AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi

Chiranjeevi

ತೆಲುಗು ಚಿತ್ರರಂಗದ ಸ್ಟಾರ್ ನಟ ಚಿರಂಜೀವಿ, ಮೆಗಾಸ್ಟಾರ್ ಚಿರಂಜೀವಿ ಎಂದೇ ಪರಿಚಿತರಯ. ಚಿರಂಜೀವಿ ಜನಿಸಿದ್ದು 1955ರ ಆಗಸ್ಟ್ 22ರಂದು. ಅವರ ಮೂಲ ಹೆಸರು ಕೋನಿಡೇಲ ಶಿವಶಂಕರ ವರಪ್ರಸಾದ್. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಪಡೆದ ಚಿರಂಜೀವಿ ಅಲ್ಲಿಂದ ನೇರವಾಗಿ ಬಂದಿದ್ದು ಮದ್ರಾಸ್​ ಫಿಲಂ ಇನ್​ಸ್ಟಿಟ್ಯೂಟ್​ಗೆ. ಸ್ಪುರದ್ರೂಪಿ ಯುವಕರಾಗಿದ್ದ ಚಿರಂಜೀವಿಗೆ ಆರಂಭದಲ್ಲಿ ವಿಲನ್ ಪಾತ್ರಗಳು ದೊರಕಿದವು. ಅವರು ನಟಿಸಿದ ಮೊದಲ ಸಿನಿಮಾ ‘ಪುನಾದಿರಾಳ್ಳು’ ಆದರೆ ಬಿಡುಗಡೆ ಆಗಿದ್ದು ‘ಪ್ರಾಣಂಖರೀದು’. 1982ರಲ್ಲಿ ಮೊದಲ ಬಾರಿಗೆ ನಾಯಕ ನಟನಾಗಿ ಚಿರಂಜೀವಿ ನಟಿಸಿದರು. ಅಂದಿನಿಂದ ಹಿಂತಿರುಗಿ ನೋಡಿದ್ದಿಲ್ಲ. ಈವರೆಗೆ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಚಿರಂಜೀವಿ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್​ಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟ ಚಿರಂಜೀವಿ.

ಇನ್ನೂ ಹೆಚ್ಚು ಓದಿ

ಶಿವಣ್ಣ ಸಿನಿಮಾ ಜರ್ನಿಗೆ 40 ವರ್ಷ; ಶುಭಕೋರಿದ ಪರಭಾಷೆಯ ಸ್ಟಾರ್ ಕಲಾವಿದರು

ಶಿವರಾಜ್​ಕುಮಾರ್ ಎಂದರೆ ಕರ್ನಾಟಕ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯಗಳ ಸೆಲೆಬ್ರಿಟಿಗಳಿಗೂ ತುಂಬ ಅಭಿಮಾನ. ಅವರ ಜೊತೆ ಎಲ್ಲರೂ ಉತ್ತಮ ಒಡನಾಟ ಹೊಂದಿದ್ದಾರೆ. ಬಣ್ಣದ ಲೋಕದಲ್ಲಿ 40 ವರ್ಷ ಪೂರೈಸುತ್ತಿರುವ ಶಿವಣ್ಣ ಅವರಿಗೆ ಕನ್ನಡ, ತೆಲುಗು, ತಮಿಳು ಮುಂತಾದ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ವಿಶ್ ಮಾಡಿದ್ದಾರೆ.

ಈ ಮೂವರು ಸಹೋದರಿಯರ ಜೊತೆ ನಟಿಸಿದ ಏಕೈಕ ಹೀರೋ ಎಂದರೆ ಅದು ಚಿರಂಜೀವಿ

ಒಂದೇ ಕುಟುಂಬದ ಕಲಾವಿದರು ಚಿತ್ರರಂಗಕ್ಕೆ ಬಂದ ಉದಾಹರಣೆಗಳು ಸಾಮಾನ್ಯ. ನಗ್ಮಾ, ಜ್ಯೋತಿಕಾ ಮತ್ತು ರೋಶಿನಿ ಮೂವರು ಸಹೋದರಿಯರು ಚಿತ್ರರಂಗದಲ್ಲಿ ಯಶಸ್ವಿಯಾಗಿದ್ದಾರೆ. ವಿಶೇಷವೆಂದರೆ, ಮೆಗಾಸ್ಟಾರ್ ಚಿರಂಜೀವಿ ಅವರು ಈ ಮೂವರೊಂದಿಗೆ ಬಹು ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಅವು ಯಶಸ್ವಿಯಾಗಿದ್ದವು ಅನ್ನೋದು ವಿಶೇಷ .

