Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi

Chiranjeevi

ತೆಲುಗು ಚಿತ್ರರಂಗದ ಸ್ಟಾರ್ ನಟ ಚಿರಂಜೀವಿ, ಮೆಗಾಸ್ಟಾರ್ ಚಿರಂಜೀವಿ ಎಂದೇ ಪರಿಚಿತರಯ. ಚಿರಂಜೀವಿ ಜನಿಸಿದ್ದು 1955ರ ಆಗಸ್ಟ್ 22ರಂದು. ಅವರ ಮೂಲ ಹೆಸರು ಕೋನಿಡೇಲ ಶಿವಶಂಕರ ವರಪ್ರಸಾದ್. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಪಡೆದ ಚಿರಂಜೀವಿ ಅಲ್ಲಿಂದ ನೇರವಾಗಿ ಬಂದಿದ್ದು ಮದ್ರಾಸ್​ ಫಿಲಂ ಇನ್​ಸ್ಟಿಟ್ಯೂಟ್​ಗೆ. ಸ್ಪುರದ್ರೂಪಿ ಯುವಕರಾಗಿದ್ದ ಚಿರಂಜೀವಿಗೆ ಆರಂಭದಲ್ಲಿ ವಿಲನ್ ಪಾತ್ರಗಳು ದೊರಕಿದವು. ಅವರು ನಟಿಸಿದ ಮೊದಲ ಸಿನಿಮಾ ‘ಪುನಾದಿರಾಳ್ಳು’ ಆದರೆ ಬಿಡುಗಡೆ ಆಗಿದ್ದು ‘ಪ್ರಾಣಂಖರೀದು’. 1982ರಲ್ಲಿ ಮೊದಲ ಬಾರಿಗೆ ನಾಯಕ ನಟನಾಗಿ ಚಿರಂಜೀವಿ ನಟಿಸಿದರು. ಅಂದಿನಿಂದ ಹಿಂತಿರುಗಿ ನೋಡಿದ್ದಿಲ್ಲ. ಈವರೆಗೆ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಚಿರಂಜೀವಿ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್​ಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟ ಚಿರಂಜೀವಿ.

ಇನ್ನೂ ಹೆಚ್ಚು ಓದಿ

ಪವನ್ ಕಲ್ಯಾಣ್ ಪುತ್ರನ ಅಗ್ನಿ ಅವಘಡದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹಾಯ

ನಟ ಪವನ್ ಕಲ್ಯಾಣ್ ಅವರ ಪುತ್ರ ಮಾರ್ಕ್ ಶಂಕರ್ ಇತ್ತೀಚೆಗೆ ಅಗ್ನಿ ಅವಘಡದಲ್ಲಿ ಸಿಲುಕಿದಾಗ ಎಲ್ಲರಿಗೂ ಆತಂಕ ಆಗಿತ್ತು. ಆ ಕಷ್ಟದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಸಹಾಯ ಮಾಡಿದ್ದರು. ಅದಕ್ಕಾಗಿ ಈಗ ಪವನ್ ಕಲ್ಯಾಣ್ ಅವರು ಈಗ ಧನ್ಯವಾದ ಅರ್ಪಿಸಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ಅಗ್ನಿ ಅವಘಡದ ಬಳಿಕ ಪವನ್ ಕಲ್ಯಾಣ್ ಮಗನ ಸ್ಥಿತಿ ಹೇಗಿದೆ? ಮಾಹಿತಿ ನೀಡಿದ ಚಿರಂಜೀವಿ

ಸುಟ್ಟಗಾಯಗಳಿಂದ ಬಳಲುತ್ತಿರುವ ಮಾರ್ಕ್ ಶಂಕರ್ ಆರೋಗ್ಯದ ಬಗ್ಗೆ ಚಿರಂಜೀವಿ ಅವರು ಅಪ್​ಡೇಟ್ ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಕ್​ ಶಂಕರ್​ನನ್ನು ಡಿಸ್ಚಾರ್ಜ ಮಾಡಲಾಗಿದೆ. ಪವನ್ ಕಲ್ಯಾಣ್ ಪರವಾಗಿ ಅಭಿಮಾನಿಗಳಿಗೆ ಚಿರಂಜೀವಿ ಅವರು ಧನ್ಯವಾದ ತಿಳಿಸಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ..

