CM of Karnataka
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಸರಕಾರದ ಮುಖ್ಯಸ್ಥರಾಗಿರುತ್ತಾರೆ. ಅಲ್ಲದೇ ಮುಖ್ಯಮಂತ್ರಿಯು ರಾಜ್ಯದ ಕಾರ್ಯಾಂಗದ ಮುಖ್ಯಸ್ಥರು ಹೌದು. ಮುಖ್ಯಮಂತ್ರಿಯನ್ನು ರಾಜ್ಯದ ವಿಧಾನ ಸಭೆಯಲ್ಲಿ ಬಹುಮತ ಪಡೆದ ಪಕ್ಷ ಅಥವಾ ಪಕ್ಷಗಳ ಒಕ್ಕೂಟದ ಶಾಸಕರು ಆರಿಸುತ್ತಾರೆ. ಇವರ ಅಧಿಕಾರಾವಧಿ ಐದು ವರ್ಷ, ಪುನರಾಯ್ಕೆಯಾಗುವ ಅವಕಾಶವಿರುತ್ತದೆ.
ಮುಖ್ಯಮಂತ್ರಿಯ ಸಲಹೆಯ ಮೇರೆಗೆ ರಾಜ್ಯಪಾಲರು ಇತರ ಸಚಿವರನ್ನು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿಗಳ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಮುಕ್ತ ಹಸ್ತವನ್ನು ಹೊಂದಿದ್ದಾರೆ. ರಾಜ್ಯಪಾಲರು ಸಚಿವಾಲಯಕ್ಕೆ ಸೇರಿಸಬೇಕಾದ ಶಾಸಕರ ಹೆಸರನ್ನು ಸೂಚಿಸಬಹುದು, ಆದರೆ ಅವರು ಯಾವುದೇ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳಲು ಒತ್ತಾಯಿಸುವಂತಿಲ್ಲ. ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಮಂತ್ರಿಗಳಿಗೆ ಇಲಾಖೆಗಳು ಅಥವಾ ಖಾತೆಗಳನ್ನು ನಿಯೋಜಿಸುತ್ತಾರೆ.
ಸರ್ಕಾರ ವಾಸ್ತವವಾಗಿ ಮುಖ್ಯಮಂತ್ರಿಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಮುಖ್ಯಮಂತ್ರಿಗಳು ತಮ್ಮ ಸಚಿವ ಸಂಪುಟಕ್ಕೆ ತಮಗೆ ಬೇಕಾದ ಪಕ್ಷದ ಶಾಸಕರುಗಳನ್ನು ಸೇರಿಸಿಕೊಳ್ಳಬಹುದು. ಅಲ್ಲದೇ ಸಚಿವರ ಸಭೆ, ಸಚಿವ ಸಂಪುಟ ಪುನರ್ ರಚನೆ ಮಾಡಿಕೊಳ್ಳಬಹುದು. ಅಲ್ಲದೇ ಸಚಿವರ ರಾಜೀನಾಮೆ ಪಡೆಯುವ ಅಧಿಕಾರ ಸಿಎಂ ಹೊಂದಿರುತ್ತಾರೆ. ಒಂದು ವೇಳೆ ಮಂತ್ರಿ ರಾಜೀನಾಮೆ ನೀಡಲು ನಿರಾಕರಿಸಿದರೆ ಸಿಎಂ, ರಾಜ್ಯಪಾಲರಿಂದ ವಜಾಗೊಳಿಸಬಹುದು.
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು.
- Ramesh B Jawalagera
- Updated on: Feb 2, 2026
- 7:21 pm
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ: ಸದನದಲ್ಲಿ ಅಶೋಕ್-ಸಿದ್ದರಾಮಯ್ಯ ಕಾಮಿಡಿ
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯನವರು ಇಂದು (ಫೆಬ್ರವರಿ 02) ಅಧಿವೇಶನದಲ್ಲಿ ಉತ್ತರ ನೀಡಿದರು. ಈ ವೇಳೆ ಸಿದ್ದರಾಮಯ್ಯ ಬಿಯರ್ ಬಗ್ಗೆ ಮಾತನಾಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಮದ್ಯದ ದರ ಏರಿಕೆ ಸಂಬಂಧ ವಿಪಕ್ಷ ನಾಯಕ ಅಶೋಕ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ, ನೀನು ಕುಡಿದಿದ್ದೀಯೆನಯ್ಯ? ನೀನು ಕುಡಿದಿದ್ರೆ ತಾನೇ ಗೊತ್ತಾಗೋದು. ಕಿಂಗ್ ಪಿಶರ್ 225 ರೂ ಇದೆ. ತೆಲಂಗಾದಲ್ಲಿ 125 ಇದೆ ಎಂದು ಹೇಳಿದರು.
- Ramesh B Jawalagera
- Updated on: Feb 2, 2026
- 6:23 pm
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.
- Ramesh B Jawalagera
- Updated on: Feb 1, 2026
- 6:45 pm
CM Siddaramaiah Press Conference Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರ ಪ್ರಸಾರದಲ್ಲಿ ಇಲ್ಲಿದೆ.
- Ramesh B Jawalagera
- Updated on: Feb 1, 2026
- 3:35 pm
ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸಿಎಂ ಸಿದ್ದರಾಮಯ್ಯ
ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುವು ಮಾಡಿಕೊಂಡು ಈ ಸಿನಿಮಾವನ್ನು ನೋಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ವಿಮರ್ಶೆ ಹಂಚಿಕೊಂಡರು. ಅವರಿಗೆ ಈ ಚಿತ್ರ ಇಷ್ಟ ಆಗಿದೆ.