ಪವನ್ ಕಲ್ಯಾಣ್ ಪುತ್ರನ ಅಗ್ನಿ ಅವಘಡದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಾಯ

ನಟ ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್ ಇತ್ತೀಚೆಗೆ ಅಗ್ನಿ ಅವಘಡದಲ್ಲಿ ಸಿಲುಕಿದಾಗ ಎಲ್ಲರಿಗೂ ಆತಂಕ ಆಗಿತ್ತು. ಆ ಕಷ್ಟದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಸಹಾಯ ಮಾಡಿದ್ದರು. ಅದಕ್ಕಾಗಿ ಈಗ ಪವನ್ ಕಲ್ಯಾಣ್ ಅವರು ಈಗ ಧನ್ಯವಾದ ಅರ್ಪಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಅಗ್ನಿ ಅವಘಡದ ಬಳಿಕ ಪವನ್ ಕಲ್ಯಾಣ್ ಮಗನ ಸ್ಥಿತಿ ಹೇಗಿದೆ? ಮಾಹಿತಿ ನೀಡಿದ ಚಿರಂಜೀವಿ

ಸುಟ್ಟಗಾಯಗಳಿಂದ ಬಳಲುತ್ತಿರುವ ಮಾರ್ಕ್ ಶಂಕರ್ ಆರೋಗ್ಯದ ಬಗ್ಗೆ ಚಿರಂಜೀವಿ ಅವರು ಅಪ್​ಡೇಟ್ ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಕ್​ ಶಂಕರ್​ನನ್ನು ಡಿಸ್ಚಾರ್ಜ ಮಾಡಲಾಗಿದೆ. ಪವನ್ ಕಲ್ಯಾಣ್ ಪರವಾಗಿ ಅಭಿಮಾನಿಗಳಿಗೆ ಚಿರಂಜೀವಿ ಅವರು ಧನ್ಯವಾದ ತಿಳಿಸಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ..

ಇತಿಹಾಸದಲ್ಲಿ ಇದೇ ಮೊದಲು; ಬ್ರಿಟಿಷ್ ಸರ್ಕಾರದಿಂದ ಜೀವಮಾನ ಸಾಧನೆ ಅವಾರ್ಡ್ ಪಡೆದ ಚಿರಂಜೀವಿ

ಟಾಲಿವುಡ್‍ನ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಬ್ರಿಟಿಷ್ ಸರ್ಕಾರವು ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. ಮಾರ್ಚ್ 19 ರಂದು ಲಂಡನ್ನಿನ ಪಾರ್ಲಿಮೆಂಟ್‍ನಲ್ಲಿ ಈ ಗೌರವವನ್ನು ನೀಡಲಾಯಿತು. ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಚಿರಂಜೀವಿ ಅವರ ಈ ಸಾಧನೆಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳು ಹರಿದುಬರುತ್ತಿವೆ.

ಮೆಗಾ ಸ್ಟಾರ್ ಚಿರಂಜೀವಿಗೆ ಯುಕೆ ಪಾರ್ಲಿಮೆಂಟ್​ನಲ್ಲಿ ಸಿಗಲಿದೆ ವಿಶೇಷ ಗೌರವ

ಮೆಗಾ ಸ್ಟಾರ್ ಅಭಿಮಾನಿಗಳು ‘ವಿಶ್ವಂಭರ’ ಸಿನಿಮಾದ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ನಡುವೆ ಇನ್ನೊಂದು ಸಿಹಿ ಸುದ್ದಿ ಕೇಳಿಬಂದಿದೆ. ನಟ ಚಿರಂಜೀವಿ ಅವರಿಗೆ ಯುಕೆ ಪಾರ್ಲಿಮೆಂಟ್​ನಲ್ಲಿ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದು ಚಿರಂಜೀವಿ ಅವರ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಹೆಮ್ಮೆ ತಂದಿದೆ.

ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಅನುಪಮ್ ಖೇರ್, ಚಿರಂಜೀವಿ; ಕಾರಣವೇನು?