ಇತಿಹಾಸದಲ್ಲಿ ಇದೇ ಮೊದಲು; ಬ್ರಿಟಿಷ್ ಸರ್ಕಾರದಿಂದ ಜೀವಮಾನ ಸಾಧನೆ ಅವಾರ್ಡ್ ಪಡೆದ ಚಿರಂಜೀವಿ

ಟಾಲಿವುಡ್‍ನ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಬ್ರಿಟಿಷ್ ಸರ್ಕಾರವು ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. ಮಾರ್ಚ್ 19 ರಂದು ಲಂಡನ್ನಿನ ಪಾರ್ಲಿಮೆಂಟ್‍ನಲ್ಲಿ ಈ ಗೌರವವನ್ನು ನೀಡಲಾಯಿತು. ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಚಿರಂಜೀವಿ ಅವರ ಈ ಸಾಧನೆಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳು ಹರಿದುಬರುತ್ತಿವೆ.

ಮೆಗಾ ಸ್ಟಾರ್ ಚಿರಂಜೀವಿಗೆ ಯುಕೆ ಪಾರ್ಲಿಮೆಂಟ್​ನಲ್ಲಿ ಸಿಗಲಿದೆ ವಿಶೇಷ ಗೌರವ

ಮೆಗಾ ಸ್ಟಾರ್ ಅಭಿಮಾನಿಗಳು ‘ವಿಶ್ವಂಭರ’ ಸಿನಿಮಾದ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ನಡುವೆ ಇನ್ನೊಂದು ಸಿಹಿ ಸುದ್ದಿ ಕೇಳಿಬಂದಿದೆ. ನಟ ಚಿರಂಜೀವಿ ಅವರಿಗೆ ಯುಕೆ ಪಾರ್ಲಿಮೆಂಟ್​ನಲ್ಲಿ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದು ಚಿರಂಜೀವಿ ಅವರ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಹೆಮ್ಮೆ ತಂದಿದೆ.

ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಅನುಪಮ್ ಖೇರ್, ಚಿರಂಜೀವಿ; ಕಾರಣವೇನು?

ವರ್ಡ್ ಆಡಿಯೋ ವಿಶ್ಯುವಲ್ಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಶೃಂಗಸಭೆ (WAVES) ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖೇಶ್ ಅಂಬಾನಿ ಮತ್ತು ಅಮಿತಾಭ್ ಬಚ್ಚನ್ ಅವರೊಂದಿಗೆ ಚರ್ಚಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಮತ್ತು ದಕ್ಷಿಣ ಭಾರತದ ನಟ ಚಿರಂಜೀವಿ ಅವರನ್ನು ಸಲಹಾ ಮಂಡಳಿಗೆ ನೇಮಿಸಲಾಗಿದೆ. ಇಬ್ಬರೂ ನಟರು ಪ್ರಧಾನಿಯವರಿಗೆ ಧನ್ಯವಾದ ಹೇಳಿದ್ದಾರೆ.

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ದೊಡ್ಡದಾಗಿ ಹಾಕಲಾಗಿದೆ ಚಿರಂಜೀವಿ ಫೋಟೋ

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ಚಿರಂಜೀವಿ ಅವರ ‘ಆರಾಧನಾ’ ಚಿತ್ರದ ಐಕಾನಿಕ್ ಪೋಸ್ಟರ್ ಇದೆ. ಸಂದೀಪ್ ರೆಡ್ಡಿ ಚಿರಂಜೀವಿ ಅವರ ದೊಡ್ಡ ಅಭಿಮಾನಿ ಎಂದು ತಿಳಿದುಬಂದಿದೆ. ಚಿರಂಜೀವಿನ ಅವರು ಅನೇಕ ಸಂದರ್ಭಗಳಲ್ಲಿ ಹೊಗಳಿದ್ದಾರೆ. ಈ ಪೋಸ್ಟರ್ ಅವರ ಅಭಿಮಾನವನ್ನು ಪ್ರತಿಬಿಂಬಿಸುತ್ತದೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಮಾಲ್ಡೀವ್ಸ್ ಪಾರ್ಟಿ; ಒಂದೇ ಫ್ರೇಮ್​ನಲ್ಲಿ ಚಿರು, ನಾಗಾರ್ಜುನ, ಪ್ರಿನ್ಸ್, ರಾಮ್ ಚರಣ್

