CM of Karnataka
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.
ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.
ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.
TV9 Kannada News Live: ಭಾರೀ ಮಳೆ ಎಚ್ಚರಿಕೆ, ಜು.8ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ -ಕಾಲೇಜುಗಳಿಗೆ ರಜೆ
Karnataka News Today Live Updates: ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರಿನ 6 ತಾಲೂಕು ಹಾಗೂ ಶಿವಮೊಗ್ಗದ 3 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇಂದಿನ ಪ್ರಮುಖ ಅಪ್ಡೇಟ್ಸ್ ಇಲ್ಲಿದೆ.
- Bhavana Hegde
- Updated on: Jul 7, 2026
- 11:00 pm
ಕೇವಲ 1 ತಿಂಗಳಲ್ಲಿ ಡಿಕೆಶಿ ಸಾಕಷ್ಟು ಕನಸಿನ ಯೋಜನೆ, ಹತ್ತಾರು ಸವಾಲುಗಳನ್ನ ಮೆಟ್ಟಿ ಆಡಳಿತಕ್ಕೆ ಚುರುಕು
ನೂರಾರು ಸವಾಲು.. ಸಾಕಷ್ಟು ಸಮಸ್ಯೆಗಳು.. ಹಿರಿಯರು, ಕಿರಿಯರು ಒತ್ತಡ.. ತಮ್ಮ ಆಡಳಿತದಲ್ಲಿ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕೆಂಬ ಆಸೆ. ಇಷ್ಟೆಲ್ಲಾ ಮನದಲ್ಲಿಟ್ಟುಕೊಂಡ ಡಿಕೆ ಶಿವಕುಮಾರ್ (DK Shivakumar), ತಾವು ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿಸಿಕೊಂಡು ಇಂದಿಗೆ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಇದೊಂದು ತಿಂಗಳಲ್ಲಿ ಸಿಎಂ ಡಿಕೆ, ತೆಗೆದುಕೊಂಡ ನಿರ್ಧಾರ, ಎದುರಿಸಿದ ಸಮಸ್ಯೆ, ಸವಾಲುಗಳು ಸಾಕಷ್ಟಿದ್ದರೂ ಆಡಳತಕ್ಕೆ ಹಾಕಿದ ಅಡಿಪಾಯ ರಾಜ್ಯದ ಜನರ ಗಮನ ಸೆಳೆದಿದೆ.
- Ramesh B Jawalagera
- Updated on: Jul 3, 2026
- 8:09 pm
ಎಲ್ಲರೂ ಧರ್ಮದಲ್ಲಿ ಇರಬೇಕು, ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ಎಲ್ಲರೂ ಧರ್ಮದಲ್ಲಿ ಇರಬೇಕು. ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು. ಶಿವಾಲ ಮೂರ್ತಿ ಬೆಟ್ಟದಲ್ಲಿ ನನ್ನ ತಂದೆ-ತಾಯಿ ಹರೆಕೆ ಹೊತ್ತಿದ್ದರು. ಬಳಿಕ ನಾನು ಹುಟ್ಟಿದವನು. ಹೀಗಾಗಿ ನಾನು ನನ್ನ ಸೇವೆಯನ್ನು ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
- Prashantha B
- Updated on: Jul 3, 2026
- 4:47 pm
ಅಕ್ಕಪಕ್ಕ ಕುಳಿತರೂ ಬಿಎಸ್ವೈ-ಸೋಮಣ್ಣ ಸೈಲೆಂಟ್: ಡಿಕೆಶಿ ಬರ್ತಿದ್ದಂತೆಯೇ ಎದ್ದು ನಿಂತು ಸ್ವಾಗತಿಸಿದ ನಾಯಕರು
ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಅವರು ವೇದಿಕೆ ಮೇಲೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಎದ್ದು ನಿಂತು ಸ್ವಾಗತ ಮಾಡಿದರು. ಇನ್ನು ಇದೇ ವೇಳೆ ಸೋಮಣ್ಣ ಅವರು ಡಿಕೆ ಶಿವಕುಮಾರ್ ಅವರಿಗೆ ಹೂಗುಚ್ಚ ನೀಡಿದರು. ಬಳಿಕ ಡಿಕೆಶಿ, ವೇದಿಕೆ ಮೇಲಿದ್ದ ಎಲ್ಲಾ ಸ್ವಾಮೀಜಿಗಳಿಗೆ ನಮಸ್ಕರಿಸಿದರು.ಇನ್ನೊಂದಡೆ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅವರು ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿ ಕುಳಿತರೂ ಸಹ ಮಾತನಾಡದೆ ಸೈಲೆಂಟ್ ಆಗಿದ್ದರು.
- Prashantha B
- Updated on: Jul 3, 2026
- 3:31 pm
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಡಿಕೆಶಿ ಹೇಳಿದ್ದೇನು?