ವರ್ಡ್ ಆಡಿಯೋ ವಿಶ್ಯುವಲ್ಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಶೃಂಗಸಭೆ (WAVES) ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖೇಶ್ ಅಂಬಾನಿ ಮತ್ತು ಅಮಿತಾಭ್ ಬಚ್ಚನ್ ಅವರೊಂದಿಗೆ ಚರ್ಚಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಮತ್ತು ದಕ್ಷಿಣ ಭಾರತದ ನಟ ಚಿರಂಜೀವಿ ಅವರನ್ನು ಸಲಹಾ ಮಂಡಳಿಗೆ ನೇಮಿಸಲಾಗಿದೆ. ಇಬ್ಬರೂ ನಟರು ಪ್ರಧಾನಿಯವರಿಗೆ ಧನ್ಯವಾದ ಹೇಳಿದ್ದಾರೆ.

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ದೊಡ್ಡದಾಗಿ ಹಾಕಲಾಗಿದೆ ಚಿರಂಜೀವಿ ಫೋಟೋ

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ಚಿರಂಜೀವಿ ಅವರ ‘ಆರಾಧನಾ’ ಚಿತ್ರದ ಐಕಾನಿಕ್ ಪೋಸ್ಟರ್ ಇದೆ. ಸಂದೀಪ್ ರೆಡ್ಡಿ ಚಿರಂಜೀವಿ ಅವರ ದೊಡ್ಡ ಅಭಿಮಾನಿ ಎಂದು ತಿಳಿದುಬಂದಿದೆ. ಚಿರಂಜೀವಿನ ಅವರು ಅನೇಕ ಸಂದರ್ಭಗಳಲ್ಲಿ ಹೊಗಳಿದ್ದಾರೆ. ಈ ಪೋಸ್ಟರ್ ಅವರ ಅಭಿಮಾನವನ್ನು ಪ್ರತಿಬಿಂಬಿಸುತ್ತದೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಮಾಲ್ಡೀವ್ಸ್ ಪಾರ್ಟಿ; ಒಂದೇ ಫ್ರೇಮ್​ನಲ್ಲಿ ಚಿರು, ನಾಗಾರ್ಜುನ, ಪ್ರಿನ್ಸ್, ರಾಮ್ ಚರಣ್

ತೆಲುಗು ಚಿತ್ರರಂಗದ ಪ್ರಮುಖ ನಟರು ಮಾಲ್ಡೀವ್ಸ್‌ನಲ್ಲಿ ಒಂದು ಖಾಸಗಿ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಚಿರಂಜೀವಿ, ಮಹೇಶ್ ಬಾಬು, ನಾಗಾರ್ಜುನ, ರಾಮ್ ಚರಣ್, ಅಖಿಲ್ ಅಕ್ಕಿನೇನಿ ಸೇರಿದಂತೆ ಅನೇಕ ನಟರು ಮತ್ತು ಅವರ ಕುಟುಂಬದವರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ಪಾರ್ಟಿ ಒಬ್ಬ ಉದ್ಯಮಿಯ ಹುಟ್ಟುಹಬ್ಬದ ಆಚರಣೆಯಾಗಿತ್ತು.

ಚಿರಂಜೀವಿ ಬೆಂಗಳೂರಿನಲ್ಲಿ ಹೊಂದಿರೋ ಫಾರ್ಮ್​ಹೌಸ್ ಬೆಲೆ ಎಷ್ಟು?

ಹೈದರಾಬಾದ್​ನಲ್ಲಿ ಚಿರಂಜೀವಿ ಅವರು ಲಕ್ಷುರಿ ಬಂಗಲೆ ಹೊಂದಿದ್ದಾರೆ. ಈ ಮನೆಯನ್ನು 30 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮಾರುಕಟ್ಟೆಯ ಬೆಲೆಯ ಪ್ರಕಾರ ಈ ಮನೆ ಹಾಗೂ ಜಾಗದ ಬೆಲೆ 300 ಕೋಟಿ ರೂಪಾಯಿ. ಅದೇ ರೀತಿ ಅವರು ಬೆಂಗಳೂರಿನಲ್ಲೂ ಮನೆ ಹೊಂದಿದ್ದಾರೆ.

ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