![Chiranjeevi](https://images.tv9kannada.com/wp-content/uploads/2023/08/Chiranjeevi-2.jpg)
Chiranjeevi
ತೆಲುಗು ಚಿತ್ರರಂಗದ ಸ್ಟಾರ್ ನಟ ಚಿರಂಜೀವಿ, ಮೆಗಾಸ್ಟಾರ್ ಚಿರಂಜೀವಿ ಎಂದೇ ಪರಿಚಿತರಯ. ಚಿರಂಜೀವಿ ಜನಿಸಿದ್ದು 1955ರ ಆಗಸ್ಟ್ 22ರಂದು. ಅವರ ಮೂಲ ಹೆಸರು ಕೋನಿಡೇಲ ಶಿವಶಂಕರ ವರಪ್ರಸಾದ್. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಪಡೆದ ಚಿರಂಜೀವಿ ಅಲ್ಲಿಂದ ನೇರವಾಗಿ ಬಂದಿದ್ದು ಮದ್ರಾಸ್ ಫಿಲಂ ಇನ್ಸ್ಟಿಟ್ಯೂಟ್ಗೆ. ಸ್ಪುರದ್ರೂಪಿ ಯುವಕರಾಗಿದ್ದ ಚಿರಂಜೀವಿಗೆ ಆರಂಭದಲ್ಲಿ ವಿಲನ್ ಪಾತ್ರಗಳು ದೊರಕಿದವು. ಅವರು ನಟಿಸಿದ ಮೊದಲ ಸಿನಿಮಾ ‘ಪುನಾದಿರಾಳ್ಳು’ ಆದರೆ ಬಿಡುಗಡೆ ಆಗಿದ್ದು ‘ಪ್ರಾಣಂಖರೀದು’. 1982ರಲ್ಲಿ ಮೊದಲ ಬಾರಿಗೆ ನಾಯಕ ನಟನಾಗಿ ಚಿರಂಜೀವಿ ನಟಿಸಿದರು. ಅಂದಿನಿಂದ ಹಿಂತಿರುಗಿ ನೋಡಿದ್ದಿಲ್ಲ. ಈವರೆಗೆ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಚಿರಂಜೀವಿ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್ಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟ ಚಿರಂಜೀವಿ.
ನಾಯ್ಡು ಪ್ರಮಾಣ ವಚನ: ಚಿರಂಜೀವಿ, ಪವನ್ ಕಲ್ಯಾಣ್ ಜತೆ ನರೇಂದ್ರ ಮೋದಿ ಗೆಲುವಿನ ನಗು
ಪಿಎಂ ನರೇಂದ್ರ ಮೋದಿ ಇಂದು (ಜೂನ್ 12) ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇದಿಕೆಯಲ್ಲಿ ಟಾಲಿವುಡ್ ಸ್ಟಾರ್ ನಟರಾದ ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಜೊತೆ ಆತ್ಮೀಯವಾಗಿ ಗೆಲುವಿನ ನಗೆ ಬೀರಿದರು. ಮೈತ್ರಿಯ ಈ ಫೋಟೋ ವೈರಲ್ ಆಗಿದೆ.
- Madan Kumar
- Updated on: Jun 12, 2024
- 6:43 pm
ಚುನಾವಣೆ ಗೆದ್ದ ಪವನ್ ಕಲ್ಯಾಣ್ಗೆ ಚಿರಂಜೀವಿ ಮನೆಯಲ್ಲಿ ಅದ್ದೂರಿ ಸ್ವಾಗತ; ವಿಡಿಯೋ ನೋಡಿ..