ತೆಲುಗು ಚಿತ್ರರಂಗದ ಪ್ರಮುಖ ನಟರು ಮಾಲ್ಡೀವ್ಸ್‌ನಲ್ಲಿ ಒಂದು ಖಾಸಗಿ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಚಿರಂಜೀವಿ, ಮಹೇಶ್ ಬಾಬು, ನಾಗಾರ್ಜುನ, ರಾಮ್ ಚರಣ್, ಅಖಿಲ್ ಅಕ್ಕಿನೇನಿ ಸೇರಿದಂತೆ ಅನೇಕ ನಟರು ಮತ್ತು ಅವರ ಕುಟುಂಬದವರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ಪಾರ್ಟಿ ಒಬ್ಬ ಉದ್ಯಮಿಯ ಹುಟ್ಟುಹಬ್ಬದ ಆಚರಣೆಯಾಗಿತ್ತು.

ಚಿರಂಜೀವಿ ಬೆಂಗಳೂರಿನಲ್ಲಿ ಹೊಂದಿರೋ ಫಾರ್ಮ್​ಹೌಸ್ ಬೆಲೆ ಎಷ್ಟು?

ಹೈದರಾಬಾದ್​ನಲ್ಲಿ ಚಿರಂಜೀವಿ ಅವರು ಲಕ್ಷುರಿ ಬಂಗಲೆ ಹೊಂದಿದ್ದಾರೆ. ಈ ಮನೆಯನ್ನು 30 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮಾರುಕಟ್ಟೆಯ ಬೆಲೆಯ ಪ್ರಕಾರ ಈ ಮನೆ ಹಾಗೂ ಜಾಗದ ಬೆಲೆ 300 ಕೋಟಿ ರೂಪಾಯಿ. ಅದೇ ರೀತಿ ಅವರು ಬೆಂಗಳೂರಿನಲ್ಲೂ ಮನೆ ಹೊಂದಿದ್ದಾರೆ.

‘ಚಿರಂಜೀವಿ ಡ್ಯಾನ್ಸ್ ಮಾಡುತ್ತಿದ್ದರೆ ನಮ್ಮ ಕಣ್ಣು ಬೇರೆಲ್ಲೂ ಹೋಗಲ್ಲ’; ಹೊಗಳಿದ ಆಮಿರ್ ಖಾನ್

ಚಿರಂಜೀವಿ ಅವರಿಗೆ ‘ಭಾರತೀಯ ಚಿತ್ರರಂಗದ ಮೋಸ್ಟ್​ ಪ್ರೊಫೈಲಿಕ್ ಸ್ಟಾರ್​’ ಎಂದು ಪ್ರಮಾಣಪತ್ರ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಬಾಲಿವುಡ್​ ನಟ ಆಮಿರ್ ಖಾನ್​ ಕೂಡ ಹಾಜರಿದ್ದರು. ಈ ವೇದಿಕೆ ಮೇಲೆ ಇದ್ದ ಆಮಿರ್ ಖಾನ್ ಅವರು ಚಿರಂಜೀವಿಯನ್ನು ಹೊಗಳಿದರು.

ಡ್ಯಾನ್ಸ್ ವಿಚಾರದಲ್ಲಿ ಗಿನ್ನಿಸ್​ ದಾಖಲೆ ಬರೆದ ಮೆಗಾ ಸ್ಟಾರ್​ ಚಿರಂಜೀವಿ

ಟಾಲಿವುಡ್​ ನಟ ಚಿರಂಜೀವಿ ಅವರ ಮುಡಿಗೆ ಗಿನ್ನಿಸ್​ ವಿಶ್ವ ದಾಖಲೆಯ ಗರಿ ಸೇರ್ಪಡೆ ಆಗಿದೆ. ವಿಶೇಷ ಕಾರ್ಯಕ್ರಮ ಆಯೋಜಿಸಿ ಅವರಿಗೆ ಪ್ರಮಾಣಪತ್ರ ನೀಡಲಾಗಿದೆ. ಅದಕ್ಕೆ ಆಮಿರ್ ಖಾನ್​ ಅವರು ಮುಖ್ಯ ಅತಿಥಿಯಾಗಿ ಬಂದಿದ್ದರು. ಸಿನಿಮಾದಲ್ಲಿ ಡ್ಯಾನ್ಸ್​ ಮೂಲಕ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್​ ಮಾಡಿದ ಚಿರಂಜೀವಿ ಅವರಿಗೆ ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