- Madan Kumar
- Updated on: Feb 1, 2026
- 8:13 am
ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 1000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಫೆಬ್ರವರಿ 13ರಂದು ಹಾವೇರಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲಿದೆ. ದಶಕಗಳಿಂದ ಕಾನೂನುಬದ್ಧ ಹಕ್ಕಿಲ್ಲದೆ ವಾಸಿಸುತ್ತಿದ್ದ ಕುಟುಂಬಗಳಿಗೆ ಭದ್ರತೆ ಒದಗಿಸುವುದು ಇದರ ಉದ್ದೇಶವಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಿಂದ ನಾಲ್ಕು ಲಕ್ಷ ಜನರಿಗೆ ಪ್ರಯೋಜನವಾಗಲಿದೆ.
- Bhavana Hegde
- Updated on: Jan 30, 2026
- 3:08 pm
ಮುಡಾ ಕೇಸ್: ಸಿದ್ದರಾಮಯ್ಯ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಇನ್ನು ಲೋಕಾಯುಕ್ತ ಬಿ-ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಹಿನ್ನಡೆಯಾಗಿದೆ.
- Ramesha M
- Updated on: Jan 28, 2026
- 6:04 pm
ಮೃತ IAS ಮಹಾಂತೇಶ್ ಪುತ್ರಿಗೆ ಯಾವ ಇಲಾಖೆಯಲ್ಲಿ ಕೆಲಸ? ಎಷ್ಟು ಸಂಬಳ? ಇಲ್ಲಿದೆ ವಿವರ
ಪ್ರಾಮಾಣಿಕ, ಕರ್ತವ್ಯನಿಷ್ಠ, ಜನಪರ ಕಾಳಜಿ, ಯುವಕರಿಗೆ ಸ್ಪೋರ್ತಿದಾಯಕರಾಗಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇವರ ಸಾವಿಗೆ ಇಡೀ ಕರ್ನಾಟಕವೇ ಮಮ್ಮಲ ಮರುಗಿದೆ. ಅನುಕಂಪದ ಆಧಾರದ ಮೇಲೆ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಅನುಕಂಪದ ಸರ್ಕಾರಿ ನೌಕರಿ ನೀಡಬೇಕೆಂಬ ಹಲವರ ಕೂಗಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಇದೀಗ ಮಹಾಂತೇಶ್ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ಅನುಕಂಪದ ಮೇರೆಗೆ ಸರ್ಕಾರಿ ಹುದ್ದೆ ನೀಡಲಾಗಿದೆ. ಇಂದು (ಜನವರಿ 28) ಸ್ವತಃ ಸಿಎಂ ಸಿದ್ದರಾಮಯ್ಯನವರೇ ನೇಮಕಾತಿ ಆದೇಶ ಪ್ರತಿಯನ್ನು ಹಸ್ತಾಂತರ ಮಾಡಿದರು. ಇನ್ನು ಚೈತನ್ಯಾ ಅವರಿಗೆ ಯಾವ ಇಲಾಖೆಯಲ್ಲಿ ಕೆಲಸ ನೀಡಲಾಗಿದೆ. ವೇತನ ಎಷ್ಟು ಎನ್ನುವ ಮಾಹಿತಿ ಈ ಕೆಳಗಿನಂತಿದೆ.
- Ramesh B Jawalagera
- Updated on: Jan 28, 2026
- 2:55 pm
Republic Day 2026: 77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ
ಭಾರತವು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಈ ಹಿನ್ನೆಲೆ ಗಣರಾಜ್ಯೋತ್ಸವವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಹ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
- Bhavana Hegde
- Updated on: Jan 26, 2026
- 9:32 am
ಗಣರಾಜ್ಯೋತ್ಸವಕ್ಕೆ ನೀವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕಾ ಎಂದಿದ್ದಕ್ಕೆ ಸಿಎಂ ರಿಯಾಕ್ಷನ್ ನೋಡಿ!
ರಾಜ್ಯಪಾಲರ ಭಾಷಣದ ಕುರಿತು ಸಂವಿಧಾನಾತ್ಮಕ ಅಂಶಗಳನ್ನು ವಿವರಿಸಿದ ಸಿದ್ದರಾಮಯ್ಯ, ಭಾರತೀಯ ಸಂವಿಧಾನದ 163 ಮತ್ತು 176ನೇ ವಿಧಿಗಳು ಭಾಷಣ ಮಾಡಲೇಬೇಕು ಎಂದು ಸ್ಪಷ್ಟವಾಗಿ ಬಳಸುತ್ತವೆ ಎಂದು ಹೇಳಿದರು. ನಾವು ಏನು ಬರೆದುಕೊಡುತ್ತೇವೋ, ಅದನ್ನು ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಮಾಡಲೇಬೇಕು ಎಂದು ಅವರು ಖಚಿತಪಡಿಸಿದರು. ನಾಳೆ ನಾವು ಭಾಷಣವನ್ನು ಬರೆದುಕೊಡುತ್ತೇವೆ. ಆದರೆ ರಾಜ್ಯಪಾಲರು ಅದನ್ನು ಬದಲಾಯಿಸುತ್ತಾರೋ ಇಲ್ಲವೋ ಎಂಬುದು ಅವರಿಗೆ ಬಿಟ್ಟಿದ್ದು ಎಂದು ಸಿಎಂ ಹೇಳಿದ್ದಾರೆ.
- Bhavana Hegde
- Updated on: Jan 25, 2026
- 1:32 pm
‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣದ ಬೆನ್ನಲ್ಲೇ ಸಿಎಂ ತವರಿನಲ್ಲೂ ಇಂತದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಬೆಳಕಿಗೆ ಬಂದಿದೆ.
- Ram
- Updated on: Jan 17, 2026
- 2:56 pm
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.
- Ramesh B Jawalagera
- Updated on: Jan 16, 2026
- 4:10 pm