AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM of Karnataka

CM of Karnataka

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.

ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.

ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್​ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.

ಇನ್ನೂ ಹೆಚ್ಚು ಓದಿ

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ?

ಕೋಗಿಲು ಲೇಔಟ್​ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕೇರಳ ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿಯಾಗಿದ್ದು, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ತಮ್ಮದೇ ಪಕ್ಷದ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 29) ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ಮನೆ ಕಳೆದುಕೊಂಡವರಿಗೆ ಹೊಸ ಸೂರು ಒದಗಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.

ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ?

ರಾಷ್ಟ್ರ ರಾಜಕಾರಣದ ಹೆಡ್​ ಕ್ವಾಟ್ರಸ್ ದೆಹಲಿ ಇಂದು (ಡಿಸೆಂಬರ್ 27) ರಾಜ್ಯದ ಸಿಎಂ ಕುರ್ಚಿ ಬೆಳವಣಿಗೆಗೆ ಏನಾದ್ರು ಸಾಕ್ಷಿ ಆಗಲಿದ್ಯಾ ಎಂಬ ಕುತೂಹಲ ಮೂಡಿತ್ತು. ಯಾಕಂದ್ರೆ ಸಿಎಂ ಸಿದ್ದರಾಮಯ್ಯ CWC ಸಭೆಯಲ್ಲಿ ಭಾಗವಹಿಸಿದ್ದರು. ಸಭೆ ಬಳಿಕ ರಾಜ್ಯದ ಬಗ್ಗೆ ಏನಾದರೂ ಮಾತನಾಡುತ್ತಾರಾ ಎನ್ನುವುದು ಕೈ ಪಾಳಯದಲ್ಲಿಕುತೂಹಲ ಮೂಡಿಸಿತ್ತು. ಆದ್ರೆ ಇದ್ಯಾವುದು ಆಗದೇ ಸಿಎಂ ಭೇಟಿ ಬರೀ CWC ಸಭೆಗೆ ಸೀಮಿತವಾಗಿದೆ. ಸಿಎಂ ಕಸರತ್ತು ಮಾಡಿದ್ದರಾದರೂ ಅದು ಸಾಧ್ಯವಾಗಿಲ್ಲ. ಅಷ್ಟಕ್ಕೂ ದಿಲ್ಲಿಯಲ್ಲಿ ಆಗಿದ್ದೇನು? ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ ಆಗುತ್ತಾ?

ತೀವ್ರಗೊಂಡ ಕುರ್ಚಿ ಕಿತ್ತಾಟ: ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ

ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಬಣಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೇಗಾದರೂ ಮಾಡಿ ಸಿಎಂ ಆಗಲೇಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು (ಡಿಸೆಂಬರ್ 23) ದೆಹಲಿ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆದ್ರೆ, ಇತ್ತ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶಿಸಲು ಅಹಿಂದ ಸಮಾವೇಶಕ್ಕೆ ಸಿದ್ಧತೆಗಳು ನಡೆದಿವೆ.

ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!

ಕರ್ನಾಟಕ ಕಾಂಗ್ರೆಸ್​ನಲ್ಲಿನ ಗೊಂದಲ ಒಂದೆರಡಲ್ಲ. ಸಿಎಂ ಕುರ್ಚಿ ಆಗ ಬದಲಾಗುತ್ತೆ, ಈಗ ಬದಲಾಗುತ್ತೆ ಎಂಬ ಚರ್ಚೆಗಳು ದಿನ ಕಳೆದಂತೆ ಜೋರಾಗುತ್ತಲೇ ಇವೆ. ಬ್ರೇಕ್ ಫಾಸ್ಟ್​​ ಮೂಲಕ ಬಗೆಹರಿಯಿತು ಎನ್ನುವಷ್ಟರಲ್ಲೇ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ಸಿಎಂ ಕುರ್ಚಿ ಕುದನ ಶುರುವಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ ಮತ್ತೆ ಆ್ಯಕ್ಟೀವ್ ಆಗಿದ್ದು, ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಂತರ ಬಾಗಲಕೋಟೆಯ ಜ್ಯೋತಿಷಿಯೊಬ್ಬರು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎನ್ನುವ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್​​ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ

ಕರ್ನಾಟಕ ಕಾಂಗ್ರೆಸ್​​​ನಲ್ಲಿನ ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ಡಿನ್ನರ್ ಪಾಲಿಟಿಕ್ಸ್​​ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ 18) ಸಚಿವ ಸತೀಶ್ ಜಾರಕಿಹೊಳಿ ತಮ್ಮ ಬೆಳಗಾವಿ ನಿವಾಸದಲ್ಲಿ ಸಿಎಂ ಸೇರಿದಂತೆ ಇತರೆ ತಮ್ಮ ಬಣದ ನಾಯಕರಿಗೆ ಔತಣಕೂಟ ಏರ್ಪಡಿಸಲಾಗಿದೆ.

