಾಖಲೆ

Anshul Kamboj Bowling Record: ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2026 ಪ್ಲೇಆಫ್​ನಿಂದ ಹೊರಬಿದ್ದಿದೆ. ಸತತ ಮೂರನೇ ಸೀಸನ್‌ನಲ್ಲಿ ಸಿಎಸ್‌ಕೆ ಅರ್ಹತೆ ಪಡೆಯಲು ವಿಫಲವಾಗಿದೆ. ತಂಡದ ಬೌಲಿಂಗ್ ವಿಭಾಗದ ವೈಫಲ್ಯ ಪ್ರಮುಖ ಕಾರಣ. ಅದರಲ್ಲೂ ಅನ್ಶುಲ್ ಕಾಂಬೋಜ್ 530 ರನ್ ಹಾಗೂ 34 ಸಿಕ್ಸರ್‌ಗಳನ್ನು ನೀಡಿ, ಈ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಮತ್ತು ಸಿಕ್ಸರ್ ಬಿಟ್ಟುಕೊಟ್ಟ ಅನಗತ್ಯ ದಾಖಲೆ ನಿರ್ಮಿಸಿದ್ದಾರೆ.

IPL 2026: ಧೋನಿ ಮುಂದಿನ ಸೀಸನ್ ಆಡ್ತಾರಾ? ಅಡ್ಡ ಗೋಡೆ ಮೇಲೆ ದೀಪವಿಟ್ಟ ರುತುರಾಜ್

MS Dhoni future IPL: ಐಪಿಎಲ್ 2026ರಲ್ಲಿ ಸಿಎಸ್‌ಕೆ ಲೀಗ್ ಹಂತದಲ್ಲೇ ಮುಕ್ತಾಯಗೊಂಡಿದ್ದು, ಕಳಪೆ ಪ್ರದರ್ಶನಕ್ಕೆ ಎಂಎಸ್ ಧೋನಿ ಗೈರು ಪ್ರಮುಖ ಕಾರಣ. ಅವರು ಗಾಯದಿಂದಾಗಿ ಇಡೀ ಸೀಸನ್ ಆಡಿಲ್ಲ. ಇದರ ಪರಿಣಾಮವಾಗಿ, ತಂಡವು ಪ್ಲೇಆಫ್ ಪ್ರವೇಶಿಸಲು ವಿಫಲವಾಯಿತು. ಧೋನಿ ಮುಂದಿನ ಸೀಸನ್‌ನಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ನಾಯಕ ರುತುರಾಜ್ ಗಾಯಕ್ವಾಡ್ ಸ್ಪಷ್ಟ ಉತ್ತರ ನೀಡದೆ, ಭವಿಷ್ಯದಲ್ಲಿ ತಿಳಿಯಲಿದೆ ಎಂದಿದ್ದಾರೆ.

GT vs CSK: ಸಿಎಸ್​ಕೆ ವಿರುದ್ಧ 89 ರನ್​ಗಳಿಂದ ಗೆದ್ದ ಗುಜರಾತ್‌; ಅಗ್ರಸ್ಥಾನದಲ್ಲಿ ಆರ್​ಸಿಬಿ ಸೇಫ್

IPL 2026 GT vs CSK: ಐಪಿಎಲ್ 2026 ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 89 ರನ್​ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಶುಭಮನ್ ಗಿಲ್, ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಗುಜರಾತ್ 229 ರನ್ ಗಳಿಸಿತು. ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ ಮತ್ತು ರಶೀದ್ ಖಾನ್ ತಲಾ ಮೂರು ವಿಕೆಟ್ ಪಡೆದು ಸಿಎಸ್​ಕೆಯನ್ನು 140 ರನ್‌ಗಳಿಗೆ ಆಲೌಟ್ ಮಾಡಿದರು. ಈ ಸೋಲಿನಿಂದ ಸಿಎಸ್‌ಕೆ ಟೂರ್ನಿಯಿಂದ ಹೊರಬಿದ್ದಿದೆ.

GT vs CSK: ಸತತ 5ನೇ ಅರ್ಧಶತಕ; ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್

Sai Sudharsan's IPL Record: ಗುಜರಾತ್ ಟೈಟಾನ್ಸ್ ಆಟಗಾರ ಸಾಯಿ ಸುದರ್ಶನ್ ಐಪಿಎಲ್‌ನಲ್ಲಿ ಸತತ ಐದನೇ ಅರ್ಧಶತಕ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈ ವಿರುದ್ಧ 84 ರನ್ ಸಿಡಿಸಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಏಳು ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಇವರಾಗಿದ್ದಾರೆ. ಸತತ ಅಮೋಘ ಪ್ರದರ್ಶನ ನೀಡುತ್ತಿರುವ ಸುದರ್ಶನ್, ಈ ಆವೃತ್ತಿಯಲ್ಲಿ ಒಟ್ಟು 638 ರನ್ ಗಳಿಸಿ ಮಿಂಚಿದ್ದಾರೆ.

GT vs CSK: ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು

Shubman Gill's IPL 2026 Blaze: ಶುಭ್​ಮನ್ ಗಿಲ್ ಐಪಿಎಲ್ 2026ರಲ್ಲಿ ಸಿಎಸ್​ಕೆ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ 600 ರನ್ ಗಳಿಸಿದ ಮೊದಲ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಇದು ಅವರ 6ನೇ ಅರ್ಧಶತಕ. ವಾರ್ನರ್ ಮತ್ತು ಗೇಲ್ ಅವರ 600+ ರನ್ ದಾಖಲೆ ಸರಿಗಟ್ಟಿದ ಗಿಲ್, 6000 ಟಿ20 ರನ್ ಹಾಗೂ ಸುದರ್ಶನ್ ಜೊತೆ 10 ಶತಕದ ಜೊತೆಯಾಟದ ಮೂಲಕ ಕೊಹ್ಲಿ-ಎಬಿಡಿ ದಾಖಲೆಯನ್ನೂ ಸರಿಗಟ್ಟಿದ್ದಾರೆ.

ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