AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM of Karnataka

CM of Karnataka

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.

ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.

ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್​ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.

ಇನ್ನೂ ಹೆಚ್ಚು ಓದಿ

ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ಲ್ಯಾಪ್‌ಟಾಪ್‌ನಲ್ಲಿ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್

ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚಳದ ಬಗ್ಗೆ ಉಪಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮುಗಿಬಿದ್ದಿದೆ. ಈ ಹಿಂದೆ ಇದ್ದ ತಮ್ಮ ಸರ್ಕಾರದ ಮೇಲೆ ಶೇ.40 ಕಮಿಷನ್​​ ಆರೋಪ ಮಾಡಿದ್ದ ಕಾಂಗ್ರೆಸ್​​ಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆರ್ ಅಶೋಕ್ ಅವರು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವುದನ್ನು ಲ್ಯಾಪ್​​ಟಾಲ್​​ನಲ್ಲಿ ತೋರಿಸಿದರು.

ಡಿ.8ರ ಸಭೆ ಬರಲಾಗಲ್ಲ: ಕಾರಣ ಸಮೇತ ಸಿದ್ದರಾಮಯ್ಯಗೆ ಮರುಪತ್ರ ಬರೆದ ಸಚಿವ ಜೋಶಿ

ಕರ್ನಾಟಕದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿಸೆಂಬರ್ 8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದ್ರೆ, ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಸಭೆಗೆ ಬರಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿಎಂಗೆ ಮರುಪತ್ರ ಬರೆದಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಸಿಕ್ಕಿದ್ದೇ ಚಾನ್ಸ್​​​ ಅಂತ ವೇದಿಕೆ ಮೇಲೆಯೇ ವೇಣುಗೋಪಾಲ್​​ ಜತೆ ಸಿಎಂ ಗುಸು ಗುಸು ಮಾತು

ಮಂಗಳೂರು, (ಡಿಸೆಂಬರ್ 03): ಬ್ರೇಕ್ ಫಾಸ್ಟ್​​​​ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಕೊಂಚ ತಣ್ಣಗಾದಂತಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯನವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜೊತೆ ಇಂದು (ಡಿಸೆಂಬರ್ 03) ಉಳ್ಳಾಲದಲ್ಲಿ ನಡೆದ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್ ಅಕ್ಕಪಕ್ಕದಲ್ಲೇ ಕುಳಿತುಕೊಂಡು ಗುಸು ಗುಸು ಮಾತುಕತೆ ನಡೆಸಿರುವುದು ಕಂಡುಬಂದಿದ್ದು, ಸಿದ್ದರಾಮಯ್ಯನವರ ಮಾತಿಗೆ ವೇಣುಗೋಪಾಲ ತಲೆ ಆಡಿಸಿರುವುದು ದೃಶ್ಯದಲ್ಲಿ ಸೆರೆಯಾಗಿದೆ.

ಸಿಎಂ-ಡಿಸಿಎಂ ಬ್ರೇಕ್​​ ಫಾಸ್ಟ್​​​ನಲ್ಲಿ ನಾಟಿ ಕೋಳಿ ಬದಲಿಗೆ ಗಮನಸೆಳೆದ ವಾಚ್: ಇದರ ಬೆಲೆ 43 ಲಕ್ಷ ರೂ.

ಮೊನ್ನೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಂಡಿ ಸವಿದಿದ್ದರು. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ಸಹ ತಮ್ಮ ಮನೆಯಲ್ಲಿಂದು ಸಿದ್ದರಾಮಯ್ಯನವರಿಗೆ ಬ್ರೇಕ್ ಫಾಸ್ಟ್ ಆಯೋಜಿಸಿದ್ದರು. ಹೀಗೆ ಪರಸ್ಪರ ತಿಂಡಿ ಸವಿದು ನಾವು ಒಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎನ್ನುವ ಸಂದೇಶ ರವಾನಿಸಿದ್ದಾರೆ. ಈ ನಡುವೆ ಸಿಎಂ-ಡಿಸಿಎಂ ಕಟ್ಟಿಕೊಂಡಿದ್ದ ಒಂದೇ ಕಂಪನಿಯ ವಾಚ್ ಗಮನಸೆಳೆದಿದ್ದು, ಇದೀಗ ಚರ್ಚೆ​​ಗೆ ಗ್ರಾಸವಾಗಿದೆ. ಹಾಗಾದ್ರೆ, ಉಭಯ ನಾಯಕರು ಕಟ್ಟಿಕೊಂಡ ವಾಚ್ ಯಾವ ಕಂಪನಿಯದ್ದು? ಬೆಲೆ ಎಷ್ಟು? ವಿಶೇಷತೆಗಳೇನು ಎನ್ನುವ ವಿವರ ಇಲ್ಲಿದೆ.