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು, ಬೆಳಗಾವಿ ಸರ್ಕ್ಯೂಟ್ ಹೌಸ್​​ಗೆ ದೌಡಾಯಿಸಿದ ನಾಯಕರು

ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಭಾರೀ ಚರ್ಚೆಯಾಗುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನದಿಂದ ಸದನಕ್ಕೆ ಗೈರಾಗಿದ್ದು, ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನು ಸಿಎಂ ಅವರ ಆರೋಗ್ಯ ವಿಚಾರಿಸಲು ನಾಯಕರು ದೌಡಾಯಿಸಿದ್ದಾರೆ. ಅಷ್ಟಕ್ಕೂ ಸಿಎಂಗೆ ಆಗಿದ್ದೇನು? ಪುತ್ರ ಯತೀಂದ್ರ ಹೇಳಿದ್ದೇನು ಎನ್ನುವ ವಿವರ ಈ ಕೆಳಗಿನಂತಿದೆ.

ಕರ್ನಾಟಕದಲ್ಲಿ 2.8 ಲಕ್ಷ ಹುದ್ದೆಗಳು ಖಾಲಿ: ಯಾವ್ಯಾವ ಇಲಾಖೆಯಲ್ಲಿ ಎಷ್ಟು? ನೇಮಕಾತಿ ಎಷ್ಟು?

ಕರ್ನಾಟಕದಲ್ಲಿ ಸುಮಾರು 2.84 ಲಕ್ಷ ಸರ್ಕಾರಿ ಮತ್ತು ಅರೆ-ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. ಬೆಳಗಾವಿ ಅಧಿವೇಶದಲ್ಲಿ ವಿಪಕ್ಷ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯನವರು 2.84 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಪೈಕಿ ಕೆಲ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹಾಗಾದ್ರೆ, ಯಾವ್ಯಾವ ಇಲಾಖೆ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಷ್ಟು ಹುದ್ದೆಗಳ ನೇಮಕ್ಕೆ ಅನುಮೋದನೆ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈವರೆಗೆ ಅಂದರೆ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್​​ ಪ್ರಯಾಣ ವೆಚ್ಚದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸಕ್ಕೆ ಹೆಚ್ಚಾಗಿ ವಿಮಾನ ಮತ್ತು ಹೆಲಿಕಾಪ್ಟರ್​​ನಲ್ಲೇ ಹೋಗುತ್ತಾರೆ. ಹೀಗಾಗಿ 2023ರಿಂದ 2025ರ ನವೆಂಬರ್ ವರೆಗೂ ಸಿಎಂ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ​​ ವೆಚ್ಚ ಹುಬ್ಬೇರುವಂತೆ ಮಾಡಿದೆ. ಹಾಗಾದ್ರೆ, ಸಿಎಂ ಆಗಸದಲ್ಲಿ ಪ್ರಯಾಣಕ್ಕೆ ಇಲ್ಲಿಯವರೆಗೂ ಎಷ್ಟು ಸರ್ಕಾರ ಬೊಕ್ಕಸದಿಂದ ಖರ್ಚಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ

ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ: ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸರ್ಕಾರಿ ಆಸ್ಪತ್ರೆ ಆವರಣಗೊಳಗಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಜನೌಷಧಿ ಕೇಂದ್ರ ಮುಚ್ಚುವಂತೆ ಹೊರಡಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಪೊಲೀಸ್ ಅಧಿಕಾರಿ ಮೇಲೆ ಕೈಎತ್ತಿದ್ದ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರ ಮೇಲೆ ಕೈಎತ್ತಿದ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲಕ್ಕೆ ಕಾರಣವಾಗಿದ್ದು, ಸಿಎಂ ವರ್ತನೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಇನ್ನು ಅವಮಾನದಿಂದಾಗಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದ ಪೊಲೀಸ್ ಅಧಿಕಾರಿಯನ್ನು ಮನವೊಲಿಸಲಾಗಿತ್ತು. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕೋರ್ಟ್​ ಬಿಗ್ ರಿಲೀಫ್ ನೀಡಿದೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್‌ ಶಾಸಕರಿಂದಲೇ ಅಸಮಾಧಾನ, ಶಾಸಕಾಂಗ ಸಭೆಯ ಇನ್​​ಸೈಡ್​​ ಮಾಹಿತಿ ಇಲ್ಲಿದೆ

ಬೆಳಗಾವಿಯ ಖಾಸಗಿ ಹೋಟೆಲ್​​​ನಲ್ಲಿ ಇಂದು (ಡಿಸೆಂಬರ್ 09) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಅಂತ್ಯವಾಗಿದ್ದು, ಅಧಿವೇಶನದಲ್ಲಿ ವಿಪಕ್ಷಗಳಿಗೆ ಹೇಗೆ ಉತ್ತರ ನೀಡಬೇಬ ಬಗ್ಗೆ ಚರ್ಚೆಯಾಗಿದೆ. ಅದರಲ್ಲೂ ಪ್ರಮುಖವಾಗಿ ಸಭೆಯಲ್ಲಿ ಸ್ವಪಕ್ಷದ ಶಾಸಕರೇ ತಮ್ಮದೇ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿದ್ದರಾಮಯ್ಯಗೆ ಸುಪ್ರೀಂ ಸಮನ್ಸ್‌: ಉಚಿತ ಗ್ಯಾರೆಂಟಿ ಕೊಟ್ಟ ಸರ್ಕಾರ ಪತನವಾಗುತ್ತೆ ಎಂದ ವಕೀಲ

ಸಿಎಂ ಕುರ್ಚಿಗಾಗಿ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದ್ದು, ಈ ಬಗ್ಗೆ ವಕೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು