AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM of Karnataka

CM of Karnataka

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.

ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.

ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್​ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.

ಇನ್ನೂ ಹೆಚ್ಚು ಓದಿ

ಕರ್ನಾಟಕದಲ್ಲಿ 2.8 ಲಕ್ಷ ಹುದ್ದೆಗಳು ಖಾಲಿ: ಯಾವ್ಯಾವ ಇಲಾಖೆಯಲ್ಲಿ ಎಷ್ಟು? ನೇಮಕಾತಿ ಎಷ್ಟು?

ಕರ್ನಾಟಕದಲ್ಲಿ ಸುಮಾರು 2.84 ಲಕ್ಷ ಸರ್ಕಾರಿ ಮತ್ತು ಅರೆ-ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. ಬೆಳಗಾವಿ ಅಧಿವೇಶದಲ್ಲಿ ವಿಪಕ್ಷ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯನವರು 2.84 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಪೈಕಿ ಕೆಲ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹಾಗಾದ್ರೆ, ಯಾವ್ಯಾವ ಇಲಾಖೆ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಷ್ಟು ಹುದ್ದೆಗಳ ನೇಮಕ್ಕೆ ಅನುಮೋದನೆ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈವರೆಗೆ ಅಂದರೆ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್​​ ಪ್ರಯಾಣ ವೆಚ್ಚದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸಕ್ಕೆ ಹೆಚ್ಚಾಗಿ ವಿಮಾನ ಮತ್ತು ಹೆಲಿಕಾಪ್ಟರ್​​ನಲ್ಲೇ ಹೋಗುತ್ತಾರೆ. ಹೀಗಾಗಿ 2023ರಿಂದ 2025ರ ನವೆಂಬರ್ ವರೆಗೂ ಸಿಎಂ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ​​ ವೆಚ್ಚ ಹುಬ್ಬೇರುವಂತೆ ಮಾಡಿದೆ. ಹಾಗಾದ್ರೆ, ಸಿಎಂ ಆಗಸದಲ್ಲಿ ಪ್ರಯಾಣಕ್ಕೆ ಇಲ್ಲಿಯವರೆಗೂ ಎಷ್ಟು ಸರ್ಕಾರ ಬೊಕ್ಕಸದಿಂದ ಖರ್ಚಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ

ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ: ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸರ್ಕಾರಿ ಆಸ್ಪತ್ರೆ ಆವರಣಗೊಳಗಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಜನೌಷಧಿ ಕೇಂದ್ರ ಮುಚ್ಚುವಂತೆ ಹೊರಡಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಪೊಲೀಸ್ ಅಧಿಕಾರಿ ಮೇಲೆ ಕೈಎತ್ತಿದ್ದ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರು ಧಾರವಾಡದ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರ ಮೇಲೆ ಕೈಎತ್ತಿದ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲಕ್ಕೆ ಕಾರಣವಾಗಿದ್ದು, ಸಿಎಂ ವರ್ತನೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಇನ್ನು ಅವಮಾನದಿಂದಾಗಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದ ಪೊಲೀಸ್ ಅಧಿಕಾರಿಯನ್ನು ಮನವೊಲಿಸಲಾಗಿತ್ತು. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕೋರ್ಟ್​ ಬಿಗ್ ರಿಲೀಫ್ ನೀಡಿದೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್‌ ಶಾಸಕರಿಂದಲೇ ಅಸಮಾಧಾನ, ಶಾಸಕಾಂಗ ಸಭೆಯ ಇನ್​​ಸೈಡ್​​ ಮಾಹಿತಿ ಇಲ್ಲಿದೆ

ಬೆಳಗಾವಿಯ ಖಾಸಗಿ ಹೋಟೆಲ್​​​ನಲ್ಲಿ ಇಂದು (ಡಿಸೆಂಬರ್ 09) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಅಂತ್ಯವಾಗಿದ್ದು, ಅಧಿವೇಶನದಲ್ಲಿ ವಿಪಕ್ಷಗಳಿಗೆ ಹೇಗೆ ಉತ್ತರ ನೀಡಬೇಬ ಬಗ್ಗೆ ಚರ್ಚೆಯಾಗಿದೆ. ಅದರಲ್ಲೂ ಪ್ರಮುಖವಾಗಿ ಸಭೆಯಲ್ಲಿ ಸ್ವಪಕ್ಷದ ಶಾಸಕರೇ ತಮ್ಮದೇ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿದ್ದರಾಮಯ್ಯಗೆ ಸುಪ್ರೀಂ ಸಮನ್ಸ್‌: ಉಚಿತ ಗ್ಯಾರೆಂಟಿ ಕೊಟ್ಟ ಸರ್ಕಾರ ಪತನವಾಗುತ್ತೆ ಎಂದ ವಕೀಲ

ಸಿಎಂ ಕುರ್ಚಿಗಾಗಿ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದ್ದು, ಈ ಬಗ್ಗೆ ವಕೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಊರಿನ ಮಕ್ಕಳು ಶಾಲೆಗೆ 14 ಕಿಮೀ ನಡೆದೇ ಹೋಗಬೇಕು! ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ವಿದ್ಯಾರ್ಥಿಗಳುಪ್ರತಿನಿತ್ಯ ಶಾಲೆಗೆ 14 ಕಿ.ಮೀ ನಡೆದೇ ಹೋಗಬೇಕಿದ್ದು, ರಸ್ತೆಯಲ್ಲಿ ಕಾಡಾನೆ, ಚಿರತೆ, ಹುಲಿಗಳ ಕಾಟದಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಈ ಕುರಿತು ವಿದ್ಯರ್ಥಿಗಳು ರಸ್ತೆ, ವಾಹನ ಸೌಲಭ್ಯದ ಕೊರತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕರಿಗೆ ಪತ್ರ ಬರೆದು ಸುರಕ್ಷತೆ ಮತ್ತು ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ಲ್ಯಾಪ್‌ಟಾಪ್‌ನಲ್ಲಿ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್

ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್​​ ಆರೋಪ ಮಾಡಿದ್ದ ಕಾಂಗ್ರೆಸ್​​ಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆರ್ ಅಶೋಕ್ ಅವರು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದನ್ನು ಲ್ಯಾಪ್​​ಟಾಲ್​​ನಲ್ಲಿ ತೋರಿಸಿದರು.

ಡಿ.8ರ ಸಭೆ ಬರಲಾಗಲ್ಲ: ಕಾರಣ ಸಮೇತ ಸಿದ್ದರಾಮಯ್ಯಗೆ ಮರುಪತ್ರ ಬರೆದ ಸಚಿವ ಜೋಶಿ

ಕರ್ನಾಟಕದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿಸೆಂಬರ್ 8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದ್ರೆ, ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಸಭೆಗೆ ಬರಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿಎಂಗೆ ಮರುಪತ್ರ ಬರೆದಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಸಿಕ್ಕಿದ್ದೇ ಚಾನ್ಸ್​​​ ಅಂತ ವೇದಿಕೆ ಮೇಲೆಯೇ ವೇಣುಗೋಪಾಲ್​​ ಜತೆ ಸಿಎಂ ಗುಸು ಗುಸು ಮಾತು

ಮಂಗಳೂರು, (ಡಿಸೆಂಬರ್ 03): ಬ್ರೇಕ್ ಫಾಸ್ಟ್​​​​ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಕೊಂಚ ತಣ್ಣಗಾದಂತಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯನವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜೊತೆ ಇಂದು (ಡಿಸೆಂಬರ್ 03) ಉಳ್ಳಾಲದಲ್ಲಿ ನಡೆದ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್ ಅಕ್ಕಪಕ್ಕದಲ್ಲೇ ಕುಳಿತುಕೊಂಡು ಗುಸು ಗುಸು ಮಾತುಕತೆ ನಡೆಸಿರುವುದು ಕಂಡುಬಂದಿದ್ದು, ಸಿದ್ದರಾಮಯ್ಯನವರ ಮಾತಿಗೆ ವೇಣುಗೋಪಾಲ ತಲೆ ಆಡಿಸಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

ಸಿಎಂ-ಡಿಸಿಎಂ ಬ್ರೇಕ್​​ ಫಾಸ್ಟ್​​​ನಲ್ಲಿ ನಾಟಿ ಕೋಳಿ ಬದಲಿಗೆ ಗಮನಸೆಳೆದ ವಾಚ್: ಇದರ ಬೆಲೆ 43 ಲಕ್ಷ ರೂ.

ಮೊನ್ನೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಂಡಿ ಸವಿದಿದ್ದರು. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ಸಹ ತಮ್ಮ ಮನೆಯಲ್ಲಿಂದು ಸಿದ್ದರಾಮಯ್ಯನವರಿಗೆ ಬ್ರೇಕ್ ಫಾಸ್ಟ್ ಆಯೋಜಿಸಿದ್ದರು. ಹೀಗೆ ಪರಸ್ಪರ ತಿಂಡಿ ಸವಿದು ನಾವು ಒಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎನ್ನುವ ಸಂದೇಶ ರವಾನಿಸಿದ್ದಾರೆ. ಈ ನಡುವೆ ಸಿಎಂ-ಡಿಸಿಎಂ ಕಟ್ಟಿಕೊಂಡಿದ್ದ ಒಂದೇ ಕಂಪನಿಯ ವಾಚ್ ಗಮನಸೆಳೆದಿದ್ದು, ಇದೀಗ ಚರ್ಚೆ​​ಗೆ ಗ್ರಾಸವಾಗಿದೆ. ಹಾಗಾದ್ರೆ, ಉಭಯ ನಾಯಕರು ಕಟ್ಟಿಕೊಂಡ ವಾಚ್ ಯಾವ ಕಂಪನಿಯದ್ದು? ಬೆಲೆ ಎಷ್ಟು? ವಿಶೇಷತೆಗಳೇನು ಎನ್ನುವ ವಿವರ ಇಲ್ಲಿದೆ.

ರೈತರಿಗೆ ಗುಡ್‌ ನ್ಯೂಸ್‌: ಬೆಳೆ ಪರಿಹಾರ ಹಣ ಬಿಡುಗಡೆ, ಯಾವ್ಯಾವ ಬೆಳೆಗೆ ಎಷ್ಟೆಷ್ಟು?

ರಾಜ್ಯ ಸರ್ಕಾರ ರೈತರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಅತಿವೃಷ್ಟಿಯಿಂದ ಬೆಳೆ ಹಾನಿ ಸಂಬಂಧ ಸಂಕಷ್ಟಕ್ಕೆ ಸಿಲುಕಿದ್ದ ರೈತರ ನೆರವಿಗೆ ಸಿದ್ದರಾಮಯ್ಯ ಸರ್ಕಾರ ಬಂದಿದ್ದು, ಕರ್ನಾಟಕದಲ್ಲಿ ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 1033.60 ಕೋಟಿ ರೂ.ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ಜಮೀನಿಗೆ ಎಷ್ಟೆಷ್ಟು ಪರಿಹಾರ ಹಣ ಎನ್ನುವ ಮಾಹಿತಿ ಈ ಇಲ್ಲಿದೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