AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi

Chiranjeevi

ತೆಲುಗು ಚಿತ್ರರಂಗದ ಸ್ಟಾರ್ ನಟ ಚಿರಂಜೀವಿ, ಮೆಗಾಸ್ಟಾರ್ ಚಿರಂಜೀವಿ ಎಂದೇ ಪರಿಚಿತರಯ. ಚಿರಂಜೀವಿ ಜನಿಸಿದ್ದು 1955ರ ಆಗಸ್ಟ್ 22ರಂದು. ಅವರ ಮೂಲ ಹೆಸರು ಕೋನಿಡೇಲ ಶಿವಶಂಕರ ವರಪ್ರಸಾದ್. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಪಡೆದ ಚಿರಂಜೀವಿ ಅಲ್ಲಿಂದ ನೇರವಾಗಿ ಬಂದಿದ್ದು ಮದ್ರಾಸ್​ ಫಿಲಂ ಇನ್​ಸ್ಟಿಟ್ಯೂಟ್​ಗೆ. ಸ್ಪುರದ್ರೂಪಿ ಯುವಕರಾಗಿದ್ದ ಚಿರಂಜೀವಿಗೆ ಆರಂಭದಲ್ಲಿ ವಿಲನ್ ಪಾತ್ರಗಳು ದೊರಕಿದವು. ಅವರು ನಟಿಸಿದ ಮೊದಲ ಸಿನಿಮಾ ‘ಪುನಾದಿರಾಳ್ಳು’ ಆದರೆ ಬಿಡುಗಡೆ ಆಗಿದ್ದು ‘ಪ್ರಾಣಂಖರೀದು’. 1982ರಲ್ಲಿ ಮೊದಲ ಬಾರಿಗೆ ನಾಯಕ ನಟನಾಗಿ ಚಿರಂಜೀವಿ ನಟಿಸಿದರು. ಅಂದಿನಿಂದ ಹಿಂತಿರುಗಿ ನೋಡಿದ್ದಿಲ್ಲ. ಈವರೆಗೆ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಚಿರಂಜೀವಿ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್​ಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟ ಚಿರಂಜೀವಿ.

ಇನ್ನೂ ಹೆಚ್ಚು ಓದಿ

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ

ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಪತ್ನಿ ಉಪಾಸನಾ ಅವರಿಗೆ ನಿರೀಕ್ಷೆಯಂತೆಯೇ ಅವಳಿ ಮಕ್ಕಳು ಜನಿಸಿವೆ. ಚಿರಂಜೀವಿ ಅವರು ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕುಟುಂಬದವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಚಿರಂಜೀವಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ

OTT Releases: ಸಂಕ್ರಾಂತಿ ಹಬ್ಬಕ್ಕೆ ತೆರೆಕಂಡ ಚಿರಂಜೀವಿ, ಶರ್ವಾನಂದ್, ನವೀನ್ ಪೊಲಿಶೆಟ್ಟಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿವೆ. 'ಮನ ಶಂಕರ ವರ ಪ್ರಸಾದ ಗಾರು' ಹಾಗೂ 'ನಾರಿ ನಾರಿ ನಡುಮ ಮುರಾರಿ' ಚಿತ್ರಗಳು ಜೀ ಹಾಗೂ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ.

ಎರಡೇ ದಿನಕ್ಕೆ 100 ಕೋಟಿ ಗಳಿಸಿದ ಚಿರಂಜೀವಿ ಸಿನಿಮಾ; ದೊಡ್ಡ ಕಂಬ್ಯಾಕ್

ಮೆಗಾಸ್ಟಾರ್ ಚಿರಂಜೀವಿ ನಟನೆಯ 'ಮನ ಶಂಕರ ವರಪ್ರಸಾದ್ ಗಾರು' ಚಿತ್ರವು ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಿ ಅಭೂತಪೂರ್ವ ಯಶಸ್ಸು ಗಳಿಸಿದೆ. ಅನಿಲ್ ರವಿಪುಡಿ ನಿರ್ದೇಶನದ ಈ ಚಿತ್ರ ಕೇವಲ ಎರಡು ದಿನಗಳಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದೆ. ಚಿರಂಜೀವಿ ಅವರ ಅಭಿನಯ, ನಯನತಾರಾ ಉಪಸ್ಥಿತಿ, ಮತ್ತು ಕೌಟುಂಬಿಕ ಮನರಂಜನೆ ಪ್ರೇಕ್ಷಕರನ್ನು ಆಕರ್ಷಿಸಿದೆ.

ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್​​​ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು

ಕಳೆದ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ 'ಮನ ಶಂಕರ ವರ ಪ್ರಸಾದ್ ಗಾರು' ಸಿನಿಮಾ ರಿಲೀಸ್ ಆಗಿ ಬ್ಲಾಕ್‌ಬಸ್ಟರ್ ಆಗಿದೆ. ಚಿರಂಜೀವಿ ಹಲವು ವರ್ಷಗಳ ಬಳಿಕ ಗೆಲುವು ಕಂಡಿದ್ದು, ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ. ಆದರೆ, ಹೈದರಾಬಾದ್ ಥಿಯೇಟರ್‌ನಲ್ಲಿ ಸಿನಿಮಾ ನೋಡುತ್ತಿದ್ದ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವುದು ದುಃಖಕರ ಸಂಗತಿ.

ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ

ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಅದ್ದೂರಿಯಾಗಿ ತೆರೆಕಾಣುತ್ತಿದೆ. ಈ ಸಿನಿಮಾದಲ್ಲಿ ಮೆಗಾ ಸ್ಟಾರ್ ಚಿರಂಜೀವಿ, ನಯನತಾರಾ, ದಗ್ಗುಬಾಟಿ ವೆಂಕಟೇಶ್ ಮುಂತಾದವರು ನಟಿಸಿದ್ದಾರೆ. ‘ಬುಕ್ ಮೈ ಶೋ’ನಲ್ಲಿ ಈ ಸಿನಿಮಾ ಬಗ್ಗೆ ಯಾರೂ ಕೂಡ ವಿಮರ್ಶೆ ಮತ್ತು ರೇಟಿಂಗ್ ನೀಡುವಂತಿಲ್ಲ.

ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರ ಜನವರಿ 12ಕ್ಕೆ ತೆರೆಕಾಣಲಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಎರಡೂ ಸಿನಿಮಾಗಳಿಂದ ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗುತ್ತಿದೆ.

ಮೆಗಾ ಸ್ಟಾರ್ ಚಿರಂಜೀವಿ ಜೊತೆ ಕೆವಿಎನ್ ಪ್ರೊಡಕ್ಷನ್ಸ್ ಹೊಸ ಸಿನಿಮಾ

ಕನ್ನಡ, ತಮಿಳಿನಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಈಗ ತೆಲುಗಿಗೆ ಕಾಲಿಟ್ಟಿದೆ. ಟಾಲಿವುಡ್​ ಮೆಗಾ ಸ್ಟಾರ್ ಚಿರಂಜೀವಿ ನಟನೆಯ 158ನೇ ಸಿನಿಮಾಗೆ ಈ ಸಂಸ್ಥೆ ಬಂಡವಾಳ ಹೂಡಲು ಸಜ್ಜಾಗಿದೆ. ಚಿರಂಜೀವಿ ಅವರ ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಘೋಷಿಸಿದೆ.

ಚಿರಂಜೀವಿ ಹೆಸರಲ್ಲಿ ಇದೆ ಅಪರೂಪದ ಗಿನ್ನಿಸ್ ದಾಖಲೆ

ಚಿರಂಜೀವಿ ಅವರು 70ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರು ಭಾರತೀಯ ಚಿತ್ರರಂಗದಲ್ಲಿ 46 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. 156 ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅದ್ಭುತ ನೃತ್ಯ ಕೌಶಲ್ಯಕ್ಕಾಗಿ ಅವರಿಗೆ ಗಿನ್ನೆಸ್ ವಿಶ್ವ ದಾಖಲೆ ದೊರೆತಿದೆ. ಕಳೆದ ವರ್ಷ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯೂ ಸಂದಿದೆ.

