
CM of Karnataka
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.
ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.
ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.
ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ: ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡುವವರಿಗೆ ಜೈಲು, ದಂಡ
ಇತ್ತೀಚಿನ ದಿನಗಳಲ್ಲಿ ರಾಜ್ಯ ಅಲ್ಲದೆ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮತ್ತು ನಕಲಿ ಸುದ್ದಿಗಳ ಹಾವಳಿ ಹೆಚ್ಚಾಗಿದೆ. ಇಂತಹ ಫೇಕ್ ನ್ಯೂಸ್ ಹಾವಳಿಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಿದೆ. ದ್ವೇಷ ಭಾಷಣ, ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ವಿಧೇಯಕ ಜಾರಿಗೆ ತರಲು ಮುಂದಾಗಿದೆ. ಹಾಗಾದ್ರೆ, ಇದು ಏನು ಹೇಳುತ್ತೆ? ಎಷ್ಟು ಜೈಲು, ದಂಡ? ಇಲ್ಲಿದೆ ವಿವರ.
- Sunil MH
- Updated on: Jun 22, 2025
- 10:16 am
ವಿಧಾನಸೌಧ-ವಿಕಾಸಸೌಧಕ್ಕೆ ಕನ್ನಡತನ ಪ್ರತಿಬಿಂಬಿಸುವ ಘೋಷವಾಕ್ಯ ಕೊಡಿ
ಕರ್ನಾಟಕ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನಸೌಧ ಮತ್ತು ವಿಕಾಸಸೌಧಗಳಿಗೆ ಕನ್ನಡ ಘೋಷವಾಕ್ಯಗಳನ್ನು ಆಹ್ವಾನಿಸಿದೆ. ಜನಪದ ಸೂಕ್ತಿಗಳು, ಚಳವಳಿ ಘೋಷಣೆಗಳು, ಸಿನಿಮಾ ಗೀತೆಗಳು ಸೇರಿದಂತೆ ವಿವಿಧ ರೀತಿಯ ಘೋಷವಾಕ್ಯಗಳನ್ನು ಸಲ್ಲಿಸಬಹುದು. ಜೂನ್ 30 ಕೊನೆಯ ದಿನಾಂಕ. ಘೋಷವಾಕ್ಯಗಳನ್ನು ಕಳುಹಿಸುವುದು ಹೇಗೆ? ನಿಯಮ ಏನು? ಇಲ್ಲಿದೆ ವಿವರ
- Vivek Biradar
- Updated on: Jun 20, 2025
- 6:22 pm
RSS, ಬಜರಂಗದಳ ವಿರುದ್ಧ ಟೀಕೆ: ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಕೋರ್ಟ್!
ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್ ಎಸ್ ಹಾಗೂ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಇದಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇದೀಗ ಈ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲವು ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ.
- Ramesha M
- Updated on: Jun 18, 2025
- 8:03 pm
ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?
ಮುಂಗಾರು ಮುನ್ನವೇ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಕೆಲವರು ಮನೆ, ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇದರಿಂದ ರಾಜ್ಯ ಸರ್ಕಾರ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ 1 ತಿಂಗಳಿನಲ್ಲಿ ಉಂಟಾದ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ.
- Ramesh B Jawalagera
- Updated on: Jun 18, 2025
- 6:46 pm
ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಸಿಎಂ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ನಾಯಕ, ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರಿಗೆ ಕುರ್ಚಿ ಉಳಿಸಿಕೊಳ್ಳುವುದಷ್ಟೇ ಕೆಲಸ. ಅಭಿವೃದ್ಧಿ ಮಾಡಲ್ಲ. ಜನತೆಗೆ ನ್ಯಾಯ ಒದಗಿಸಿಕೊಡಲ್ಲ ಎಂದು ಪ್ರತಾಪ್ ಕಿಡಿಕಾರಿದ್ದಾರೆ. ಪ್ರತಾಪ್ ಸಿಂಹ ಮಾತಿನ ವಿಡಿಯೋ ಇಲ್ಲಿದೆ.
- Ram
- Updated on: Jun 16, 2025
- 11:48 am
ಕರ್ನಾಟಕದ ತೋತಾಪುರಿ ಮಾವು ನಿಷೇಧ ಹಿಂಪಡೆಯಿರಿ: ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ
ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ಕರ್ನಾಟಕದ ತೋತಾಪುರಿ ಮಾವು ಖರೀದಿ ನಿಷೇಧ ಹೇರಿರುವುದರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಿರ್ಧಾರವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ತಕ್ಷಣವೇ ಆದೇಶ ಹಿಂಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ.