ರೈತರಿಗೆ ಗುಡ್‌ ನ್ಯೂಸ್‌: ಬೆಳೆ ಪರಿಹಾರ ಹಣ ಬಿಡುಗಡೆ, ಯಾವ್ಯಾವ ಬೆಳೆಗೆ ಎಷ್ಟೆಷ್ಟು?

ರಾಜ್ಯ ಸರ್ಕಾರ ರೈತರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಅತಿವೃಷ್ಟಿಯಿಂದ ಬೆಳೆ ಹಾನಿ ಸಂಬಂಧ ಸಂಕಷ್ಟಕ್ಕೆ ಸಿಲುಕಿದ್ದ ರೈತರ ನೆರವಿಗೆ ಸಿದ್ದರಾಮಯ್ಯ ಸರ್ಕಾರ ಬಂದಿದ್ದು, ಕರ್ನಾಟಕದಲ್ಲಿ ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 1033.60 ಕೋಟಿ ರೂ.ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ಜಮೀನಿಗೆ ಎಷ್ಟೆಷ್ಟು ಪರಿಹಾರ ಹಣ ಎನ್ನುವ ಮಾಹಿತಿ ಈ ಇಲ್ಲಿದೆ.

ಸಿದ್ದರಾಮಯ್ಯ, ಡಿಕೆಶಿ ಸಿಎಂ ಕುರ್ಚಿ ಫೈಟ್ ನಡುವೆ ರೇಸ್​ಗೆ ಮತ್ತೊಬ್ಬರ ಎಂಟ್ರಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸ್ಥಾನದ ರೇಸ್ ಕುರಿತು ಮಾತನಾಡಿ, ತಾವು ಯಾವತ್ತಿಗೂ ರೇಸ್‌ನಲ್ಲಿ ಇರುವುದಾಗಿ ತಿಳಿಸಿದರು. ಸಿಎಂ ಸ್ಥಾನದ ಬಗ್ಗೆ ಯಾವುದೇ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಇದಪ್ಪ ರೂಲ್ಸ್ ಅಂದ್ರೆ: ಸಿಎಂ ಸಿದ್ದರಾಮಯ್ಯ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ

ರೂಲ್ಸ್​ ಅಂದ್ರೆ ರೂಲ್ಸ್​ ದೇಶದ ಪ್ರತಿ ಪ್ರಜೆಗೂ ಒಂದೇ ರೂಲ್ಸ್​. ಮುಖ್ಯಮಂತ್ರಿ (Chief Minister) ಆಗ್ಲಿ ಮಿನಿಸ್ಟರ್​ ಆಗಲಿ ಎಲ್ಲರಿಗೂ ಸಹ ಒಂದೇ ರೂಲ್ಸ್​ ಅನ್ವಯ. ಇದನ್ನು ಏಕೆ ಹೇಳುತ್ತಿದ್ದೇವೆ ಅಂದ್ರೆ ಮೈಸೂರಿನ ಕುವೆಂಪು ನಗರದಲ್ಲಿ (Kuvempu Nagara) ನಿರ್ಮಾಣಗೊಂಡಿರುವ ಸಿದ್ದರಾಮಯ್ಯ (Siddaramaiah) ಅವರ ಹೊಸ ನಿವಾಸಕ್ಕೆ  ವಿದ್ಯುತ್​​ ​ಸಂಪರ್ಕಕ್ಕೆ ತೊಡಕು ಉಂಟಾಗಿದೆ.

  • Ram
  • Updated on: Nov 21, 2025
  • 8:31 pm

ಬೆಂಗಳೂರಿನಲ್ಲಿ 7 ಕೋಟಿ ರೂ.ದರೋಡೆ: ಖದೀಮರ ಸುಳಿವು ಸಿಕ್ತಾ?

ಬೆಂಗಳೂರಿನ ಡೈರಿ ಸರ್ಕಲ್ ಬಳಿ ಎಟಿಎಂ ವಾಹನದಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಜೊತೆ ಸಭೆ ಮಾಡಿದ್ದು, ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಸಚಿವ ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, 24 ಗಂಟೆಗೊಳಗೆ ಪ್ರಕರಣವನ್ನು ಭೇದಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ದರೋಡೆಕೋರರ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?

Siddaramaiah Wife Parvathi hospitalized : ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಸಂಬಂಧ ಕಾಂಗ್ರೆಸ್​​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಟೆನ್ಷನ್​​ನಲ್ಲಿದ್ದು, ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರ ನಡುವೆ ಸಿದ್ದರಾಮಯ್ಯನವರ ಪತ್ನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರಿಗೆ ಐಸಿಯುನಲ್ಲಿ ಡಾ ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಸದ್ಯ ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಸಂಬಂಧ ಕಾಂಗ್ರೆಸ್​​ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಟೆನ್ಷನ್​​ನಲ್ಲಿದ್ದು, ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರ ನಡುವೆ ಸಿದ್ದರಾಮಯ್ಯನವರ ಪತ್ನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