ನಟ ಚಿರಂಜೀವಿ ಅದೆಷ್ಟು ಶ್ರೀಮಂತ ನೋಡಿ; ರೋಲ್ಸ್ ರಾಯ್ಸ್ ಕಾರು, ಪ್ರೈವೆಟ್ ಜೆಟ್ ಒಡೆಯ

Chiranjeevi Net Worth: ಚಿರಂಜೀವಿ ಅವರು ಜುಬ್ಲಿ ಹಿಲ್ಸ್​ನಲ್ಲಿ ದುಬಾರಿ ಹಾಗು ಐಷಾರಾಮಿ ವಿಲ್ಲಾ ಹೊಂದಿದ್ದಾರೆ. ಇದರ ಬೆಲೆ 28 ಕೋಟಿ ರೂಪಾಯಿ. ಅವರು ಬೆಂಗಳೂರಿನ ಏರ್​ಪೋರ್ಟ್ ಸಮೀಪ ಒಂದು ಫಾರ್ಮ್​ಹೌಸ್ ಹೊಂದಿದ್ದಾರೆ. ಊಟಿ ಮೊದಲಾದ ಕಡೆಗಳಲ್ಲೂ ಅವರು ಆಸ್ತಿ ಹೊಂದಿದ್ದಾರೆ.

ಒಂದು ಲಕ್ಷ ರೂಪಾಯಿ ಸಹಾಯ ನಿರೀಕ್ಷೆಯಲ್ಲಿದ್ದವನಿಗೆ 1 ಕೋಟಿ ಕೊಟ್ಟ ಚಿರಂಜೀವಿ

ಚಿರಂಜೀವಿ ಅವರ ವಿಶಾಲ ಮನಸ್ಸಿನ ಬಗ್ಗೆ ತಮಿಳು ಸ್ಟಂಟ್ ಮಾಸ್ಟರ್ ಪೂನ್ನಂಬಲಂ ಅವರು ಮಾತನಾಡಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿರಂಜೀವಿ 1 ಕೋಟಿ ರೂಪಾಯಿಗಳ ಸಹಾಯ ಮಾಡಿದ್ದಾರೆ. ಇದು ಪೂನ್ನಂಬಲಂ ಅವರ ಜೀವನದಲ್ಲಿ ಒಂದು ದೊಡ್ಡ ಬದಲಾವಣೆ ತಂದಿದೆ. ಚಿರಂಜೀವಿ ಅವರು ಚಲನಚಿತ್ರೋದ್ಯಮದವರಿಗೆ ಮತ್ತು ಸಾಮಾನ್ಯ ಜನರಿಗೆ ಸಹಾಯ ಮಾಡುವುದರಲ್ಲಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ.

ನಯನತಾರ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಚಿರಂಜೀವಿ; 29 ವರ್ಷ ವಯಸ್ಸಿನ ಅಂತರ

ಚಿರಂಜೀವಿ ಮತ್ತು ನಯನತಾರಾ ಅವರು ಮೆಗಾ 157 ಚಿತ್ರದಲ್ಲಿ ಒಟ್ಟಾಗಿ ರೊಮ್ಯಾಂಟಿಕ್ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಬ್ಬರ ವಯಸ್ಸಿನಲ್ಲಿ 29 ವರ್ಷಗಳ ಅಂತರ ಇದ್ದರೂ, ಅದು ಅವರ ತೆರೆಮೇಲಿನ ರೊಮ್ಯಾನ್ಸ್‌ಗೆ ಅಡ್ಡಿಯಾಗಿಲ್ಲ. ಈ ಹಾಡಿನ ಚಿತ್ರೀಕರಣ ಕೇರಳದಲ್ಲಿ ನಡೆಯಲಿದ್ದು, 2026ರ ಸಂಕ್ರಾಂತಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಶಿವಣ್ಣ ಸಿನಿಮಾ ಜರ್ನಿಗೆ 40 ವರ್ಷ; ಶುಭಕೋರಿದ ಪರಭಾಷೆಯ ಸ್ಟಾರ್ ಕಲಾವಿದರು

ಶಿವರಾಜ್​ಕುಮಾರ್ ಎಂದರೆ ಕರ್ನಾಟಕ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯಗಳ ಸೆಲೆಬ್ರಿಟಿಗಳಿಗೂ ತುಂಬ ಅಭಿಮಾನ. ಅವರ ಜೊತೆ ಎಲ್ಲರೂ ಉತ್ತಮ ಒಡನಾಟ ಹೊಂದಿದ್ದಾರೆ. ಬಣ್ಣದ ಲೋಕದಲ್ಲಿ 40 ವರ್ಷ ಪೂರೈಸುತ್ತಿರುವ ಶಿವಣ್ಣ ಅವರಿಗೆ ಕನ್ನಡ, ತೆಲುಗು, ತಮಿಳು ಮುಂತಾದ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ವಿಶ್ ಮಾಡಿದ್ದಾರೆ.