- Ganapathi Sharma
- Updated on: Jun 12, 2025
- 9:59 am
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಕೊನೆಗೂ ಸತ್ಯಬಿಚ್ಚಿಟ್ಟ ಸಿಎಂ
ಜೂನ್ 4, 2025. ಕರ್ನಾಟಕದ ಪಾಲಿಗೆ ಕರಾಳ ದಿನ. ಆರ್ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ವಿಧಾನಸೌಧ ಮೆಟ್ಟಿಲುಗಳ ಮೇಲೆ ಸಹ ಆರ್ ಸಿಬಿ ಅಭಿಮಾನಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
- Bheemappa Patil
- Updated on: Jun 11, 2025
- 4:42 pm
ಜಾತಿ ಗಣತಿ: ಕಾಂಗ್ರೆಸ್ ಹೈಕಮಾಂಡ್ ನಡೆ ಸ್ವಾಗತಿಸಿದ ಕರ್ನಾಟಕ ವೀರಶೈವ ಮಹಾಸಭಾ
ಜಾತಿ ಗಣತಿ ಜಾರಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶಿಸಿದ್ದು, ಬುಗಿಲೆದ್ದಿದ್ದ ಬೆಂಕಿಯನ್ನು ತಣ್ಣಗಾಗಿಸಿದೆ. ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ವೀರಶೈವ ಮಹಾಸಭೆ ಈ ನಿರ್ಧಾರವನ್ನು ಸ್ವಾಗತಿಸಿದೆ. ಹೊಸ ಗಣತಿ ಹೆಚ್ಚು ಪಾರದರ್ಶಕ ಮತ್ತು ವೈಜ್ಞಾನಿಕವಾಗಿರಬೇಕೆಂಬುದು ಮಹಾಸಭೆಯ ಆಶಯ.
- Prasanna Gaonkar
- Updated on: Jun 10, 2025
- 8:22 pm
ಕಾಲ್ತುಳಿತ: 11 ಜನರ ಸಾವಿನ 1 ದುರಂತದಲ್ಲಿ ಸಿಲುಕಿ ಒದ್ದಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ
ಬೆಂಗಳೂರಿನ ಇತಿಹಾಸದಲ್ಲೇ ಕರಾಳ ಅಧ್ಯಾಯ. ಬೆಂಗಳೂರಿಗೆ ಮಾತ್ರವಲ್ಲ ಜೂನ್ 4, 2025 ಕರ್ನಾಟಕದ ಪಾಲಿಗೆ ಕರಾಳ ದಿನ. ಆರ್ಸಿಬಿ ಸಂಭ್ರಮಾಚರಣೆಯಿಂದಾಗಿ ಕಪ್ಪು ಚುಕ್ಕೆ. ಚಿನ್ನಸ್ವಾಮಿ ಸ್ಟೇಡಿಯಿಂ ಬಳಿ ಕಾಲ್ತುಳಿತಕ್ಕೆ 11ಮಂದಿ ಸಾವಿಗೆ ಕಾರಣವೇನು? ಹೊಣೆ ಯಾರು? ವೈಫಲ್ಯ ಯಾರದು ಹೀಗೆ ಹಲವು ಪ್ರಶ್ನೆಗಳು ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಒಂದೇ ದುರಂತದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿಲುಕಿ ಒದ್ದಾಡುವಂತಾಗಿದೆ.
- Ramesh B Jawalagera
- Updated on: Jun 10, 2025
- 7:41 pm
ಬೆಂಗಳೂರು ಕಾಲ್ತುಳಿತ: ದುರಂತಕ್ಕೆ ಕಾರಣವೇನು? ಮತ್ತಷ್ಟು ಸ್ಫೋಟಕ ಅಂಶಗಳು ಬಯಲಿಗೆ
ಬೆಂಗಳೂರಿನ ಇತಿಹಾಸದಲ್ಲೇ ಕರಾಳ ಅಧ್ಯಾಯ. ಆರ್ಸಿಬಿ ಸಂಭ್ರಮಾಚರಣೆಯಿಂದಾಗಿ ಕಪ್ಪು ಚುಕ್ಕೆ. ಚಿನ್ನಸ್ವಾಮಿ ಸ್ಟೇಡಿಯಿಂ ಬಳಿ ಕಾಲ್ತುಳಿತಕ್ಕೆ 11ಮಂದಿ ಸಾವಿಗೆ ಕಾರಣವೇನು? ಹೊಣೆ ಯಾರು? ವೈಫಲ್ಯ ಯಾರದು ಹೀಗೆ ಹಲವು ಪ್ರಶ್ನೆಗಳು ದೊಡ್ಡ ಚರ್ಚೆಗೆ ಕಾರಣವಾಗಿದೆ.ಪೊಲೀಸರ ಮುನ್ನೆಚ್ಚರಿಕೆ ಧಿಕ್ಕರಿಸಿ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಇಷ್ಟೆಲ್ಲಾ ಅವಾಂತರ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಇದೀಗ ಪ್ರಾಥಮಿಕ ತನಿಖೆಯಲ್ಲಿ ಕಾಲ್ತುಳಿತದ ಘೋರ ಘಟನೆಗೆ ಕಾರಣ ಏನೆಂದು ಮತ್ತಷ್ಟು ಸ್ಫೋಟಕ ಅಂಶಗಳು ಬಯಲಾಗಿವೆ. ಇದ್ರ ಎಕ್ಸ್ಕ್ಲೂಸಿವ್ ಮಾಹಿತಿ ಟಿವಿ9ಗೆ ಲಭ್ಯವಾಗಿದೆ.
- Kiran HV
- Updated on: Jun 10, 2025
- 5:17 pm