CM of Karnataka
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.
ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.
ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.
ಇನ್ನೂ ಹೆಚ್ಚು ಓದಿ‘ಯಾರೂ ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆಯಂತಹ ನಿರ್ಧಾರ ಕೈಗೊಳ್ಳಬಾರದು’: ಶಾಸಕರಿಗೆ ಬಿಕೆ ಹರಿಪ್ರಸಾದ್ ಮನವಿ
Karnataka Cabinet Expansion: ಸದ್ಯ 19 ಸಚಿವರು ಸಿಎಂ ಡಿಕೆ ಶಿವಕುಮಾರ್ ಸಂಪುಟ ಸೇರಿದಿದ್ದಾರೆ. ಹಳಬರು ಸೇರಿದಂತೆ ಹೊಸಬರಿಗೂ ಅವಕಾಶ ನೀಡಲಾಗಿದೆ. ಇನ್ನು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಕೆಲ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಕೆ ಹರಿಪ್ರಸಾದ್, ಭಾವೋದ್ವೇಗದಲ್ಲಿ ರಾಜೀನಾಮೆಯಂತಹ ತೀರ್ಮಾನಗಳನ್ನ ಕೈಗೊಳ್ಳಬಾರದು ಎಂದಿದ್ದಾರೆ.
- Prasanna Gaonkar
- Updated on: Aug 3, 2026
- 8:29 pm
ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್ನಲ್ಲಿ ಸಾಂವಿಧಾನಿಕ ಹುದ್ದೆಗಳ ನೇಮಕದ ಬಗ್ಗೆ ಉಲ್ಲೇಖ: ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಿಡಿ
ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದ ನೂತನ ಸಚಿವರ ಹಾಗೂ ಸಾಂವಿಧಾನಿಕ ಹುದ್ದೆಗಳ ನೇಮಕಾತಿ ಪಟ್ಟಿಯು ಹೊಸ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಮತ್ತು ಸಭಾಪತಿಯಂತಹ ಪಕ್ಷಾತೀತ ಅತ್ಯುನ್ನತ ಹುದ್ದೆಗಳ ಹೆಸರುಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಪಕ್ಷದ ಲೆಟರ್ಹೆಡ್ನಲ್ಲಿ (Letterhead) ಪ್ರಕಟಿಸಿರುವುದಕ್ಕೆ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
- Prasanna Hegde
- Updated on: Aug 3, 2026
- 7:39 pm
Minister Vijayanand Kashappanavar Oath: ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವ ವಿಜಯಾನಂದ ಕಾಶಪ್ಪನವರ ಪದಗ್ರಹಣ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂಗವಾಗಿ ವಿಜಯಾನಂದ ಕಾಶಪ್ಪನವರ ನೂತನ ಸಚಿವರಾಗಿ ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು. ಅವರು ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಕೂಡಲಸಂಗಮದೇವನ ಹೆಸರಿನಲ್ಲಿ ಪ್ರಮಾಣ ಮಾಡಿ, ಸಂವಿಧಾನಕ್ಕೆ ನಿಷ್ಠೆ, ದೇಶದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದರು.
- Kiran Haniyadka
- Updated on: Aug 3, 2026
- 7:31 pm
ಕೈತಪ್ಪಿದ ಸಚಿವ ಸ್ಥಾನ: ರೆಬೆಲ್ಸ್ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
Karnataka Cabinet Expansion: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಅಸಮಾಧಾನ ತಾರಕಕ್ಕೇರಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡರು ಕಣ್ಣೀರಿಟ್ಟಿದ್ದಾರೆ. ಹಲವು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಬೆದರಿಕೆಗೂ ಜಗ್ಗುವುದಿಲ್ಲ ಎಂದು ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ.
- Prasanna Hegde
- Updated on: Aug 3, 2026
- 6:29 pm
20 ಅಲ್ಲ, 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣ: ಗಾಯತ್ರಿ ಶಾಂತೇಗೌಡ ಪಾಲಿಗೆ ಕೈಗೆ ಬಂದರೂ ಬಾಯಿಗೆ ಬಾರದ ತುತ್ತು!
Karnataka Cabinet Expansion: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಮಹೂರ್ತದ ವೇಳೆಗೆ ಮತ್ತೊಂದು ಹೈಡ್ರಾಮಾ ನಡೆದಿದ್ದು, ಹೈಕಮಾಂಡ್ ಪ್ರಕಟಿಸಿದ್ದ 20 ಸಚಿವರ ಪಟ್ಟಿಯಲ್ಲಿದ್ದ ಏಕೈಕ ಮಹಿಳಾ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಕೊನೆ ಕ್ಷಣದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸುವ ಅವಕಾಶ ಕೈತಪ್ಪಿದೆ. ಇದರಿಂದಾಗಿ ಇಂದು ನಡೆದ ಸಮಾರಂಭದಲ್ಲಿ 20ರ ಬದಲಿಗೆ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
- Pramod Shastri G
- Updated on: Aug 3, 2026
- 6:59 pm
Karnataka Cabinet Expansion Live: ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ
Karnataka Cabinet Ministers Oath Taking Live Streaming: ಬೆಂಗಳೂರಿನ ರಾಜಭವನದಲ್ಲಿ ಇಂದು ರಾಜ್ಯದ 20 ನೂತನ ಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯು ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆದಿದೆ.