ಪವನ್ ಕಲ್ಯಾಣ್ ಅವರು ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಹೈದರಾಬಾದ್ಗೆ ಮರಳಿದ್ದಾರೆ. ಬಳಿಕ ಅವರು ಸಹೋದರ ಮೆಗಾ ಸ್ಟಾರ್ ಚಿರಂಜೀವಿ ನಿವಾಸಕ್ಕೆ ಬಂದಿದ್ದಾರೆ. ಅಲ್ಲಿ ಪವನ್ ಕಲ್ಯಾಣ್ಗೆ ವೈಭವದ ಸ್ವಾಗತ ನೀಡಲಾಗಿದೆ. ಹೂವಿನ ಮಳೆ ಸುರಿಸಲಾಗಿದೆ. ತಮ್ಮನಿಗೆ ಚಿರಂಜೀವಿ ಹಾರ ಹಾಕಿದ್ದಾರೆ. ಅಣ್ಣನ ಕಾಲಿಗೆ ಬಿದ್ದು ಪವನ್ ಕಲ್ಯಾಣ್ ಅವರು ಆಶೀರ್ವಾದ ಪಡೆದ ವಿಡಿಯೋ ಇಲ್ಲಿದೆ..
- Madan Kumar
- Updated on: Jun 6, 2024
- 10:04 pm
‘ಮೆಗಾಸ್ಟಾರ್’ ಚಿರಂಜೀವಿ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಆಶಿಕಾ ರಂಗನಾಥ್
‘ನಾ ಸಾಮಿ ರಂಗ’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಜೊತೆ ಕನ್ನಡದ ನಟಿ ಆಶಿಕಾ ರಂಗನಾಥ್ ಅಭಿನಯಿಸಿದ್ದರು. ಈಗ ಅವರು ತೆಲುಗಿನಲ್ಲಿ ಮೂರನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಚಿರಂಜೀವಿ ಅಭಿನಯದ ‘ವಿಶ್ವಂಭರ’ ಸಿನಿಮಾದಲ್ಲಿ ನಟಿಸುವ ಚಾನ್ಸ್ ಆಶಿಕಾ ರಂಗನಾಥ್ ಅವರಿಗೆ ಸಿಕ್ಕಿದೆ. ನಿರ್ಮಾಪಕರ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.
- Madan Kumar
- Updated on: May 24, 2024
- 5:48 pm
ಬಿಜೆಪಿ, ಜನಸೇನಾ ಅಭ್ಯರ್ಥಿಗಳ ಪರ ಚಿರಂಜೀವಿ ಚುನಾವಣಾ ಪ್ರಚಾರ; ವಿಡಿಯೋ ವೈರಲ್
ಬಿಜೆಪಿ ಹಾಗೂ ಜನಸೇನಾ ಪಕ್ಷದ ಅಭ್ಯರ್ಥಿಗಳ ಪರ ‘ಮೆಗಾ ಸ್ಟಾರ್’ ಚಿರಂಜೀವಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈ ವರ್ಷ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿತ್ತು. ಈಗ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಚಿರಂಜೀವಿ ಅವರು ಈ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂಬ ಟೀಕೆ ಕೆಲವರಿಂದ ವ್ಯಕ್ತವಾಗಿದೆ.
- Madan Kumar
- Updated on: Apr 22, 2024
- 3:45 pm
ಚುನಾವಣಾ ಪ್ರಚಾರದ ವೇಳೆ ಸಹೋದರ ಚಿರಂಜೀವಿ ಭೇಟಿ ಮಾಡಿದ ಪವನ್ ಕಲ್ಯಾಣ್; ಮೂಡಿತು ಕುತೂಹಲ
‘ವಿಶ್ವಂಭರ’ ಸಿನಿಮಾ ಶೂಟ್ನಲ್ಲಿ ಚಿರಂಜೀವಿ, ತ್ರಿಶಾ ಬ್ಯುಸಿ ಇದ್ದರು. ಈ ವೇಳೆ ಪವನ್ ಕಲ್ಯಾಣ್ ಅವರ ಆಗಮನ ಆಗಿದೆ. ಇಬ್ಬರೂ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಯಾವುದಾದರೂ ರಾಜಕೀಯ ವಿಚಾರ ಚರ್ಚೆಗೆ ಬಂದಿದೆಯೇ ಎನ್ನುವ ಕುತೂಹಲವೂ ಮೂಡಿದೆ.