ಮಾಗಡಿ ರಸ್ತೆಯ ಮಾದಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ದುರಂತದಲ್ಲಿ ಏಳು ಜನ ಸಾವನ್ನಪ್ಪಿದ್ದು, ಐದಾರು ಕಾರ್ಮಿಕರು ಗಾಯಗೊಂಡಿದ್ದಾರೆ. ಇನ್ನು ಗಾಯಗೊಂಡಿರುವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇದೀಗ ಸಿಎಂ ಡಿಕೆ ಶಿವಕುಮಾರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು
- Ramesh B Jawalagera
- Updated on: Jul 2, 2026
- 9:17 pm
ಹಿರಿಯ IAS ಅಧಿಕಾರಿಗಳ ವರ್ಗಾವಣೆ: ಹೊಸ ಪ್ರಜಾಸೇವೆ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕ
ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಪ್ರಮುಖ ಹುದ್ದೆಯ ಅಧಿಕಾರಿಗಳ ವರ್ಗಾವಣೆ ಪರ್ವ ಶುರುವಾಗಿದೆ. ಇನ್ಸ್ಪೆಕ್ಟರ್ನಿಂದ ಹಿಡಿದು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಆಗುತ್ತಿದೆ. ಅದರಲ್ಲೂ ಮುಖ್ಯವಾಗಿ ಐಎಎಸ್ ಅಧಿಕಾರಿಗಳ ಸಾಲು ಸಾಲು ವರ್ಗಾವಣೆಯಾಗುತ್ತಿದ್ದು, ಇಂದು (ಜುಲೈ 02) ಮತ್ತೆ ಐದು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಸೃಷ್ಟಿಸಲಾಗಿರುವ ಪ್ರಜಾ ಸೇವಾ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ.
- Ramesh B Jawalagera
- Updated on: Jul 2, 2026
- 4:07 pm
KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ?
ಕೆಪಿಸಿಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರು ಪುತ್ರಿಯರಿಗೆ ಸರ್ಕಾರ ಹುದ್ದೆ ಕೊಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳೀಬಂದಿದ್ದು, ಒಬ್ಬ ಮಗಳಿಗೆ ಈಗಾಗಲೇ ಸರ್ಕಾರಿ ಉದ್ಯೋಗ ಕೊಡಿಸಿದ್ದಾರೆ, ಮತ್ತೊಬ್ಬ ಮಗಳಿಗೆ ಹುದ್ದೆ ಕೊಡಿಸಲು ಯತ್ನಿಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ಸುಳ್ಳು ಆದಾಯದ ಪ್ರಮಾಣ ಪತ್ರ ಸಲ್ಲಿಕೆಗೂ ಸಹಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕೆಪಿಎಸ್ಸಿ ಅಧ್ಯಕ್ಷರ ಅಧಿಕಾರ ದುರುಪಯೋಗ ಸಂಬಂಧ ಉನ್ನತ ತನಿಖೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದು, ಈ ಸಂಬಂಧ ಸಿಎಂ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
- Ramesh B Jawalagera
- Updated on: Jul 1, 2026
- 9:42 pm
Free Bus Pass For All Students: ಇಂದಿನಿಂದ ಫ್ರೀ ಬಸ್ ಪಾಸ್ಗೆ ಅರ್ಜಿ ಸಲ್ಲಿಕೆ
ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್ಗಾಗಿ ಇಂದಿನಿಂದಲೇ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಉಚಿತ ಬಸ್ ಪಾಸ್ ಘೋಷಣೆಗೂ ಮುನ್ನ ಬಸ್ ಪಾಸ್ ಪಡೆದುಕೊಂಡು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ಕಾರವು ಹಣ ಮರುಪಾವತಿಸುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಾಗ ಪಾವತಿಸಿದ್ದ ಶುಲ್ಕವನ್ನು ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
- Bhavana Hegde
- Updated on: Jun 29, 2026
- 10:29 am
ಬೆಂಗಳೂರಲ್ಲಿ ಟನಲ್ ರೋಡ್ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ ಡಿ.ಕೆ. ಶಿವಕುಮಾರ್!
ಮಹಾನಗರದ ಸಂಚಾರ ದಟ್ಟಣೆ ನಿವಾರಣೆಗೆ ಮಹತ್ವದ ಹೆಜ್ಜೆಯಾಗಿ, ಹೆಬ್ಬಾಳ ಜಂಕ್ಷನ್ ಬಳಿ 2.2 ಕಿ.ಮೀ ಉದ್ದದ ನೂತನ ತ್ರೀ ಲೇನ್ ಸುರಂಗ ರಸ್ತೆ (Tunnel Road) ಕಾಮಗಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಯೋಜನೆಯು ಸುಧಾರಿತ ಎಂಜಿನಿಯರಿಂಗ್ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಬೆಂಗಳೂರಿನ ಉತ್ತರದ ಕಡೆಗೆ, ವಿಶೇಷವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಪೂರ್ವಕ್ಕೆ ಕೆ.ಆರ್. ಪುರಂ ಕಡೆಗೆ ಸಂಚಾರ ಸಂಪರ್ಕವನ್ನು ಸುಧಾರಿಸಲು ನಿರ್ಣಾಯಕವಾಗಿದೆ. ಸುರಂಗ ರಸ್ತೆ ನಿರ್ಮಾಣವು ನಗರದ ಭವಿಷ್ಯದ ಬೆಳವಣಿಗೆಗೆ ಪೂರಕವಾಗಿದ್ದು, ಆಧುನಿಕ ತಂತ್ರಜ್ಞಾನ ಮತ್ತು ಸುರಕ್ಷತಾ ಕ್ರಮಗಳನ್ನು ಒಳಗೊಂಡಿರುತ್ತದೆ.