- Akshay Pallamajalu
- Updated on: Aug 3, 2026
- 4:57 pm
ಮಂತ್ರಿಗಿರಿ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದ ಶಾಸಕರಿಗೆ ಭರ್ಜರಿ ಶಾಕ್ ಕೊಟ್ಟ ಹೈಕಮಾಂಡ್
Karnataka Cabinet Expansion: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಬಂಡಾಯ ಹಾಗೂ ರಾಜೀನಾಮೆ ಬೆದರಿಕೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಕಠಿಣ ನಿಲುವು ತಳೆದಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ವರಿಷ್ಠರು ನೀಡಿರುವ ಆ ಸೂಚನೆ ಏನು ಎಂಬ ಮಾಹಿತಿ ಇಲ್ಲಿದೆ.
- Prasanna Hegde
- Updated on: Aug 3, 2026
- 4:12 pm
ಮಂಕಾಳು ವೈದ್ಯ ಹೆಸರು ಔಟ್, ಎಸ್.ಎಸ್. ಮಲ್ಲಿಕಾರ್ಜುನ್ ಇನ್ ಆಗಿದ್ದು ಹೇಗೆ?
ಸಚಿವ ಸಂಪುಟ ಸೇರ್ಪಡೆ ಗೊಂದಲದ ಕುರಿತು ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿಗಳಿಂದ ಕರೆ ಬಂದಿದ್ದನ್ನು ತಿಳಿಸಿದ್ದಾರೆ. ಮಂಕಾಳು ವೈದ್ಯ ಬದಲಿಗೆ ಸ್ಥಾನ ಪಡೆದ ಅವರು, ಆರಂಭದಲ್ಲಿ ಪಟ್ಟಿಯಲ್ಲಿ ಹೆಸರಿಲ್ಲದೆ ಗೊಂದಲವಾಗಿದ್ದರೂ, ಸಿಎಂ ಸೂಚನೆಯಂತೆ ಪ್ರಮಾಣ ವಚನಕ್ಕೆ ಸಿದ್ಧರಾಗಿದ್ದಾರೆ. ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಪ್ರಾತಿನಿಧ್ಯ ನೀಡಲಾಗಿದೆ ಎಂದು ಅಭಿಪ್ರಾಯಪಟ್ಟರು.
- Akshay Pallamajalu
- Updated on: Aug 3, 2026
- 11:12 pm
ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ: ‘ಒಂದು ಕೋಟಾ, ಮತ್ತೊಂದು ಪೇಮೆಂಟ್ ಕೋಟಾ’: ಬಿಜೆಪಿ ಶಾಸಕ ಗಂಭೀರ ಆರೋಪ
ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ ನೀಡಿದ್ದರ ಬಗ್ಗೆ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಒಂದು ಕೋಟಾ, ಮತ್ತೊಂದು ಪೇಮೆಂಟ್ ಕೋಟಾ ಎಂದಿದ್ದಾರೆ. ಸಚಿವ ಸ್ಥಾನಕ್ಕೆ 100-150 ಕೋಟಿ ರೂ ಬೇಡಿಕೆ ಇತ್ತು ಎಂಬ ತಮ್ಮ ಹಿಂದಿನ ಹೇಳಿಕೆಗೆ ಈಗಲೂ ಬದ್ಧ ಎಂದು ಹೇಳಿದ್ದಾರೆ.
- Shivakumar Pattar
- Updated on: Aug 3, 2026
- 3:39 pm
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್ಗೆ ಸಚಿವ ಸ್ಥಾನ, ತಾಯಿ ಪ್ರಭಾವತಿ ಧರ್ಮಸಿಂಗ್ ಕಣ್ಣೀರು
ಜೇವರ್ಗಿಯ ಶಾಸಕ ಅಜಯ್ ಸಿಂಗ್ಗೆ ಸಚಿವ ಸ್ಥಾನ ಲಭಿಸಿದ್ದು, ತಾಯಿ ಪ್ರಭಾವತಿ ಧರ್ಮಸಿಂಗ್ ಸಂತೋಷದ ಕಣ್ಣೀರನ್ನ ಸುರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರನಿಗೆ ಸಚಿವಗಿರಿ ಸಿಕ್ಕಿದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರು ಹೊರತುಪಡಿಸಿದರೆ, ಕಲಬುರಗಿಗೆ ಮೂರು ಸಚಿವ ಸ್ಥಾನಗಳ ಮೂಲಕ ಈ ಬಾರಿ ಬಂಪರ್ ಲಭಿಸಿದೆ.
- Dattatraya Patil
- Updated on: Aug 3, 2026
- 3:18 pm
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ಗೆ ಭಾರಿ ಶಾಕ್: ಶಾಸಕ ಸ್ಥಾನಕ್ಕೆ ಬೇಳೂರು ರಾಜೀನಾಮೆ ಘೋಷಣೆ
ಕರ್ನಾಟಕ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ ಮತ್ತು ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ಆಡಳಿತಾರೂಢ ಸರ್ಕಾರಕ್ಕೆ ರಾಜಕೀಯ ಬಿಕ್ಕಟ್ಟು ಎದುರಾಗಿದೆ.
- Akshay Pallamajalu
- Updated on: Aug 3, 2026
- 3:44 pm
ಆಡಿಯೋ ವೈರಲ್ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ವಿರೋಧಿಗಳಿಗೆ ಜಮೀರ್ ಹೇಳಿದ್ದೇನು?
ವಿವಾದಾತ್ಮಕ ಆಡಿಯೋ ವೈರಲ್ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಹಿರಿಯ ನಾಯಕ, ಶಾಸಕ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ರಾಜಕೀಯ ವಿರೋಧಿಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಹೈಕಮಾಂಡ್ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದ್ದಾರೆ.
- Prasanna Gaonkar
- Updated on: Aug 3, 2026
- 2:37 pm