- Rajesh Duggumane
- Updated on: Apr 11, 2024
- 8:49 am
ಬೆಂಗಳೂರು ನೀರಿನ ಸಮಸ್ಯೆ: ಕನ್ನಡದಲ್ಲಿ ಟ್ವೀಟ್ ಮಾಡಿ ಪರಿಹಾರ ತಿಳಿಸಿದ ಮೆಗಾ ಸ್ಟಾರ್ ಚಿರಂಜೀವಿ
ಟಾಲಿವುಡ್ನ ಹಿರಿಯ ನಟ ಮೆಗಾ ಸ್ಟಾರ್ ಚಿರಂಜೀವಿ ಅವರು ಬೆಂಗಳೂರಿನ ನೀರಿನ ಸಮಸ್ಯೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡದಲ್ಲೇ ಅವರು ಇದನ್ನು ಬರೆದಿರುವುದು ವಿಶೇಷ. ಬೆಂಗಳೂರಿನ ತಮ್ಮ ಫಾರ್ಮ್ ಹೌಸ್ನಲ್ಲಿ ಅಳವಡಿಸಿದ ಕ್ರಮವನ್ನು ಅವರು ಜನರಿಗೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Mar 26, 2024
- 10:49 pm
ಹೊಸ ಚಿತ್ರಕ್ಕಾಗಿ ನಟ ಚಿರಂಜೀವಿ ಭರ್ಜರಿ ವರ್ಕೌಟ್; ವಿಡಿಯೋ ವೈರಲ್
2023ರಲ್ಲಿ ಚಿರಂಜೀವಿ ನಟನೆಯ ‘ಭೋಲಾ ಶಂಕರ್’ ಚಿತ್ರ ರಿಲೀಸ್ ಆಯಿತು. ಆದರೆ, ಅಂದುಕೊಂಡ ರೀತಿಯಲ್ಲಿ ಸಿನಿಮಾ ಮೂಡಿ ಬರಲಿಲ್ಲ. ಈ ಸಿನಿಮಾ ಸಾಧಾರಣ ಗಳಿಕೆ ಮಾಡಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಈಗ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ವರ್ಕೌಟ್ ಮಾಡುತ್ತಿದ್ದಾರೆ.
- Rajesh Duggumane
- Updated on: Feb 1, 2024
- 11:22 am
ರಾಮನಾಗಿ ಮಹೇಶ್ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್’ ಪ್ಲ್ಯಾನ್
‘ಹನುಮಾನ್’ ಸಿನಿಮಾದಲ್ಲಿ ಇರುವುದು ಒಂದು ಸೂಪರ್ ಹೀರೋ ಕಥೆ. ಅದೇ ಕಥೆ ‘ಜೈ ಹನುಮಾನ್’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಮಾತನಾಡಿದ್ದಾರೆ.
- Madan Kumar
- Updated on: Jan 31, 2024
- 11:26 am
ಟ್ರೆಡಿಷನಲ್ ಧಿರಿಸಿನಲ್ಲಿ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ ಚಿರಂಜೀವಿ ಹಾಗೂ ರಾಮ್ ಚರಣ್
ಐಷಾರಾಮಿ ಕಾರಲ್ಲಿ ಬಂದ ರಾಮ್ ಚರಣ್-ಚಿರಂಜೀವಿ ನಂತರ ಪ್ರೈವೆಟ್ ಜೆಟ್ನಲ್ಲಿ ಅಯೋಧ್ಯೆಯತ್ತ ಮುಖ ಮಾಡಿದರು. ಈ ವೇಳೆ ಇವರು ಸಾಂಪ್ರದಾಯಿಕ ಬಟ್ಟೆಯಲ್ಲಿ ಕಾಣಿಸಿಕೊಂಡರು.
- Rajesh Duggumane
- Updated on: Jan 22, 2024
- 11:26 am