- Bhavana Hegde
- Updated on: Jun 28, 2026
- 12:58 pm
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ನಡೆದ ಬೃಹತ್ ಕಾರ್ಯಕ್ರಮ ಹೇಗಾಯ್ತು? ಏನೆಲ್ಲಾ ವಿಶೇಷ?
ಬೆಂಗಳೂರಿನ ಪಾಲಿಗೆ ಇಂದು ಮರೆಯಲಾಗದ ದಿನ ಅಂತಲೇ ಹೇಳಬಹುದು. ನಾಡಪ್ರಭು ಕೆಂಪೇಗೌಡರ ಜಯಂತಿ ಒಂದೆಡೆಯಾದರೆ, ಈ ದಿನ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳೂ ವಿಶೇಷ ಹಾಗೂ ಅವಿಸ್ಮರಣೀಯ ಆಗಿತ್ತು. ಮತ್ತೊಂದು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದ ಬೃಹತ್ ಕಾರ್ಯಕ್ರಮ ಇದಾಗಿದೆ ಎನ್ನಬಹುದು. ಹಾಗಾದ್ರೆ, ಕಾರ್ಯಕ್ರಮ ಹೇಗಿತ್ತು? ಏನೆಲ್ಲಾ ವಿಶೇಷ ಎನ್ನುವ ವಿವರ ಇಲ್ಲಿದೆ.
- Lakshmi Narasimha Swamy L
- Updated on: Jun 27, 2026
- 10:11 pm
CM ಆಗಿ ಎಲ್ಲಾ 33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ ಎಂದ ಡಿಕೆಶಿ
ಮುನಿರಾಬಾದ್ನಲ್ಲಿರುವ ತುಂಗಾಭದ್ರಾ ಜಲಾಶಯದ 33 ಗೇಟ್ಗಳನ್ನು ಬದಲಾಯಿಸಿ ಹೊಸ ಗೇಟ್ಗಳನ್ ಅಳವಡಿಸಲಾಗಿದ್ದು, ಇಂದು ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಸೇರಿಕೊಂಡು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ನಾವು ಇವತ್ತು ತುಂಗಭದ್ರಾ ಜಲಾಶಯ ಕಾಪಾಡಿದ್ದೇವೆ.ಹೀಗಾಗಿ ಇವತ್ತು ನಮಗೆ ಹೆಮ್ಮೆಯ ದಿನ, ನಾನು ಅತ್ಯಂತ ಖುಷಿಯಾಗಿದ್ದೇನೆ.
- Shivakumar Pattar
- Updated on: Jun 25, 2026
- 4:10 pm
ಮೂರ್ನಾಲ್ಕು ಜನರಿಗಷ್ಟೇ ಗೊತ್ತಿತ್ತು:ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿಕೆ ಶಿವಕುಮಾರ್
ದರ್ಗಾಗಳ ಧರ್ಮಗುರುಗಳ ನಿಯೋಗ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಈ ವೇಳೆ ಅಧಿಕಾರ ಹಂಚಿಕೆ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ನಿಮ್ಮ ಮನವಿ ವರಿಷ್ಠರ ಗಮನಕ್ಕೆ ತರುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬಂದಿತ್ತು. ವರಿಷ್ಠರು ನನ್ನನ್ನೇ ಸಿಎಂ ಮಾಡುತ್ತಾರೆ ಅಂದುಕೊಂಡಿದ್ದೆ. ಆದ್ರೆ, ಸಿದ್ದರಾಮಯ್ಯಗೂ ಅವಕಾಶ ಕೊಡೋಣ ಅಂದರು. ಅಲ್ಲದೇ ಅಂದು ಇಬ್ಬರು ಶೇರ್ ಮಾಡಿಕೊಳ್ಳಿ ಎಂದು ಪಕ್ಷ ಹೇಳಿತ್ತು. ಅಂದು ಈ ನಿರ್ಧಾರವಾಗಿತ್ತು, ಅದರ ಬಗ್ಗೆ ಎಲ್ಲೂ ಹೇಳಲಿಲ್ಲ. ಅಧಿಕಾರ ಹಂಚಿಕೆ ವಿಚಾರ 3ರಿಂದ 4 ಜನರಿಗಷ್ಟೇ ಗೊತ್ತಿತ್ತು. ಆದ್ರೆ ಈಗ ಪಕ್ಷ ನನಗೂ ಅವಕಾಶ ಮಾಡಿಕೊಟ್ಟಿದೆ ಎಂದಿದ್ದಾರೆ.
- Ramesh B Jawalagera
- Updated on: Jun 22, 2026
- 10:37 pm